Homeಮುಖಪುಟಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2019ರ ಅಡಿ ಭಾರತೀಯ ಪೌರತ್ವ ಪಡೆಯುವವರಿಗೆ ಸ್ಥಳೀಯ ಪೂಜಾರಿ ‘ಅರ್ಹತಾ ಪ್ರಮಾಣಪತ್ರ’ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿರುವುದಾಗಿ ‘ದಿ ಹಿಂದೂ ವರದಿ’ ಮಾಡಿದೆ.

ಸಿಎಎ ಅಡಿ ಪೌರತ್ವ ಪಡೆಯುವವರು ಅರ್ಹತಾ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ. ಸಿಎಎ ಪೋರ್ಟಲ್‌ನಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸುವಾಗ ಅರ್ಹತಾ ಪ್ರಮಾಣ ಸಲ್ಲಿಸಬೇಕು. ಅರ್ಹತಾ ಪ್ರಮಾಣ ಪತ್ರವೆಂದರೆ, ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ಹಿಂದೂ, ಕ್ರೈಸ್ತ, ಸಿಖ್, ಪಾರ್ಸಿ, ಜೈನ, ಬೌದ್ಧ ಈ ಧರ್ಮಗಳಲ್ಲಿ ಯಾವುದಾದರು ಒಂದಕ್ಕೆ ಸೇರಿದವರು ಎಂದು ಖಚಿತಪಡಿಸುವುದಾಗಿದೆ. ಈ ಖಚಿತತೆಯನ್ನು ಸ್ಥಳೀಯ ಪೂಜಾರಿ ಮಾಡಬಹುದು ಎಂದು ಸಹಾಯವಾಣಿ ಹೇಳಿರುವುದಾಗಿ ದಿ ಹಿಂದೂ ತಿಳಿಸಿದೆ.

ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ವಾಸವಿರುವ ಊರಿನ ದೇವಸ್ಥಾನದ ಪೂಜಾರಿ, ಚರ್ಚಿನ ಪಾದ್ರಿ ಅಥವಾ ಇತರ ಧರ್ಮಗಳ ಧರ್ಮ ಗುರುಗಳು, “ಈ ವ್ಯಕ್ತಿ ನನಗೆ ಗೊತ್ತು. ಇವರು ಈ ಧರ್ಮದವರು. ಮುಂದೆಯೂ ಅದೇ ಧರ್ಮದಲ್ಲಿ ಇರಲಿದ್ದಾರೆ” ಎಂದು ಖಚಿತಪಡಿಸಬೇಕಾಗಿದೆ. ಇಲ್ಲಿ ಪೂಜಾರಿ ಅಥವಾ ಪಾದ್ರಿ ಪ್ರಮಾಣ ಪತ್ರ ನೀಡುವುದು ಮಾತ್ರವಾಗಿದೆ. ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಪೌರತ್ವ ನೀಡಬೇಕೆ? ಬೇಡವೇ? ಎಂದು ತೀರ್ಮಾನಿಸುವುದು ಅದಕ್ಕಾಗಿ ನೇಮಿಸಿರುವ ತಂಡ ಎಂದು ವರದಿ ಹೇಳಿದೆ.

‘ಪ್ರತಿಷ್ಠಿತ ಸಮುದಾಯ ಸಂಸ್ಥೆ’

ಸಿಎಎ ನಿಯಮಗಳ ಪ್ರಕಾರ, ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಅರ್ಹತಾ ಪ್ರಮಾಣ ಪತ್ರ ನೀಡಬಹುದು ಎಂದಿದೆ. ಇಲ್ಲಿ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಎಂದರೇನು?. ಅಲ್ಲಿ ಯಾರು ಪ್ರಮಾಣ ಪತ್ರ ನೀಡುತ್ತಾರೆ? ಎಂದು ತಿಳಿದುಕೊಳ್ಳಲು ನಾವು ಮಾರ್ಚ್ 26ರಂದು ಗೃಹ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದ್ದೆವು. ಈ ವೇಳೆ ಕರೆ ಸ್ವೀಕರಿಸಿದ ವ್ಯಕ್ತಿ , ಅರ್ಹತಾ ಪ್ರಮಾಣ ಪತ್ರವನ್ನು ಖಾಲಿ ಹಾಳೆ ಅಥವಾ 10 ರೂಪಾಯಿಯ ಸ್ಟ್ಯಾಂಪ್ ಪೇಪರ್‌ನಲ್ಲಿ ನೀಡಬಹುದು ಎಂದಿದ್ದಾರೆ. ಪ್ರಮಾಣಪತ್ರ ನೀಡುವವರು ಯಾರು? ಎಂದು ನಾವು ಕೇಳಿದ್ದಕ್ಕೆ, ಅದು ಸ್ಥಳೀಯ ಪೂಜಾರಿ ನೀಡಬಹುದು ಎಂದು ಹೇಳಿದ್ದಾರೆ ಎಂದು ಹಿಂದೂ ಹೇಳಿದೆ.

ಸಿಎಎ ಮಸೂದೆಯನ್ನು 2019ರಲ್ಲಿ ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಕಾಯ್ದೆಯ ನಿಯಮಗಳನ್ನು ತಿಳಿಸಿರಲಿಲ್ಲ. ಈ ಬಾರಿಯ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ, ಅಂದರೆ ನಾಲ್ಕು ವರ್ಷಗಳ ನಂತರ ಮಾರ್ಚ್ 11ರಂದು ಸಿಎಎಯ ನಿಯಮಗಳನ್ನು ಪ್ರಕಟಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದಕ್ಕಾಗಿ ವಿಶೇಷ ವೆಬ್‌ಸೈಟ್‌, ಆಪ್ ಸಿದ್ದಪಡಿಸಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ದ ಮತ್ತು ಪಾರ್ಸಿ ಧರ್ಮದವರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ನಡೆಸುತ್ತಿದೆ.

ಉತ್ತರ ದೆಹಲಿಯ ಮಜ್ನು ಕಾ ತಿಲಾ ಪ್ರದೇಶದಲ್ಲಿ ವಾಸಿಸುವ ಸುಮಾರು 100 ಪಾಕಿಸ್ತಾನಿ ಹಿಂದೂಗಳು ಇಲ್ಲಿಯವರೆಗೆ ಪೌರತ್ವ ಪೋರ್ಟಲ್‌ನಲ್ಲಿ (indiancitizenshiponline.nic.in) ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 44 ವರ್ಷದ ಧರಮ್‌ವೀರ್ ಸೋಲಂಕಿ ಕೂಡ ಒಬ್ಬರು.

“ನಮ್ಮಲ್ಲಿ ಕೆಲವರು ಆರ್ಯ ಸಮಾಜ ಮಂದಿರದಿಂದ ಅರ್ಹತಾ ಪ್ರಮಾಣಪತ್ರವನ್ನು ಪಡೆದಿದ್ದೇವೆ. ಇನ್ನೂ ಕೆಲವರು ಹತ್ತಿರದ ಶಿವ ಮಂದಿರದಿಂದ ಪಡೆದಿದ್ದೇವೆ. ದಾಖಲೆಗಳನ್ನು ಪರಿಶೀಲಿಸಲು ನಾವು ಕಾಯುತ್ತಿದ್ದೇವೆ ಎಂದು 2013 ರಲ್ಲಿ ತನ್ನ ಕುಟುಂಬದೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನದ ಸಿಂಧ್‌ನ ಹೈದರಾಬಾದ್‌ನ ನಿವಾಸಿ ಸೋಲಂಕಿ ಹೇಳಿದ್ದಾರೆ. ಸೋಲಂಕಿ ಪ್ರಸ್ತುತ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾರೆ ಎಂದು ಹಿಂದೂ ತಿಳಿಸಿದೆ.

ಸಿಎಎ ನಿಯಮಗಳ ಪ್ರಕಾರ, ಪೌರತ್ವ ಪಡೆಯಲು ದಾಖಲೆಗಳೊಂದಿಗೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ಅದು ಜಿಲ್ಲಾ ಮಟ್ಟಕ್ಕೆ ವರ್ಗಾವಣೆಯಾಗುತ್ತದೆ. ಅಂಚೆ ಇಲಾಖೆಯ ಅಧೀಕ್ಷಕರ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯಿಂದ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಾಖಲೆ ಪರಿಶೀಲನೆ ದಿನ ಅರ್ಜಿದಾರರು ಅಧಿಕಾರಿಗಳ ಮುಂದೆ ಹಾಜರಾಗಬೇಕು. ಸೋಲಂಕಿ ಹೇಳಿದಂತೆ ಆತ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೆ ಅಧಿಕಾರಿಗಳಿಂದ ಕರೆ ಬಂಧಿಲ್ಲ ಎಂದು ವರದಿ ಹೇಳಿದೆ.

2016-17ರಲ್ಲಿ ಭಾರತಕ್ಕೆ ಬಂದ ನನ್ನ ಕೆಲ ನೆರೆಹೊರೆಯವರು ಕೂಡ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರ ಅರ್ಜಿಯನ್ನು ಪೋರ್ಟಲ್ ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. ಸಿಎಎ 2014ರ ಡಿಸೆಂಬರ್ 31ಕ್ಕೆ ಮುಂಚಿತವಾಗಿ ಭಾರತಕ್ಕೆ ಬಂದಿರುವವರಿಗೆ ಮಾತ್ರ ಪೌರತ್ವ ನೀಡುತ್ತದೆ.

ಇದನ್ನೂ ಓದಿ : ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ಮಸೂದೆ ಅಂಗೀಕರಿಸಿದ ಥೈಲ್ಯಾಂಡ್ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...