Homeಕರ್ನಾಟಕಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸೇರಿದಂತೆ ಇಂಧನ ಬೆಲೆಗಳ ತೀವ್ರ ಹೆಚ್ಚಳದ ಪರಿಣಾಮ ಇವುಗಳನ್ನು ಬಳಸುವವರಿಗೆ ಮಾತ್ರ ಸೀಮಿತವಾಗಿಲ್ಲ. ಇದು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುವುದರಿಂದ ಸಮಸ್ತ ಜನರನ್ನೂ ತಟ್ಟುತ್ತಿದೆ.

ತರಕಾರಿ ಜನ ಸಾಮಾನ್ಯರ ದಿನ ನಿತ್ಯದ ಅಗತ್ಯ ಇರುತ್ತದೆ. ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ಪ್ರಸ್ತುತ ತರಕಾರಿ ಬೆಲೆ ಕಡಿಮೆಯಾಗಿದೆ. ಆದರೆ, ಇಂಧನ ಬೆಲೆ ಏರಿಕೆ, ಇದರಿಂದ ಸಾರಿಗೆ ವ್ಯವಸ್ಥೆ ಪ್ರಯಾಣ ದರಗಳ ಏರಿಕೆ, ಬೇರೆ ಅಗತ್ಯ ವಸ್ತುಗಳ ತುಟ್ಟಿ, ಲಾಕ್‌ಡೌನ್ ಕಾರಣದಿಂದ ಉಂಟಾಗಿರುವ ಸಮಸ್ಯೆಗಳು ಒಟ್ಟಾರೆ ಪರಿಸ್ಥಿತಿಯನ್ನು ಬಿಗಡಾಯಿಸಿವೆ.

ಕಳೆದ 20 ವರ್ಷದಿಂದ ತರಕಾರಿ ವ್ಯಾಪಾರ ಮಾಡುತ್ತಿರುವ ರವಿರಾವ್ ಮತ್ತು ಜಗದೀಶ್ ಹೇಳುವುದು ಹೀಗೆ, “ಲಾಕ್‌ಡೌನ್ ಮುಗಿದ ಮೇಲೆ ತರಕಾರಿ ವ್ಯಾಪಾರ ಕೊಂಚ ಮಟ್ಟಿಗೆ ಆರಂಭವಾಗಿತ್ತು. ಆದರೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಅದರಲ್ಲೂ ಅಡುಗೆ ಎಣ್ಣೆಯ ಬೆಲೆ ಏರಿಕೆ ನಮ್ಮ ವ್ಯಾಪಾರದ ಮೇಲೆ ತೀವ್ರ ಪ್ರಭಾವ ಬೀರಿದೆ” ಎನ್ನುತ್ತಾರೆ.

“ಅಡುಗೆ ಮಾಡಲು ತರಕಾರಿ ಬೇಕು, ಎಣ್ಣೆ, ಸಿಲಿಂಡರ್ ಬೆಲೆ ಗಗನಕ್ಕೆ ಏರಿರುವುದರಿಂದ ಕೊಳ್ಳುವವರ ಮೊದಲಿನ ಮಟ್ಟದಲ್ಲಿ ಖರೀದಿ ಮಾಡುತ್ತಿಲ್ಲ. ಅವರ ಸಂಖ್ಯೆಯೂ ಕಡಿಮೆಯಾಗಿದೆ. ಮೊದಲು ಆಟೋದವರಿಗೆ ಬಾಡಿಗೆ ಕೊಟ್ಟರೆ ಸಾಕಿತ್ತು. ಆದರೆ, ಈಗ ಬಾಡಿಗೆ ಜೊತೆಗೆ 50, 100 ಎಕ್ಸ್ಟ್ರಾ ನೀಡಲೇಬೇಕು” ಎನ್ನುತ್ತಾರೆ.

ಐದು ವರ್ಷದಿಂದ ತಿಲಗ ಅವರು ಶ್ರೀನಿವಾಸ ನಗರದ ಬಸ್ ನಿಲ್ದಾಣದ ಬಳಿ ತರಕಾರಿ ಮಾರಾಟ ಮಾಡುತ್ತಾರೆ. ತಿಲಗ ಅವರ ಪತಿ ಚಪ್ಪಲಿ ಹೊಲಿಯುವ ಕೆಲಸ ಮಾಡುತ್ತಾರೆ. ಪಕ್ಕದಲ್ಲೇ ತಿಲಗ ತರಕಾರಿ ವ್ಯಾಪಾರ ಮಾಡುತ್ತಾರೆ. ಆದರೆ, ಲಾಕ್‌ಡೌನ್ ನಮ್ಮ ವ್ಯಾಪಾರಕ್ಕೆ ಕುತ್ತು ತಂದಿದೆ ಎನ್ನುತ್ತಾರೆ.

“ದಿನ ಬೆಳಗ್ಗೆ ಬೇಗನೇ ಎದ್ದು ಮಾರ್ಕೆಟ್‌ಗೆ ಹೋಗಿ ತರಕಾರಿ ತರುತ್ತೇನೆ. ಮೊದಲು 150 ರೂಪಾಯಿ ಕೊಟ್ಟರೆ ಬರುತ್ತಿದ್ದ ಆಟೋದವರು, ಇಂದು 300 ರೂಪಾಯಿ ಕೇಳುತ್ತಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9.30ರವರೆಗೆ ವ್ಯಾಪಾರ ಮಾಡುತ್ತೇನೆ ಆದರೆ, ಎಷ್ಟೋ ಬಾರಿ ತಂದ ತರಕಾರಿ ಮಾರಾಟವಾಗಲು ಕೆಲವೊಮ್ಮೆ ಮೂರು ದಿನ ತೆಗೆದುಕೊಳ್ಳುತ್ತದೆ. ಮೊದಲೆಲ್ಲ ಒಂದೇ ದಿನದಲ್ಲಿ ಖಾಲಿಯಾಗುತ್ತಿತ್ತು. ಈಗ ಕೊಳ್ಳುವವರೆ ಇಲ್ಲವಾಗಿದ್ದಾರೆ” ಎನ್ನುತ್ತಾರೆ.

ತಳ್ಳುವ ಗಡಿಯಲ್ಲಿ ವ್ಯಾಪಾರ ಮಾಡುವ ಮೀತೇಶ್ ಹೇಳುವುದು ಕೂಡ ಇವೇ ಮಾತುಗಳನ್ನು. “ತರಕಾರಿಗಿಂತ ಆಟೋ ಬಾಡಿಗೆ ಜಾಸ್ತಿ ಆಗಿದೆ. ಯಾವಾಗ ಪೆಟ್ರೋಲ್, ಡಿಸೇಲ್, ಆಟೋ ಗ್ಯಾಸ್ ಬೆಲೆ ಕಡಿಮೆಯಾಗುತ್ತದೋ” ಎನ್ನುತ್ತಾರೆ.

ಇನ್ನು ಕಿರಾಣಿ-ದಿನಸಿ ಅಂಗಡಿಗಳ ವಿಷಯಕ್ಕೆ ಬಂದರೆ, ಬೇಳೆ, ಎಣ್ಣೆ ಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ ಎನ್ನುವುದು ಸಾಮಾನ್ಯ ಅಭಿಪ್ರಾಯ. “ವ್ಯಾಪಾರವಿಲ್ಲ, ಆದರೆ, 30 ವರ್ಷದಿಂದ ಇದೆ ಕೆಲಸ ಮಾಡುತ್ತಿರುವ ನಮಗೆ ಬೇರೆ ಮಾರ್ಗವಿಲ್ಲ ಎನ್ನುವುದು ಹಲವರ ಅಳಲು.

ಎಪಿಎಂಸಿ ಒಕ್ಕೂಟ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಅವರು ಹೇಳುವಂತೆ, “ಎಪಿಎಂಸಿಯಲ್ಲಿ ಬೇಳೆ ಪದಾರ್ಥಗಳಲ್ಲಿ ಹೆಚ್ಚಿನ ಏರಿಕೆಯಾಗಿಲ್ಲ. ಸಕ್ಕರೆ ಒಂದೆರಡು ರೂಪಾಯಿಯ ವ್ಯತ್ಯಾಸ ಕಂಡಿದೆ. ಆದರೆ ಎಣ್ಣೆ ಪದಾರ್ಥದ ಬೆಲೆ ಹೆಚ್ಚಾಗಿದೆ. ಹೋಲ್‌ಸೇಲ್ ಮತ್ತು ರಿಟೇಲ್ ಮಾರಾಟಕ್ಕೆ ಸ್ವಲ್ಪ ವ್ಯತ್ಯಾಸವಿದೆ” ಎನ್ನುತ್ತಾರೆ.

ಸೆಪ್ಟೆಂಬರ್ ಮಾಸಿಕದಲ್ಲಿ ಬೆಲೆ

ಲಾಕ್‌ಡೌನ್ ಸಮಯದಲ್ಲಿ ಚಿಲ್ಲರೆ ವ್ಯಾಪಾರದಲ್ಲಿ ಆಹಾರ ಧಾನ್ಯಗಳ ಬೆಲೆ ಭಾರಿ ಏರಿಕೆ ಕಂಡಿತ್ತು. ಈಗ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಇದಕ್ಕೆ ಕಾರಣ. ಲಾಕ್‌ಡೌನ್‌ನಿಂದ ಜನ ಅಂಗಡಿಗಳಿಗೆ ಬರುವುದು ಕಡಿಮೆಯಾಗಿದೆ. ಈಗ ಬೆಲೆ ಏರಿಕೆಯಿಂದ ಸಾರಿಗೆ ವ್ಯವಸ್ಥೆಯ ದರ ಕೂಡ ಏರಿಕೆಯಾಗಿರುವುದರಿಂದ ಚಿಲ್ಲರೆ ವ್ಯಾಪಾರಿಗಳಿಗೆ ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ.

ಇನ್ನು ಹೋಟೆಲ್ ಉದ್ಯಮದ ಸ್ಥಿತಿ ನಿಜಕ್ಕೂ ಶೋಚನೀಯವಾಗಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮತ್ತು ಅಡುಗೆ ಎಣ್ಣೆಯ ತೀವ್ರ ಬೆಲೆ ಏರಿಕೆ ಹೋಟೆಲ್ ಉದ್ಯಮಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

“ಅಡುಗೆ ಎಣ್ಣೆ ಜಾಸ್ತಿ ಆಗಿದೆ, ಗ್ಯಾಸ್ ರೇಟ್ ಜಾಸ್ತಿ ಆಯ್ತು ಅಂತಾ ನಾವು ರೇಟ್ ಜಾಸ್ತಿ ಮಾಡುವ ಹಾಗಿಲ್ಲ. ಹಾಗೆ ಮಾಡಿದ್ರೆ ಜನ ಹೋಟೆಲ್‌ಗೆ ಬರಲ್ಲ” ಎನ್ನುತ್ತಾರೆ ಕಳೆದ 40 ವರ್ಷಗಳಿಂದ ಪುಟ್ಟ ಹೋಟೆಲ್ ನಡೆಸುತ್ತಿರುವ ಶ್ರೀನಿವಾಸ್ ಮತ್ತು ಅವರ ಪುತ್ರ ಕುಲೋತ್ತಮ್.

“ಲಾಕ್‌ಡೌನ್‌ಗೆ ಮೊದಲು 700 ರೂಪಾಯಿ ಕೊಟ್ಟು ಒಂದು ಟಿನ್ ಎಣ್ಣೆ ತರುತ್ತಿದ್ದೆ. ಈಗ 1,300 ರೂಪಾಯಿ ಕೊಡ್ತಾ ಇದ್ದೇವೆ. ಗ್ಯಾಸ್ ರೇಟ್ ಕೂಡ ಜಾಸ್ತಿ ಆಗ್ತಾನೆ ಇದೆ. ಹದಿನೈದು ದಿನಕ್ಕೆ ಒಂದೊಂದು ರೇಟ್ ಹೇಳ್ತಾರೆ. ಹಾಗಂತ ನಾವು ಕ್ವಾಲಿಟಿ ಕಡಿಮೆ ಮಾಡುವಂತಿಲ್ಲ. ತಿಂಡಿಗಳ ಸಂಖ್ಯೆಯನ್ನು ಕಡಿಮೆ ಮಾಡುವಂತಿಲ್ಲ. ಯಾಕೆಂದರೆ ಗ್ರಾಹಕರು ಬೇರೆಡೆಗೆ ಹೋಗುತ್ತಾರೆ. ಗ್ರಾಹಕರಿಲ್ಲದೆ ಕಷ್ಟ ಅನುಭವಿಸುತ್ತಿದ್ದೆವೆ. ಇರುವವರನ್ನು ಕಳೆದುಕೊಂಡರೆ ಹೋಟೆಲ್ ನಡೆಸುವುದೆ ಕಷ್ಟ. ಮೊದಲು ಬರುತ್ತಿದ್ದ ಬ್ಯಾಚಲರ್ಸ್ ಈಗ ಇಲ್ಲ. ಆನ್‌ಲೈನ್ ಕ್ಲಾಸ್, ವರ್ಕ್ ಫ್ರಂ ಹೋಮ್‌ಗಳಿಂದ ಜನ ಮನೆಬಿಟ್ಟು ಹೊರಬರುತ್ತಿಲ್ಲ” ಎನ್ನುತ್ತಾರೆ ಕುಲೋತ್ತಮ್.

ಬೆಲೆ ಏರಿಕೆ ಬಗ್ಗೆ ಮಾತನಾಡಿದ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್, “ಬೆಲೆ ಏರಿಕೆ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ. ಇಂಧನ ಬೆಲೆಗಳ ಏರಿಕೆಯಾಗಿದೆ. ಇವುಗಳಿಂದ ಸಾರಿಗೆ ವೆಚ್ಚ ಹೆಚ್ಚಾಗಿದೆ. ಬೇಳೆ ಕಾಳುಗಳು, ಅದರಲ್ಲೂ ಮುಖ್ಯವಾಗಿ ಅಡುಗೆ ಎಣ್ಣೆ ಶೇಕಡಾ 120% ಏರಿಕೆಯಾಗಿದೆ. ಮೂರು ತಿಂಗಳ ಹಿಂದೆ ವಿದ್ಯುತ್ ದರ ಕೂಡ ಏರಿಕೆಯಾಗಿದೆ. ಇವುಗಳಿಂದ ನಮ್ಮ ಉದ್ಯಮದ ಮೇಲೆ ತುಂಬಾ ಹೊಡೆತ ಬಿದ್ದಿದೆ” ಎನ್ನುತ್ತಾರೆ.

“ಕೊರೊನಾದಿಂದ ಈಗಷ್ಟೇ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದೇವೆ. ಹೀಗಾಗಿ ನಾವು ಬೆಲೆ ಏರಿಕೆ ಮಾಡುತ್ತಿಲ್ಲ. ಇದು ಬೆಲೆ ಏರಿಕೆ ಮಾಡುವ ಸಂದರ್ಭ ಅಲ್ಲ ಅಂತ ನಮ್ಮ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಐಟಿ ಕಂಪನಿಗಳು ಆರಂಭವಾಗಬೇಕು, ಜನರಿಗೆ ಕೆಲಸ ಸಿಗಬೇಕು. ವರ್ಕ ಫ್ರಂ ಹೋಮ್ ಮುಗಿದ ಮೇಲೆ ಈ ಬಗ್ಗೆ ಯೋಚಿಸಬೇಕು. ಮುಂದಿನ ಜನವರಿಯವರೆಗೂ ಹೋಟೆಲ್ ಪದಾರ್ಥಗಳ ಬೆಲೆ ಏರಿಕೆ ಮಾಡಬಾರದು ಎಂಬ ನಿರ್ಧಾರ ಆಗಿದೆ” ಎಂದಿದ್ದಾರೆ.

“ಈಗ 50 ಸಾವಿರ ವ್ಯಾಪಾರ ಆಗುವ ಜಾಗದಲ್ಲಿ ತಿಂಡಿ-ಊಟದ ಬೆಲೆಯನ್ನು 5% ಏರಿಕೆ ಮಾಡಿದ್ರೆ, ವ್ಯಾಪಾರ 45 ಸಾವಿರಕ್ಕೆ ಕುಸಿಯುವ ಸಾಧ್ಯತೆ ಇದೆ. ಹಾಗಾಗಿ ನಾವು ಬೆಲೆ ಏರಿಕೆ ಮಾಡಲ್ಲ. ಗ್ರಾಹಕರನ್ನು ಉಳಿಸಿಕೊಳ್ಳಬೇಕು. ನಮ್ಮ ಖರ್ಚು ನಮಗಿದ್ದೆ ಇರುತ್ತದೆ. ಮುಖ್ಯವಾಗಿ ಅಡುಗೆ ಎಣ್ಣೆ ಬೆಲೆ ಹತೋಟಿಗೆ ತರಬೇಕು” ಎನ್ನುತ್ತಾರೆ ಪಿ.ಸಿ.ರಾವ್.

“ಬೆಂಗಳೂರಿನಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಸಣ್ಣ ಅಂಗಡಿಗಳು ಬಂದ್ ಆಗಿವೆ. ಒಂದು ಅಂಗಡಿಯಲ್ಲಿ ಇಬ್ಬರು, ಮೂವರು ಕೆಲಸಗಾರರು ಇರುತ್ತಿದ್ದರು. ಹೋಟೆಲ್ ವ್ಯಾಪಾರಕ್ಕೆ ಈ ಸಣ್ಣ ಸಣ್ಣ ಅಂಗಡಿಗಳು ಕಾರಣ ಆಗಿದ್ದವು. ಇವುಗಳು ಬಂದ್ ಆದ ಕಾರಣ ನಮ್ಮ ವ್ಯಾಪಾರಕ್ಕೆ ತೊಂದರೆ ಆಗಿದೆ. ಬೆಲೆ ಹತೋಟಿ ಇದ್ದಿದ್ರೆ ನಮಗೆ ಸಹಾಯವಾಗ್ತಾ ಇತ್ತು” ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

ಮುಖ್ಯವಾಗಿ ತರಕಾರಿ ಮಾರಾಟಗಾರರು, ದಿನಸಿ ಅಂಗಡಿ, ಸಣ್ಣ ಸಣ್ಣ ಹೋಟೆಲ್‌ಗಳು, ಕಿರಾಣಿ ಅಂಗಡಿಗಳು, ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರ ಮೇಲೆ ಈ ಇಂಧನದ ಬೆಲೆ ಏರಿಕ ತೀವ್ರವಾದ ಸಮಸ್ಯೆ ಒಡ್ಡಿದೆ. ಅಡುಗೆ ಎಣ್ಣೆಯನ್ನು ಪ್ರತಿ ಮನೆಯಲ್ಲೂ ಈಗ ಎಚ್ಚರದಿಂದ ಬಳಸುವಂತಾಗಿದೆ. ಒಟ್ಟಾರೆ ಬೆಲೆ ಏರಿಕೆ ಎಲ್ಲಾ ಕಾರ್ಮಿಕ ವರ್ಗದವರ ಮೇಲೂ ಪ್ರತ್ಯಕ್ಷ ಮತ್ತು ಪರೋಕ್ಷ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಇದನ್ನೂ ಓದಿ: ಬೆಂಗಳೂರು: ಮರ ಕಡಿಯದಂತೆ ಸರ್ಕಾರಿ ಶಾಲಾ ಮಕ್ಕಳಿಂದ ಅಪ್ಪಿಕೊ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...