Homeಕರ್ನಾಟಕದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

- Advertisement -
- Advertisement -

ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಬಿಜೆಪಿ ಮಾದ್ಯಮ ಹೇಳಿಕೆ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಪ್ರಚಾರಗಳನ್ನು ಮಾಡುತ್ತಿದ್ದ ಬೆನ್ನಲ್ಲಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಈ ಕುರಿತು ಸ್ಪಷ್ಟನೆಯನ್ನು ನೀಡಿದ್ದು, ಬಿಜೆಪಿ ಹೇಳುವಂತೆ ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ ಎಂದು ರಾಜ್ಯದ ಜನತೆಗೆ ಸ್ಪಷ್ಟನೆಯನ್ನು ಕೊಟ್ಟಿದೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ ಸಲಹೆಗಾರ ರಾಧಾಕೃಷ್ಣ, ರಾಜ್ಯದ ಎ ದರ್ಜೆಯ ದೇವಸ್ಥಾನಗಳಲ್ಲಿ ನೂರಾರು ಕೋಟಿ ವ್ಯವಹಾರ ನಡೆಯುತ್ತಿದೆ. ಈ ಅಭಿವೃದ್ಧಿ ಸಹಿಸಲಾಗದೆ ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದೂ ಧರ್ಮವನ್ನು ಎತ್ತಿ ಹಿಡಿಯುವ ಕೆಲಸ ಎ ದರ್ಜೆಯ ದೇವಸ್ಥಾನಗಳಲ್ಲಿ ಆಗುತ್ತಿದೆ. ಇದನ್ನು ಬಿಜೆಪಿ ಸಹಿಸುತ್ತಿಲ್ಲ, ಕಾಂಗ್ರೆಸ್ ಸರಕಾರದ ಈ ಅವಧಿಯಲ್ಲಿ ದೇವಾಲಯಗಳ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ನೀವು ದೇವಸ್ಥಾನಗಳನ್ನು ರಾಜಕೀಯಕ್ಕೆ ಎಳೆದು ತರವುದನ್ನು ನಿಲ್ಲಿಸಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಎ ಗ್ರೇಡ್ ದೇವಾಸ್ಥಾನಗಳಲ್ಲಿ ನಡೆದ ಕಾಮಗಾರಿ ಸೇರಿದಂತೆ ಇತರೆ ಟೆಂಡರ್ ಗಳನ್ನು ಯಾರಿಗೆ ನೀಡಲಾಗಿತ್ತು ಎಂದು ತನಿಖೆ ನಡೆಸಿದರೆ ಬಿಜೆಪಿಯವರ ಯೋಗ್ಯತೆ ತಿಳಿಯುತ್ತದೆ. ಇದನ್ನು ಮುಚ್ಚಿ ಹಾಕುವುದಕ್ಕಾಗಿ ಬಿಜೆಪಿಯವರು ವಿವಾದ ಸೃಷ್ಟಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ದೀಕ್ಷಿತ್ ಮಾತನಾಡಿ, ಕಾಂಗ್ರೆಸ್ ಸರಕಾರದಿಂದ ದೇವಾಲಯಗಳ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಆದರೆ ಬಿಜೆಪಿ ನಾಯಕರು ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿತ್ಯ ಕೋಟ್ಯಂತರ ಹಣ ಸಂಗ್ರಹ ಆಗುತ್ತಿದ್ದು, ಇದನ್ನು ಬಿಜೆಪಿ ಸಹಿಸುತ್ತಿಲ್ಲ. ಬಿಜೆಪಿಯವರು  ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯದಲ್ಲಿ 50 ವರ್ಷದಿಂದ ನಾವು ಹೋರಾಟ ನಡೆಸುತ್ತಿದ್ದು 42 ಸಾವಿರ ದೇವಾಲಯಗಳು ಬೀದಿ ಪಾಲಾಗಿದ್ದವು. ಅದಕ್ಕೆ ಪರಿಹಾರವಾಗಿ ತಸ್ತಿಕ್ ನೀಡಲಾಗುತ್ತಿದೆ. ನಾವೂ ಆ ಹಣದಲ್ಲಿ ದೇವಾಲಯದ ಪೂಜೆಗಳನ್ನು ಮಾಡುತ್ತೇವೆ. ರಾಮಲಿಂಗಾ ರೆಡ್ಡಿ ನಮ್ಮ ಹಲವು ಬೇಡಿಕೆ ಈಡೇರಿಸಿದ್ದಾರೆ. ಈ ಹಿಂದಿನ ಸರಕಾರ ನಮಗೆ ತಸ್ತಿಕ್ ಕೊಟ್ಟಿರಲಿಲ್ಲ. ಆದರೆ ಸಿದ್ದರಾಮಯ್ಯ ನೇತೃತ್ವದ ಹೊಸ ಸರಕಾರ ಬಂದ ತಕ್ಷಣ ಬೇಡಿಕೆ ಈಡೇರಿದೆ ಎಂದು ಹೇಳಿದ್ದಾರೆ.

ನಮ್ಮ ದೇವಾಲಯದ ಹಣವನ್ನು ಚರ್ಚ್ ಮತ್ತು ಮಸೀದಿಗಳಿಗೆ ನೀಡಲಾಗುತ್ತಿದೆ. ನಮ್ಮ ದೇವಾಲಯದ ಹಣವನ್ನು ನಮ್ಮ ದೇವಾಲಯಕ್ಕೆ ನೀಡದೆ ಮಸೀದಿ, ಚರ್ಚ್‌ಗಳಿಗೆ ನೀಡುತ್ತಿರುವುದು ಯಾವ ನ್ಯಾಯ ಎಂದು ಇತ್ತೀಚೆಗೆ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಪ್ರಶ್ನಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ತೆರೆಯ ಹಿಂದೆ ಸರಿದಿದ್ದ ಅನಂತ್‌ ಕುಮಾರ್‌ ಹೆಗಡೆ, ಲೋಕಸಭೆ ಚುನಾವಣೆ ವೇಳೆ ಕೊಟ್ಟ ಈ ಹೇಳಿಕೆ ಕೂಡ ಸುಳ್ಳು ಎನ್ನುವುದನ್ನು ಅರ್ಚಕರ ಸಂಘವೇ ಬಯಲುಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...