Homeಮುಖಪುಟಗಣೇಶ ವಿಗ್ರಹವನ್ನು ತಾನೇ ಒಡೆದು ಇಬ್ಬರು ಮುಸ್ಲಿಂ ವ್ಯಕ್ತಿಗಳ ವಿರುದ್ದ ದೂರು ದಾಖಲಿಸಿದ ಅರ್ಚಕ :...

ಗಣೇಶ ವಿಗ್ರಹವನ್ನು ತಾನೇ ಒಡೆದು ಇಬ್ಬರು ಮುಸ್ಲಿಂ ವ್ಯಕ್ತಿಗಳ ವಿರುದ್ದ ದೂರು ದಾಖಲಿಸಿದ ಅರ್ಚಕ : ವರದಿ

- Advertisement -
- Advertisement -

ಗಣಪತಿ ವಿಗ್ರಹವನ್ನು ತಾನೇ ಭಗ್ನಗೊಳಿಸಿ, ನಂತರ ಇಬ್ಬರು ಮುಸ್ಲಿಂ ವ್ಯಕ್ತಿಗಳ ಮೇಲೆ ಆರೋಪ ಹೊರಿಸಿದ ಅರ್ಚಕನೊಬ್ಬನ ವಿರುದ್ಧ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಕೃಚ್‌ ರಾಮ್‌ ಎಂಬ ಹೆಸರಿನ ಅರ್ಚಕ ಜುಲೈ 16ರಂದು ಪೂರ್ವ ಯುಪಿ ಜಿಲ್ಲೆಯ ಕಥೇಲಾ ಸಮಯಮತ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮನ್ನನ್‌ ಮತ್ತು ಸೋನು ಎಂಬ ಇಬ್ಬರು ಮುಸ್ಲಿಂ ವ್ಯಕ್ತಿಗಳು ತೌಲಿಹವಾಹ್‌ ಗ್ರಾಮದಲ್ಲಿರುವ ದೇವಸ್ಥಾನದ ಗಣೇಶ ವಿಗ್ರಹವನ್ನು ಮುರಿದಿದ್ದಾರೆ ಎಂದು ಆರೋಪಿಸಿದ್ದ.

“ಆರೋಪಿಗಳು ನನಗೆ ಪೂಜೆ ಮಾಡಲು ಬಿಡುತ್ತಿಲ್ಲ, ಬೆದರಿಕೆ ಹಾಕಿದ್ದಾರೆ. ನನ್ನ ಪತ್ನಿ ಮಧ್ಯಪ್ರವೇಶಿಸಿದಾಗ ಆಕೆಗೂ ಥಳಿಸಿದ್ದಾರೆ” ಎಂದೂ ಅರ್ಚಕ ಹೇಳಿದ್ದ.

ಮುಸ್ಲಿಂ ವ್ಯಕ್ತಿಗಳ ವಿರುದ್ದ ಆರೋಪ ಕೇಳಿ ಬಂದ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು, ಇಬ್ಬರ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು. ಒಂದು ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಸ್ವಯಂಪ್ರೇರಿತವಾಗಿ ದುಷ್ಕೃತ್ಯವೆಸಗಿರುವುದು ಮತ್ತು ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ ಆರೋಪಗಳನ್ನು ಅವರ ಮೇಲೆ ಹೊರಿಸಿದ್ದರು.

ಘಟನೆ ನಡೆದಿದೆ ಎನ್ನಲಾದ ತೌಲಿಹವಾಹ್‌ ಗ್ರಾಮ ಬರುವ ಶೋಹರತ್‌ಗಢದ ಸರ್ಕಲ್ ಇನ್‌ಸ್ಪೆಕ್ಟರ್, ಉಪ ಪೊಲೀಸ್ ವರಿಷ್ಠಾಧಿಕಾರಿ ದರ್ವೇಶ್ ಕುಮಾರ್ ‘ಪ್ರಕರಣದ ಗಂಭೀರತೆ’ಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು.

ಈ ಕುರಿತು ಹೆಚ್ಚಿನ ತನಿಖೆಗಾಗಿ ಸ್ಥಳೀಯ ಪೊಲೀಸ್, ವೃತ್ತ ಮತ್ತು ಸ್ಥಳೀಯ ಉಪವಿಭಾಗಾಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಈ ವೇಳೆ ಅವರಿಗೆ ಗಣೇಶ ಮೂರ್ತಿಯನ್ನು ಒಡೆದಿರುವುದು ಮುಸ್ಲಿಂ ವ್ಯಕ್ತಿಗಳಲ್ಲ, ಬದಲಾಗಿ ಪೂಜಾರಿಯೇ ಎಂಬುವುದು ಗೊತ್ತಾಗಿದೆ. ಕೃತ್ಯಕ್ಕೆ ಸಾಕ್ಷಿಯಾಗಿದ್ದ ಕೆಲವು ಮಕ್ಕಳಿಂದ ಮಾಹಿತಿ ಪಡೆದ ಪೊಲೀಸರು, ನಂತರ ಅರ್ಚಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ವಿಗ್ರಹವನ್ನು ಭಗ್ನಗೊಳಿಸುವಾಗ 8-10 ವರ್ಷದ ಮೂರ್ನಾಲ್ಕು ಮಕ್ಕಳು ಸ್ಥಳದಲ್ಲಿ ಆಟವಾಡುತ್ತಿದ್ದರು ಎಂಬುವುದು ತನಿಖೆಯ ವೇಳೆ ಪೊಲೀಸರಿಗೆ ಗೊತ್ತಾಗಿದೆ. ಮಕ್ಕಳನ್ನು ವಿಚಾರಿಸಿದಾಗ ಅರ್ಚಕನೇ ವಿಗ್ರಹ ಒಡೆದಿರುವ ವಿಚಾರ ತಿಳಿಸಿದ್ದಾರೆ.

“ಅರ್ಚಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಆತನ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ದರ್ವೇಶ್ ಕುಮಾರ್ ತಿಳಿಸಿದ್ದಾರೆ ಎಂದು ವೈರ್ ವರದಿ ಹೇಳಿದೆ.

ಇದನ್ನೂ ಓದಿ :

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...