Homeಕರ್ನಾಟಕಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!

ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!

- Advertisement -
- Advertisement -

ಇತ್ತೀಚೆಗೆ ಕರ್ನಾಟಕದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು, “ತಾಲಿಬಾನ್ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುತ್ತಿದೆ” ಎಂದು ಹೇಳಿದರೆ, ಮಧ್ಯಪ್ರದೇಶದ ಬಿಜೆಪಿ ನಾಯಕ ರಾಮ್ ರತನ್ ಪಯಾಲ್, “ನಿಮಗೆ ಕಡಿಮೆ ಬೆಲೆಯ ಪೆಟ್ರೋಲ್, ಡೀಸೆಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ” ಎಂದಿದ್ದರು.

“ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಡಿಪಿ (ಗ್ಯಾಸ್, ಡೀಸೆಲ್, ಪೆಟ್ರೋಲ್) ಬೆಲೆ ನಿರಂತರ ಏರುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಅಡುಗೆ ಅನಿಲದ ಬೆಲೆ 50 ರೂ ಏರಿಕೆ ಕಂಡಿದೆ. ಯಾರಾದರೂ ನಾಗರಿಕರು ಪ್ರಶ್ನಿಸಿದರೆ, ’ನೀನು ಅಫ್ಘಾನಿಸ್ತಾನಕ್ಕೆ ಹೋಗು. ಆ ದೇಶ ಚೆನ್ನಾಗಿದೆ’ ಎನ್ನುವುದು ಶುರುವಾಗಿದೆ. ಇದಕ್ಕಿಂತ ಮೊದಲು ಸರ್ಕಾರವನ್ನು ಪ್ರಶ್ನಿಸಿದರೆ, ’ಪಾಕಿಸ್ತಾನಕ್ಕೆ ಹೋಗು, ನೀನು ದೇಶದ್ರೋಹಿ ಎನ್ನುತ್ತಿದ್ದರು. ಈಗ ತಾಲಿಬಾನ್ ಅಧಿಕಾರ ಹಿಡಿದುಕೊಂಡಿದ್ದಾರೆ. ತಾಲಿಬಾನ್‌ಗೂ ಭಾರತಕ್ಕೂ ಯಾವ ಸಂಬಂಧಗಳಿವೆ, ತಾಲಿಬಾನ್ ಕುರಿತು ನಮ್ಮ ಒಕ್ಕೂಟ ಸರ್ಕಾರದ ನಿಲುವೇನು ಎಂಬುದು ಸಾಮಾನ್ಯ ಜನರಿಗೆ ತಿಳಿಯದು. ಆದರೂ ತಾಲಿಬಾನ್ ಹೆಸರನ್ನು ಮುಂದೊಡ್ಡಿ, ಪ್ರಶ್ನಿಸುವವರ ಬಾಯಿ ಮುಚ್ಚಿಸಲಾಗುತ್ತಿದೆ…”

ಇದು ಕತ್ರಿಗುಪ್ಪೆಯ ನಿವಾಸಿ ಪುರುಷೋತ್ತಮ್ ಅವರೊಬ್ಬರ ಹೇಳಿಕೆಯಲ್ಲ. ಬೆಲೆ ಏರಿಕೆಯನ್ನು ಪ್ರಶ್ನಿಸಿದ ಪ್ರತಿಯೊಬ್ಬರೂ ಟ್ರಾಲ್ ಪಡೆಯಿಂದ ಎದುರಿಸಬೇಕಾದ ಮೂದಲಿಕೆ ಅದು. ಹೋಗಲಿ ಬಿಡಿ, ಟ್ರಾಲ್ ಪಡೆಯ ವಾದವನ್ನು ಮನ್ನಿಸಿಯೇ ಮುನ್ನಡೆಯೋಣವೆಂದರೆ, ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಗೆ ಕಡಿವಾಣವೇ ಇಲ್ಲದಾಗಿದೆಯೆಲ್ಲ!

ಅಡುಗೆ ಅನಿಲದ ಬೆಲೆಯನ್ನೇ ನೋಡಿ. 2014ರಲ್ಲಿ 14.2 ಕೆ.ಜಿ. ಸಿಲಿಂಡರ್ ಸಬ್ಸಿಡಿ ಅಡುಗೆ ಅನಿಲ ದರ 410 ರೂ. ಇದ್ದದ್ದು, ಈಗ ಸದ್ಯದ ಆಡಳಿತದಲ್ಲಿ 882 ರೂಗಳಾಗಿದೆ. ಅಂದರೆ ಸುಮಾರು ಶೇ. 116ರಷ್ಟು ದರ ಏರಿಕೆಯಾಗಿದೆ. ಕಳೆದ ಒಂದೇ ತಿಂಗಳಿನಲ್ಲಿ 50 ರೂ ಹೆಚ್ಚಾದರೆ, ಕಳೆದ 9 ತಿಂಗಳಲ್ಲಿ 190 ರೂ ಹೆಚ್ಚಾಗಿದೆ. ಆದರೆ ಬಿಜೆಪಿ ನಾಯಕರು, 2014ಕ್ಕೆ ಹೋಲಿಸಿದರೆ ಈಗಿನ ಅನಿಲ ದರ ಕಡಿಮೆ ಇದೆ, ಆಗ 1241 ರೂ ಇತ್ತೆಂದು ಅರ್ಧ ಸುಳ್ಳು ಹೇಳುತ್ತಿದ್ದಾರೆ. ಆಗ 1241 ರೂ ಇದ್ದಿದ್ದು ಸಬ್ಸಿಡಿ ರಹಿತ ಗ್ಯಾಸ್ ಬೆಲೆ. ಸಬ್ಸಿಡಿ ಗ್ಯಾಸ್ ಬೆಲೆ ಆಗ 410 ರೂ ಇತ್ತು. ಆದರೆ ಈಗ ಸಬ್ಸಿಡಿ ಸಹಿತ ಬೆಲೆ 880 ರೂ.ಗಳನ್ನು ದಾಟಿರುವುದು ಹೇಗೆ ಎಂಬುದಕ್ಕೆ ಸರ್ಕಾರ ಉತ್ತರ ಕೊಡುವುದಿಲ್ಲ. 2020ರ ನಂತರ ಸಬ್ಸಿಡಿ ಹಣವೂ ಸಮರ್ಪಕವಾಗಿ ಜನರಿಗೆ ಬಂದಿಲ್ಲ ಎಂದು ರಾಷ್ಟ್ರೀಯ ಮಟ್ಟದ ಮಾಧ್ಯಮಗಳು ವರದಿ ಮಾಡಿವೆ.

ಕಳೆದ 10 ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಎಲ್‌ಪಿಜಿ ದರ ಬದಲಾಗಿರುವುದು

“26 ಮಿಲಿಯನ್ ಮೆಟ್ರಿಕ್ ಟನ್‌ನಷ್ಟು ದೇಶಕ್ಕೆ ಅಡುಗೆ ಅನಿಲ ಬೇಕು. ಅದರಲ್ಲಿ ಶೇ.50ರಷ್ಟನ್ನು ದೇಶದಲ್ಲೇ ಉತ್ಪಾದಿಸಲಾಗುತ್ತಿದೆ. ನಿರಂತರವಾಗಿ ಸಿಗಬಲ್ಲ 400 ಶತಕೋಟಿ ಮೆಟ್ರಿಕ್ ಟನ್‌ನಷ್ಟು ಅನಿಲದ ದಾಸ್ತಾನು ದೇಶದಲ್ಲಿ ಪತ್ತೆಯಾಗಿವೆ. ಅದನ್ನು ಹೊರತೆಗೆದು ಬಳಸಿದರೆ ಆಮದು ಮೇಲಿನ ಅವಲಂಬನೆ ಸಂಪೂರ್ಣವಾಗಿ ತಪ್ಪಲಿದೆ. ಅಂತಾರಾಷ್ಟ್ರೀಯ ಅನಿಲ ಸಮುಚ್ಛಯಗಳಲ್ಲಿ ಇರುವ ದರ ಪರಿಗಣಿಸಿ, ಡಾಲರ್ ರೂಪಾಯಿಯ ವಿನಿಮಯ ದರದ ಆಧಾರದಲ್ಲಿ ಅನಿಲ ದರ ನಿಗದಿ ಮಾಡಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಅಂತಾರಾಷ್ಟ್ರೀಯ ಅನಿಲ ದರದಲ್ಲಿ ಮತ್ತು ಡಾಲರ್ – ರೂಪಾಯಿ ವಿನಿಮಯದಲ್ಲಿ ದೊಡ್ಡಮಟ್ಟದ ಏರುಪೇರು ಕಂಡು ಬಂದಿಲ್ಲ. ಇನ್ನೂ ಸರಳವಾಗಿ ಹೇಳಬೇಕೆಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿಲ ದರ ಶೇ.25%ರಷ್ಟು ಕುಸಿದಿದೆ. ಅನಿಲ ಉತ್ಪಾದನೆಗೆ ಬೇಕಾದ ರಾಸಾಯನಿಕಗಳನ್ನು ದೊಡ್ಡ ಮಟ್ಟದಲ್ಲಿ ಆಮದು ಮಾಡುವ ಸೌದಿಯ ಅರಾಮ್ಕೋ ಕಂಪನಿ ನಿಗದಿ ಮಾಡಿರುವ ಬೆಲೆಯೂ ಕಡಿಮೆ ಇದೆ. ಶೇ.30ರಷ್ಟು ದರ ಜಿಗಿತ ಒಂದೇ ವರ್ಷದಲ್ಲಿ ಆಗುವಂತಹ ಯಾವುದೇ ಬೆಳವಣಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗಿಲ್ಲ. ಖಾಸಗಿ ಸಂಸ್ಥೆಗಳು ಅನಿಲ ಉತ್ಪಾದನಾ ಕ್ಷೇತ್ರಕ್ಕೆ ಕಾಲಿಟ್ಟಿರುವುದೇ ಇಷ್ಟು ಮಟ್ಟದ ಬೆಲೆ ಏರಿಕೆಗೆ ಕಾರಣ” ಎನ್ನುತ್ತಾರೆ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್.

ಅಡುಗೆ ಅನಿಲ ದರ ಏರಿಕೆ ಒಂದು ಸಮಸ್ಯೆಯಾದರೆ ಅಡುಗೆ ಎಣ್ಣೆಯ ದರವನ್ನೂ ನಿರಂತರವಾಗಿ ಏರಿಸುತ್ತಿರುವುದರಿಂದ ಜನಸಾಮಾನ್ಯರು ಜೀವನ ಸಾಗಿಸುವುದು ದುಬಾರಿಯಾಗಿದೆ.

ಬೇರೆ ಬೇರೆ ಗುಣಮಟ್ಟದ ಅಡುಗೆ ಎಣ್ಣೆಗಳು ಮಾರುಕಟ್ಟೆಯಲ್ಲಿದ್ದು, ಕೆಲವು ತಿಂಗಳಿಂದ ಅಡುಗೆ ಎಣ್ಣೆಯ ದರ ನಿರಂತರ ಏರಿಕೆಯಾಗುತ್ತಲೇ ಇದೆ. ಕಡಿಮೆ ಗುಣಮಟ್ಟದ ಅಡುಗೆ ಎಣ್ಣೆ ಲೀಟರ್ 85 ರೂ.ಗಳಿಂದ ರೂ.90ರವರೆಗೆ ಸಿಗುತ್ತಿತ್ತು. ಬೆಲೆ ಏರಿಕೆಯಿಂದಾಗಿ ಆಗಸ್ಟ್ ವೇಳೆಗೆ ಅದು 140 ರೂ. ಆಗಿತ್ತು. ಸೆಪ್ಟೆಂಬರ್ ವೇಳೆಗೆ 10 ರೂ. ಏರಿಕೆ ಮಾಡಲಾಗಿದ್ದು, ಈಗ 150 ರೂ. ಆಗಿದೆ. ಉತ್ತಮ ಗುಣಮಟ್ಟದ ಅಡುಗೆ ಎಣ್ಣೆ, 140ರಿಂದ 150 ರೂ.ಗಳಿಗೆ ದೊರಕುತ್ತಿತ್ತು. ಈಗ 220 ರೂಗಳಿಂದ 230 ರೂವರೆಗೂ ಏರಿಕೆ ಕಂಡಿದೆ. ಇದರ ಜೊತೆಗೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು ಜನರು ಪರಿಹಾರ ಕಾಣದೆ ಕೈಚೆಲ್ಲಿ ಕೂರುವಂತಾಗಿದೆ.

PC : The New Indian Express

“ಜನಗಳು ಬದಲಾದರೆ ಮಾತ್ರ ರಾಜಕಾರಣಿಗಳು ಬುದ್ಧಿ ಕಲಿಯುತ್ತಾರೆ. ಸರ್ಕಾರದ ವಕ್ತಾರರ ಮಾತುಗಳನ್ನು ಹಾಗೂ ಟ್ರಾಲ್ ಮತ್ತು ಐಟಿ ಸೇನೆಯ ಮಾತುಗಳನ್ನು ಅಮಾಯಕರು ಓದಿ, ಈ ಮುಖಂಡರು ಹೇಳಿದ್ದೇ ಸರಿ ಎಂದು ಭಾವಿಸುತ್ತಾರೆ. ತಾಲಿಬಾನ್ ಹೆಸರಲ್ಲಿ ಜನರು ಕಿತ್ತಾಡುತ್ತಿದ್ದರೆ ಅದು ಆಡಳಿತ ನಡೆಸುವವರಿಗೆ
ಲಾಭವಾಗುತ್ತಿದೆ. ಜನರು ಮಾತ್ರ ಎಂದಿನ ಬವಣೆಯಲ್ಲಿಯೇ ಇದ್ದಾರೆ” ಎಂದು ಕತ್ರಿಗುಪ್ಪೆಯ ಪುರುಷೋತ್ತಮ್ ಗಂಭೀರವಾಗಿ ಹೇಳುತ್ತಾರೆ.

ಇನ್ನಾದರೂ ಆಳುವ ಸರ್ಕಾರಗಳು ಜನರನ್ನು ಭಾದಿಸುತ್ತಿರುವ ಬೆಲೆ ಏರಿಕೆಯ ಬಗ್ಗೆ ಗಮನ ಹರಿಸುವರೇ?


ಇದನ್ನೂ ಓದಿ: ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...