Homeಕರ್ನಾಟಕಪ್ರಿಡ್ಜ್‌ನಲ್ಲಿ 30 ಭಾಗಗಳಾಗಿ ಯುವತಿಯ ಮೃತದೇಹ: ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು!

ಪ್ರಿಡ್ಜ್‌ನಲ್ಲಿ 30 ಭಾಗಗಳಾಗಿ ಯುವತಿಯ ಮೃತದೇಹ: ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು!

- Advertisement -
- Advertisement -

ಫ್ರಿಡ್ಜ್‌ನಲ್ಲಿ ಯುವತಿಯ ಶವದ ತುಂಡುಗಳು ಪತ್ತೆಯಾದ ಬೆಂಗಳೂರಿನ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುರುತಿಸಲಾಗಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೋಮವಾರ ತಿಳಿಸಿದ್ದಾರೆ. ಪ್ರಿಡ್ಜ್‌ನಲ್ಲಿ ಯುವತಿಯ ಮೃತದೇಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶನಿವಾರ ಬೆಂಗಳೂರಿನ ಮನೆಯೊಂದರ ಫ್ರಿಡ್ಜ್‌ನಲ್ಲಿ ಯುವತಿಯ ಶವದ ಮೂವತ್ತರಷ್ಟು ತುಂಡುಗಳು ಪತ್ತೆಯಾಗಿತ್ತು. ಸಿಂಗಲ್ ಬೆಡ್ ರೂಂನ ಮನೆಯಲ್ಲಿ ಯುವತಿ ಮಹಾಲಕ್ಷ್ಮಿ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

ಇದನ್ನೂಓದಿ: ‘ನನ್ನ ಪರಿಸ್ಥಿತಿ ರಾಮನ ಅನುಪಸ್ಥಿತಿಯ ಭರತನಂತಿದೆ..’ ಎಂದ ದೆಹಲಿ ನೂತನ ಮುಖ್ಯಮಂತ್ರಿ ಅತಿಶಿ

“ಎಲ್ಲ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿಯನ್ನು ಗುರುತಿಸಲಾಗಿದೆ ಮತ್ತು ಆತನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಆರೋಪಿ ಹೊರಗಿನವನಾಗಿದ್ದು, ನಾವು ಸದ್ಯಕ್ಕೆ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ. ಹೆಚ್ಚು ಮಾಹಿತಿ ನೀಡಿದರೆ ಅದು ಆರೋಪಿಗೆ ಸಹಕಾರಿಯಾಗಲಿದೆ” ಎಂದು” ಎಂದು ನಗರ ಪೊಲೀಸ್ ಮುಖ್ಯಸ್ಥರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗೃಹ ಸಚಿವ ಜಿ. ಪರಮೇಶ್ವರ ಅವರು ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಸಾಕಷ್ಟು ಮಾಹಿತಿಯನ್ನು ಸಂಗ್ರಹಿಸಿದ್ದಾರೆ ಎಂದು ಇಂದು ಮುಂಜಾನೆ ಹೇಳಿದ್ದಾರೆ. “ಪೊಲೀಸರು ಸಾಕಷ್ಟು ಮಾಹಿತಿ, ಸಾಕಷ್ಟು ಸುಳಿವುಗಳನ್ನು ಸಂಗ್ರಹಿಸಿದ್ದಾರೆ” ಎಂದು ಹೇಳಿದ್ದಾರೆ ನಾವು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸದ ಹೊರತು, ಯಾರು ಎಂದು ಹೇಳಲು ಸಾಧ್ಯವಿಲ್ಲ. ಅವರು ಪಶ್ಚಿಮ ಬಂಗಾಳದವರು ಎಂದು ಅವರು ಹೇಳುತ್ತಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಹಿಳೆಯರ ಸುರಕ್ಷತೆಗಾಗಿ ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..’; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

ಹಿರಿಯ ಪೊಲೀಸ್ ಅಧಿಕಾರಿ ಎನ್.ಸತೀಶ್ ಕುಮಾರ್ ಮಾತನಾಡಿ,”ಕೊಲೆಯಾದ ಮಹಾಲಕ್ಷ್ಮಿ ಮೂಲತಃ ಬೇರೆ ರಾಜ್ಯದವರಾದರೂ ಕರ್ನಾಟಕದಲ್ಲಿ ನೆಲೆಸಿದ್ದರು. ಅವರು ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತಿ ಬೇರೆ ನಗರದಲ್ಲಿ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಪೊಲೀಸರು ಯುವತಿಯ ದೇಹದ ತುಂಡುಗಳನ್ನು ಪತ್ತೆ ಮಾಡಿದಾಗ, ಅವು ಕೊಳೆತು ಹುಳು ಆಗಿದ್ದವು ಎಂದು ವರದಿಯಾಗಿದೆ. ದೇಹದ ಭಾಗಗಳು ಪತ್ತೆಯಾಗುವ ಕನಿಷ್ಠ ಎರಡು ವಾರಗಳ ಮೊದಲು ಅವರನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ಬಿಜೆಪಿಯು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ.ಪ್ರಿಡ್ಜ್‌ನಲ್ಲಿ ಯುವತಿಯ ಮೃತದೇಹ

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...