Homeಮುಖಪುಟಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

- Advertisement -
- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು  ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ಎದುರಿಸುತ್ತಿರುವ ಅಪಾಯಗಳ ವಿರುದ್ಧ ನಾಗರಿಕರಿಗೆ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸದಿದ್ದರೆ ಭಾರತ ರಷ್ಯಾ, ಚೀನಾದಂತಾಗಲಿದೆ ಎಂದು ಖರ್ಗೆ ಹಲವು ಸಾರ್ವಜನಿಕ ಸಭೆಗಳಲ್ಲಿ ಹೇಳಿದ್ದರು. ಮೋದಿ ಅವರು ವ್ಲಾಡಿಮಿರ್ ಪುಟಿನ್ ಮಾದರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು 2024ರ ಸಂಸತ್ತಿನ ಚುನಾವಣೆಯು ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶವಾಗಿದೆ ಎಂದು ಹೇಳಿದ್ದರು.

ಬುದ್ಧಿಜೀವಿಗಳ ದೊಡ್ಡ ವಿಭಾಗಗಳು ಸಹ ಇದೇ ರೀತಿಯ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ. ವಿವಿಧ ಕೇಂದ್ರ ಸರ್ಕಾರಗಳಲ್ಲಿ ಹಣಕಾಸು ಮತ್ತು ಗೃಹದಂತಹ ಪ್ರಮುಖ ಖಾತೆಗಳನ್ನು ಹೊಂದಿದ್ದಲ್ಲದೆ, ಕಾಂಗ್ರೆಸ್‌ನ ಹಿರಿಯ ನಾಯಕರಾದ ಪಿ.ಚಿದಂಬರಂ ಅವರು ಕೂಡ ಇದೇ ರೀತಿಯ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ, ಚಿದಂಬರಂ ಅವರು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವಲ್ಲಿ ಚುನಾವಣಾ ಆಯೋಗದ ಪಾತ್ರವನ್ನು ಮತ್ತು ದೇಶದಲ್ಲಿನ ಪ್ರಸ್ತುತ ಭಯದ ವಾತಾವರಣವನ್ನು ಪ್ರಶ್ನಿಸಿದ್ದಾರೆ.

ಈ ಚುನಾವಣೆಯು ಪ್ರಜಾಸತ್ತಾತ್ಮಕವಾಗಿದೆ ಆದರೆ ಅಪ್ರಜಾಸತ್ತಾತ್ಮಕ ಕ್ರಮಗಳ ಛಾಯೆಗಳು ಚುನಾವಣೆಯ ಮೇಲೆ ಪ್ರಭಾವ ಬೀರಿದೆ. ಹಲವಾರು ವಿರೋಧ ಪಕ್ಷದ ನಾಯಕರು ಜೈಲಿನಲ್ಲಿದ್ದಾರೆ ಮತ್ತು ಅವರಿಗೆ ಜಾಮೀನು ನಿರಾಕರಿಸಲಾಗಿದೆ. ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸುವ ವೇಳೆಗೆ, ಚುನಾವಣೆ ಮುಗಿದಿರುತ್ತದೆ. ವಿರೋಧ ಪಕ್ಷದ ಅಭ್ಯರ್ಥಿಗಳು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ ಇಲಾಖೆ ಅತಿಯಾಗಿ ಕ್ರಿಯಾಶೀಲವಾಗಿವೆ.

ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಅಭ್ಯರ್ಥಿಗಳ ವಿರುದ್ಧ ಚುನಾವಣಾ ದೂರುಗಳನ್ನು ನೀಡಿದರೆ ನಿರ್ಲಕ್ಷಿಸಲಾಗುತ್ತದೆ. ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವವನ್ನು ಉಳಿಸದಿದ್ದರೆ, ಮುಂದಿನ ಚುನಾವಣೆಯು ಮುಕ್ತ ಮತ್ತು ನ್ಯಾಯಯುತ ಚುನಾವಣೆಯ ಆಗಿರುತ್ತಾ? ಇದು ಪ್ರಜಾಪ್ರಭುತ್ವ ವಿರೋಧಿ ಚುನಾವಣೆಯಾಗಬಹುದು ಎಂದು ನಾನು ಹೆದರುತ್ತೇನೆ ಎಂದು ಹೇಳಿದ್ದಾರೆ.

ನಾವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಬಹುದು, ನಾವು ಮಧ್ಯಪ್ರವೇಶಿಸುವಂತೆ ಮನವಿ ಮಾಡುತ್ತಿದ್ದೇವೆ. ನಾವು ಪ್ರತಿದಿನ ಆಯೋಗವನ್ನು ಸುಪ್ರೀಂಕೋರ್ಟ್‌ಗೆ ಕೊಂಡೊಯ್ಯಲು ಸಾಧ್ಯವಿಲ್ಲ. ನಾವು ಚುನಾವಣೆಯಲ್ಲಿ ಹೋರಾಡುತ್ತಿದ್ದೇವೆ, ಕಾನೂನು ಪ್ರಕರಣಕ್ಕಲ್ಲ ಎಂದು ಹೇಳಿದ್ದಾರೆ.

ಏಪ್ರಿಲ್ 5ರಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ವಸ್ತುನಿಷ್ಠ ವಿಷಯಗಳ ಬಗ್ಗೆ ಏನನ್ನೂ ಹೇಳಿಲ್ಲ. ಹಠಾತ್ತನೆ ಮುಸ್ಲಿಂ ಲೀಗ್ ಜೊತೆ ಲಿಂಕ್‌ ಕಲ್ಪಿಸುವ ನರೇಂದ್ರ ಮೋದಿಯದ್ದು ಅರ್ಥಹೀನ ಸಮರ್ಥನೆಗಳು ಎಂದು ಚಿದಂಬರಂ ಅವರು ಹೇಳಿದ್ದಾರೆ.

ಎಲ್ಲರೂ ಭಯದಿಂದ ಬದುಕುತ್ತಿದ್ದಾರೆ. ಸ್ವಾತಂತ್ರ್ಯ ಮತ್ತು ಭಯ ಒಟ್ಟಿಗೆ ಹೋಗಲು ಸಾಧ್ಯವಿಲ್ಲ. ಈ ಭಯದ ವಾತಾವರಣ ಸೃಷ್ಟಿಸಿದ್ದು ಬಿಜೆಪಿ. ಕಾಂಗ್ರೆಸ್ ಬಿಜೆಪಿ ವಿರುದ್ಧ ಹೋರಾಡುತ್ತಿದೆ. ಧೀರ ವ್ಯಕ್ತಿಗಳು ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಬಿಜೆಪಿಯ ಸರ್ವಾಧಿಕಾರದ ವಿರುದ್ಧ ಮಾತನಾಡಲು ನೂರಾರು ಮತ್ತು ಸಾವಿರಾರು ಜನರನ್ನು ಒತ್ತಾಯಿಸುತ್ತೇನೆ. 400 ಸೀಟುಗಳನ್ನು ಪಡೆಯುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ. ಅಂತಹ ಹೇಳಿಕೆಗಳನ್ನು ಯಾರೂ ನಂಬುವುದಿಲ್ಲ ಎಂಬುದು ಸತ್ಯ. ನರೇಂದ್ರ ಮೋದಿಯ 10 ವರ್ಷಗಳ ಅಧಿಕಾರಾವಧಿಯಲ್ಲಿ ದೇಶ ದುರ್ಬಲ ಸ್ಥಿತಿಗೆ ತಲ್ಲಲ್ಪಟ್ಟಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...