Homeಕರ್ನಾಟಕಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸೇರಿದಂತೆ ಇಂಧನ ಬೆಲೆಗಳ ತೀವ್ರ ಹೆಚ್ಚಳದ ಪರಿಣಾಮ ಇವುಗಳನ್ನು ಬಳಸುವವರಿಗೆ ಮಾತ್ರ ಸೀಮಿತವಾಗಿಲ್ಲ. ಇದು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುವುದರಿಂದ ಸಮಸ್ತ ಜನರನ್ನೂ ತಟ್ಟುತ್ತಿದೆ.

ತರಕಾರಿ ಜನ ಸಾಮಾನ್ಯರ ದಿನ ನಿತ್ಯದ ಅಗತ್ಯ ಇರುತ್ತದೆ. ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ಪ್ರಸ್ತುತ ತರಕಾರಿ ಬೆಲೆ ಕಡಿಮೆಯಾಗಿದೆ. ಆದರೆ, ಇಂಧನ ಬೆಲೆ ಏರಿಕೆ, ಇದರಿಂದ ಸಾರಿಗೆ ವ್ಯವಸ್ಥೆ ಪ್ರಯಾಣ ದರಗಳ ಏರಿಕೆ, ಬೇರೆ ಅಗತ್ಯ ವಸ್ತುಗಳ ತುಟ್ಟಿ, ಲಾಕ್‌ಡೌನ್ ಕಾರಣದಿಂದ ಉಂಟಾಗಿರುವ ಸಮಸ್ಯೆಗಳು ಒಟ್ಟಾರೆ ಪರಿಸ್ಥಿತಿಯನ್ನು ಬಿಗಡಾಯಿಸಿವೆ.

ಕಳೆದ 20 ವರ್ಷದಿಂದ ತರಕಾರಿ ವ್ಯಾಪಾರ ಮಾಡುತ್ತಿರುವ ರವಿರಾವ್ ಮತ್ತು ಜಗದೀಶ್ ಹೇಳುವುದು ಹೀಗೆ, “ಲಾಕ್‌ಡೌನ್ ಮುಗಿದ ಮೇಲೆ ತರಕಾರಿ ವ್ಯಾಪಾರ ಕೊಂಚ ಮಟ್ಟಿಗೆ ಆರಂಭವಾಗಿತ್ತು. ಆದರೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಅದರಲ್ಲೂ ಅಡುಗೆ ಎಣ್ಣೆಯ ಬೆಲೆ ಏರಿಕೆ ನಮ್ಮ ವ್ಯಾಪಾರದ ಮೇಲೆ ತೀವ್ರ ಪ್ರಭಾವ ಬೀರಿದೆ” ಎನ್ನುತ್ತಾರೆ.

“ಅಡುಗೆ ಮಾಡಲು ತರಕಾರಿ ಬೇಕು, ಎಣ್ಣೆ, ಸಿಲಿಂಡರ್ ಬೆಲೆ ಗಗನಕ್ಕೆ ಏರಿರುವುದರಿಂದ ಕೊಳ್ಳುವವರ ಮೊದಲಿನ ಮಟ್ಟದಲ್ಲಿ ಖರೀದಿ ಮಾಡುತ್ತಿಲ್ಲ. ಅವರ ಸಂಖ್ಯೆಯೂ ಕಡಿಮೆಯಾಗಿದೆ. ಮೊದಲು ಆಟೋದವರಿಗೆ ಬಾಡಿಗೆ ಕೊಟ್ಟರೆ ಸಾಕಿತ್ತು. ಆದರೆ, ಈಗ ಬಾಡಿಗೆ ಜೊತೆಗೆ 50, 100 ಎಕ್ಸ್ಟ್ರಾ ನೀಡಲೇಬೇಕು” ಎನ್ನುತ್ತಾರೆ.

ಐದು ವರ್ಷದಿಂದ ತಿಲಗ ಅವರು ಶ್ರೀನಿವಾಸ ನಗರದ ಬಸ್ ನಿಲ್ದಾಣದ ಬಳಿ ತರಕಾರಿ ಮಾರಾಟ ಮಾಡುತ್ತಾರೆ. ತಿಲಗ ಅವರ ಪತಿ ಚಪ್ಪಲಿ ಹೊಲಿಯುವ ಕೆಲಸ ಮಾಡುತ್ತಾರೆ. ಪಕ್ಕದಲ್ಲೇ ತಿಲಗ ತರಕಾರಿ ವ್ಯಾಪಾರ ಮಾಡುತ್ತಾರೆ. ಆದರೆ, ಲಾಕ್‌ಡೌನ್ ನಮ್ಮ ವ್ಯಾಪಾರಕ್ಕೆ ಕುತ್ತು ತಂದಿದೆ ಎನ್ನುತ್ತಾರೆ.

“ದಿನ ಬೆಳಗ್ಗೆ ಬೇಗನೇ ಎದ್ದು ಮಾರ್ಕೆಟ್‌ಗೆ ಹೋಗಿ ತರಕಾರಿ ತರುತ್ತೇನೆ. ಮೊದಲು 150 ರೂಪಾಯಿ ಕೊಟ್ಟರೆ ಬರುತ್ತಿದ್ದ ಆಟೋದವರು, ಇಂದು 300 ರೂಪಾಯಿ ಕೇಳುತ್ತಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9.30ರವರೆಗೆ ವ್ಯಾಪಾರ ಮಾಡುತ್ತೇನೆ ಆದರೆ, ಎಷ್ಟೋ ಬಾರಿ ತಂದ ತರಕಾರಿ ಮಾರಾಟವಾಗಲು ಕೆಲವೊಮ್ಮೆ ಮೂರು ದಿನ ತೆಗೆದುಕೊಳ್ಳುತ್ತದೆ. ಮೊದಲೆಲ್ಲ ಒಂದೇ ದಿನದಲ್ಲಿ ಖಾಲಿಯಾಗುತ್ತಿತ್ತು. ಈಗ ಕೊಳ್ಳುವವರೆ ಇಲ್ಲವಾಗಿದ್ದಾರೆ” ಎನ್ನುತ್ತಾರೆ.

ತಳ್ಳುವ ಗಡಿಯಲ್ಲಿ ವ್ಯಾಪಾರ ಮಾಡುವ ಮೀತೇಶ್ ಹೇಳುವುದು ಕೂಡ ಇವೇ ಮಾತುಗಳನ್ನು. “ತರಕಾರಿಗಿಂತ ಆಟೋ ಬಾಡಿಗೆ ಜಾಸ್ತಿ ಆಗಿದೆ. ಯಾವಾಗ ಪೆಟ್ರೋಲ್, ಡಿಸೇಲ್, ಆಟೋ ಗ್ಯಾಸ್ ಬೆಲೆ ಕಡಿಮೆಯಾಗುತ್ತದೋ” ಎನ್ನುತ್ತಾರೆ.

ಇನ್ನು ಕಿರಾಣಿ-ದಿನಸಿ ಅಂಗಡಿಗಳ ವಿಷಯಕ್ಕೆ ಬಂದರೆ, ಬೇಳೆ, ಎಣ್ಣೆ ಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ ಎನ್ನುವುದು ಸಾಮಾನ್ಯ ಅಭಿಪ್ರಾಯ. “ವ್ಯಾಪಾರವಿಲ್ಲ, ಆದರೆ, 30 ವರ್ಷದಿಂದ ಇದೆ ಕೆಲಸ ಮಾಡುತ್ತಿರುವ ನಮಗೆ ಬೇರೆ ಮಾರ್ಗವಿಲ್ಲ ಎನ್ನುವುದು ಹಲವರ ಅಳಲು.

ಎಪಿಎಂಸಿ ಒಕ್ಕೂಟ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಅವರು ಹೇಳುವಂತೆ, “ಎಪಿಎಂಸಿಯಲ್ಲಿ ಬೇಳೆ ಪದಾರ್ಥಗಳಲ್ಲಿ ಹೆಚ್ಚಿನ ಏರಿಕೆಯಾಗಿಲ್ಲ. ಸಕ್ಕರೆ ಒಂದೆರಡು ರೂಪಾಯಿಯ ವ್ಯತ್ಯಾಸ ಕಂಡಿದೆ. ಆದರೆ ಎಣ್ಣೆ ಪದಾರ್ಥದ ಬೆಲೆ ಹೆಚ್ಚಾಗಿದೆ. ಹೋಲ್‌ಸೇಲ್ ಮತ್ತು ರಿಟೇಲ್ ಮಾರಾಟಕ್ಕೆ ಸ್ವಲ್ಪ ವ್ಯತ್ಯಾಸವಿದೆ” ಎನ್ನುತ್ತಾರೆ.

ಸೆಪ್ಟೆಂಬರ್ ಮಾಸಿಕದಲ್ಲಿ ಬೆಲೆ

ಲಾಕ್‌ಡೌನ್ ಸಮಯದಲ್ಲಿ ಚಿಲ್ಲರೆ ವ್ಯಾಪಾರದಲ್ಲಿ ಆಹಾರ ಧಾನ್ಯಗಳ ಬೆಲೆ ಭಾರಿ ಏರಿಕೆ ಕಂಡಿತ್ತು. ಈಗ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಇದಕ್ಕೆ ಕಾರಣ. ಲಾಕ್‌ಡೌನ್‌ನಿಂದ ಜನ ಅಂಗಡಿಗಳಿಗೆ ಬರುವುದು ಕಡಿಮೆಯಾಗಿದೆ. ಈಗ ಬೆಲೆ ಏರಿಕೆಯಿಂದ ಸಾರಿಗೆ ವ್ಯವಸ್ಥೆಯ ದರ ಕೂಡ ಏರಿಕೆಯಾಗಿರುವುದರಿಂದ ಚಿಲ್ಲರೆ ವ್ಯಾಪಾರಿಗಳಿಗೆ ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ.

ಇನ್ನು ಹೋಟೆಲ್ ಉದ್ಯಮದ ಸ್ಥಿತಿ ನಿಜಕ್ಕೂ ಶೋಚನೀಯವಾಗಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮತ್ತು ಅಡುಗೆ ಎಣ್ಣೆಯ ತೀವ್ರ ಬೆಲೆ ಏರಿಕೆ ಹೋಟೆಲ್ ಉದ್ಯಮಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

“ಅಡುಗೆ ಎಣ್ಣೆ ಜಾಸ್ತಿ ಆಗಿದೆ, ಗ್ಯಾಸ್ ರೇಟ್ ಜಾಸ್ತಿ ಆಯ್ತು ಅಂತಾ ನಾವು ರೇಟ್ ಜಾಸ್ತಿ ಮಾಡುವ ಹಾಗಿಲ್ಲ. ಹಾಗೆ ಮಾಡಿದ್ರೆ ಜನ ಹೋಟೆಲ್‌ಗೆ ಬರಲ್ಲ” ಎನ್ನುತ್ತಾರೆ ಕಳೆದ 40 ವರ್ಷಗಳಿಂದ ಪುಟ್ಟ ಹೋಟೆಲ್ ನಡೆಸುತ್ತಿರುವ ಶ್ರೀನಿವಾಸ್ ಮತ್ತು ಅವರ ಪುತ್ರ ಕುಲೋತ್ತಮ್.

“ಲಾಕ್‌ಡೌನ್‌ಗೆ ಮೊದಲು 700 ರೂಪಾಯಿ ಕೊಟ್ಟು ಒಂದು ಟಿನ್ ಎಣ್ಣೆ ತರುತ್ತಿದ್ದೆ. ಈಗ 1,300 ರೂಪಾಯಿ ಕೊಡ್ತಾ ಇದ್ದೇವೆ. ಗ್ಯಾಸ್ ರೇಟ್ ಕೂಡ ಜಾಸ್ತಿ ಆಗ್ತಾನೆ ಇದೆ. ಹದಿನೈದು ದಿನಕ್ಕೆ ಒಂದೊಂದು ರೇಟ್ ಹೇಳ್ತಾರೆ. ಹಾಗಂತ ನಾವು ಕ್ವಾಲಿಟಿ ಕಡಿಮೆ ಮಾಡುವಂತಿಲ್ಲ. ತಿಂಡಿಗಳ ಸಂಖ್ಯೆಯನ್ನು ಕಡಿಮೆ ಮಾಡುವಂತಿಲ್ಲ. ಯಾಕೆಂದರೆ ಗ್ರಾಹಕರು ಬೇರೆಡೆಗೆ ಹೋಗುತ್ತಾರೆ. ಗ್ರಾಹಕರಿಲ್ಲದೆ ಕಷ್ಟ ಅನುಭವಿಸುತ್ತಿದ್ದೆವೆ. ಇರುವವರನ್ನು ಕಳೆದುಕೊಂಡರೆ ಹೋಟೆಲ್ ನಡೆಸುವುದೆ ಕಷ್ಟ. ಮೊದಲು ಬರುತ್ತಿದ್ದ ಬ್ಯಾಚಲರ್ಸ್ ಈಗ ಇಲ್ಲ. ಆನ್‌ಲೈನ್ ಕ್ಲಾಸ್, ವರ್ಕ್ ಫ್ರಂ ಹೋಮ್‌ಗಳಿಂದ ಜನ ಮನೆಬಿಟ್ಟು ಹೊರಬರುತ್ತಿಲ್ಲ” ಎನ್ನುತ್ತಾರೆ ಕುಲೋತ್ತಮ್.

ಬೆಲೆ ಏರಿಕೆ ಬಗ್ಗೆ ಮಾತನಾಡಿದ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್, “ಬೆಲೆ ಏರಿಕೆ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ. ಇಂಧನ ಬೆಲೆಗಳ ಏರಿಕೆಯಾಗಿದೆ. ಇವುಗಳಿಂದ ಸಾರಿಗೆ ವೆಚ್ಚ ಹೆಚ್ಚಾಗಿದೆ. ಬೇಳೆ ಕಾಳುಗಳು, ಅದರಲ್ಲೂ ಮುಖ್ಯವಾಗಿ ಅಡುಗೆ ಎಣ್ಣೆ ಶೇಕಡಾ 120% ಏರಿಕೆಯಾಗಿದೆ. ಮೂರು ತಿಂಗಳ ಹಿಂದೆ ವಿದ್ಯುತ್ ದರ ಕೂಡ ಏರಿಕೆಯಾಗಿದೆ. ಇವುಗಳಿಂದ ನಮ್ಮ ಉದ್ಯಮದ ಮೇಲೆ ತುಂಬಾ ಹೊಡೆತ ಬಿದ್ದಿದೆ” ಎನ್ನುತ್ತಾರೆ.

“ಕೊರೊನಾದಿಂದ ಈಗಷ್ಟೇ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದೇವೆ. ಹೀಗಾಗಿ ನಾವು ಬೆಲೆ ಏರಿಕೆ ಮಾಡುತ್ತಿಲ್ಲ. ಇದು ಬೆಲೆ ಏರಿಕೆ ಮಾಡುವ ಸಂದರ್ಭ ಅಲ್ಲ ಅಂತ ನಮ್ಮ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಐಟಿ ಕಂಪನಿಗಳು ಆರಂಭವಾಗಬೇಕು, ಜನರಿಗೆ ಕೆಲಸ ಸಿಗಬೇಕು. ವರ್ಕ ಫ್ರಂ ಹೋಮ್ ಮುಗಿದ ಮೇಲೆ ಈ ಬಗ್ಗೆ ಯೋಚಿಸಬೇಕು. ಮುಂದಿನ ಜನವರಿಯವರೆಗೂ ಹೋಟೆಲ್ ಪದಾರ್ಥಗಳ ಬೆಲೆ ಏರಿಕೆ ಮಾಡಬಾರದು ಎಂಬ ನಿರ್ಧಾರ ಆಗಿದೆ” ಎಂದಿದ್ದಾರೆ.

“ಈಗ 50 ಸಾವಿರ ವ್ಯಾಪಾರ ಆಗುವ ಜಾಗದಲ್ಲಿ ತಿಂಡಿ-ಊಟದ ಬೆಲೆಯನ್ನು 5% ಏರಿಕೆ ಮಾಡಿದ್ರೆ, ವ್ಯಾಪಾರ 45 ಸಾವಿರಕ್ಕೆ ಕುಸಿಯುವ ಸಾಧ್ಯತೆ ಇದೆ. ಹಾಗಾಗಿ ನಾವು ಬೆಲೆ ಏರಿಕೆ ಮಾಡಲ್ಲ. ಗ್ರಾಹಕರನ್ನು ಉಳಿಸಿಕೊಳ್ಳಬೇಕು. ನಮ್ಮ ಖರ್ಚು ನಮಗಿದ್ದೆ ಇರುತ್ತದೆ. ಮುಖ್ಯವಾಗಿ ಅಡುಗೆ ಎಣ್ಣೆ ಬೆಲೆ ಹತೋಟಿಗೆ ತರಬೇಕು” ಎನ್ನುತ್ತಾರೆ ಪಿ.ಸಿ.ರಾವ್.

“ಬೆಂಗಳೂರಿನಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಸಣ್ಣ ಅಂಗಡಿಗಳು ಬಂದ್ ಆಗಿವೆ. ಒಂದು ಅಂಗಡಿಯಲ್ಲಿ ಇಬ್ಬರು, ಮೂವರು ಕೆಲಸಗಾರರು ಇರುತ್ತಿದ್ದರು. ಹೋಟೆಲ್ ವ್ಯಾಪಾರಕ್ಕೆ ಈ ಸಣ್ಣ ಸಣ್ಣ ಅಂಗಡಿಗಳು ಕಾರಣ ಆಗಿದ್ದವು. ಇವುಗಳು ಬಂದ್ ಆದ ಕಾರಣ ನಮ್ಮ ವ್ಯಾಪಾರಕ್ಕೆ ತೊಂದರೆ ಆಗಿದೆ. ಬೆಲೆ ಹತೋಟಿ ಇದ್ದಿದ್ರೆ ನಮಗೆ ಸಹಾಯವಾಗ್ತಾ ಇತ್ತು” ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

ಮುಖ್ಯವಾಗಿ ತರಕಾರಿ ಮಾರಾಟಗಾರರು, ದಿನಸಿ ಅಂಗಡಿ, ಸಣ್ಣ ಸಣ್ಣ ಹೋಟೆಲ್‌ಗಳು, ಕಿರಾಣಿ ಅಂಗಡಿಗಳು, ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರ ಮೇಲೆ ಈ ಇಂಧನದ ಬೆಲೆ ಏರಿಕ ತೀವ್ರವಾದ ಸಮಸ್ಯೆ ಒಡ್ಡಿದೆ. ಅಡುಗೆ ಎಣ್ಣೆಯನ್ನು ಪ್ರತಿ ಮನೆಯಲ್ಲೂ ಈಗ ಎಚ್ಚರದಿಂದ ಬಳಸುವಂತಾಗಿದೆ. ಒಟ್ಟಾರೆ ಬೆಲೆ ಏರಿಕೆ ಎಲ್ಲಾ ಕಾರ್ಮಿಕ ವರ್ಗದವರ ಮೇಲೂ ಪ್ರತ್ಯಕ್ಷ ಮತ್ತು ಪರೋಕ್ಷ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಇದನ್ನೂ ಓದಿ: ಬೆಂಗಳೂರು: ಮರ ಕಡಿಯದಂತೆ ಸರ್ಕಾರಿ ಶಾಲಾ ಮಕ್ಕಳಿಂದ ಅಪ್ಪಿಕೊ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...