Homeಮುಖಪುಟಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ, ಮೋದಿ ಸರ್ಕಾರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ: ರಾಹುಲ್ ಗಾಂಧಿ

ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ, ಮೋದಿ ಸರ್ಕಾರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ಬೆಲೆ ಏರಿಕೆಯಿಂದ ಜನತೆ ಸಂಕಷ್ಟದಲ್ಲಿದ್ದು, ದಿನನಿತ್ಯದ ಅಗತ್ಯತೆಗಳಲ್ಲಿ ರಾಜಿ ಮಾಡಿಕೊಳ್ಳುವ ಅನಿವಾರ್ಯತೆ ಎದುರಾಗಿದೆ, ಅದರೆ ಮೋದಿ ಸರ್ಕಾರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ನವದೆಹಲಿಯ ಗಿರಿ ನಗರದಲ್ಲಿನ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ತಮಗಾದ ಸಂಕಷ್ಟವನ್ನು ವಿವರಿಸಿದ ಗೃಹಿಣಿಯರೊಂದಿಗಿನ ಸಂವಾದದ ಕುರಿತಾದ ವಿಡಿಯೋವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೊ ಜೊತೆಗೆ ಬರೆದಿರುವ ರಾಹುಲ್ ಗಾಂಧಿ ಅವರು, “ಕೆಲವು ದಿನಗಳ ಹಿಂದೆ, ನಾನು ಸ್ಥಳೀಯ ತರಕಾರಿ ಮಾರುಕಟ್ಟೆಗೆ ಹೋಗಿದ್ದೆ. ಸಾಮಾನ್ಯ ಜನರ ಬಜೆಟ್ ಹೇಗೆ ಹದಗೆಡುತ್ತಿದೆ ಮತ್ತು ಹಣದುಬ್ಬರವು ಪ್ರತಿಯೊಬ್ಬರ ಜೀವನವನ್ನು ಹೇಗೆ ಸಂಕಷ್ಟಕ್ಕೀಡು ಮಾಡಿದೆ ಎಂದು ಅಲ್ಲಿ ಶಾಪಿಂಗ್ ಮಾಡುವ ಗ್ರಾಹಕರೊಂದಿಗೆ ಮತ್ತು ಮಾರಾಟಗಾರರೊಂದಿಗೆ ಮಾತನಾಡಿದೆ.” ಹೇಳಿದ್ದಾರೆ.

ಏರುತ್ತಿರುವ ಬೆಲೆಗಳೊಂದಿಗೆ ಜನರು ಹೆಣಗಾಡುತ್ತಿದ್ದಾರೆ ಮತ್ತು ದಿನ ನಿತ್ಯದ ಸಣ್ಣ ಸಣ್ಣ ಅಗತ್ಯಗಳ ವಿಷಯಗಳಲ್ಲಿ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ನಾವು ಬೆಳ್ಳುಳ್ಳಿ, ಬಟಾಣಿ, ಅಣಬೆಗಳು ಮತ್ತು ಇತರ ತರಕಾರಿಗಳ ಬೆಲೆಗಳ ಬಗ್ಗೆ ಚರ್ಚಿಸಿ, ಜನರ ನೈಜ ಅನುಭವಗಳನ್ನು ಕೇಳಿದ್ದೇವೆ.
ಒಂದು ಕಾಲದಲ್ಲಿ ಕೆಜಿಗೆ 40 ರೂ. ಇದ್ದ ಬೆಳ್ಳುಳ್ಳಿ ಈಗ ಕೆಜಿಗೆ 400 ರೂ. ಆಗಿದೆ ಮತ್ತು ಅವರೆಕಾಳು ಕೆಜಿಗೆ 120 ಆಗಿದೆ. ಇದು ಎಲ್ಲರ ಬಜೆಟ್ ಅನ್ನು ಬುಡಮೇಲು ಮಾಡಿದೆ” ಎಂದು ಅವರು ಹೇಳಿದ್ದಾರೆ.

ಬೆಲೆ ಹೀಗೆ ಏರುತ್ತಿದ್ದರೆ ಜನರು ಏನು ತಿನ್ನುತ್ತಾರೆ ಮತ್ತು ಅವರು ಏನು ಉಳಿಸುತ್ತಾರೆ ಎಂದು ಅವರು ಕೇಳಿದ್ದಾರೆ. “ಚಹಾದ ಬಗ್ಗೆ ಮಾತನಾಡುವಾಗ, ಗೃಹಿಣಿಯರ ಸಮಸ್ಯೆಗಳನ್ನು ನಾವು ನಿಕಟವಾಗಿ ಅರ್ಥಮಾಡಿಕೊಂಡಿದ್ದೇವೆ. ಆದಾಯವು ನಿಂತಿದ್ದು, ಹಣದುಬ್ಬರವು ಅನಿಯಂತ್ರಿತವಾಗಿ ಹೆಚ್ಚುತ್ತಿದೆ. ಆಹಾರ ಬೆಲೆ ಏರಿಕೆಯಿಂದ 10 ರೂ. ರಿಕ್ಷಾದ ದರವನ್ನು ನೀಡಲು ಕಷ್ಟಪಡುವಾಗ, ಅವರು ಉಳಿತಾಯ ಮಾಡುವುದು ಹೇಗೆ ಸಾಧ್ಯ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಐದು ನಿಮಿಷಗಳ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಕೆಲವು ಗೃಹಿಣಿಯರು ತರಕಾರಿಗಳನ್ನು ಖರೀದಿಸುವಾಗ ಮಾರಾಟಗಾರರೊಂದಿಗೆ ಚೌಕಾಸಿ ಮಾಡುವುದನ್ನು ನೋಡುತ್ತಾರೆ. ಈ ಹಿಂದೆ ಬಳಸುತ್ತಿದ್ದ ತರಕಾರಿಯನ್ನು ಖರೀದಿಸಲು ಸಾಧ್ಯವಾಗದೆ ತಮ್ಮ ಆಹಾರ ಪದ್ಧತಿಗೆ ಕಡಿವಾಣ ಹಾಕಬೇಕು ಎಂದು ಗೃಹಿಣಿಯರು ರಾಹುಲ್ ಗಾಂಧಿಗೆ ತಿಳಿಸಿದ್ದಾರೆ. ವೇತನದ ಏರಿಕೆ ಹಾಗೆ ಇದ್ದರೂ, ಬೆಲೆಗಳು ತೀವ್ರವಾಗಿ ಏರಿದೆ ಎಂದು ಅವರು ಹೇಳಿದ್ದಾರೆ.

ಆಹಾರ ಪದಾರ್ಥಗಳ ಬೆಲೆ ಏರಿಕೆ ಕುರಿತು ಸೋಮವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್, ತಾನು ಘೋಷಿಸಿದ ಬುಲೆಟ್ ರೈಲು ಬಂದಿಲ್ಲ ಆದರೆ ಬುಲೆಟ್ ರೈಲಿನ ವೇಗಕ್ಕಿಂತ ವೇಗವಾಗಿ ಹಣದುಬ್ಬರ ಏರುತ್ತಿದ್ದು, ಇದು ಸಾಮಾನ್ಯ ಜನರ ಬೆನ್ನೆಲುಬನ್ನು ಮುರಿದಿದೆ ಎಂದು ಹೇಳಿದೆ.

ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಬ್ಲಂಡರ್ ಸರ್ಕಾರ – ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...