Homeಮುಖಪುಟಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2019ರ ಅಡಿ ಭಾರತೀಯ ಪೌರತ್ವ ಪಡೆಯುವವರಿಗೆ ಸ್ಥಳೀಯ ಪೂಜಾರಿ ‘ಅರ್ಹತಾ ಪ್ರಮಾಣಪತ್ರ’ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿರುವುದಾಗಿ ‘ದಿ ಹಿಂದೂ ವರದಿ’ ಮಾಡಿದೆ.

ಸಿಎಎ ಅಡಿ ಪೌರತ್ವ ಪಡೆಯುವವರು ಅರ್ಹತಾ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ. ಸಿಎಎ ಪೋರ್ಟಲ್‌ನಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸುವಾಗ ಅರ್ಹತಾ ಪ್ರಮಾಣ ಸಲ್ಲಿಸಬೇಕು. ಅರ್ಹತಾ ಪ್ರಮಾಣ ಪತ್ರವೆಂದರೆ, ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ಹಿಂದೂ, ಕ್ರೈಸ್ತ, ಸಿಖ್, ಪಾರ್ಸಿ, ಜೈನ, ಬೌದ್ಧ ಈ ಧರ್ಮಗಳಲ್ಲಿ ಯಾವುದಾದರು ಒಂದಕ್ಕೆ ಸೇರಿದವರು ಎಂದು ಖಚಿತಪಡಿಸುವುದಾಗಿದೆ. ಈ ಖಚಿತತೆಯನ್ನು ಸ್ಥಳೀಯ ಪೂಜಾರಿ ಮಾಡಬಹುದು ಎಂದು ಸಹಾಯವಾಣಿ ಹೇಳಿರುವುದಾಗಿ ದಿ ಹಿಂದೂ ತಿಳಿಸಿದೆ.

ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ವಾಸವಿರುವ ಊರಿನ ದೇವಸ್ಥಾನದ ಪೂಜಾರಿ, ಚರ್ಚಿನ ಪಾದ್ರಿ ಅಥವಾ ಇತರ ಧರ್ಮಗಳ ಧರ್ಮ ಗುರುಗಳು, “ಈ ವ್ಯಕ್ತಿ ನನಗೆ ಗೊತ್ತು. ಇವರು ಈ ಧರ್ಮದವರು. ಮುಂದೆಯೂ ಅದೇ ಧರ್ಮದಲ್ಲಿ ಇರಲಿದ್ದಾರೆ” ಎಂದು ಖಚಿತಪಡಿಸಬೇಕಾಗಿದೆ. ಇಲ್ಲಿ ಪೂಜಾರಿ ಅಥವಾ ಪಾದ್ರಿ ಪ್ರಮಾಣ ಪತ್ರ ನೀಡುವುದು ಮಾತ್ರವಾಗಿದೆ. ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಪೌರತ್ವ ನೀಡಬೇಕೆ? ಬೇಡವೇ? ಎಂದು ತೀರ್ಮಾನಿಸುವುದು ಅದಕ್ಕಾಗಿ ನೇಮಿಸಿರುವ ತಂಡ ಎಂದು ವರದಿ ಹೇಳಿದೆ.

‘ಪ್ರತಿಷ್ಠಿತ ಸಮುದಾಯ ಸಂಸ್ಥೆ’

ಸಿಎಎ ನಿಯಮಗಳ ಪ್ರಕಾರ, ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಅರ್ಹತಾ ಪ್ರಮಾಣ ಪತ್ರ ನೀಡಬಹುದು ಎಂದಿದೆ. ಇಲ್ಲಿ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಎಂದರೇನು?. ಅಲ್ಲಿ ಯಾರು ಪ್ರಮಾಣ ಪತ್ರ ನೀಡುತ್ತಾರೆ? ಎಂದು ತಿಳಿದುಕೊಳ್ಳಲು ನಾವು ಮಾರ್ಚ್ 26ರಂದು ಗೃಹ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದ್ದೆವು. ಈ ವೇಳೆ ಕರೆ ಸ್ವೀಕರಿಸಿದ ವ್ಯಕ್ತಿ , ಅರ್ಹತಾ ಪ್ರಮಾಣ ಪತ್ರವನ್ನು ಖಾಲಿ ಹಾಳೆ ಅಥವಾ 10 ರೂಪಾಯಿಯ ಸ್ಟ್ಯಾಂಪ್ ಪೇಪರ್‌ನಲ್ಲಿ ನೀಡಬಹುದು ಎಂದಿದ್ದಾರೆ. ಪ್ರಮಾಣಪತ್ರ ನೀಡುವವರು ಯಾರು? ಎಂದು ನಾವು ಕೇಳಿದ್ದಕ್ಕೆ, ಅದು ಸ್ಥಳೀಯ ಪೂಜಾರಿ ನೀಡಬಹುದು ಎಂದು ಹೇಳಿದ್ದಾರೆ ಎಂದು ಹಿಂದೂ ಹೇಳಿದೆ.

ಸಿಎಎ ಮಸೂದೆಯನ್ನು 2019ರಲ್ಲಿ ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಕಾಯ್ದೆಯ ನಿಯಮಗಳನ್ನು ತಿಳಿಸಿರಲಿಲ್ಲ. ಈ ಬಾರಿಯ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ, ಅಂದರೆ ನಾಲ್ಕು ವರ್ಷಗಳ ನಂತರ ಮಾರ್ಚ್ 11ರಂದು ಸಿಎಎಯ ನಿಯಮಗಳನ್ನು ಪ್ರಕಟಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದಕ್ಕಾಗಿ ವಿಶೇಷ ವೆಬ್‌ಸೈಟ್‌, ಆಪ್ ಸಿದ್ದಪಡಿಸಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ದ ಮತ್ತು ಪಾರ್ಸಿ ಧರ್ಮದವರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ನಡೆಸುತ್ತಿದೆ.

ಉತ್ತರ ದೆಹಲಿಯ ಮಜ್ನು ಕಾ ತಿಲಾ ಪ್ರದೇಶದಲ್ಲಿ ವಾಸಿಸುವ ಸುಮಾರು 100 ಪಾಕಿಸ್ತಾನಿ ಹಿಂದೂಗಳು ಇಲ್ಲಿಯವರೆಗೆ ಪೌರತ್ವ ಪೋರ್ಟಲ್‌ನಲ್ಲಿ (indiancitizenshiponline.nic.in) ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 44 ವರ್ಷದ ಧರಮ್‌ವೀರ್ ಸೋಲಂಕಿ ಕೂಡ ಒಬ್ಬರು.

“ನಮ್ಮಲ್ಲಿ ಕೆಲವರು ಆರ್ಯ ಸಮಾಜ ಮಂದಿರದಿಂದ ಅರ್ಹತಾ ಪ್ರಮಾಣಪತ್ರವನ್ನು ಪಡೆದಿದ್ದೇವೆ. ಇನ್ನೂ ಕೆಲವರು ಹತ್ತಿರದ ಶಿವ ಮಂದಿರದಿಂದ ಪಡೆದಿದ್ದೇವೆ. ದಾಖಲೆಗಳನ್ನು ಪರಿಶೀಲಿಸಲು ನಾವು ಕಾಯುತ್ತಿದ್ದೇವೆ ಎಂದು 2013 ರಲ್ಲಿ ತನ್ನ ಕುಟುಂಬದೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನದ ಸಿಂಧ್‌ನ ಹೈದರಾಬಾದ್‌ನ ನಿವಾಸಿ ಸೋಲಂಕಿ ಹೇಳಿದ್ದಾರೆ. ಸೋಲಂಕಿ ಪ್ರಸ್ತುತ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾರೆ ಎಂದು ಹಿಂದೂ ತಿಳಿಸಿದೆ.

ಸಿಎಎ ನಿಯಮಗಳ ಪ್ರಕಾರ, ಪೌರತ್ವ ಪಡೆಯಲು ದಾಖಲೆಗಳೊಂದಿಗೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ಅದು ಜಿಲ್ಲಾ ಮಟ್ಟಕ್ಕೆ ವರ್ಗಾವಣೆಯಾಗುತ್ತದೆ. ಅಂಚೆ ಇಲಾಖೆಯ ಅಧೀಕ್ಷಕರ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯಿಂದ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಾಖಲೆ ಪರಿಶೀಲನೆ ದಿನ ಅರ್ಜಿದಾರರು ಅಧಿಕಾರಿಗಳ ಮುಂದೆ ಹಾಜರಾಗಬೇಕು. ಸೋಲಂಕಿ ಹೇಳಿದಂತೆ ಆತ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೆ ಅಧಿಕಾರಿಗಳಿಂದ ಕರೆ ಬಂಧಿಲ್ಲ ಎಂದು ವರದಿ ಹೇಳಿದೆ.

2016-17ರಲ್ಲಿ ಭಾರತಕ್ಕೆ ಬಂದ ನನ್ನ ಕೆಲ ನೆರೆಹೊರೆಯವರು ಕೂಡ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರ ಅರ್ಜಿಯನ್ನು ಪೋರ್ಟಲ್ ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ಸಿಎಎ 2014ರ ಡಿಸೆಂಬರ್ 31ಕ್ಕೆ ಮುಂಚಿತವಾಗಿ ಭಾರತಕ್ಕೆ ಬಂದಿರುವವರಿಗೆ ಮಾತ್ರ ಪೌರತ್ವ ನೀಡುತ್ತದೆ.

ಇದನ್ನೂ ಓದಿ : ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ಮಸೂದೆ ಅಂಗೀಕರಿಸಿದ ಥೈಲ್ಯಾಂಡ್ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...