Homeದಲಿತ್ ಫೈಲ್ಸ್ದಲಿತ ಮಹಿಳೆಯನ್ನು ಪ್ರಾರ್ಥಿಸದಂತೆ ತಡೆದ ತಮಿಳುನಾಡಿನ ಚಿದಂಬರಂ ದೇವಸ್ಥಾನದ ಅರ್ಚಕರು

ದಲಿತ ಮಹಿಳೆಯನ್ನು ಪ್ರಾರ್ಥಿಸದಂತೆ ತಡೆದ ತಮಿಳುನಾಡಿನ ಚಿದಂಬರಂ ದೇವಸ್ಥಾನದ ಅರ್ಚಕರು

- Advertisement -
- Advertisement -

ದಲಿತ ಮಹಿಳೆಯೊಬ್ಬರನ್ನು ದೇವಸ್ಥಾನದ ಒಳಗಿನ ವೇದಿಕೆಯ ಮೇಲೆ ನಿಂತು ಪ್ರಾರ್ಥನೆ ಮಾಡುವುದನ್ನು ತಡೆದಿದ್ದಕ್ಕಾಗಿ ತಮಿಳುನಾಡಿನ ಚಿದಂಬರಂ ನಟರಾಜರ ದೇವಸ್ಥಾನದ 20 ಅರ್ಚಕರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ-1989 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 15ರ ಮಂಗಳವಾರದಂದು ಈ ಘಟನೆ ನಡೆದಿದೆ. ಸ್ಥಳೀಯವಾಗಿ ದೀಕ್ಷಿತರೆಂದು ಕರೆಯಲ್ಪಡುವ ಅರ್ಚಕರು, ದೇವಸ್ಥಾನ ಪ್ರವೇಶಿಸಿದ ಎಸ್‌ಸಿ ಸಮುದಾಯಕ್ಕೆ ಸೇರಿರುವ ಜಯಶೀಲಾಳ ಎಂಬ ಮಹಿಳೆಯನ್ನು ಸುತ್ತುವರೆದರು ‘ಕನಗಸಬೈ ಮೇಡೈ’ಗೆ ಎಂಬ ವೇದಿಕೆಗೆ ಬರದಂತೆ ತಡೆದಿದ್ದರು.

ಇದನ್ನೂ ಓದಿ: ಯುಪಿ: ಮಾಜಿ ಸಚಿವರ ಮಗನ ಆಶ್ರಮದಲ್ಲಿ ದಲಿತ ಯುವತಿಯ ಶವ ಪತ್ತೆ, ಮಾಯಾವತಿ ಆಕ್ರೋಶ

ಜಯಶೀಲ ಅವರು ವೇದಿಕೆ ಏರಲು ಬೇಕಾಗಿ ಮೆಟ್ಟಿಲು ಹತ್ತಲು ಯತ್ನಿಸುತ್ತಿದ್ದಾಗ ಅರ್ಚಕರು ಮಹಿಳೆಯನ್ನು ಸುತ್ತುವರೆದು ಕಿರುಚಾಡಿದ್ದಾರೆ. ಈ ಘಟನೆಯ ಹಲವು ವಿಡಿಯೋಗಳು ರೆಕಾರ್ಡ್ ಆಗಿದ್ದು, ವೈರಲ್ ಆಗಿದೆ. ಅರ್ಚಕರೊಬ್ಬರು ಜಯಶೀಲಾ ಅವರನ್ನು ಕೈ ಹಿಡಿದು ಎಳೆದುಕೊಂಡು ಹೋಗಲು ಯತ್ನಿಸುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ.

ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅರ್ಚಕರು ತನಗೆ ಬೆದರಿಕೆ ಹಾಕಿದ್ದಾರೆ ಮತ್ತು ಪಾತ್ರೆಗಳನ್ನು ಕದ್ದಿದ್ದಾಗಿ ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾಗಿ ಜಯಶೀಲಾ ಅವರು ದೂರು ದಾಖಲಿಸಿದ್ದಾರೆ.

ಈ ದೇವಸ್ಥಾನದಲ್ಲಿ ಇತ್ತೀಚೆಗೆ ವರದಿಯಾದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮುನ್ನ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಗಣೇಶ್ ಎಂಬವರು ಕನಗಸಬೈ ವೇದಿಕೆಯಿಂದ ಪ್ರಾರ್ಥನೆ ಸಲ್ಲಿಸಲು ಯತ್ನಿಸಿದ್ದರು. ಆದರೆ, ಅವರನ್ನು ತಡೆದು ದೇವಸ್ಥಾನ ಪ್ರವೇಶಿಸದಂತೆ ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ಜಯಶೀಲ ಅವರ ದೂರಿನ ಆಧಾರದ ಮೇಲೆ 20 ಅರ್ಚಕರ ವಿರುದ್ಧ ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಜಯಶೀಲ ಅವರ ಜೊತೆಗಿದ್ದ ಅರ್ಚಕ ದರ್ಶನ್ ಅವರು ಹೇಳುವಂತೆ, ಕನಗಸಬೈ ವೇದಿಕೆಯಿಂದ ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದಿವ ನಿಯಮ ತಪ್ಪಾಗಿದ್ದು, ದೇವಸ್ಥಾನದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಚಿದಂಬರಂ ನಟರಾಜನ ದೇಗುಲದಲ್ಲಿ ಇಂತಹ ಹಲವಾರು ಅಕ್ರಮಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಕಾರಣಕ್ಕಾಗಿ ಈ ವೇದಿಕೆಯ ಮೇಲೆ ಅರ್ಚಕರು ಮಾತ್ರ ನಿಂತು ಪ್ರಾರ್ಥಿಸಬಹುದು ಎಂದು ನಿಯಮವನ್ನು ಮಾಡಲಾಗಿತ್ತು ಎಂದು ವರದಿಯಾಗಿದೆ. ಹಿಂದಿನ ಎಐಎಡಿಎಂಕೆ ಸರ್ಕಾರವು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಅಡಿಯಲ್ಲಿದ್ದ ದೇವಾಲಯವನ್ನು ಅರ್ಚಕರಿಗೆ ಹಿಂತಿರುಗಿಸಿತ್ತು.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...