Homeಕರ್ನಾಟಕಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

- Advertisement -
- Advertisement -

ಪ್ರಾರ್ಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಶಾಲಾ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದರು. ಇಂತಹ ವಾಸ್ತವ್ಯದಿಂದ ಯಾರಿಗೆ ಲಾಭವಾಯಿತೋ, ಇಲ್ಲವೋ ಭರ್ಜರಿ ಪ್ರಚಾರವಂತು ಸಿಕ್ಕಿತು. ಸಚಿವರು ಶಾಲೆಗಳು ಮತ್ತು ಅಲ್ಲಿ ಕಲಿಯುತ್ತಿರುವ ಮಕ್ಕಳ ಪರಿಸ್ಥಿತಿ ತಿಳಿದುಕೊಂಡರೆ? ಸ್ಪಷ್ಟವಾಗಿ ಇಲ್ಲವೆಂದೇ ಹೇಳಬೇಕು. ಹೇಗೆಂದು ನೋಡೋಣ ಬನ್ನಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಕೆಲವು ದಿನಗಳು ಕಳೆದ ನಂತರ ದಿಢೀರ್ ತುಮಕೂರು ಜಿಲ್ಲೆಗೆ ಭೇಟಿ ಕೊಟ್ಟರು. ಅದರಲ್ಲಿ ಒಂದು ಪಾವಗಡ ತಾಲೂಕು ಅಚ್ಚಮ್ಮನಹಳ್ಳಿ ಶಾಲಾ ವಾಸ್ತವ್ಯ. ಈ ಸಂದರ್ಭದಲ್ಲಿ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಸಚಿವ ಸುರೇಶ್ ಕುಮಾರ್ ತಡಕಾಡಿದರು. ವಿಜ್ಞಾನ, ಗಣಿತ, ಇಂಗ್ಲೀಷ್ ಶಿಕ್ಷಕರೇ ಇಲ್ಲ, ಪಾಠಗಳು ಹಾಗೆ ಉಳಿಯುತ್ತಿವೆ. ಕಂಪ್ಯೂಟರ್ ಕಲಿಕೆ ಇದೆ. ಕಂಪ್ಯೂಟರ್‍ಗಳೇ ಇಲ್ಲ್ಲವೆಂದರು ಮಕ್ಕಳು. ಇದಕ್ಕೂ ಸಚಿವರಿಂದ ಉತ್ತರವಿಲ್ಲ. ಶಾಲೆಗೆ ಭೇಟಿ ನೀಡಿ ವಾರಗಳು ಕಳೆದರೂ ಅಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲಿಲ್ಲ. ಹಾಗಾದರೆ ಭೇಟಿ ನೀಡುವ ಅವಶ್ಯಕತೆ ಏನಿತ್ತು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಾರೆ.

ಶಾಲಾ ವಾಸ್ತವ್ಯದಿಂದ ಏನೂ ಬದಲಾವಣೆ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲೇ ಕೈಗೊಳ್ಳಬೇಕಾದ ಕ್ರಮಗಳು ಸಾಕಷ್ಟು ಇವೆ. ಸಮಾನ ಶಿಕ್ಷಣದ ವ್ಯವಸ್ಥೆ ಜಾರಿಗೆ ತಂದರೆ ಶಿಕ್ಷಣದ ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಮಾಡಬಹುದು. ಇದು ಸಚಿವರಿಗೂ ಗೊತ್ತು. ಆದರೆ ಮಾಡಲು ಮನಸ್ಸಿಲ್ಲ ಅಷ್ಟೇ.

ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಪಾವಗಡ. ಇಲ್ಲಿಗೆ ಶಿಕ್ಷಕರು ಬರುವುದು ಕಷ್ಟ. ದೂರದ ತಾಲೂಕು. ಇದು ಗೊತ್ತಿಲ್ಲವೇ ಮಾನ್ಯ ಸುರೇಶ್‍ಕುಮಾರ್ ಅವರಿಗೆ? ಪಾವಗಡದ ಅಚ್ಚಮ್ಮನಹಳ್ಳಿ, ಗುಬ್ಬಿ ತಾಲೂಕಿನ ಎರಡು ಶಾಲೆಗಳಿಗೂ ಭೇಟಿ ಕೊಟ್ಟರು. ಆಯಾ ಜನರಿಗೆ ಬಂದ ಭಾಗ್ಯವಾದರೂ ಏನು? ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಬಗ್ಗೆ ನಾಗರಿಕ ಸಂಘಟನೆಗಳು ಗಮನ ಸೆಳೆಯುತ್ತಲೇ ಬಂದಿವೆ. ಸಾವಿರಾರು ಶಾಲೆಗಳು ಮುಚ್ಚಿರುವ ಬಗ್ಗೆ ವರದಿ ಇದೆ.. ಸರ್ಕಾರದ ಬಳಿಯೂ ಅಂಕಿ ಆಂಶಗಳಿವೆ. ಹೀಗಿದ್ದರೂ ಏನು ಕ್ರಮ ಕೈಗೊಂಡರು. ಹೋಗಲಿ, ಸಚಿವರು ಶಾಲೆಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಅರಿತರು ಎಂದು ಭಾವಿಸೋಣ. ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಿದರೇ? ಉತ್ತರ ಶೂನ್ಯ!

ಇದೀಗ ಸಚಿವ ಸುರೇಶ್‍ಕುಮಾರ್ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದಲ್ಲಿ ಬದಲಾವಣೆ ಎಂದಿದ್ದಾರೆ. ಸುಧಾರಣೆ ಎಂದಿಲ್ಲ. ಅಂದರೆ ಈಗಿರುವ ವ್ಯವಸ್ಥೆಯನ್ನು ಬದಲಿಸಿ ಆರ್‌ಎಸ್‍ಎಸ್‍ನ ವಿಷಕಾರಿ ಅಜೆಂಡಾವನ್ನು ಮಕ್ಕಳಿಗೆ ಉಣಿಸುವುದು ಎಂದರ್ಥವೇ? ಇರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕಂಪ್ಯೂಟರ್ ಇಲ್ಲ. ಎಷ್ಟೋ ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿವೆ. ಮಕ್ಕಳ ಕೊರತೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಿದೆ. ಹೀಗಿದ್ದರೂ ಗುಣಮಟ್ಟ ಸಾಧಿಸಲು ಆಗಿಲ್ಲ! ಇಂತಹ ಸನ್ನಿವೇಶದಲ್ಲಿ ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ಏಳನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಮಾಡುವುದಾಗಿ ಪ್ರಕಟಿಸಿದ್ದಾರೆ. 1 ರಿಂದ 9ನೇ ತರಗತಿವರೆಗೆ ಪಾಸು ಮಾಡುವ ಪದ್ದತಿ ಇನ್ನು ಮುಂದೆ ಇರುವುದಿಲ್ಲ ಎಂದು ಹೇಳಿದ್ದಾರೆ. ಇದು ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರವಲ್ಲದೆ ಮತ್ತೇನು?

ಸಧ್ಯದ ವ್ಯವಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕೆಲ ಮಕ್ಕಳಿಗೆ ಪ್ರಾಥಮಿಕ ಹಂತದಿಂದ ಪದವಿ ಹಂತಕ್ಕೆ ಬಂದರೂ ವ್ಯಾಕ್ಯ ಬರೆಯುವುದಿರಲಿ, ಸರಿಯಾಗಿ ಕಾಗುಣಿತ ಬರೆಯಲು ಬರುತ್ತಿಲ್ಲ. ಮಕ್ಕಳ ಉತ್ತರ ಪತ್ರಿಕೆಗಳನ್ನು ನೋಡಿದರೆ ಪಾಸು ಮಾಡುವ ಮನಸ್ಸೇ ಬರುವುದಿಲ್ಲ. ಕನಿಷ್ಟ ಅಂಕ ಗಳಿಸುವುದೂ ದುಃಸ್ಥರ. ಶಿಕ್ಷಕರು ತಮ್ಮ ಮರ್ಯಾದೆಯ ಪ್ರಶ್ನೆ ಎಂದು ಮಕ್ಕಳನ್ನು ಪಾಸು ಮಾಡುತ್ತಾರೆ. ಮುಂದಿನ ತರಗತಿಗೂ ಮಕ್ಕಳು ಬೇಕಲ್ಲವೇ?! ಇಲ್ಲಿ ಶಿಕ್ಷಕರನ್ನು ದೂರಬೇಕೋ? ಮಕ್ಕಳನ್ನು ದೂರಬೇಕೋ, ಪೋಷಕರನ್ನೋ ಅಥವಾ ಸರ್ಕಾರವನ್ನೋ! ಅಂತು ಮಕ್ಕಳು ಮಾತ್ರ ಶಿಕ್ಷಣ ಕಲಿಕೆಯಲ್ಲಿ ಹಿಂದೆ ಬಿದ್ದಿದ್ದಾರೆ. ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಬಲಗೊಳಿಸಬೇಕಾದ ಶಿಕ್ಷಣ ಸಚಿವರಾದಿಯಾಗಿ ಸರ್ಕಾರ ಖಾಸಗಿ ಶಿಕ್ಷಣದ ಮಾಲಿಕತ್ವಕ್ಕೆ ಶರಣಾಗಿ ಸಾಮಾನ್ಯ ಬಡಮಕ್ಕಳನ್ನು ಹಾಳು ಮಾಡುತ್ತಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಲೋಚನೆಗೆ ಬಡಮಕ್ಕಳು ಬೇಕಾಗಿಲ್ಲ. ಗ್ರಾಮೀಣಕ್ಕೂ ಮತ್ತು ನಗರ ಲೋಕದ ಚಿತ್ರಣ ಅವರ ಕಣ್ಣು ಮುಂದೆ ಇಲ್ಲ. ಕೇವಲ ಲಕ್ಷಲಕ್ಷ ವಸೂಲಿ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳೇ ಅವರ ಮುಂದಿವೆ. ಆ ಚಿತ್ರಣ ಗ್ರಾಮೀಣ ಪರಿಸರವನ್ನು ಮಸುಕುಗೊಳಿಸುತ್ತದೆ. ಖಾಸಗೀಕರಣ, ಶಾಲೆಗಳ ವಿಲೀನ, ವಿಶೇಷ ಶಿಕ್ಷಣ ವಲಯ, ಸಂಕೀರ್ಣ ಶಿಕ್ಷಣ ಪದ್ದತಿ, ಹೀಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಸರ್ಕಾರಿ ಶಾಲಾ ವ್ಯವಸ್ಥೆಯನ್ನೇ ಇಲ್ಲದಂತೆ ಮಾಡುವ ನೀತಿಗಳತ್ತಲೆ ಅವರ ಚಿತ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...