Homeಕರ್ನಾಟಕಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ: ಸರ್ಕಾರಿ ಶಾಲೆಗಳನ್ನು ಹಳ್ಳಕ್ಕೆ ತಳ್ಳುವ ಮತ್ತೊಂದು ಹೆಜ್ಜೆ..

- Advertisement -
- Advertisement -

ಪ್ರಾರ್ಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಶಾಲಾ ವಾಸ್ತವ್ಯ ಮಾಡಿ ರಾಜ್ಯದ ಗಮನ ಸೆಳೆದರು. ಇಂತಹ ವಾಸ್ತವ್ಯದಿಂದ ಯಾರಿಗೆ ಲಾಭವಾಯಿತೋ, ಇಲ್ಲವೋ ಭರ್ಜರಿ ಪ್ರಚಾರವಂತು ಸಿಕ್ಕಿತು. ಸಚಿವರು ಶಾಲೆಗಳು ಮತ್ತು ಅಲ್ಲಿ ಕಲಿಯುತ್ತಿರುವ ಮಕ್ಕಳ ಪರಿಸ್ಥಿತಿ ತಿಳಿದುಕೊಂಡರೆ? ಸ್ಪಷ್ಟವಾಗಿ ಇಲ್ಲವೆಂದೇ ಹೇಳಬೇಕು. ಹೇಗೆಂದು ನೋಡೋಣ ಬನ್ನಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಕೆಲವು ದಿನಗಳು ಕಳೆದ ನಂತರ ದಿಢೀರ್ ತುಮಕೂರು ಜಿಲ್ಲೆಗೆ ಭೇಟಿ ಕೊಟ್ಟರು. ಅದರಲ್ಲಿ ಒಂದು ಪಾವಗಡ ತಾಲೂಕು ಅಚ್ಚಮ್ಮನಹಳ್ಳಿ ಶಾಲಾ ವಾಸ್ತವ್ಯ. ಈ ಸಂದರ್ಭದಲ್ಲಿ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಸಚಿವ ಸುರೇಶ್ ಕುಮಾರ್ ತಡಕಾಡಿದರು. ವಿಜ್ಞಾನ, ಗಣಿತ, ಇಂಗ್ಲೀಷ್ ಶಿಕ್ಷಕರೇ ಇಲ್ಲ, ಪಾಠಗಳು ಹಾಗೆ ಉಳಿಯುತ್ತಿವೆ. ಕಂಪ್ಯೂಟರ್ ಕಲಿಕೆ ಇದೆ. ಕಂಪ್ಯೂಟರ್‍ಗಳೇ ಇಲ್ಲ್ಲವೆಂದರು ಮಕ್ಕಳು. ಇದಕ್ಕೂ ಸಚಿವರಿಂದ ಉತ್ತರವಿಲ್ಲ. ಶಾಲೆಗೆ ಭೇಟಿ ನೀಡಿ ವಾರಗಳು ಕಳೆದರೂ ಅಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲಿಲ್ಲ. ಹಾಗಾದರೆ ಭೇಟಿ ನೀಡುವ ಅವಶ್ಯಕತೆ ಏನಿತ್ತು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಾರೆ.

ಶಾಲಾ ವಾಸ್ತವ್ಯದಿಂದ ಏನೂ ಬದಲಾವಣೆ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲೇ ಕೈಗೊಳ್ಳಬೇಕಾದ ಕ್ರಮಗಳು ಸಾಕಷ್ಟು ಇವೆ. ಸಮಾನ ಶಿಕ್ಷಣದ ವ್ಯವಸ್ಥೆ ಜಾರಿಗೆ ತಂದರೆ ಶಿಕ್ಷಣದ ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಮಾಡಬಹುದು. ಇದು ಸಚಿವರಿಗೂ ಗೊತ್ತು. ಆದರೆ ಮಾಡಲು ಮನಸ್ಸಿಲ್ಲ ಅಷ್ಟೇ.

ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಪಾವಗಡ. ಇಲ್ಲಿಗೆ ಶಿಕ್ಷಕರು ಬರುವುದು ಕಷ್ಟ. ದೂರದ ತಾಲೂಕು. ಇದು ಗೊತ್ತಿಲ್ಲವೇ ಮಾನ್ಯ ಸುರೇಶ್‍ಕುಮಾರ್ ಅವರಿಗೆ? ಪಾವಗಡದ ಅಚ್ಚಮ್ಮನಹಳ್ಳಿ, ಗುಬ್ಬಿ ತಾಲೂಕಿನ ಎರಡು ಶಾಲೆಗಳಿಗೂ ಭೇಟಿ ಕೊಟ್ಟರು. ಆಯಾ ಜನರಿಗೆ ಬಂದ ಭಾಗ್ಯವಾದರೂ ಏನು? ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಬಗ್ಗೆ ನಾಗರಿಕ ಸಂಘಟನೆಗಳು ಗಮನ ಸೆಳೆಯುತ್ತಲೇ ಬಂದಿವೆ. ಸಾವಿರಾರು ಶಾಲೆಗಳು ಮುಚ್ಚಿರುವ ಬಗ್ಗೆ ವರದಿ ಇದೆ.. ಸರ್ಕಾರದ ಬಳಿಯೂ ಅಂಕಿ ಆಂಶಗಳಿವೆ. ಹೀಗಿದ್ದರೂ ಏನು ಕ್ರಮ ಕೈಗೊಂಡರು. ಹೋಗಲಿ, ಸಚಿವರು ಶಾಲೆಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಅರಿತರು ಎಂದು ಭಾವಿಸೋಣ. ಸರ್ಕಾರಕ್ಕೆ ವಾಸ್ತವಿಕ ವರದಿ ನೀಡಿದರೇ? ಉತ್ತರ ಶೂನ್ಯ!

ಇದೀಗ ಸಚಿವ ಸುರೇಶ್‍ಕುಮಾರ್ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದಲ್ಲಿ ಬದಲಾವಣೆ ಎಂದಿದ್ದಾರೆ. ಸುಧಾರಣೆ ಎಂದಿಲ್ಲ. ಅಂದರೆ ಈಗಿರುವ ವ್ಯವಸ್ಥೆಯನ್ನು ಬದಲಿಸಿ ಆರ್‌ಎಸ್‍ಎಸ್‍ನ ವಿಷಕಾರಿ ಅಜೆಂಡಾವನ್ನು ಮಕ್ಕಳಿಗೆ ಉಣಿಸುವುದು ಎಂದರ್ಥವೇ? ಇರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕಂಪ್ಯೂಟರ್ ಇಲ್ಲ. ಎಷ್ಟೋ ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿವೆ. ಮಕ್ಕಳ ಕೊರತೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಿದೆ. ಹೀಗಿದ್ದರೂ ಗುಣಮಟ್ಟ ಸಾಧಿಸಲು ಆಗಿಲ್ಲ! ಇಂತಹ ಸನ್ನಿವೇಶದಲ್ಲಿ ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ಏಳನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಮಾಡುವುದಾಗಿ ಪ್ರಕಟಿಸಿದ್ದಾರೆ. 1 ರಿಂದ 9ನೇ ತರಗತಿವರೆಗೆ ಪಾಸು ಮಾಡುವ ಪದ್ದತಿ ಇನ್ನು ಮುಂದೆ ಇರುವುದಿಲ್ಲ ಎಂದು ಹೇಳಿದ್ದಾರೆ. ಇದು ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರವಲ್ಲದೆ ಮತ್ತೇನು?

ಸಧ್ಯದ ವ್ಯವಸ್ಥೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕೆಲ ಮಕ್ಕಳಿಗೆ ಪ್ರಾಥಮಿಕ ಹಂತದಿಂದ ಪದವಿ ಹಂತಕ್ಕೆ ಬಂದರೂ ವ್ಯಾಕ್ಯ ಬರೆಯುವುದಿರಲಿ, ಸರಿಯಾಗಿ ಕಾಗುಣಿತ ಬರೆಯಲು ಬರುತ್ತಿಲ್ಲ. ಮಕ್ಕಳ ಉತ್ತರ ಪತ್ರಿಕೆಗಳನ್ನು ನೋಡಿದರೆ ಪಾಸು ಮಾಡುವ ಮನಸ್ಸೇ ಬರುವುದಿಲ್ಲ. ಕನಿಷ್ಟ ಅಂಕ ಗಳಿಸುವುದೂ ದುಃಸ್ಥರ. ಶಿಕ್ಷಕರು ತಮ್ಮ ಮರ್ಯಾದೆಯ ಪ್ರಶ್ನೆ ಎಂದು ಮಕ್ಕಳನ್ನು ಪಾಸು ಮಾಡುತ್ತಾರೆ. ಮುಂದಿನ ತರಗತಿಗೂ ಮಕ್ಕಳು ಬೇಕಲ್ಲವೇ?! ಇಲ್ಲಿ ಶಿಕ್ಷಕರನ್ನು ದೂರಬೇಕೋ? ಮಕ್ಕಳನ್ನು ದೂರಬೇಕೋ, ಪೋಷಕರನ್ನೋ ಅಥವಾ ಸರ್ಕಾರವನ್ನೋ! ಅಂತು ಮಕ್ಕಳು ಮಾತ್ರ ಶಿಕ್ಷಣ ಕಲಿಕೆಯಲ್ಲಿ ಹಿಂದೆ ಬಿದ್ದಿದ್ದಾರೆ. ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಬಲಗೊಳಿಸಬೇಕಾದ ಶಿಕ್ಷಣ ಸಚಿವರಾದಿಯಾಗಿ ಸರ್ಕಾರ ಖಾಸಗಿ ಶಿಕ್ಷಣದ ಮಾಲಿಕತ್ವಕ್ಕೆ ಶರಣಾಗಿ ಸಾಮಾನ್ಯ ಬಡಮಕ್ಕಳನ್ನು ಹಾಳು ಮಾಡುತ್ತಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಲೋಚನೆಗೆ ಬಡಮಕ್ಕಳು ಬೇಕಾಗಿಲ್ಲ. ಗ್ರಾಮೀಣಕ್ಕೂ ಮತ್ತು ನಗರ ಲೋಕದ ಚಿತ್ರಣ ಅವರ ಕಣ್ಣು ಮುಂದೆ ಇಲ್ಲ. ಕೇವಲ ಲಕ್ಷಲಕ್ಷ ವಸೂಲಿ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳೇ ಅವರ ಮುಂದಿವೆ. ಆ ಚಿತ್ರಣ ಗ್ರಾಮೀಣ ಪರಿಸರವನ್ನು ಮಸುಕುಗೊಳಿಸುತ್ತದೆ. ಖಾಸಗೀಕರಣ, ಶಾಲೆಗಳ ವಿಲೀನ, ವಿಶೇಷ ಶಿಕ್ಷಣ ವಲಯ, ಸಂಕೀರ್ಣ ಶಿಕ್ಷಣ ಪದ್ದತಿ, ಹೀಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಸರ್ಕಾರಿ ಶಾಲಾ ವ್ಯವಸ್ಥೆಯನ್ನೇ ಇಲ್ಲದಂತೆ ಮಾಡುವ ನೀತಿಗಳತ್ತಲೆ ಅವರ ಚಿತ್ತ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...