Homeಕರ್ನಾಟಕದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

- Advertisement -
- Advertisement -

ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಬಿಜೆಪಿ ಮಾದ್ಯಮ ಹೇಳಿಕೆ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಪ್ರಚಾರಗಳನ್ನು ಮಾಡುತ್ತಿದ್ದ ಬೆನ್ನಲ್ಲಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಈ ಕುರಿತು ಸ್ಪಷ್ಟನೆಯನ್ನು ನೀಡಿದ್ದು, ಬಿಜೆಪಿ ಹೇಳುವಂತೆ ದೇವಾಲಯಗಳಲ್ಲಿ ಸಂಗ್ರಹವಾಗುತ್ತಿರುವ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ ಎಂದು ರಾಜ್ಯದ ಜನತೆಗೆ ಸ್ಪಷ್ಟನೆಯನ್ನು ಕೊಟ್ಟಿದೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ ಸಲಹೆಗಾರ ರಾಧಾಕೃಷ್ಣ, ರಾಜ್ಯದ ಎ ದರ್ಜೆಯ ದೇವಸ್ಥಾನಗಳಲ್ಲಿ ನೂರಾರು ಕೋಟಿ ವ್ಯವಹಾರ ನಡೆಯುತ್ತಿದೆ. ಈ ಅಭಿವೃದ್ಧಿ ಸಹಿಸಲಾಗದೆ ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದೂ ಧರ್ಮವನ್ನು ಎತ್ತಿ ಹಿಡಿಯುವ ಕೆಲಸ ಎ ದರ್ಜೆಯ ದೇವಸ್ಥಾನಗಳಲ್ಲಿ ಆಗುತ್ತಿದೆ. ಇದನ್ನು ಬಿಜೆಪಿ ಸಹಿಸುತ್ತಿಲ್ಲ, ಕಾಂಗ್ರೆಸ್ ಸರಕಾರದ ಈ ಅವಧಿಯಲ್ಲಿ ದೇವಾಲಯಗಳ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ನೀವು ದೇವಸ್ಥಾನಗಳನ್ನು ರಾಜಕೀಯಕ್ಕೆ ಎಳೆದು ತರವುದನ್ನು ನಿಲ್ಲಿಸಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಎ ಗ್ರೇಡ್ ದೇವಾಸ್ಥಾನಗಳಲ್ಲಿ ನಡೆದ ಕಾಮಗಾರಿ ಸೇರಿದಂತೆ ಇತರೆ ಟೆಂಡರ್ ಗಳನ್ನು ಯಾರಿಗೆ ನೀಡಲಾಗಿತ್ತು ಎಂದು ತನಿಖೆ ನಡೆಸಿದರೆ ಬಿಜೆಪಿಯವರ ಯೋಗ್ಯತೆ ತಿಳಿಯುತ್ತದೆ. ಇದನ್ನು ಮುಚ್ಚಿ ಹಾಕುವುದಕ್ಕಾಗಿ ಬಿಜೆಪಿಯವರು ವಿವಾದ ಸೃಷ್ಟಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ದೀಕ್ಷಿತ್ ಮಾತನಾಡಿ, ಕಾಂಗ್ರೆಸ್ ಸರಕಾರದಿಂದ ದೇವಾಲಯಗಳ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಆದರೆ ಬಿಜೆಪಿ ನಾಯಕರು ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿತ್ಯ ಕೋಟ್ಯಂತರ ಹಣ ಸಂಗ್ರಹ ಆಗುತ್ತಿದ್ದು, ಇದನ್ನು ಬಿಜೆಪಿ ಸಹಿಸುತ್ತಿಲ್ಲ. ಬಿಜೆಪಿಯವರು  ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯದಲ್ಲಿ 50 ವರ್ಷದಿಂದ ನಾವು ಹೋರಾಟ ನಡೆಸುತ್ತಿದ್ದು 42 ಸಾವಿರ ದೇವಾಲಯಗಳು ಬೀದಿ ಪಾಲಾಗಿದ್ದವು. ಅದಕ್ಕೆ ಪರಿಹಾರವಾಗಿ ತಸ್ತಿಕ್ ನೀಡಲಾಗುತ್ತಿದೆ. ನಾವೂ ಆ ಹಣದಲ್ಲಿ ದೇವಾಲಯದ ಪೂಜೆಗಳನ್ನು ಮಾಡುತ್ತೇವೆ. ರಾಮಲಿಂಗಾ ರೆಡ್ಡಿ ನಮ್ಮ ಹಲವು ಬೇಡಿಕೆ ಈಡೇರಿಸಿದ್ದಾರೆ. ಈ ಹಿಂದಿನ ಸರಕಾರ ನಮಗೆ ತಸ್ತಿಕ್ ಕೊಟ್ಟಿರಲಿಲ್ಲ. ಆದರೆ ಸಿದ್ದರಾಮಯ್ಯ ನೇತೃತ್ವದ ಹೊಸ ಸರಕಾರ ಬಂದ ತಕ್ಷಣ ಬೇಡಿಕೆ ಈಡೇರಿದೆ ಎಂದು ಹೇಳಿದ್ದಾರೆ.

ನಮ್ಮ ದೇವಾಲಯದ ಹಣವನ್ನು ಚರ್ಚ್ ಮತ್ತು ಮಸೀದಿಗಳಿಗೆ ನೀಡಲಾಗುತ್ತಿದೆ. ನಮ್ಮ ದೇವಾಲಯದ ಹಣವನ್ನು ನಮ್ಮ ದೇವಾಲಯಕ್ಕೆ ನೀಡದೆ ಮಸೀದಿ, ಚರ್ಚ್‌ಗಳಿಗೆ ನೀಡುತ್ತಿರುವುದು ಯಾವ ನ್ಯಾಯ ಎಂದು ಇತ್ತೀಚೆಗೆ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಪ್ರಶ್ನಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ತೆರೆಯ ಹಿಂದೆ ಸರಿದಿದ್ದ ಅನಂತ್‌ ಕುಮಾರ್‌ ಹೆಗಡೆ, ಲೋಕಸಭೆ ಚುನಾವಣೆ ವೇಳೆ ಕೊಟ್ಟ ಈ ಹೇಳಿಕೆ ಕೂಡ ಸುಳ್ಳು ಎನ್ನುವುದನ್ನು ಅರ್ಚಕರ ಸಂಘವೇ ಬಯಲುಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...