Homeಮುಖಪುಟಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2019ರ ಅಡಿ ಭಾರತೀಯ ಪೌರತ್ವ ಪಡೆಯುವವರಿಗೆ ಸ್ಥಳೀಯ ಪೂಜಾರಿ ‘ಅರ್ಹತಾ ಪ್ರಮಾಣಪತ್ರ’ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿರುವುದಾಗಿ ‘ದಿ ಹಿಂದೂ ವರದಿ’ ಮಾಡಿದೆ.

ಸಿಎಎ ಅಡಿ ಪೌರತ್ವ ಪಡೆಯುವವರು ಅರ್ಹತಾ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ. ಸಿಎಎ ಪೋರ್ಟಲ್‌ನಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸುವಾಗ ಅರ್ಹತಾ ಪ್ರಮಾಣ ಸಲ್ಲಿಸಬೇಕು. ಅರ್ಹತಾ ಪ್ರಮಾಣ ಪತ್ರವೆಂದರೆ, ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ಹಿಂದೂ, ಕ್ರೈಸ್ತ, ಸಿಖ್, ಪಾರ್ಸಿ, ಜೈನ, ಬೌದ್ಧ ಈ ಧರ್ಮಗಳಲ್ಲಿ ಯಾವುದಾದರು ಒಂದಕ್ಕೆ ಸೇರಿದವರು ಎಂದು ಖಚಿತಪಡಿಸುವುದಾಗಿದೆ. ಈ ಖಚಿತತೆಯನ್ನು ಸ್ಥಳೀಯ ಪೂಜಾರಿ ಮಾಡಬಹುದು ಎಂದು ಸಹಾಯವಾಣಿ ಹೇಳಿರುವುದಾಗಿ ದಿ ಹಿಂದೂ ತಿಳಿಸಿದೆ.

ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ವಾಸವಿರುವ ಊರಿನ ದೇವಸ್ಥಾನದ ಪೂಜಾರಿ, ಚರ್ಚಿನ ಪಾದ್ರಿ ಅಥವಾ ಇತರ ಧರ್ಮಗಳ ಧರ್ಮ ಗುರುಗಳು, “ಈ ವ್ಯಕ್ತಿ ನನಗೆ ಗೊತ್ತು. ಇವರು ಈ ಧರ್ಮದವರು. ಮುಂದೆಯೂ ಅದೇ ಧರ್ಮದಲ್ಲಿ ಇರಲಿದ್ದಾರೆ” ಎಂದು ಖಚಿತಪಡಿಸಬೇಕಾಗಿದೆ. ಇಲ್ಲಿ ಪೂಜಾರಿ ಅಥವಾ ಪಾದ್ರಿ ಪ್ರಮಾಣ ಪತ್ರ ನೀಡುವುದು ಮಾತ್ರವಾಗಿದೆ. ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಪೌರತ್ವ ನೀಡಬೇಕೆ? ಬೇಡವೇ? ಎಂದು ತೀರ್ಮಾನಿಸುವುದು ಅದಕ್ಕಾಗಿ ನೇಮಿಸಿರುವ ತಂಡ ಎಂದು ವರದಿ ಹೇಳಿದೆ.

‘ಪ್ರತಿಷ್ಠಿತ ಸಮುದಾಯ ಸಂಸ್ಥೆ’

ಸಿಎಎ ನಿಯಮಗಳ ಪ್ರಕಾರ, ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಅರ್ಹತಾ ಪ್ರಮಾಣ ಪತ್ರ ನೀಡಬಹುದು ಎಂದಿದೆ. ಇಲ್ಲಿ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಎಂದರೇನು?. ಅಲ್ಲಿ ಯಾರು ಪ್ರಮಾಣ ಪತ್ರ ನೀಡುತ್ತಾರೆ? ಎಂದು ತಿಳಿದುಕೊಳ್ಳಲು ನಾವು ಮಾರ್ಚ್ 26ರಂದು ಗೃಹ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದ್ದೆವು. ಈ ವೇಳೆ ಕರೆ ಸ್ವೀಕರಿಸಿದ ವ್ಯಕ್ತಿ , ಅರ್ಹತಾ ಪ್ರಮಾಣ ಪತ್ರವನ್ನು ಖಾಲಿ ಹಾಳೆ ಅಥವಾ 10 ರೂಪಾಯಿಯ ಸ್ಟ್ಯಾಂಪ್ ಪೇಪರ್‌ನಲ್ಲಿ ನೀಡಬಹುದು ಎಂದಿದ್ದಾರೆ. ಪ್ರಮಾಣಪತ್ರ ನೀಡುವವರು ಯಾರು? ಎಂದು ನಾವು ಕೇಳಿದ್ದಕ್ಕೆ, ಅದು ಸ್ಥಳೀಯ ಪೂಜಾರಿ ನೀಡಬಹುದು ಎಂದು ಹೇಳಿದ್ದಾರೆ ಎಂದು ಹಿಂದೂ ಹೇಳಿದೆ.

ಸಿಎಎ ಮಸೂದೆಯನ್ನು 2019ರಲ್ಲಿ ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಕಾಯ್ದೆಯ ನಿಯಮಗಳನ್ನು ತಿಳಿಸಿರಲಿಲ್ಲ. ಈ ಬಾರಿಯ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ, ಅಂದರೆ ನಾಲ್ಕು ವರ್ಷಗಳ ನಂತರ ಮಾರ್ಚ್ 11ರಂದು ಸಿಎಎಯ ನಿಯಮಗಳನ್ನು ಪ್ರಕಟಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದಕ್ಕಾಗಿ ವಿಶೇಷ ವೆಬ್‌ಸೈಟ್‌, ಆಪ್ ಸಿದ್ದಪಡಿಸಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ದ ಮತ್ತು ಪಾರ್ಸಿ ಧರ್ಮದವರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ನಡೆಸುತ್ತಿದೆ.

ಉತ್ತರ ದೆಹಲಿಯ ಮಜ್ನು ಕಾ ತಿಲಾ ಪ್ರದೇಶದಲ್ಲಿ ವಾಸಿಸುವ ಸುಮಾರು 100 ಪಾಕಿಸ್ತಾನಿ ಹಿಂದೂಗಳು ಇಲ್ಲಿಯವರೆಗೆ ಪೌರತ್ವ ಪೋರ್ಟಲ್‌ನಲ್ಲಿ (indiancitizenshiponline.nic.in) ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 44 ವರ್ಷದ ಧರಮ್‌ವೀರ್ ಸೋಲಂಕಿ ಕೂಡ ಒಬ್ಬರು.

“ನಮ್ಮಲ್ಲಿ ಕೆಲವರು ಆರ್ಯ ಸಮಾಜ ಮಂದಿರದಿಂದ ಅರ್ಹತಾ ಪ್ರಮಾಣಪತ್ರವನ್ನು ಪಡೆದಿದ್ದೇವೆ. ಇನ್ನೂ ಕೆಲವರು ಹತ್ತಿರದ ಶಿವ ಮಂದಿರದಿಂದ ಪಡೆದಿದ್ದೇವೆ. ದಾಖಲೆಗಳನ್ನು ಪರಿಶೀಲಿಸಲು ನಾವು ಕಾಯುತ್ತಿದ್ದೇವೆ ಎಂದು 2013 ರಲ್ಲಿ ತನ್ನ ಕುಟುಂಬದೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನದ ಸಿಂಧ್‌ನ ಹೈದರಾಬಾದ್‌ನ ನಿವಾಸಿ ಸೋಲಂಕಿ ಹೇಳಿದ್ದಾರೆ. ಸೋಲಂಕಿ ಪ್ರಸ್ತುತ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾರೆ ಎಂದು ಹಿಂದೂ ತಿಳಿಸಿದೆ.

ಸಿಎಎ ನಿಯಮಗಳ ಪ್ರಕಾರ, ಪೌರತ್ವ ಪಡೆಯಲು ದಾಖಲೆಗಳೊಂದಿಗೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ಅದು ಜಿಲ್ಲಾ ಮಟ್ಟಕ್ಕೆ ವರ್ಗಾವಣೆಯಾಗುತ್ತದೆ. ಅಂಚೆ ಇಲಾಖೆಯ ಅಧೀಕ್ಷಕರ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯಿಂದ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಾಖಲೆ ಪರಿಶೀಲನೆ ದಿನ ಅರ್ಜಿದಾರರು ಅಧಿಕಾರಿಗಳ ಮುಂದೆ ಹಾಜರಾಗಬೇಕು. ಸೋಲಂಕಿ ಹೇಳಿದಂತೆ ಆತ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೆ ಅಧಿಕಾರಿಗಳಿಂದ ಕರೆ ಬಂಧಿಲ್ಲ ಎಂದು ವರದಿ ಹೇಳಿದೆ.

2016-17ರಲ್ಲಿ ಭಾರತಕ್ಕೆ ಬಂದ ನನ್ನ ಕೆಲ ನೆರೆಹೊರೆಯವರು ಕೂಡ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರ ಅರ್ಜಿಯನ್ನು ಪೋರ್ಟಲ್ ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ಸಿಎಎ 2014ರ ಡಿಸೆಂಬರ್ 31ಕ್ಕೆ ಮುಂಚಿತವಾಗಿ ಭಾರತಕ್ಕೆ ಬಂದಿರುವವರಿಗೆ ಮಾತ್ರ ಪೌರತ್ವ ನೀಡುತ್ತದೆ.

ಇದನ್ನೂ ಓದಿ : ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ಮಸೂದೆ ಅಂಗೀಕರಿಸಿದ ಥೈಲ್ಯಾಂಡ್ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...