Homeಮುಖಪುಟಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

- Advertisement -
- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು  ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ಎದುರಿಸುತ್ತಿರುವ ಅಪಾಯಗಳ ವಿರುದ್ಧ ನಾಗರಿಕರಿಗೆ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸದಿದ್ದರೆ ಭಾರತ ರಷ್ಯಾ, ಚೀನಾದಂತಾಗಲಿದೆ ಎಂದು ಖರ್ಗೆ ಹಲವು ಸಾರ್ವಜನಿಕ ಸಭೆಗಳಲ್ಲಿ ಹೇಳಿದ್ದರು. ಮೋದಿ ಅವರು ವ್ಲಾಡಿಮಿರ್ ಪುಟಿನ್ ಮಾದರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು 2024ರ ಸಂಸತ್ತಿನ ಚುನಾವಣೆಯು ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶವಾಗಿದೆ ಎಂದು ಹೇಳಿದ್ದರು.

ಬುದ್ಧಿಜೀವಿಗಳ ದೊಡ್ಡ ವಿಭಾಗಗಳು ಸಹ ಇದೇ ರೀತಿಯ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ. ವಿವಿಧ ಕೇಂದ್ರ ಸರ್ಕಾರಗಳಲ್ಲಿ ಹಣಕಾಸು ಮತ್ತು ಗೃಹದಂತಹ ಪ್ರಮುಖ ಖಾತೆಗಳನ್ನು ಹೊಂದಿದ್ದಲ್ಲದೆ, ಕಾಂಗ್ರೆಸ್‌ನ ಹಿರಿಯ ನಾಯಕರಾದ ಪಿ.ಚಿದಂಬರಂ ಅವರು ಕೂಡ ಇದೇ ರೀತಿಯ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ, ಚಿದಂಬರಂ ಅವರು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವಲ್ಲಿ ಚುನಾವಣಾ ಆಯೋಗದ ಪಾತ್ರವನ್ನು ಮತ್ತು ದೇಶದಲ್ಲಿನ ಪ್ರಸ್ತುತ ಭಯದ ವಾತಾವರಣವನ್ನು ಪ್ರಶ್ನಿಸಿದ್ದಾರೆ.

ಈ ಚುನಾವಣೆಯು ಪ್ರಜಾಸತ್ತಾತ್ಮಕವಾಗಿದೆ ಆದರೆ ಅಪ್ರಜಾಸತ್ತಾತ್ಮಕ ಕ್ರಮಗಳ ಛಾಯೆಗಳು ಚುನಾವಣೆಯ ಮೇಲೆ ಪ್ರಭಾವ ಬೀರಿದೆ. ಹಲವಾರು ವಿರೋಧ ಪಕ್ಷದ ನಾಯಕರು ಜೈಲಿನಲ್ಲಿದ್ದಾರೆ ಮತ್ತು ಅವರಿಗೆ ಜಾಮೀನು ನಿರಾಕರಿಸಲಾಗಿದೆ. ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸುವ ವೇಳೆಗೆ, ಚುನಾವಣೆ ಮುಗಿದಿರುತ್ತದೆ. ವಿರೋಧ ಪಕ್ಷದ ಅಭ್ಯರ್ಥಿಗಳು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ ಇಲಾಖೆ ಅತಿಯಾಗಿ ಕ್ರಿಯಾಶೀಲವಾಗಿವೆ.

ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಅಭ್ಯರ್ಥಿಗಳ ವಿರುದ್ಧ ಚುನಾವಣಾ ದೂರುಗಳನ್ನು ನೀಡಿದರೆ ನಿರ್ಲಕ್ಷಿಸಲಾಗುತ್ತದೆ. ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವವನ್ನು ಉಳಿಸದಿದ್ದರೆ, ಮುಂದಿನ ಚುನಾವಣೆಯು ಮುಕ್ತ ಮತ್ತು ನ್ಯಾಯಯುತ ಚುನಾವಣೆಯ ಆಗಿರುತ್ತಾ? ಇದು ಪ್ರಜಾಪ್ರಭುತ್ವ ವಿರೋಧಿ ಚುನಾವಣೆಯಾಗಬಹುದು ಎಂದು ನಾನು ಹೆದರುತ್ತೇನೆ ಎಂದು ಹೇಳಿದ್ದಾರೆ.

ನಾವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಬಹುದು, ನಾವು ಮಧ್ಯಪ್ರವೇಶಿಸುವಂತೆ ಮನವಿ ಮಾಡುತ್ತಿದ್ದೇವೆ. ನಾವು ಪ್ರತಿದಿನ ಆಯೋಗವನ್ನು ಸುಪ್ರೀಂಕೋರ್ಟ್‌ಗೆ ಕೊಂಡೊಯ್ಯಲು ಸಾಧ್ಯವಿಲ್ಲ. ನಾವು ಚುನಾವಣೆಯಲ್ಲಿ ಹೋರಾಡುತ್ತಿದ್ದೇವೆ, ಕಾನೂನು ಪ್ರಕರಣಕ್ಕಲ್ಲ ಎಂದು ಹೇಳಿದ್ದಾರೆ.

ಏಪ್ರಿಲ್ 5ರಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ವಸ್ತುನಿಷ್ಠ ವಿಷಯಗಳ ಬಗ್ಗೆ ಏನನ್ನೂ ಹೇಳಿಲ್ಲ. ಹಠಾತ್ತನೆ ಮುಸ್ಲಿಂ ಲೀಗ್ ಜೊತೆ ಲಿಂಕ್‌ ಕಲ್ಪಿಸುವ ನರೇಂದ್ರ ಮೋದಿಯದ್ದು ಅರ್ಥಹೀನ ಸಮರ್ಥನೆಗಳು ಎಂದು ಚಿದಂಬರಂ ಅವರು ಹೇಳಿದ್ದಾರೆ.

ಎಲ್ಲರೂ ಭಯದಿಂದ ಬದುಕುತ್ತಿದ್ದಾರೆ. ಸ್ವಾತಂತ್ರ್ಯ ಮತ್ತು ಭಯ ಒಟ್ಟಿಗೆ ಹೋಗಲು ಸಾಧ್ಯವಿಲ್ಲ. ಈ ಭಯದ ವಾತಾವರಣ ಸೃಷ್ಟಿಸಿದ್ದು ಬಿಜೆಪಿ. ಕಾಂಗ್ರೆಸ್ ಬಿಜೆಪಿ ವಿರುದ್ಧ ಹೋರಾಡುತ್ತಿದೆ. ಧೀರ ವ್ಯಕ್ತಿಗಳು ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಬಿಜೆಪಿಯ ಸರ್ವಾಧಿಕಾರದ ವಿರುದ್ಧ ಮಾತನಾಡಲು ನೂರಾರು ಮತ್ತು ಸಾವಿರಾರು ಜನರನ್ನು ಒತ್ತಾಯಿಸುತ್ತೇನೆ. 400 ಸೀಟುಗಳನ್ನು ಪಡೆಯುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ. ಅಂತಹ ಹೇಳಿಕೆಗಳನ್ನು ಯಾರೂ ನಂಬುವುದಿಲ್ಲ ಎಂಬುದು ಸತ್ಯ. ನರೇಂದ್ರ ಮೋದಿಯ 10 ವರ್ಷಗಳ ಅಧಿಕಾರಾವಧಿಯಲ್ಲಿ ದೇಶ ದುರ್ಬಲ ಸ್ಥಿತಿಗೆ ತಲ್ಲಲ್ಪಟ್ಟಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...