Homeಮುಖಪುಟಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ, ಮೋದಿ ಸರ್ಕಾರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ: ರಾಹುಲ್ ಗಾಂಧಿ

ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ, ಮೋದಿ ಸರ್ಕಾರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ಬೆಲೆ ಏರಿಕೆಯಿಂದ ಜನತೆ ಸಂಕಷ್ಟದಲ್ಲಿದ್ದು, ದಿನನಿತ್ಯದ ಅಗತ್ಯತೆಗಳಲ್ಲಿ ರಾಜಿ ಮಾಡಿಕೊಳ್ಳುವ ಅನಿವಾರ್ಯತೆ ಎದುರಾಗಿದೆ, ಅದರೆ ಮೋದಿ ಸರ್ಕಾರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ನವದೆಹಲಿಯ ಗಿರಿ ನಗರದಲ್ಲಿನ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ತಮಗಾದ ಸಂಕಷ್ಟವನ್ನು ವಿವರಿಸಿದ ಗೃಹಿಣಿಯರೊಂದಿಗಿನ ಸಂವಾದದ ಕುರಿತಾದ ವಿಡಿಯೋವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೊ ಜೊತೆಗೆ ಬರೆದಿರುವ ರಾಹುಲ್ ಗಾಂಧಿ ಅವರು, “ಕೆಲವು ದಿನಗಳ ಹಿಂದೆ, ನಾನು ಸ್ಥಳೀಯ ತರಕಾರಿ ಮಾರುಕಟ್ಟೆಗೆ ಹೋಗಿದ್ದೆ. ಸಾಮಾನ್ಯ ಜನರ ಬಜೆಟ್ ಹೇಗೆ ಹದಗೆಡುತ್ತಿದೆ ಮತ್ತು ಹಣದುಬ್ಬರವು ಪ್ರತಿಯೊಬ್ಬರ ಜೀವನವನ್ನು ಹೇಗೆ ಸಂಕಷ್ಟಕ್ಕೀಡು ಮಾಡಿದೆ ಎಂದು ಅಲ್ಲಿ ಶಾಪಿಂಗ್ ಮಾಡುವ ಗ್ರಾಹಕರೊಂದಿಗೆ ಮತ್ತು ಮಾರಾಟಗಾರರೊಂದಿಗೆ ಮಾತನಾಡಿದೆ.” ಹೇಳಿದ್ದಾರೆ.

ಏರುತ್ತಿರುವ ಬೆಲೆಗಳೊಂದಿಗೆ ಜನರು ಹೆಣಗಾಡುತ್ತಿದ್ದಾರೆ ಮತ್ತು ದಿನ ನಿತ್ಯದ ಸಣ್ಣ ಸಣ್ಣ ಅಗತ್ಯಗಳ ವಿಷಯಗಳಲ್ಲಿ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ನಾವು ಬೆಳ್ಳುಳ್ಳಿ, ಬಟಾಣಿ, ಅಣಬೆಗಳು ಮತ್ತು ಇತರ ತರಕಾರಿಗಳ ಬೆಲೆಗಳ ಬಗ್ಗೆ ಚರ್ಚಿಸಿ, ಜನರ ನೈಜ ಅನುಭವಗಳನ್ನು ಕೇಳಿದ್ದೇವೆ.
ಒಂದು ಕಾಲದಲ್ಲಿ ಕೆಜಿಗೆ 40 ರೂ. ಇದ್ದ ಬೆಳ್ಳುಳ್ಳಿ ಈಗ ಕೆಜಿಗೆ 400 ರೂ. ಆಗಿದೆ ಮತ್ತು ಅವರೆಕಾಳು ಕೆಜಿಗೆ 120 ಆಗಿದೆ. ಇದು ಎಲ್ಲರ ಬಜೆಟ್ ಅನ್ನು ಬುಡಮೇಲು ಮಾಡಿದೆ” ಎಂದು ಅವರು ಹೇಳಿದ್ದಾರೆ.

ಬೆಲೆ ಹೀಗೆ ಏರುತ್ತಿದ್ದರೆ ಜನರು ಏನು ತಿನ್ನುತ್ತಾರೆ ಮತ್ತು ಅವರು ಏನು ಉಳಿಸುತ್ತಾರೆ ಎಂದು ಅವರು ಕೇಳಿದ್ದಾರೆ. “ಚಹಾದ ಬಗ್ಗೆ ಮಾತನಾಡುವಾಗ, ಗೃಹಿಣಿಯರ ಸಮಸ್ಯೆಗಳನ್ನು ನಾವು ನಿಕಟವಾಗಿ ಅರ್ಥಮಾಡಿಕೊಂಡಿದ್ದೇವೆ. ಆದಾಯವು ನಿಂತಿದ್ದು, ಹಣದುಬ್ಬರವು ಅನಿಯಂತ್ರಿತವಾಗಿ ಹೆಚ್ಚುತ್ತಿದೆ. ಆಹಾರ ಬೆಲೆ ಏರಿಕೆಯಿಂದ 10 ರೂ. ರಿಕ್ಷಾದ ದರವನ್ನು ನೀಡಲು ಕಷ್ಟಪಡುವಾಗ, ಅವರು ಉಳಿತಾಯ ಮಾಡುವುದು ಹೇಗೆ ಸಾಧ್ಯ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಐದು ನಿಮಿಷಗಳ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಕೆಲವು ಗೃಹಿಣಿಯರು ತರಕಾರಿಗಳನ್ನು ಖರೀದಿಸುವಾಗ ಮಾರಾಟಗಾರರೊಂದಿಗೆ ಚೌಕಾಸಿ ಮಾಡುವುದನ್ನು ನೋಡುತ್ತಾರೆ. ಈ ಹಿಂದೆ ಬಳಸುತ್ತಿದ್ದ ತರಕಾರಿಯನ್ನು ಖರೀದಿಸಲು ಸಾಧ್ಯವಾಗದೆ ತಮ್ಮ ಆಹಾರ ಪದ್ಧತಿಗೆ ಕಡಿವಾಣ ಹಾಕಬೇಕು ಎಂದು ಗೃಹಿಣಿಯರು ರಾಹುಲ್ ಗಾಂಧಿಗೆ ತಿಳಿಸಿದ್ದಾರೆ. ವೇತನದ ಏರಿಕೆ ಹಾಗೆ ಇದ್ದರೂ, ಬೆಲೆಗಳು ತೀವ್ರವಾಗಿ ಏರಿದೆ ಎಂದು ಅವರು ಹೇಳಿದ್ದಾರೆ.

ಆಹಾರ ಪದಾರ್ಥಗಳ ಬೆಲೆ ಏರಿಕೆ ಕುರಿತು ಸೋಮವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್, ತಾನು ಘೋಷಿಸಿದ ಬುಲೆಟ್ ರೈಲು ಬಂದಿಲ್ಲ ಆದರೆ ಬುಲೆಟ್ ರೈಲಿನ ವೇಗಕ್ಕಿಂತ ವೇಗವಾಗಿ ಹಣದುಬ್ಬರ ಏರುತ್ತಿದ್ದು, ಇದು ಸಾಮಾನ್ಯ ಜನರ ಬೆನ್ನೆಲುಬನ್ನು ಮುರಿದಿದೆ ಎಂದು ಹೇಳಿದೆ.

ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಬ್ಲಂಡರ್ ಸರ್ಕಾರ – ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...