Homeಮುಖಪುಟಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2019ರ ಅಡಿ ಭಾರತೀಯ ಪೌರತ್ವ ಪಡೆಯುವವರಿಗೆ ಸ್ಥಳೀಯ ಪೂಜಾರಿ ‘ಅರ್ಹತಾ ಪ್ರಮಾಣಪತ್ರ’ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿರುವುದಾಗಿ ‘ದಿ ಹಿಂದೂ ವರದಿ’ ಮಾಡಿದೆ.

ಸಿಎಎ ಅಡಿ ಪೌರತ್ವ ಪಡೆಯುವವರು ಅರ್ಹತಾ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ. ಸಿಎಎ ಪೋರ್ಟಲ್‌ನಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸುವಾಗ ಅರ್ಹತಾ ಪ್ರಮಾಣ ಸಲ್ಲಿಸಬೇಕು. ಅರ್ಹತಾ ಪ್ರಮಾಣ ಪತ್ರವೆಂದರೆ, ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ಹಿಂದೂ, ಕ್ರೈಸ್ತ, ಸಿಖ್, ಪಾರ್ಸಿ, ಜೈನ, ಬೌದ್ಧ ಈ ಧರ್ಮಗಳಲ್ಲಿ ಯಾವುದಾದರು ಒಂದಕ್ಕೆ ಸೇರಿದವರು ಎಂದು ಖಚಿತಪಡಿಸುವುದಾಗಿದೆ. ಈ ಖಚಿತತೆಯನ್ನು ಸ್ಥಳೀಯ ಪೂಜಾರಿ ಮಾಡಬಹುದು ಎಂದು ಸಹಾಯವಾಣಿ ಹೇಳಿರುವುದಾಗಿ ದಿ ಹಿಂದೂ ತಿಳಿಸಿದೆ.

ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ವಾಸವಿರುವ ಊರಿನ ದೇವಸ್ಥಾನದ ಪೂಜಾರಿ, ಚರ್ಚಿನ ಪಾದ್ರಿ ಅಥವಾ ಇತರ ಧರ್ಮಗಳ ಧರ್ಮ ಗುರುಗಳು, “ಈ ವ್ಯಕ್ತಿ ನನಗೆ ಗೊತ್ತು. ಇವರು ಈ ಧರ್ಮದವರು. ಮುಂದೆಯೂ ಅದೇ ಧರ್ಮದಲ್ಲಿ ಇರಲಿದ್ದಾರೆ” ಎಂದು ಖಚಿತಪಡಿಸಬೇಕಾಗಿದೆ. ಇಲ್ಲಿ ಪೂಜಾರಿ ಅಥವಾ ಪಾದ್ರಿ ಪ್ರಮಾಣ ಪತ್ರ ನೀಡುವುದು ಮಾತ್ರವಾಗಿದೆ. ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಪೌರತ್ವ ನೀಡಬೇಕೆ? ಬೇಡವೇ? ಎಂದು ತೀರ್ಮಾನಿಸುವುದು ಅದಕ್ಕಾಗಿ ನೇಮಿಸಿರುವ ತಂಡ ಎಂದು ವರದಿ ಹೇಳಿದೆ.

‘ಪ್ರತಿಷ್ಠಿತ ಸಮುದಾಯ ಸಂಸ್ಥೆ’

ಸಿಎಎ ನಿಯಮಗಳ ಪ್ರಕಾರ, ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಅರ್ಹತಾ ಪ್ರಮಾಣ ಪತ್ರ ನೀಡಬಹುದು ಎಂದಿದೆ. ಇಲ್ಲಿ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಎಂದರೇನು?. ಅಲ್ಲಿ ಯಾರು ಪ್ರಮಾಣ ಪತ್ರ ನೀಡುತ್ತಾರೆ? ಎಂದು ತಿಳಿದುಕೊಳ್ಳಲು ನಾವು ಮಾರ್ಚ್ 26ರಂದು ಗೃಹ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದ್ದೆವು. ಈ ವೇಳೆ ಕರೆ ಸ್ವೀಕರಿಸಿದ ವ್ಯಕ್ತಿ , ಅರ್ಹತಾ ಪ್ರಮಾಣ ಪತ್ರವನ್ನು ಖಾಲಿ ಹಾಳೆ ಅಥವಾ 10 ರೂಪಾಯಿಯ ಸ್ಟ್ಯಾಂಪ್ ಪೇಪರ್‌ನಲ್ಲಿ ನೀಡಬಹುದು ಎಂದಿದ್ದಾರೆ. ಪ್ರಮಾಣಪತ್ರ ನೀಡುವವರು ಯಾರು? ಎಂದು ನಾವು ಕೇಳಿದ್ದಕ್ಕೆ, ಅದು ಸ್ಥಳೀಯ ಪೂಜಾರಿ ನೀಡಬಹುದು ಎಂದು ಹೇಳಿದ್ದಾರೆ ಎಂದು ಹಿಂದೂ ಹೇಳಿದೆ.

ಸಿಎಎ ಮಸೂದೆಯನ್ನು 2019ರಲ್ಲಿ ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಕಾಯ್ದೆಯ ನಿಯಮಗಳನ್ನು ತಿಳಿಸಿರಲಿಲ್ಲ. ಈ ಬಾರಿಯ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ, ಅಂದರೆ ನಾಲ್ಕು ವರ್ಷಗಳ ನಂತರ ಮಾರ್ಚ್ 11ರಂದು ಸಿಎಎಯ ನಿಯಮಗಳನ್ನು ಪ್ರಕಟಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದಕ್ಕಾಗಿ ವಿಶೇಷ ವೆಬ್‌ಸೈಟ್‌, ಆಪ್ ಸಿದ್ದಪಡಿಸಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ದ ಮತ್ತು ಪಾರ್ಸಿ ಧರ್ಮದವರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ನಡೆಸುತ್ತಿದೆ.

ಉತ್ತರ ದೆಹಲಿಯ ಮಜ್ನು ಕಾ ತಿಲಾ ಪ್ರದೇಶದಲ್ಲಿ ವಾಸಿಸುವ ಸುಮಾರು 100 ಪಾಕಿಸ್ತಾನಿ ಹಿಂದೂಗಳು ಇಲ್ಲಿಯವರೆಗೆ ಪೌರತ್ವ ಪೋರ್ಟಲ್‌ನಲ್ಲಿ (indiancitizenshiponline.nic.in) ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 44 ವರ್ಷದ ಧರಮ್‌ವೀರ್ ಸೋಲಂಕಿ ಕೂಡ ಒಬ್ಬರು.

“ನಮ್ಮಲ್ಲಿ ಕೆಲವರು ಆರ್ಯ ಸಮಾಜ ಮಂದಿರದಿಂದ ಅರ್ಹತಾ ಪ್ರಮಾಣಪತ್ರವನ್ನು ಪಡೆದಿದ್ದೇವೆ. ಇನ್ನೂ ಕೆಲವರು ಹತ್ತಿರದ ಶಿವ ಮಂದಿರದಿಂದ ಪಡೆದಿದ್ದೇವೆ. ದಾಖಲೆಗಳನ್ನು ಪರಿಶೀಲಿಸಲು ನಾವು ಕಾಯುತ್ತಿದ್ದೇವೆ ಎಂದು 2013 ರಲ್ಲಿ ತನ್ನ ಕುಟುಂಬದೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನದ ಸಿಂಧ್‌ನ ಹೈದರಾಬಾದ್‌ನ ನಿವಾಸಿ ಸೋಲಂಕಿ ಹೇಳಿದ್ದಾರೆ. ಸೋಲಂಕಿ ಪ್ರಸ್ತುತ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾರೆ ಎಂದು ಹಿಂದೂ ತಿಳಿಸಿದೆ.

ಸಿಎಎ ನಿಯಮಗಳ ಪ್ರಕಾರ, ಪೌರತ್ವ ಪಡೆಯಲು ದಾಖಲೆಗಳೊಂದಿಗೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ಅದು ಜಿಲ್ಲಾ ಮಟ್ಟಕ್ಕೆ ವರ್ಗಾವಣೆಯಾಗುತ್ತದೆ. ಅಂಚೆ ಇಲಾಖೆಯ ಅಧೀಕ್ಷಕರ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯಿಂದ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಾಖಲೆ ಪರಿಶೀಲನೆ ದಿನ ಅರ್ಜಿದಾರರು ಅಧಿಕಾರಿಗಳ ಮುಂದೆ ಹಾಜರಾಗಬೇಕು. ಸೋಲಂಕಿ ಹೇಳಿದಂತೆ ಆತ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೆ ಅಧಿಕಾರಿಗಳಿಂದ ಕರೆ ಬಂಧಿಲ್ಲ ಎಂದು ವರದಿ ಹೇಳಿದೆ.

2016-17ರಲ್ಲಿ ಭಾರತಕ್ಕೆ ಬಂದ ನನ್ನ ಕೆಲ ನೆರೆಹೊರೆಯವರು ಕೂಡ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರ ಅರ್ಜಿಯನ್ನು ಪೋರ್ಟಲ್ ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ಸಿಎಎ 2014ರ ಡಿಸೆಂಬರ್ 31ಕ್ಕೆ ಮುಂಚಿತವಾಗಿ ಭಾರತಕ್ಕೆ ಬಂದಿರುವವರಿಗೆ ಮಾತ್ರ ಪೌರತ್ವ ನೀಡುತ್ತದೆ.

ಇದನ್ನೂ ಓದಿ : ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ಮಸೂದೆ ಅಂಗೀಕರಿಸಿದ ಥೈಲ್ಯಾಂಡ್ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...