Homeಮುಖಪುಟಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

ಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

- Advertisement -
- Advertisement -

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲಿಗೆ ಹೋಗಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಬೆನ್ನಲ್ಲೇ, ಇದರ ಕುರಿತು ವಿವರಗಳನ್ನು ನೀಡಬೇಕು ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಮನವಿ ಸಲ್ಲಿಸಲಾಗಿದೆ. ಮೋದಿಯವರ ಈ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ನಗೆಪಾಟಲಿಗೀಡಾಗಿತ್ತು. ಜೊತೆಗೆ ಕಟು ವಿಮರ್ಶೆಗೆ ಒಳಗಾಗಿತ್ತು.

ಬಾಂಗ್ಲಾದೇಶದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ನರೇಂದ್ರ ಮೋದಿ, “ಬಾಂಗ್ಲಾದೇಶ ವಿಮೋಚನೆಯ ಸಂದರ್ಭದ ಸ್ವಾತಂತ್ರ್ಯ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ. ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮವು ನನ್ನ ಜೀವನದ ಪ್ರಯಾಣದಲ್ಲಿ ಒಂದು ಮಹತ್ವದ ಕ್ಷಣವಾಗಿತ್ತು. ನನ್ನ ಸಹೋದ್ಯೋಗಿಗಳು ಮತ್ತು ನಾನು ಭಾರತದಲ್ಲಿ ಸತ್ಯಾಗ್ರಹ ಮಾಡಿದ್ದೆವು. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಸತ್ಯಾಗ್ರಹದ ಸಮಯದಲ್ಲಿ ಜೈಲಿಗೆ ಹೋಗಲು ನನಗೆ ಅವಕಾಶ ಸಿಕ್ಕಿತು” ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಟ್ವಿಟರ್‌ನಲ್ಲಿ #lielikemodi ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್‌ ಆಗಿತ್ತು. ಈ ವರದಿ ಬರೆಯುವ ವೇಳೆಗೆ 2 ಲಕ್ಷಕ್ಕೂ ಹೆಚ್ಚು ಜನ ಈ ಹ್ಯಾಶ್‌ಟ್ಯಾಗ್ ಬಳಸಿ ಮೋದಿಯ ಕಾಲೆಳೆದಿದ್ದರು.

ಈಗ ಮೋದಿ ಹೇಳಿಕೆಯ ಕುರಿತು ಆರ್‌ಟಿಐ ಅಡಿಯಲ್ಲಿ ಮಾಹಿತಿಯನ್ನು ಕೋರಲಾಗಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಅಲಹಾಬಾದ್ ಹೈಕೋರ್ಟಿನ ವಕೀಲರಾದ ಕೃಷ್ಣ ಮೋಹನ್ ಪಾಂಡೆ ಎಂಬುವವರು ಈ ಕೆಳಗಿನ ಮಾಹಿತಿಗಳನ್ನು ಕೋರಿದ್ದಾರೆ. “ಪ್ರಧಾನಿ ಮೋದಿಯವರು ಬಾಂಗ್ಲಾದೇಶದ ಭೇಟಿಯ ಸಂದರ್ಭದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಕೆಲವು ಮಾಹಿತಿಗಳನ್ನು ನೀಡಬೇಕು” ಎಂದು ಅರ್ಜಿ ಸಲ್ಲಿಸಿದ್ದಾರೆ.

  1. ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ಯಾವ ಕಾನೂನಿನ ಅಡಿಯಲ್ಲಿ ಪ್ರಧಾನಿಯವರನ್ನು ಬಂಧಿಸಲಾಗಿತ್ತು. ಅದರ ಎಫ್‌ಐಆರ್ ನಕಲನ್ನು ಒದಗಿಸಿ.
  2. ಪ್ರಧಾನಿ ನರೇಂದ್ರ ಮೋದಿಯವರನ್ನು ಬಂಧಿಸಿ ಭಾರತದ ಯಾವ ಜೈಲಿನಲ್ಲಿಡಲಾಗಿತ್ತು?
  3. ಪ್ರಧಾನಿ ಮೋದಿಯವರು ಎಷ್ಟುದಿನ ಜೈಲಿನಲ್ಲಿದ್ದರು?

ಈ ಮೆಲಿನ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ವಕೀಲರು ಮಾಹಿತಿ ಹಕ್ಕಿನಡಿ ಮನವಿ ಸಲ್ಲಿಸಿದ್ದಾರೆ.

ಇದೇ ರೀತಿ ಕಾಂಗ್ರೆಸ್‌ನ ವಕ್ತಾರರಾದ ಸರಳ್ ಪಟೇಲ್ ಪ್ರಧಾನಮಂತ್ರಿ ಕಛೇರಿಯಿಂದಲೇ ಮಾಹಿತಿ ಕೋರಿದ್ದಾರೆ.

  1. ಪ್ರಧಾನಿ ಮೋದಿಯವರು ಹೇಳಿರುವಂತೆ, ಅವರ ಬಂಧನದ ವಿವರಗಳು ಮತ್ತು ನಿರ್ದಿಷ್ಟ ದಿನಾಂಕದ ಮಾಹಿತಿ ಒದಗಿಸಿ.
  2. ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ಯಾವ ಕಾನೂನಿನ ಅಡಿಯಲ್ಲಿ ಪ್ರಧಾನಿಯವರನ್ನು ಬಂಧಿಸಲಾಗಿತ್ತು. ಅದರ ಎಫ್‌ಐಆರ್ ನಕಲನ್ನು ಒದಗಿಸಿ. ಮತ್ತು ಇದನ್ನು ಬೆಂಬಲಿಸುವ ಇತರೆ ದಾಖಲೆಗಳನ್ನು ಒದಗಿಸಿ.
  3. ಪ್ರಧಾನಿ ನರೇಂದ್ರ ಮೋದಿಯವರನ್ನು ಬಂಧಿಸಿ ಭಾರತದ ಯಾವ ಜೈಲಿನಲ್ಲಿಡಲಾಗಿತ್ತು?
  4. ಪ್ರಧಾನಿಯವರ ಹೇಳಿಕೆಗೆ ಸಂಬಂಧಿಸಿದ ಎಲ್ಲಾ ದಾಖಲೆ ಮತ್ತು ಕಡತಗಳನ್ನು ಒದಗಿಸಿ.

ಎಂದು ಪ್ರಧಾನಮಂತ್ರಿ ಕಛೇರಿಯಲ್ಲಿ ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....