Homeಮುಖಪುಟಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2019ರ ಅಡಿ ಭಾರತೀಯ ಪೌರತ್ವ ಪಡೆಯುವವರಿಗೆ ಸ್ಥಳೀಯ ಪೂಜಾರಿ ‘ಅರ್ಹತಾ ಪ್ರಮಾಣಪತ್ರ’ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿರುವುದಾಗಿ ‘ದಿ ಹಿಂದೂ ವರದಿ’ ಮಾಡಿದೆ.

ಸಿಎಎ ಅಡಿ ಪೌರತ್ವ ಪಡೆಯುವವರು ಅರ್ಹತಾ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ. ಸಿಎಎ ಪೋರ್ಟಲ್‌ನಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸುವಾಗ ಅರ್ಹತಾ ಪ್ರಮಾಣ ಸಲ್ಲಿಸಬೇಕು. ಅರ್ಹತಾ ಪ್ರಮಾಣ ಪತ್ರವೆಂದರೆ, ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ಹಿಂದೂ, ಕ್ರೈಸ್ತ, ಸಿಖ್, ಪಾರ್ಸಿ, ಜೈನ, ಬೌದ್ಧ ಈ ಧರ್ಮಗಳಲ್ಲಿ ಯಾವುದಾದರು ಒಂದಕ್ಕೆ ಸೇರಿದವರು ಎಂದು ಖಚಿತಪಡಿಸುವುದಾಗಿದೆ. ಈ ಖಚಿತತೆಯನ್ನು ಸ್ಥಳೀಯ ಪೂಜಾರಿ ಮಾಡಬಹುದು ಎಂದು ಸಹಾಯವಾಣಿ ಹೇಳಿರುವುದಾಗಿ ದಿ ಹಿಂದೂ ತಿಳಿಸಿದೆ.

ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ವಾಸವಿರುವ ಊರಿನ ದೇವಸ್ಥಾನದ ಪೂಜಾರಿ, ಚರ್ಚಿನ ಪಾದ್ರಿ ಅಥವಾ ಇತರ ಧರ್ಮಗಳ ಧರ್ಮ ಗುರುಗಳು, “ಈ ವ್ಯಕ್ತಿ ನನಗೆ ಗೊತ್ತು. ಇವರು ಈ ಧರ್ಮದವರು. ಮುಂದೆಯೂ ಅದೇ ಧರ್ಮದಲ್ಲಿ ಇರಲಿದ್ದಾರೆ” ಎಂದು ಖಚಿತಪಡಿಸಬೇಕಾಗಿದೆ. ಇಲ್ಲಿ ಪೂಜಾರಿ ಅಥವಾ ಪಾದ್ರಿ ಪ್ರಮಾಣ ಪತ್ರ ನೀಡುವುದು ಮಾತ್ರವಾಗಿದೆ. ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಪೌರತ್ವ ನೀಡಬೇಕೆ? ಬೇಡವೇ? ಎಂದು ತೀರ್ಮಾನಿಸುವುದು ಅದಕ್ಕಾಗಿ ನೇಮಿಸಿರುವ ತಂಡ ಎಂದು ವರದಿ ಹೇಳಿದೆ.

‘ಪ್ರತಿಷ್ಠಿತ ಸಮುದಾಯ ಸಂಸ್ಥೆ’

ಸಿಎಎ ನಿಯಮಗಳ ಪ್ರಕಾರ, ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಅರ್ಹತಾ ಪ್ರಮಾಣ ಪತ್ರ ನೀಡಬಹುದು ಎಂದಿದೆ. ಇಲ್ಲಿ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಎಂದರೇನು?. ಅಲ್ಲಿ ಯಾರು ಪ್ರಮಾಣ ಪತ್ರ ನೀಡುತ್ತಾರೆ? ಎಂದು ತಿಳಿದುಕೊಳ್ಳಲು ನಾವು ಮಾರ್ಚ್ 26ರಂದು ಗೃಹ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದ್ದೆವು. ಈ ವೇಳೆ ಕರೆ ಸ್ವೀಕರಿಸಿದ ವ್ಯಕ್ತಿ , ಅರ್ಹತಾ ಪ್ರಮಾಣ ಪತ್ರವನ್ನು ಖಾಲಿ ಹಾಳೆ ಅಥವಾ 10 ರೂಪಾಯಿಯ ಸ್ಟ್ಯಾಂಪ್ ಪೇಪರ್‌ನಲ್ಲಿ ನೀಡಬಹುದು ಎಂದಿದ್ದಾರೆ. ಪ್ರಮಾಣಪತ್ರ ನೀಡುವವರು ಯಾರು? ಎಂದು ನಾವು ಕೇಳಿದ್ದಕ್ಕೆ, ಅದು ಸ್ಥಳೀಯ ಪೂಜಾರಿ ನೀಡಬಹುದು ಎಂದು ಹೇಳಿದ್ದಾರೆ ಎಂದು ಹಿಂದೂ ಹೇಳಿದೆ.

ಸಿಎಎ ಮಸೂದೆಯನ್ನು 2019ರಲ್ಲಿ ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಕಾಯ್ದೆಯ ನಿಯಮಗಳನ್ನು ತಿಳಿಸಿರಲಿಲ್ಲ. ಈ ಬಾರಿಯ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ, ಅಂದರೆ ನಾಲ್ಕು ವರ್ಷಗಳ ನಂತರ ಮಾರ್ಚ್ 11ರಂದು ಸಿಎಎಯ ನಿಯಮಗಳನ್ನು ಪ್ರಕಟಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದಕ್ಕಾಗಿ ವಿಶೇಷ ವೆಬ್‌ಸೈಟ್‌, ಆಪ್ ಸಿದ್ದಪಡಿಸಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ದ ಮತ್ತು ಪಾರ್ಸಿ ಧರ್ಮದವರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ನಡೆಸುತ್ತಿದೆ.

ಉತ್ತರ ದೆಹಲಿಯ ಮಜ್ನು ಕಾ ತಿಲಾ ಪ್ರದೇಶದಲ್ಲಿ ವಾಸಿಸುವ ಸುಮಾರು 100 ಪಾಕಿಸ್ತಾನಿ ಹಿಂದೂಗಳು ಇಲ್ಲಿಯವರೆಗೆ ಪೌರತ್ವ ಪೋರ್ಟಲ್‌ನಲ್ಲಿ (indiancitizenshiponline.nic.in) ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 44 ವರ್ಷದ ಧರಮ್‌ವೀರ್ ಸೋಲಂಕಿ ಕೂಡ ಒಬ್ಬರು.

“ನಮ್ಮಲ್ಲಿ ಕೆಲವರು ಆರ್ಯ ಸಮಾಜ ಮಂದಿರದಿಂದ ಅರ್ಹತಾ ಪ್ರಮಾಣಪತ್ರವನ್ನು ಪಡೆದಿದ್ದೇವೆ. ಇನ್ನೂ ಕೆಲವರು ಹತ್ತಿರದ ಶಿವ ಮಂದಿರದಿಂದ ಪಡೆದಿದ್ದೇವೆ. ದಾಖಲೆಗಳನ್ನು ಪರಿಶೀಲಿಸಲು ನಾವು ಕಾಯುತ್ತಿದ್ದೇವೆ ಎಂದು 2013 ರಲ್ಲಿ ತನ್ನ ಕುಟುಂಬದೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನದ ಸಿಂಧ್‌ನ ಹೈದರಾಬಾದ್‌ನ ನಿವಾಸಿ ಸೋಲಂಕಿ ಹೇಳಿದ್ದಾರೆ. ಸೋಲಂಕಿ ಪ್ರಸ್ತುತ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾರೆ ಎಂದು ಹಿಂದೂ ತಿಳಿಸಿದೆ.

ಸಿಎಎ ನಿಯಮಗಳ ಪ್ರಕಾರ, ಪೌರತ್ವ ಪಡೆಯಲು ದಾಖಲೆಗಳೊಂದಿಗೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ಅದು ಜಿಲ್ಲಾ ಮಟ್ಟಕ್ಕೆ ವರ್ಗಾವಣೆಯಾಗುತ್ತದೆ. ಅಂಚೆ ಇಲಾಖೆಯ ಅಧೀಕ್ಷಕರ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯಿಂದ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಾಖಲೆ ಪರಿಶೀಲನೆ ದಿನ ಅರ್ಜಿದಾರರು ಅಧಿಕಾರಿಗಳ ಮುಂದೆ ಹಾಜರಾಗಬೇಕು. ಸೋಲಂಕಿ ಹೇಳಿದಂತೆ ಆತ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೆ ಅಧಿಕಾರಿಗಳಿಂದ ಕರೆ ಬಂಧಿಲ್ಲ ಎಂದು ವರದಿ ಹೇಳಿದೆ.

2016-17ರಲ್ಲಿ ಭಾರತಕ್ಕೆ ಬಂದ ನನ್ನ ಕೆಲ ನೆರೆಹೊರೆಯವರು ಕೂಡ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರ ಅರ್ಜಿಯನ್ನು ಪೋರ್ಟಲ್ ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ಸಿಎಎ 2014ರ ಡಿಸೆಂಬರ್ 31ಕ್ಕೆ ಮುಂಚಿತವಾಗಿ ಭಾರತಕ್ಕೆ ಬಂದಿರುವವರಿಗೆ ಮಾತ್ರ ಪೌರತ್ವ ನೀಡುತ್ತದೆ.

ಇದನ್ನೂ ಓದಿ : ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ಮಸೂದೆ ಅಂಗೀಕರಿಸಿದ ಥೈಲ್ಯಾಂಡ್ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...