Homeಕರ್ನಾಟಕಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

- Advertisement -
- Advertisement -

ಪ್ರಾರ್ಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಶಾಲಾ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದರು. ಇಂತಹ ವಾಸ್ತವ್ಯದಿಂದ ಯಾರಿಗೆ ಲಾಭವಾಯಿತೋ, ಇಲ್ಲವೋ ಭರ್ಜರಿ ಪ್ರಚಾರವಂತು ಸಿಕ್ಕಿತು. ಸಚಿವರು ಶಾಲೆಗಳು ಮತ್ತು ಅಲ್ಲಿ ಕಲಿಯುತ್ತಿರುವ ಮಕ್ಕಳ ಪರಿಸ್ಥಿತಿ ತಿಳಿದುಕೊಂಡರೆ? ಸ್ಪಷ್ಟವಾಗಿ ಇಲ್ಲವೆಂದೇ ಹೇಳಬೇಕು. ಹೇಗೆಂದು ನೋಡೋಣ ಬನ್ನಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಕೆಲವು ದಿನಗಳು ಕಳೆದ ನಂತರ ದಿಢೀರ್ ತುಮಕೂರು ಜಿಲ್ಲೆಗೆ ಭೇಟಿ ಕೊಟ್ಟರು. ಅದರಲ್ಲಿ ಒಂದು ಪಾವಗಡ ತಾಲೂಕು ಅಚ್ಚಮ್ಮನಹಳ್ಳಿ ಶಾಲಾ ವಾಸ್ತವ್ಯ. ಈ ಸಂದರ್ಭದಲ್ಲಿ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಸಚಿವ ಸುರೇಶ್ ಕುಮಾರ್ ತಡಕಾಡಿದರು. ವಿಜ್ಞಾನ, ಗಣಿತ, ಇಂಗ್ಲೀಷ್ ಶಿಕ್ಷಕರೇ ಇಲ್ಲ, ಪಾಠಗಳು ಹಾಗೆ ಉಳಿಯುತ್ತಿವೆ. ಕಂಪ್ಯೂಟರ್ ಕಲಿಕೆ ಇದೆ. ಕಂಪ್ಯೂಟರ್‍ಗಳೇ ಇಲ್ಲ್ಲವೆಂದರು ಮಕ್ಕಳು. ಇದಕ್ಕೂ ಸಚಿವರಿಂದ ಉತ್ತರವಿಲ್ಲ. ಶಾಲೆಗೆ ಭೇಟಿ ನೀಡಿ ವಾರಗಳು ಕಳೆದರೂ ಅಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲಿಲ್ಲ. ಹಾಗಾದರೆ ಭೇಟಿ ನೀಡುವ ಅವಶ್ಯಕತೆ ಏನಿತ್ತು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಾರೆ.

ಶಾಲಾ ವಾಸ್ತವ್ಯದಿಂದ ಏನೂ ಬದಲಾವಣೆ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲೇ ಕೈಗೊಳ್ಳಬೇಕಾದ ಕ್ರಮಗಳು ಸಾಕಷ್ಟು ಇವೆ. ಸಮಾನ ಶಿಕ್ಷಣದ ವ್ಯವಸ್ಥೆ ಜಾರಿಗೆ ತಂದರೆ ಶಿಕ್ಷಣದ ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಮಾಡಬಹುದು. ಇದು ಸಚಿವರಿಗೂ ಗೊತ್ತು. ಆದರೆ ಮಾಡಲು ಮನಸ್ಸಿಲ್ಲ ಅಷ್ಟೇ.

ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಪಾವಗಡ. ಇಲ್ಲಿಗೆ ಶಿಕ್ಷಕರು ಬರುವುದು ಕಷ್ಟ. ದೂರದ ತಾಲೂಕು. ಇದು ಗೊತ್ತಿಲ್ಲವೇ ಮಾನ್ಯ ಸುರೇಶ್‍ಕುಮಾರ್ ಅವರಿಗೆ? ಪಾವಗಡದ ಅಚ್ಚಮ್ಮನಹಳ್ಳಿ, ಗುಬ್ಬಿ ತಾಲೂಕಿನ ಎರಡು ಶಾಲೆಗಳಿಗೂ ಭೇಟಿ ಕೊಟ್ಟರು. ಆಯಾ ಜನರಿಗೆ ಬಂದ ಭಾಗ್ಯವಾದರೂ ಏನು? ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಬಗ್ಗೆ ನಾಗರಿಕ ಸಂಘಟನೆಗಳು ಗಮನ ಸೆಳೆಯುತ್ತಲೇ ಬಂದಿವೆ. ಸಾವಿರಾರು ಶಾಲೆಗಳು ಮುಚ್ಚಿರುವ ಬಗ್ಗೆ ವರದಿ ಇದೆ.. ಸರ್ಕಾರದ ಬಳಿಯೂ ಅಂಕಿ ಆಂಶಗಳಿವೆ. ಹೀಗಿದ್ದರೂ ಏನು ಕ್ರಮ ಕೈಗೊಂಡರು. ಹೋಗಲಿ, ಸಚಿವರು ಶಾಲೆಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಅರಿತರು ಎಂದು ಭಾವಿಸೋಣ. ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಿದರೇ? ಉತ್ತರ ಶೂನ್ಯ!

ಇದೀಗ ಸಚಿವ ಸುರೇಶ್‍ಕುಮಾರ್ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದಲ್ಲಿ ಬದಲಾವಣೆ ಎಂದಿದ್ದಾರೆ. ಸುಧಾರಣೆ ಎಂದಿಲ್ಲ. ಅಂದರೆ ಈಗಿರುವ ವ್ಯವಸ್ಥೆಯನ್ನು ಬದಲಿಸಿ ಆರ್‌ಎಸ್‍ಎಸ್‍ನ ವಿಷಕಾರಿ ಅಜೆಂಡಾವನ್ನು ಮಕ್ಕಳಿಗೆ ಉಣಿಸುವುದು ಎಂದರ್ಥವೇ? ಇರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕಂಪ್ಯೂಟರ್ ಇಲ್ಲ. ಎಷ್ಟೋ ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿವೆ. ಮಕ್ಕಳ ಕೊರತೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಿದೆ. ಹೀಗಿದ್ದರೂ ಗುಣಮಟ್ಟ ಸಾಧಿಸಲು ಆಗಿಲ್ಲ! ಇಂತಹ ಸನ್ನಿವೇಶದಲ್ಲಿ ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ಏಳನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಮಾಡುವುದಾಗಿ ಪ್ರಕಟಿಸಿದ್ದಾರೆ. 1 ರಿಂದ 9ನೇ ತರಗತಿವರೆಗೆ ಪಾಸು ಮಾಡುವ ಪದ್ದತಿ ಇನ್ನು ಮುಂದೆ ಇರುವುದಿಲ್ಲ ಎಂದು ಹೇಳಿದ್ದಾರೆ. ಇದು ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರವಲ್ಲದೆ ಮತ್ತೇನು?

ಸಧ್ಯದ ವ್ಯವಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕೆಲ ಮಕ್ಕಳಿಗೆ ಪ್ರಾಥಮಿಕ ಹಂತದಿಂದ ಪದವಿ ಹಂತಕ್ಕೆ ಬಂದರೂ ವ್ಯಾಕ್ಯ ಬರೆಯುವುದಿರಲಿ, ಸರಿಯಾಗಿ ಕಾಗುಣಿತ ಬರೆಯಲು ಬರುತ್ತಿಲ್ಲ. ಮಕ್ಕಳ ಉತ್ತರ ಪತ್ರಿಕೆಗಳನ್ನು ನೋಡಿದರೆ ಪಾಸು ಮಾಡುವ ಮನಸ್ಸೇ ಬರುವುದಿಲ್ಲ. ಕನಿಷ್ಟ ಅಂಕ ಗಳಿಸುವುದೂ ದುಃಸ್ಥರ. ಶಿಕ್ಷಕರು ತಮ್ಮ ಮರ್ಯಾದೆಯ ಪ್ರಶ್ನೆ ಎಂದು ಮಕ್ಕಳನ್ನು ಪಾಸು ಮಾಡುತ್ತಾರೆ. ಮುಂದಿನ ತರಗತಿಗೂ ಮಕ್ಕಳು ಬೇಕಲ್ಲವೇ?! ಇಲ್ಲಿ ಶಿಕ್ಷಕರನ್ನು ದೂರಬೇಕೋ? ಮಕ್ಕಳನ್ನು ದೂರಬೇಕೋ, ಪೋಷಕರನ್ನೋ ಅಥವಾ ಸರ್ಕಾರವನ್ನೋ! ಅಂತು ಮಕ್ಕಳು ಮಾತ್ರ ಶಿಕ್ಷಣ ಕಲಿಕೆಯಲ್ಲಿ ಹಿಂದೆ ಬಿದ್ದಿದ್ದಾರೆ. ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಬಲಗೊಳಿಸಬೇಕಾದ ಶಿಕ್ಷಣ ಸಚಿವರಾದಿಯಾಗಿ ಸರ್ಕಾರ ಖಾಸಗಿ ಶಿಕ್ಷಣದ ಮಾಲಿಕತ್ವಕ್ಕೆ ಶರಣಾಗಿ ಸಾಮಾನ್ಯ ಬಡಮಕ್ಕಳನ್ನು ಹಾಳು ಮಾಡುತ್ತಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಲೋಚನೆಗೆ ಬಡಮಕ್ಕಳು ಬೇಕಾಗಿಲ್ಲ. ಗ್ರಾಮೀಣಕ್ಕೂ ಮತ್ತು ನಗರ ಲೋಕದ ಚಿತ್ರಣ ಅವರ ಕಣ್ಣು ಮುಂದೆ ಇಲ್ಲ. ಕೇವಲ ಲಕ್ಷಲಕ್ಷ ವಸೂಲಿ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳೇ ಅವರ ಮುಂದಿವೆ. ಆ ಚಿತ್ರಣ ಗ್ರಾಮೀಣ ಪರಿಸರವನ್ನು ಮಸುಕುಗೊಳಿಸುತ್ತದೆ. ಖಾಸಗೀಕರಣ, ಶಾಲೆಗಳ ವಿಲೀನ, ವಿಶೇಷ ಶಿಕ್ಷಣ ವಲಯ, ಸಂಕೀರ್ಣ ಶಿಕ್ಷಣ ಪದ್ದತಿ, ಹೀಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಸರ್ಕಾರಿ ಶಾಲಾ ವ್ಯವಸ್ಥೆಯನ್ನೇ ಇಲ್ಲದಂತೆ ಮಾಡುವ ನೀತಿಗಳತ್ತಲೆ ಅವರ ಚಿತ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...