Homeಮುಖಪುಟಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

ಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

- Advertisement -
- Advertisement -

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲಿಗೆ ಹೋಗಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಬೆನ್ನಲ್ಲೇ, ಇದರ ಕುರಿತು ವಿವರಗಳನ್ನು ನೀಡಬೇಕು ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಮನವಿ ಸಲ್ಲಿಸಲಾಗಿದೆ. ಮೋದಿಯವರ ಈ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ನಗೆಪಾಟಲಿಗೀಡಾಗಿತ್ತು. ಜೊತೆಗೆ ಕಟು ವಿಮರ್ಶೆಗೆ ಒಳಗಾಗಿತ್ತು.

ಬಾಂಗ್ಲಾದೇಶದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ನರೇಂದ್ರ ಮೋದಿ, “ಬಾಂಗ್ಲಾದೇಶ ವಿಮೋಚನೆಯ ಸಂದರ್ಭದ ಸ್ವಾತಂತ್ರ್ಯ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ. ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮವು ನನ್ನ ಜೀವನದ ಪ್ರಯಾಣದಲ್ಲಿ ಒಂದು ಮಹತ್ವದ ಕ್ಷಣವಾಗಿತ್ತು. ನನ್ನ ಸಹೋದ್ಯೋಗಿಗಳು ಮತ್ತು ನಾನು ಭಾರತದಲ್ಲಿ ಸತ್ಯಾಗ್ರಹ ಮಾಡಿದ್ದೆವು. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಸತ್ಯಾಗ್ರಹದ ಸಮಯದಲ್ಲಿ ಜೈಲಿಗೆ ಹೋಗಲು ನನಗೆ ಅವಕಾಶ ಸಿಕ್ಕಿತು” ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಟ್ವಿಟರ್‌ನಲ್ಲಿ #lielikemodi ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್‌ ಆಗಿತ್ತು. ಈ ವರದಿ ಬರೆಯುವ ವೇಳೆಗೆ 2 ಲಕ್ಷಕ್ಕೂ ಹೆಚ್ಚು ಜನ ಈ ಹ್ಯಾಶ್‌ಟ್ಯಾಗ್ ಬಳಸಿ ಮೋದಿಯ ಕಾಲೆಳೆದಿದ್ದರು.

ಈಗ ಮೋದಿ ಹೇಳಿಕೆಯ ಕುರಿತು ಆರ್‌ಟಿಐ ಅಡಿಯಲ್ಲಿ ಮಾಹಿತಿಯನ್ನು ಕೋರಲಾಗಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಅಲಹಾಬಾದ್ ಹೈಕೋರ್ಟಿನ ವಕೀಲರಾದ ಕೃಷ್ಣ ಮೋಹನ್ ಪಾಂಡೆ ಎಂಬುವವರು ಈ ಕೆಳಗಿನ ಮಾಹಿತಿಗಳನ್ನು ಕೋರಿದ್ದಾರೆ. “ಪ್ರಧಾನಿ ಮೋದಿಯವರು ಬಾಂಗ್ಲಾದೇಶದ ಭೇಟಿಯ ಸಂದರ್ಭದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಕೆಲವು ಮಾಹಿತಿಗಳನ್ನು ನೀಡಬೇಕು” ಎಂದು ಅರ್ಜಿ ಸಲ್ಲಿಸಿದ್ದಾರೆ.

  1. ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ಯಾವ ಕಾನೂನಿನ ಅಡಿಯಲ್ಲಿ ಪ್ರಧಾನಿಯವರನ್ನು ಬಂಧಿಸಲಾಗಿತ್ತು. ಅದರ ಎಫ್‌ಐಆರ್ ನಕಲನ್ನು ಒದಗಿಸಿ.
  2. ಪ್ರಧಾನಿ ನರೇಂದ್ರ ಮೋದಿಯವರನ್ನು ಬಂಧಿಸಿ ಭಾರತದ ಯಾವ ಜೈಲಿನಲ್ಲಿಡಲಾಗಿತ್ತು?
  3. ಪ್ರಧಾನಿ ಮೋದಿಯವರು ಎಷ್ಟುದಿನ ಜೈಲಿನಲ್ಲಿದ್ದರು?

ಈ ಮೆಲಿನ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ವಕೀಲರು ಮಾಹಿತಿ ಹಕ್ಕಿನಡಿ ಮನವಿ ಸಲ್ಲಿಸಿದ್ದಾರೆ.

ಇದೇ ರೀತಿ ಕಾಂಗ್ರೆಸ್‌ನ ವಕ್ತಾರರಾದ ಸರಳ್ ಪಟೇಲ್ ಪ್ರಧಾನಮಂತ್ರಿ ಕಛೇರಿಯಿಂದಲೇ ಮಾಹಿತಿ ಕೋರಿದ್ದಾರೆ.

  1. ಪ್ರಧಾನಿ ಮೋದಿಯವರು ಹೇಳಿರುವಂತೆ, ಅವರ ಬಂಧನದ ವಿವರಗಳು ಮತ್ತು ನಿರ್ದಿಷ್ಟ ದಿನಾಂಕದ ಮಾಹಿತಿ ಒದಗಿಸಿ.
  2. ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ಯಾವ ಕಾನೂನಿನ ಅಡಿಯಲ್ಲಿ ಪ್ರಧಾನಿಯವರನ್ನು ಬಂಧಿಸಲಾಗಿತ್ತು. ಅದರ ಎಫ್‌ಐಆರ್ ನಕಲನ್ನು ಒದಗಿಸಿ. ಮತ್ತು ಇದನ್ನು ಬೆಂಬಲಿಸುವ ಇತರೆ ದಾಖಲೆಗಳನ್ನು ಒದಗಿಸಿ.
  3. ಪ್ರಧಾನಿ ನರೇಂದ್ರ ಮೋದಿಯವರನ್ನು ಬಂಧಿಸಿ ಭಾರತದ ಯಾವ ಜೈಲಿನಲ್ಲಿಡಲಾಗಿತ್ತು?
  4. ಪ್ರಧಾನಿಯವರ ಹೇಳಿಕೆಗೆ ಸಂಬಂಧಿಸಿದ ಎಲ್ಲಾ ದಾಖಲೆ ಮತ್ತು ಕಡತಗಳನ್ನು ಒದಗಿಸಿ.

ಎಂದು ಪ್ರಧಾನಮಂತ್ರಿ ಕಛೇರಿಯಲ್ಲಿ ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...