Homeಮುಖಪುಟಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2019ರ ಅಡಿ ಭಾರತೀಯ ಪೌರತ್ವ ಪಡೆಯುವವರಿಗೆ ಸ್ಥಳೀಯ ಪೂಜಾರಿ ‘ಅರ್ಹತಾ ಪ್ರಮಾಣಪತ್ರ’ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿರುವುದಾಗಿ ‘ದಿ ಹಿಂದೂ ವರದಿ’ ಮಾಡಿದೆ.

ಸಿಎಎ ಅಡಿ ಪೌರತ್ವ ಪಡೆಯುವವರು ಅರ್ಹತಾ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ. ಸಿಎಎ ಪೋರ್ಟಲ್‌ನಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸುವಾಗ ಅರ್ಹತಾ ಪ್ರಮಾಣ ಸಲ್ಲಿಸಬೇಕು. ಅರ್ಹತಾ ಪ್ರಮಾಣ ಪತ್ರವೆಂದರೆ, ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ಹಿಂದೂ, ಕ್ರೈಸ್ತ, ಸಿಖ್, ಪಾರ್ಸಿ, ಜೈನ, ಬೌದ್ಧ ಈ ಧರ್ಮಗಳಲ್ಲಿ ಯಾವುದಾದರು ಒಂದಕ್ಕೆ ಸೇರಿದವರು ಎಂದು ಖಚಿತಪಡಿಸುವುದಾಗಿದೆ. ಈ ಖಚಿತತೆಯನ್ನು ಸ್ಥಳೀಯ ಪೂಜಾರಿ ಮಾಡಬಹುದು ಎಂದು ಸಹಾಯವಾಣಿ ಹೇಳಿರುವುದಾಗಿ ದಿ ಹಿಂದೂ ತಿಳಿಸಿದೆ.

ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ವಾಸವಿರುವ ಊರಿನ ದೇವಸ್ಥಾನದ ಪೂಜಾರಿ, ಚರ್ಚಿನ ಪಾದ್ರಿ ಅಥವಾ ಇತರ ಧರ್ಮಗಳ ಧರ್ಮ ಗುರುಗಳು, “ಈ ವ್ಯಕ್ತಿ ನನಗೆ ಗೊತ್ತು. ಇವರು ಈ ಧರ್ಮದವರು. ಮುಂದೆಯೂ ಅದೇ ಧರ್ಮದಲ್ಲಿ ಇರಲಿದ್ದಾರೆ” ಎಂದು ಖಚಿತಪಡಿಸಬೇಕಾಗಿದೆ. ಇಲ್ಲಿ ಪೂಜಾರಿ ಅಥವಾ ಪಾದ್ರಿ ಪ್ರಮಾಣ ಪತ್ರ ನೀಡುವುದು ಮಾತ್ರವಾಗಿದೆ. ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಪೌರತ್ವ ನೀಡಬೇಕೆ? ಬೇಡವೇ? ಎಂದು ತೀರ್ಮಾನಿಸುವುದು ಅದಕ್ಕಾಗಿ ನೇಮಿಸಿರುವ ತಂಡ ಎಂದು ವರದಿ ಹೇಳಿದೆ.

‘ಪ್ರತಿಷ್ಠಿತ ಸಮುದಾಯ ಸಂಸ್ಥೆ’

ಸಿಎಎ ನಿಯಮಗಳ ಪ್ರಕಾರ, ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಅರ್ಹತಾ ಪ್ರಮಾಣ ಪತ್ರ ನೀಡಬಹುದು ಎಂದಿದೆ. ಇಲ್ಲಿ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಎಂದರೇನು?. ಅಲ್ಲಿ ಯಾರು ಪ್ರಮಾಣ ಪತ್ರ ನೀಡುತ್ತಾರೆ? ಎಂದು ತಿಳಿದುಕೊಳ್ಳಲು ನಾವು ಮಾರ್ಚ್ 26ರಂದು ಗೃಹ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದ್ದೆವು. ಈ ವೇಳೆ ಕರೆ ಸ್ವೀಕರಿಸಿದ ವ್ಯಕ್ತಿ , ಅರ್ಹತಾ ಪ್ರಮಾಣ ಪತ್ರವನ್ನು ಖಾಲಿ ಹಾಳೆ ಅಥವಾ 10 ರೂಪಾಯಿಯ ಸ್ಟ್ಯಾಂಪ್ ಪೇಪರ್‌ನಲ್ಲಿ ನೀಡಬಹುದು ಎಂದಿದ್ದಾರೆ. ಪ್ರಮಾಣಪತ್ರ ನೀಡುವವರು ಯಾರು? ಎಂದು ನಾವು ಕೇಳಿದ್ದಕ್ಕೆ, ಅದು ಸ್ಥಳೀಯ ಪೂಜಾರಿ ನೀಡಬಹುದು ಎಂದು ಹೇಳಿದ್ದಾರೆ ಎಂದು ಹಿಂದೂ ಹೇಳಿದೆ.

ಸಿಎಎ ಮಸೂದೆಯನ್ನು 2019ರಲ್ಲಿ ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಕಾಯ್ದೆಯ ನಿಯಮಗಳನ್ನು ತಿಳಿಸಿರಲಿಲ್ಲ. ಈ ಬಾರಿಯ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ, ಅಂದರೆ ನಾಲ್ಕು ವರ್ಷಗಳ ನಂತರ ಮಾರ್ಚ್ 11ರಂದು ಸಿಎಎಯ ನಿಯಮಗಳನ್ನು ಪ್ರಕಟಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದಕ್ಕಾಗಿ ವಿಶೇಷ ವೆಬ್‌ಸೈಟ್‌, ಆಪ್ ಸಿದ್ದಪಡಿಸಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ದ ಮತ್ತು ಪಾರ್ಸಿ ಧರ್ಮದವರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ನಡೆಸುತ್ತಿದೆ.

ಉತ್ತರ ದೆಹಲಿಯ ಮಜ್ನು ಕಾ ತಿಲಾ ಪ್ರದೇಶದಲ್ಲಿ ವಾಸಿಸುವ ಸುಮಾರು 100 ಪಾಕಿಸ್ತಾನಿ ಹಿಂದೂಗಳು ಇಲ್ಲಿಯವರೆಗೆ ಪೌರತ್ವ ಪೋರ್ಟಲ್‌ನಲ್ಲಿ (indiancitizenshiponline.nic.in) ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 44 ವರ್ಷದ ಧರಮ್‌ವೀರ್ ಸೋಲಂಕಿ ಕೂಡ ಒಬ್ಬರು.

“ನಮ್ಮಲ್ಲಿ ಕೆಲವರು ಆರ್ಯ ಸಮಾಜ ಮಂದಿರದಿಂದ ಅರ್ಹತಾ ಪ್ರಮಾಣಪತ್ರವನ್ನು ಪಡೆದಿದ್ದೇವೆ. ಇನ್ನೂ ಕೆಲವರು ಹತ್ತಿರದ ಶಿವ ಮಂದಿರದಿಂದ ಪಡೆದಿದ್ದೇವೆ. ದಾಖಲೆಗಳನ್ನು ಪರಿಶೀಲಿಸಲು ನಾವು ಕಾಯುತ್ತಿದ್ದೇವೆ ಎಂದು 2013 ರಲ್ಲಿ ತನ್ನ ಕುಟುಂಬದೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನದ ಸಿಂಧ್‌ನ ಹೈದರಾಬಾದ್‌ನ ನಿವಾಸಿ ಸೋಲಂಕಿ ಹೇಳಿದ್ದಾರೆ. ಸೋಲಂಕಿ ಪ್ರಸ್ತುತ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾರೆ ಎಂದು ಹಿಂದೂ ತಿಳಿಸಿದೆ.

ಸಿಎಎ ನಿಯಮಗಳ ಪ್ರಕಾರ, ಪೌರತ್ವ ಪಡೆಯಲು ದಾಖಲೆಗಳೊಂದಿಗೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ಅದು ಜಿಲ್ಲಾ ಮಟ್ಟಕ್ಕೆ ವರ್ಗಾವಣೆಯಾಗುತ್ತದೆ. ಅಂಚೆ ಇಲಾಖೆಯ ಅಧೀಕ್ಷಕರ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯಿಂದ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಾಖಲೆ ಪರಿಶೀಲನೆ ದಿನ ಅರ್ಜಿದಾರರು ಅಧಿಕಾರಿಗಳ ಮುಂದೆ ಹಾಜರಾಗಬೇಕು. ಸೋಲಂಕಿ ಹೇಳಿದಂತೆ ಆತ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೆ ಅಧಿಕಾರಿಗಳಿಂದ ಕರೆ ಬಂಧಿಲ್ಲ ಎಂದು ವರದಿ ಹೇಳಿದೆ.

2016-17ರಲ್ಲಿ ಭಾರತಕ್ಕೆ ಬಂದ ನನ್ನ ಕೆಲ ನೆರೆಹೊರೆಯವರು ಕೂಡ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರ ಅರ್ಜಿಯನ್ನು ಪೋರ್ಟಲ್ ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ಸಿಎಎ 2014ರ ಡಿಸೆಂಬರ್ 31ಕ್ಕೆ ಮುಂಚಿತವಾಗಿ ಭಾರತಕ್ಕೆ ಬಂದಿರುವವರಿಗೆ ಮಾತ್ರ ಪೌರತ್ವ ನೀಡುತ್ತದೆ.

ಇದನ್ನೂ ಓದಿ : ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ಮಸೂದೆ ಅಂಗೀಕರಿಸಿದ ಥೈಲ್ಯಾಂಡ್ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...