Homeಕರ್ನಾಟಕಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!

ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತಾಲಿಬಾನಿನ ಗುಮ್ಮ ತೋರಿಸಿದ ಶಾಸಕ!

- Advertisement -
- Advertisement -

ಇತ್ತೀಚೆಗೆ ಕರ್ನಾಟಕದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು, “ತಾಲಿಬಾನ್ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುತ್ತಿದೆ” ಎಂದು ಹೇಳಿದರೆ, ಮಧ್ಯಪ್ರದೇಶದ ಬಿಜೆಪಿ ನಾಯಕ ರಾಮ್ ರತನ್ ಪಯಾಲ್, “ನಿಮಗೆ ಕಡಿಮೆ ಬೆಲೆಯ ಪೆಟ್ರೋಲ್, ಡೀಸೆಲ್ ಬೇಕಾದರೆ ಅಫ್ಘಾನಿಸ್ತಾನಕ್ಕೆ ಹೋಗಿ” ಎಂದಿದ್ದರು.

“ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಡಿಪಿ (ಗ್ಯಾಸ್, ಡೀಸೆಲ್, ಪೆಟ್ರೋಲ್) ಬೆಲೆ ನಿರಂತರ ಏರುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಅಡುಗೆ ಅನಿಲದ ಬೆಲೆ 50 ರೂ ಏರಿಕೆ ಕಂಡಿದೆ. ಯಾರಾದರೂ ನಾಗರಿಕರು ಪ್ರಶ್ನಿಸಿದರೆ, ’ನೀನು ಅಫ್ಘಾನಿಸ್ತಾನಕ್ಕೆ ಹೋಗು. ಆ ದೇಶ ಚೆನ್ನಾಗಿದೆ’ ಎನ್ನುವುದು ಶುರುವಾಗಿದೆ. ಇದಕ್ಕಿಂತ ಮೊದಲು ಸರ್ಕಾರವನ್ನು ಪ್ರಶ್ನಿಸಿದರೆ, ’ಪಾಕಿಸ್ತಾನಕ್ಕೆ ಹೋಗು, ನೀನು ದೇಶದ್ರೋಹಿ ಎನ್ನುತ್ತಿದ್ದರು. ಈಗ ತಾಲಿಬಾನ್ ಅಧಿಕಾರ ಹಿಡಿದುಕೊಂಡಿದ್ದಾರೆ. ತಾಲಿಬಾನ್‌ಗೂ ಭಾರತಕ್ಕೂ ಯಾವ ಸಂಬಂಧಗಳಿವೆ, ತಾಲಿಬಾನ್ ಕುರಿತು ನಮ್ಮ ಒಕ್ಕೂಟ ಸರ್ಕಾರದ ನಿಲುವೇನು ಎಂಬುದು ಸಾಮಾನ್ಯ ಜನರಿಗೆ ತಿಳಿಯದು. ಆದರೂ ತಾಲಿಬಾನ್ ಹೆಸರನ್ನು ಮುಂದೊಡ್ಡಿ, ಪ್ರಶ್ನಿಸುವವರ ಬಾಯಿ ಮುಚ್ಚಿಸಲಾಗುತ್ತಿದೆ…”

ಇದು ಕತ್ರಿಗುಪ್ಪೆಯ ನಿವಾಸಿ ಪುರುಷೋತ್ತಮ್ ಅವರೊಬ್ಬರ ಹೇಳಿಕೆಯಲ್ಲ. ಬೆಲೆ ಏರಿಕೆಯನ್ನು ಪ್ರಶ್ನಿಸಿದ ಪ್ರತಿಯೊಬ್ಬರೂ ಟ್ರಾಲ್ ಪಡೆಯಿಂದ ಎದುರಿಸಬೇಕಾದ ಮೂದಲಿಕೆ ಅದು. ಹೋಗಲಿ ಬಿಡಿ, ಟ್ರಾಲ್ ಪಡೆಯ ವಾದವನ್ನು ಮನ್ನಿಸಿಯೇ ಮುನ್ನಡೆಯೋಣವೆಂದರೆ, ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಗೆ ಕಡಿವಾಣವೇ ಇಲ್ಲದಾಗಿದೆಯೆಲ್ಲ!

ಅಡುಗೆ ಅನಿಲದ ಬೆಲೆಯನ್ನೇ ನೋಡಿ. 2014ರಲ್ಲಿ 14.2 ಕೆ.ಜಿ. ಸಿಲಿಂಡರ್ ಸಬ್ಸಿಡಿ ಅಡುಗೆ ಅನಿಲ ದರ 410 ರೂ. ಇದ್ದದ್ದು, ಈಗ ಸದ್ಯದ ಆಡಳಿತದಲ್ಲಿ 882 ರೂಗಳಾಗಿದೆ. ಅಂದರೆ ಸುಮಾರು ಶೇ. 116ರಷ್ಟು ದರ ಏರಿಕೆಯಾಗಿದೆ. ಕಳೆದ ಒಂದೇ ತಿಂಗಳಿನಲ್ಲಿ 50 ರೂ ಹೆಚ್ಚಾದರೆ, ಕಳೆದ 9 ತಿಂಗಳಲ್ಲಿ 190 ರೂ ಹೆಚ್ಚಾಗಿದೆ. ಆದರೆ ಬಿಜೆಪಿ ನಾಯಕರು, 2014ಕ್ಕೆ ಹೋಲಿಸಿದರೆ ಈಗಿನ ಅನಿಲ ದರ ಕಡಿಮೆ ಇದೆ, ಆಗ 1241 ರೂ ಇತ್ತೆಂದು ಅರ್ಧ ಸುಳ್ಳು ಹೇಳುತ್ತಿದ್ದಾರೆ. ಆಗ 1241 ರೂ ಇದ್ದಿದ್ದು ಸಬ್ಸಿಡಿ ರಹಿತ ಗ್ಯಾಸ್ ಬೆಲೆ. ಸಬ್ಸಿಡಿ ಗ್ಯಾಸ್ ಬೆಲೆ ಆಗ 410 ರೂ ಇತ್ತು. ಆದರೆ ಈಗ ಸಬ್ಸಿಡಿ ಸಹಿತ ಬೆಲೆ 880 ರೂ.ಗಳನ್ನು ದಾಟಿರುವುದು ಹೇಗೆ ಎಂಬುದಕ್ಕೆ ಸರ್ಕಾರ ಉತ್ತರ ಕೊಡುವುದಿಲ್ಲ. 2020ರ ನಂತರ ಸಬ್ಸಿಡಿ ಹಣವೂ ಸಮರ್ಪಕವಾಗಿ ಜನರಿಗೆ ಬಂದಿಲ್ಲ ಎಂದು ರಾಷ್ಟ್ರೀಯ ಮಟ್ಟದ ಮಾಧ್ಯಮಗಳು ವರದಿ ಮಾಡಿವೆ.

ಕಳೆದ 10 ತಿಂಗಳುಗಳಲ್ಲಿ ಬೆಂಗಳೂರಿನಲ್ಲಿ ಎಲ್‌ಪಿಜಿ ದರ ಬದಲಾಗಿರುವುದು

“26 ಮಿಲಿಯನ್ ಮೆಟ್ರಿಕ್ ಟನ್‌ನಷ್ಟು ದೇಶಕ್ಕೆ ಅಡುಗೆ ಅನಿಲ ಬೇಕು. ಅದರಲ್ಲಿ ಶೇ.50ರಷ್ಟನ್ನು ದೇಶದಲ್ಲೇ ಉತ್ಪಾದಿಸಲಾಗುತ್ತಿದೆ. ನಿರಂತರವಾಗಿ ಸಿಗಬಲ್ಲ 400 ಶತಕೋಟಿ ಮೆಟ್ರಿಕ್ ಟನ್‌ನಷ್ಟು ಅನಿಲದ ದಾಸ್ತಾನು ದೇಶದಲ್ಲಿ ಪತ್ತೆಯಾಗಿವೆ. ಅದನ್ನು ಹೊರತೆಗೆದು ಬಳಸಿದರೆ ಆಮದು ಮೇಲಿನ ಅವಲಂಬನೆ ಸಂಪೂರ್ಣವಾಗಿ ತಪ್ಪಲಿದೆ. ಅಂತಾರಾಷ್ಟ್ರೀಯ ಅನಿಲ ಸಮುಚ್ಛಯಗಳಲ್ಲಿ ಇರುವ ದರ ಪರಿಗಣಿಸಿ, ಡಾಲರ್ ರೂಪಾಯಿಯ ವಿನಿಮಯ ದರದ ಆಧಾರದಲ್ಲಿ ಅನಿಲ ದರ ನಿಗದಿ ಮಾಡಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಅಂತಾರಾಷ್ಟ್ರೀಯ ಅನಿಲ ದರದಲ್ಲಿ ಮತ್ತು ಡಾಲರ್ – ರೂಪಾಯಿ ವಿನಿಮಯದಲ್ಲಿ ದೊಡ್ಡಮಟ್ಟದ ಏರುಪೇರು ಕಂಡು ಬಂದಿಲ್ಲ. ಇನ್ನೂ ಸರಳವಾಗಿ ಹೇಳಬೇಕೆಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿಲ ದರ ಶೇ.25%ರಷ್ಟು ಕುಸಿದಿದೆ. ಅನಿಲ ಉತ್ಪಾದನೆಗೆ ಬೇಕಾದ ರಾಸಾಯನಿಕಗಳನ್ನು ದೊಡ್ಡ ಮಟ್ಟದಲ್ಲಿ ಆಮದು ಮಾಡುವ ಸೌದಿಯ ಅರಾಮ್ಕೋ ಕಂಪನಿ ನಿಗದಿ ಮಾಡಿರುವ ಬೆಲೆಯೂ ಕಡಿಮೆ ಇದೆ. ಶೇ.30ರಷ್ಟು ದರ ಜಿಗಿತ ಒಂದೇ ವರ್ಷದಲ್ಲಿ ಆಗುವಂತಹ ಯಾವುದೇ ಬೆಳವಣಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗಿಲ್ಲ. ಖಾಸಗಿ ಸಂಸ್ಥೆಗಳು ಅನಿಲ ಉತ್ಪಾದನಾ ಕ್ಷೇತ್ರಕ್ಕೆ ಕಾಲಿಟ್ಟಿರುವುದೇ ಇಷ್ಟು ಮಟ್ಟದ ಬೆಲೆ ಏರಿಕೆಗೆ ಕಾರಣ” ಎನ್ನುತ್ತಾರೆ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್.

ಅಡುಗೆ ಅನಿಲ ದರ ಏರಿಕೆ ಒಂದು ಸಮಸ್ಯೆಯಾದರೆ ಅಡುಗೆ ಎಣ್ಣೆಯ ದರವನ್ನೂ ನಿರಂತರವಾಗಿ ಏರಿಸುತ್ತಿರುವುದರಿಂದ ಜನಸಾಮಾನ್ಯರು ಜೀವನ ಸಾಗಿಸುವುದು ದುಬಾರಿಯಾಗಿದೆ.

ಬೇರೆ ಬೇರೆ ಗುಣಮಟ್ಟದ ಅಡುಗೆ ಎಣ್ಣೆಗಳು ಮಾರುಕಟ್ಟೆಯಲ್ಲಿದ್ದು, ಕೆಲವು ತಿಂಗಳಿಂದ ಅಡುಗೆ ಎಣ್ಣೆಯ ದರ ನಿರಂತರ ಏರಿಕೆಯಾಗುತ್ತಲೇ ಇದೆ. ಕಡಿಮೆ ಗುಣಮಟ್ಟದ ಅಡುಗೆ ಎಣ್ಣೆ ಲೀಟರ್ 85 ರೂ.ಗಳಿಂದ ರೂ.90ರವರೆಗೆ ಸಿಗುತ್ತಿತ್ತು. ಬೆಲೆ ಏರಿಕೆಯಿಂದಾಗಿ ಆಗಸ್ಟ್ ವೇಳೆಗೆ ಅದು 140 ರೂ. ಆಗಿತ್ತು. ಸೆಪ್ಟೆಂಬರ್ ವೇಳೆಗೆ 10 ರೂ. ಏರಿಕೆ ಮಾಡಲಾಗಿದ್ದು, ಈಗ 150 ರೂ. ಆಗಿದೆ. ಉತ್ತಮ ಗುಣಮಟ್ಟದ ಅಡುಗೆ ಎಣ್ಣೆ, 140ರಿಂದ 150 ರೂ.ಗಳಿಗೆ ದೊರಕುತ್ತಿತ್ತು. ಈಗ 220 ರೂಗಳಿಂದ 230 ರೂವರೆಗೂ ಏರಿಕೆ ಕಂಡಿದೆ. ಇದರ ಜೊತೆಗೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು ಜನರು ಪರಿಹಾರ ಕಾಣದೆ ಕೈಚೆಲ್ಲಿ ಕೂರುವಂತಾಗಿದೆ.

PC : The New Indian Express

“ಜನಗಳು ಬದಲಾದರೆ ಮಾತ್ರ ರಾಜಕಾರಣಿಗಳು ಬುದ್ಧಿ ಕಲಿಯುತ್ತಾರೆ. ಸರ್ಕಾರದ ವಕ್ತಾರರ ಮಾತುಗಳನ್ನು ಹಾಗೂ ಟ್ರಾಲ್ ಮತ್ತು ಐಟಿ ಸೇನೆಯ ಮಾತುಗಳನ್ನು ಅಮಾಯಕರು ಓದಿ, ಈ ಮುಖಂಡರು ಹೇಳಿದ್ದೇ ಸರಿ ಎಂದು ಭಾವಿಸುತ್ತಾರೆ. ತಾಲಿಬಾನ್ ಹೆಸರಲ್ಲಿ ಜನರು ಕಿತ್ತಾಡುತ್ತಿದ್ದರೆ ಅದು ಆಡಳಿತ ನಡೆಸುವವರಿಗೆ
ಲಾಭವಾಗುತ್ತಿದೆ. ಜನರು ಮಾತ್ರ ಎಂದಿನ ಬವಣೆಯಲ್ಲಿಯೇ ಇದ್ದಾರೆ” ಎಂದು ಕತ್ರಿಗುಪ್ಪೆಯ ಪುರುಷೋತ್ತಮ್ ಗಂಭೀರವಾಗಿ ಹೇಳುತ್ತಾರೆ.

ಇನ್ನಾದರೂ ಆಳುವ ಸರ್ಕಾರಗಳು ಜನರನ್ನು ಭಾದಿಸುತ್ತಿರುವ ಬೆಲೆ ಏರಿಕೆಯ ಬಗ್ಗೆ ಗಮನ ಹರಿಸುವರೇ?


ಇದನ್ನೂ ಓದಿ: ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...