Homeಕರ್ನಾಟಕಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

- Advertisement -
- Advertisement -

ಪ್ರಾರ್ಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಶಾಲಾ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದರು. ಇಂತಹ ವಾಸ್ತವ್ಯದಿಂದ ಯಾರಿಗೆ ಲಾಭವಾಯಿತೋ, ಇಲ್ಲವೋ ಭರ್ಜರಿ ಪ್ರಚಾರವಂತು ಸಿಕ್ಕಿತು. ಸಚಿವರು ಶಾಲೆಗಳು ಮತ್ತು ಅಲ್ಲಿ ಕಲಿಯುತ್ತಿರುವ ಮಕ್ಕಳ ಪರಿಸ್ಥಿತಿ ತಿಳಿದುಕೊಂಡರೆ? ಸ್ಪಷ್ಟವಾಗಿ ಇಲ್ಲವೆಂದೇ ಹೇಳಬೇಕು. ಹೇಗೆಂದು ನೋಡೋಣ ಬನ್ನಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಕೆಲವು ದಿನಗಳು ಕಳೆದ ನಂತರ ದಿಢೀರ್ ತುಮಕೂರು ಜಿಲ್ಲೆಗೆ ಭೇಟಿ ಕೊಟ್ಟರು. ಅದರಲ್ಲಿ ಒಂದು ಪಾವಗಡ ತಾಲೂಕು ಅಚ್ಚಮ್ಮನಹಳ್ಳಿ ಶಾಲಾ ವಾಸ್ತವ್ಯ. ಈ ಸಂದರ್ಭದಲ್ಲಿ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಸಚಿವ ಸುರೇಶ್ ಕುಮಾರ್ ತಡಕಾಡಿದರು. ವಿಜ್ಞಾನ, ಗಣಿತ, ಇಂಗ್ಲೀಷ್ ಶಿಕ್ಷಕರೇ ಇಲ್ಲ, ಪಾಠಗಳು ಹಾಗೆ ಉಳಿಯುತ್ತಿವೆ. ಕಂಪ್ಯೂಟರ್ ಕಲಿಕೆ ಇದೆ. ಕಂಪ್ಯೂಟರ್‍ಗಳೇ ಇಲ್ಲ್ಲವೆಂದರು ಮಕ್ಕಳು. ಇದಕ್ಕೂ ಸಚಿವರಿಂದ ಉತ್ತರವಿಲ್ಲ. ಶಾಲೆಗೆ ಭೇಟಿ ನೀಡಿ ವಾರಗಳು ಕಳೆದರೂ ಅಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲಿಲ್ಲ. ಹಾಗಾದರೆ ಭೇಟಿ ನೀಡುವ ಅವಶ್ಯಕತೆ ಏನಿತ್ತು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಾರೆ.

ಶಾಲಾ ವಾಸ್ತವ್ಯದಿಂದ ಏನೂ ಬದಲಾವಣೆ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲೇ ಕೈಗೊಳ್ಳಬೇಕಾದ ಕ್ರಮಗಳು ಸಾಕಷ್ಟು ಇವೆ. ಸಮಾನ ಶಿಕ್ಷಣದ ವ್ಯವಸ್ಥೆ ಜಾರಿಗೆ ತಂದರೆ ಶಿಕ್ಷಣದ ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಮಾಡಬಹುದು. ಇದು ಸಚಿವರಿಗೂ ಗೊತ್ತು. ಆದರೆ ಮಾಡಲು ಮನಸ್ಸಿಲ್ಲ ಅಷ್ಟೇ.

ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಪಾವಗಡ. ಇಲ್ಲಿಗೆ ಶಿಕ್ಷಕರು ಬರುವುದು ಕಷ್ಟ. ದೂರದ ತಾಲೂಕು. ಇದು ಗೊತ್ತಿಲ್ಲವೇ ಮಾನ್ಯ ಸುರೇಶ್‍ಕುಮಾರ್ ಅವರಿಗೆ? ಪಾವಗಡದ ಅಚ್ಚಮ್ಮನಹಳ್ಳಿ, ಗುಬ್ಬಿ ತಾಲೂಕಿನ ಎರಡು ಶಾಲೆಗಳಿಗೂ ಭೇಟಿ ಕೊಟ್ಟರು. ಆಯಾ ಜನರಿಗೆ ಬಂದ ಭಾಗ್ಯವಾದರೂ ಏನು? ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಬಗ್ಗೆ ನಾಗರಿಕ ಸಂಘಟನೆಗಳು ಗಮನ ಸೆಳೆಯುತ್ತಲೇ ಬಂದಿವೆ. ಸಾವಿರಾರು ಶಾಲೆಗಳು ಮುಚ್ಚಿರುವ ಬಗ್ಗೆ ವರದಿ ಇದೆ.. ಸರ್ಕಾರದ ಬಳಿಯೂ ಅಂಕಿ ಆಂಶಗಳಿವೆ. ಹೀಗಿದ್ದರೂ ಏನು ಕ್ರಮ ಕೈಗೊಂಡರು. ಹೋಗಲಿ, ಸಚಿವರು ಶಾಲೆಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಅರಿತರು ಎಂದು ಭಾವಿಸೋಣ. ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಿದರೇ? ಉತ್ತರ ಶೂನ್ಯ!

ಇದೀಗ ಸಚಿವ ಸುರೇಶ್‍ಕುಮಾರ್ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದಲ್ಲಿ ಬದಲಾವಣೆ ಎಂದಿದ್ದಾರೆ. ಸುಧಾರಣೆ ಎಂದಿಲ್ಲ. ಅಂದರೆ ಈಗಿರುವ ವ್ಯವಸ್ಥೆಯನ್ನು ಬದಲಿಸಿ ಆರ್‌ಎಸ್‍ಎಸ್‍ನ ವಿಷಕಾರಿ ಅಜೆಂಡಾವನ್ನು ಮಕ್ಕಳಿಗೆ ಉಣಿಸುವುದು ಎಂದರ್ಥವೇ? ಇರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕಂಪ್ಯೂಟರ್ ಇಲ್ಲ. ಎಷ್ಟೋ ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿವೆ. ಮಕ್ಕಳ ಕೊರತೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಿದೆ. ಹೀಗಿದ್ದರೂ ಗುಣಮಟ್ಟ ಸಾಧಿಸಲು ಆಗಿಲ್ಲ! ಇಂತಹ ಸನ್ನಿವೇಶದಲ್ಲಿ ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ಏಳನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಮಾಡುವುದಾಗಿ ಪ್ರಕಟಿಸಿದ್ದಾರೆ. 1 ರಿಂದ 9ನೇ ತರಗತಿವರೆಗೆ ಪಾಸು ಮಾಡುವ ಪದ್ದತಿ ಇನ್ನು ಮುಂದೆ ಇರುವುದಿಲ್ಲ ಎಂದು ಹೇಳಿದ್ದಾರೆ. ಇದು ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರವಲ್ಲದೆ ಮತ್ತೇನು?

ಸಧ್ಯದ ವ್ಯವಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕೆಲ ಮಕ್ಕಳಿಗೆ ಪ್ರಾಥಮಿಕ ಹಂತದಿಂದ ಪದವಿ ಹಂತಕ್ಕೆ ಬಂದರೂ ವ್ಯಾಕ್ಯ ಬರೆಯುವುದಿರಲಿ, ಸರಿಯಾಗಿ ಕಾಗುಣಿತ ಬರೆಯಲು ಬರುತ್ತಿಲ್ಲ. ಮಕ್ಕಳ ಉತ್ತರ ಪತ್ರಿಕೆಗಳನ್ನು ನೋಡಿದರೆ ಪಾಸು ಮಾಡುವ ಮನಸ್ಸೇ ಬರುವುದಿಲ್ಲ. ಕನಿಷ್ಟ ಅಂಕ ಗಳಿಸುವುದೂ ದುಃಸ್ಥರ. ಶಿಕ್ಷಕರು ತಮ್ಮ ಮರ್ಯಾದೆಯ ಪ್ರಶ್ನೆ ಎಂದು ಮಕ್ಕಳನ್ನು ಪಾಸು ಮಾಡುತ್ತಾರೆ. ಮುಂದಿನ ತರಗತಿಗೂ ಮಕ್ಕಳು ಬೇಕಲ್ಲವೇ?! ಇಲ್ಲಿ ಶಿಕ್ಷಕರನ್ನು ದೂರಬೇಕೋ? ಮಕ್ಕಳನ್ನು ದೂರಬೇಕೋ, ಪೋಷಕರನ್ನೋ ಅಥವಾ ಸರ್ಕಾರವನ್ನೋ! ಅಂತು ಮಕ್ಕಳು ಮಾತ್ರ ಶಿಕ್ಷಣ ಕಲಿಕೆಯಲ್ಲಿ ಹಿಂದೆ ಬಿದ್ದಿದ್ದಾರೆ. ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಬಲಗೊಳಿಸಬೇಕಾದ ಶಿಕ್ಷಣ ಸಚಿವರಾದಿಯಾಗಿ ಸರ್ಕಾರ ಖಾಸಗಿ ಶಿಕ್ಷಣದ ಮಾಲಿಕತ್ವಕ್ಕೆ ಶರಣಾಗಿ ಸಾಮಾನ್ಯ ಬಡಮಕ್ಕಳನ್ನು ಹಾಳು ಮಾಡುತ್ತಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಲೋಚನೆಗೆ ಬಡಮಕ್ಕಳು ಬೇಕಾಗಿಲ್ಲ. ಗ್ರಾಮೀಣಕ್ಕೂ ಮತ್ತು ನಗರ ಲೋಕದ ಚಿತ್ರಣ ಅವರ ಕಣ್ಣು ಮುಂದೆ ಇಲ್ಲ. ಕೇವಲ ಲಕ್ಷಲಕ್ಷ ವಸೂಲಿ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳೇ ಅವರ ಮುಂದಿವೆ. ಆ ಚಿತ್ರಣ ಗ್ರಾಮೀಣ ಪರಿಸರವನ್ನು ಮಸುಕುಗೊಳಿಸುತ್ತದೆ. ಖಾಸಗೀಕರಣ, ಶಾಲೆಗಳ ವಿಲೀನ, ವಿಶೇಷ ಶಿಕ್ಷಣ ವಲಯ, ಸಂಕೀರ್ಣ ಶಿಕ್ಷಣ ಪದ್ದತಿ, ಹೀಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಸರ್ಕಾರಿ ಶಾಲಾ ವ್ಯವಸ್ಥೆಯನ್ನೇ ಇಲ್ಲದಂತೆ ಮಾಡುವ ನೀತಿಗಳತ್ತಲೆ ಅವರ ಚಿತ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...