Homeಕರ್ನಾಟಕಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!

ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!

- Advertisement -
- Advertisement -

ಇತ್ತೀಚೆಗೆ ಕರ್ನಾಟಕದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು, “ತಾಲಿಬಾನ್ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುತ್ತಿದೆ” ಎಂದು ಹೇಳಿದರೆ, ಮಧ್ಯಪ್ರದೇಶದ ಬಿಜೆಪಿ ನಾಯಕ ರಾಮ್ ರತನ್ ಪಯಾಲ್, “ನಿಮಗೆ ಕಡಿಮೆ ಬೆಲೆಯ ಪೆಟ್ರೋಲ್, ಡೀಸೆಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ” ಎಂದಿದ್ದರು.

“ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಡಿಪಿ (ಗ್ಯಾಸ್, ಡೀಸೆಲ್, ಪೆಟ್ರೋಲ್) ಬೆಲೆ ನಿರಂತರ ಏರುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಅಡುಗೆ ಅನಿಲದ ಬೆಲೆ 50 ರೂ ಏರಿಕೆ ಕಂಡಿದೆ. ಯಾರಾದರೂ ನಾಗರಿಕರು ಪ್ರಶ್ನಿಸಿದರೆ, ’ನೀನು ಅಫ್ಘಾನಿಸ್ತಾನಕ್ಕೆ ಹೋಗು. ಆ ದೇಶ ಚೆನ್ನಾಗಿದೆ’ ಎನ್ನುವುದು ಶುರುವಾಗಿದೆ. ಇದಕ್ಕಿಂತ ಮೊದಲು ಸರ್ಕಾರವನ್ನು ಪ್ರಶ್ನಿಸಿದರೆ, ’ಪಾಕಿಸ್ತಾನಕ್ಕೆ ಹೋಗು, ನೀನು ದೇಶದ್ರೋಹಿ ಎನ್ನುತ್ತಿದ್ದರು. ಈಗ ತಾಲಿಬಾನ್ ಅಧಿಕಾರ ಹಿಡಿದುಕೊಂಡಿದ್ದಾರೆ. ತಾಲಿಬಾನ್‌ಗೂ ಭಾರತಕ್ಕೂ ಯಾವ ಸಂಬಂಧಗಳಿವೆ, ತಾಲಿಬಾನ್ ಕುರಿತು ನಮ್ಮ ಒಕ್ಕೂಟ ಸರ್ಕಾರದ ನಿಲುವೇನು ಎಂಬುದು ಸಾಮಾನ್ಯ ಜನರಿಗೆ ತಿಳಿಯದು. ಆದರೂ ತಾಲಿಬಾನ್ ಹೆಸರನ್ನು ಮುಂದೊಡ್ಡಿ, ಪ್ರಶ್ನಿಸುವವರ ಬಾಯಿ ಮುಚ್ಚಿಸಲಾಗುತ್ತಿದೆ…”

ಇದು ಕತ್ರಿಗುಪ್ಪೆಯ ನಿವಾಸಿ ಪುರುಷೋತ್ತಮ್ ಅವರೊಬ್ಬರ ಹೇಳಿಕೆಯಲ್ಲ. ಬೆಲೆ ಏರಿಕೆಯನ್ನು ಪ್ರಶ್ನಿಸಿದ ಪ್ರತಿಯೊಬ್ಬರೂ ಟ್ರಾಲ್ ಪಡೆಯಿಂದ ಎದುರಿಸಬೇಕಾದ ಮೂದಲಿಕೆ ಅದು. ಹೋಗಲಿ ಬಿಡಿ, ಟ್ರಾಲ್ ಪಡೆಯ ವಾದವನ್ನು ಮನ್ನಿಸಿಯೇ ಮುನ್ನಡೆಯೋಣವೆಂದರೆ, ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಗೆ ಕಡಿವಾಣವೇ ಇಲ್ಲದಾಗಿದೆಯೆಲ್ಲ!

ಅಡುಗೆ ಅನಿಲದ ಬೆಲೆಯನ್ನೇ ನೋಡಿ. 2014ರಲ್ಲಿ 14.2 ಕೆ.ಜಿ. ಸಿಲಿಂಡರ್ ಸಬ್ಸಿಡಿ ಅಡುಗೆ ಅನಿಲ ದರ 410 ರೂ. ಇದ್ದದ್ದು, ಈಗ ಸದ್ಯದ ಆಡಳಿತದಲ್ಲಿ 882 ರೂಗಳಾಗಿದೆ. ಅಂದರೆ ಸುಮಾರು ಶೇ. 116ರಷ್ಟು ದರ ಏರಿಕೆಯಾಗಿದೆ. ಕಳೆದ ಒಂದೇ ತಿಂಗಳಿನಲ್ಲಿ 50 ರೂ ಹೆಚ್ಚಾದರೆ, ಕಳೆದ 9 ತಿಂಗಳಲ್ಲಿ 190 ರೂ ಹೆಚ್ಚಾಗಿದೆ. ಆದರೆ ಬಿಜೆಪಿ ನಾಯಕರು, 2014ಕ್ಕೆ ಹೋಲಿಸಿದರೆ ಈಗಿನ ಅನಿಲ ದರ ಕಡಿಮೆ ಇದೆ, ಆಗ 1241 ರೂ ಇತ್ತೆಂದು ಅರ್ಧ ಸುಳ್ಳು ಹೇಳುತ್ತಿದ್ದಾರೆ. ಆಗ 1241 ರೂ ಇದ್ದಿದ್ದು ಸಬ್ಸಿಡಿ ರಹಿತ ಗ್ಯಾಸ್ ಬೆಲೆ. ಸಬ್ಸಿಡಿ ಗ್ಯಾಸ್ ಬೆಲೆ ಆಗ 410 ರೂ ಇತ್ತು. ಆದರೆ ಈಗ ಸಬ್ಸಿಡಿ ಸಹಿತ ಬೆಲೆ 880 ರೂ.ಗಳನ್ನು ದಾಟಿರುವುದು ಹೇಗೆ ಎಂಬುದಕ್ಕೆ ಸರ್ಕಾರ ಉತ್ತರ ಕೊಡುವುದಿಲ್ಲ. 2020ರ ನಂತರ ಸಬ್ಸಿಡಿ ಹಣವೂ ಸಮರ್ಪಕವಾಗಿ ಜನರಿಗೆ ಬಂದಿಲ್ಲ ಎಂದು ರಾಷ್ಟ್ರೀಯ ಮಟ್ಟದ ಮಾಧ್ಯಮಗಳು ವರದಿ ಮಾಡಿವೆ.

ಕಳೆದ 10 ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಎಲ್‌ಪಿಜಿ ದರ ಬದಲಾಗಿರುವುದು

“26 ಮಿಲಿಯನ್ ಮೆಟ್ರಿಕ್ ಟನ್‌ನಷ್ಟು ದೇಶಕ್ಕೆ ಅಡುಗೆ ಅನಿಲ ಬೇಕು. ಅದರಲ್ಲಿ ಶೇ.50ರಷ್ಟನ್ನು ದೇಶದಲ್ಲೇ ಉತ್ಪಾದಿಸಲಾಗುತ್ತಿದೆ. ನಿರಂತರವಾಗಿ ಸಿಗಬಲ್ಲ 400 ಶತಕೋಟಿ ಮೆಟ್ರಿಕ್ ಟನ್‌ನಷ್ಟು ಅನಿಲದ ದಾಸ್ತಾನು ದೇಶದಲ್ಲಿ ಪತ್ತೆಯಾಗಿವೆ. ಅದನ್ನು ಹೊರತೆಗೆದು ಬಳಸಿದರೆ ಆಮದು ಮೇಲಿನ ಅವಲಂಬನೆ ಸಂಪೂರ್ಣವಾಗಿ ತಪ್ಪಲಿದೆ. ಅಂತಾರಾಷ್ಟ್ರೀಯ ಅನಿಲ ಸಮುಚ್ಛಯಗಳಲ್ಲಿ ಇರುವ ದರ ಪರಿಗಣಿಸಿ, ಡಾಲರ್ ರೂಪಾಯಿಯ ವಿನಿಮಯ ದರದ ಆಧಾರದಲ್ಲಿ ಅನಿಲ ದರ ನಿಗದಿ ಮಾಡಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಅಂತಾರಾಷ್ಟ್ರೀಯ ಅನಿಲ ದರದಲ್ಲಿ ಮತ್ತು ಡಾಲರ್ – ರೂಪಾಯಿ ವಿನಿಮಯದಲ್ಲಿ ದೊಡ್ಡಮಟ್ಟದ ಏರುಪೇರು ಕಂಡು ಬಂದಿಲ್ಲ. ಇನ್ನೂ ಸರಳವಾಗಿ ಹೇಳಬೇಕೆಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿಲ ದರ ಶೇ.25%ರಷ್ಟು ಕುಸಿದಿದೆ. ಅನಿಲ ಉತ್ಪಾದನೆಗೆ ಬೇಕಾದ ರಾಸಾಯನಿಕಗಳನ್ನು ದೊಡ್ಡ ಮಟ್ಟದಲ್ಲಿ ಆಮದು ಮಾಡುವ ಸೌದಿಯ ಅರಾಮ್ಕೋ ಕಂಪನಿ ನಿಗದಿ ಮಾಡಿರುವ ಬೆಲೆಯೂ ಕಡಿಮೆ ಇದೆ. ಶೇ.30ರಷ್ಟು ದರ ಜಿಗಿತ ಒಂದೇ ವರ್ಷದಲ್ಲಿ ಆಗುವಂತಹ ಯಾವುದೇ ಬೆಳವಣಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗಿಲ್ಲ. ಖಾಸಗಿ ಸಂಸ್ಥೆಗಳು ಅನಿಲ ಉತ್ಪಾದನಾ ಕ್ಷೇತ್ರಕ್ಕೆ ಕಾಲಿಟ್ಟಿರುವುದೇ ಇಷ್ಟು ಮಟ್ಟದ ಬೆಲೆ ಏರಿಕೆಗೆ ಕಾರಣ” ಎನ್ನುತ್ತಾರೆ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್.

ಅಡುಗೆ ಅನಿಲ ದರ ಏರಿಕೆ ಒಂದು ಸಮಸ್ಯೆಯಾದರೆ ಅಡುಗೆ ಎಣ್ಣೆಯ ದರವನ್ನೂ ನಿರಂತರವಾಗಿ ಏರಿಸುತ್ತಿರುವುದರಿಂದ ಜನಸಾಮಾನ್ಯರು ಜೀವನ ಸಾಗಿಸುವುದು ದುಬಾರಿಯಾಗಿದೆ.

ಬೇರೆ ಬೇರೆ ಗುಣಮಟ್ಟದ ಅಡುಗೆ ಎಣ್ಣೆಗಳು ಮಾರುಕಟ್ಟೆಯಲ್ಲಿದ್ದು, ಕೆಲವು ತಿಂಗಳಿಂದ ಅಡುಗೆ ಎಣ್ಣೆಯ ದರ ನಿರಂತರ ಏರಿಕೆಯಾಗುತ್ತಲೇ ಇದೆ. ಕಡಿಮೆ ಗುಣಮಟ್ಟದ ಅಡುಗೆ ಎಣ್ಣೆ ಲೀಟರ್ 85 ರೂ.ಗಳಿಂದ ರೂ.90ರವರೆಗೆ ಸಿಗುತ್ತಿತ್ತು. ಬೆಲೆ ಏರಿಕೆಯಿಂದಾಗಿ ಆಗಸ್ಟ್ ವೇಳೆಗೆ ಅದು 140 ರೂ. ಆಗಿತ್ತು. ಸೆಪ್ಟೆಂಬರ್ ವೇಳೆಗೆ 10 ರೂ. ಏರಿಕೆ ಮಾಡಲಾಗಿದ್ದು, ಈಗ 150 ರೂ. ಆಗಿದೆ. ಉತ್ತಮ ಗುಣಮಟ್ಟದ ಅಡುಗೆ ಎಣ್ಣೆ, 140ರಿಂದ 150 ರೂ.ಗಳಿಗೆ ದೊರಕುತ್ತಿತ್ತು. ಈಗ 220 ರೂಗಳಿಂದ 230 ರೂವರೆಗೂ ಏರಿಕೆ ಕಂಡಿದೆ. ಇದರ ಜೊತೆಗೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು ಜನರು ಪರಿಹಾರ ಕಾಣದೆ ಕೈಚೆಲ್ಲಿ ಕೂರುವಂತಾಗಿದೆ.

PC : The New Indian Express

“ಜನಗಳು ಬದಲಾದರೆ ಮಾತ್ರ ರಾಜಕಾರಣಿಗಳು ಬುದ್ಧಿ ಕಲಿಯುತ್ತಾರೆ. ಸರ್ಕಾರದ ವಕ್ತಾರರ ಮಾತುಗಳನ್ನು ಹಾಗೂ ಟ್ರಾಲ್ ಮತ್ತು ಐಟಿ ಸೇನೆಯ ಮಾತುಗಳನ್ನು ಅಮಾಯಕರು ಓದಿ, ಈ ಮುಖಂಡರು ಹೇಳಿದ್ದೇ ಸರಿ ಎಂದು ಭಾವಿಸುತ್ತಾರೆ. ತಾಲಿಬಾನ್ ಹೆಸರಲ್ಲಿ ಜನರು ಕಿತ್ತಾಡುತ್ತಿದ್ದರೆ ಅದು ಆಡಳಿತ ನಡೆಸುವವರಿಗೆ
ಲಾಭವಾಗುತ್ತಿದೆ. ಜನರು ಮಾತ್ರ ಎಂದಿನ ಬವಣೆಯಲ್ಲಿಯೇ ಇದ್ದಾರೆ” ಎಂದು ಕತ್ರಿಗುಪ್ಪೆಯ ಪುರುಷೋತ್ತಮ್ ಗಂಭೀರವಾಗಿ ಹೇಳುತ್ತಾರೆ.

ಇನ್ನಾದರೂ ಆಳುವ ಸರ್ಕಾರಗಳು ಜನರನ್ನು ಭಾದಿಸುತ್ತಿರುವ ಬೆಲೆ ಏರಿಕೆಯ ಬಗ್ಗೆ ಗಮನ ಹರಿಸುವರೇ?


ಇದನ್ನೂ ಓದಿ: ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...