Homeಮುಖಪುಟಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿರುವುದು ವಿಶೇಷವಾಗಿದೆ.

- Advertisement -
- Advertisement -

ಡಿಸೆಂಬರ್‌ 1 ರಂದು ನಡೆಯಲಿರುವ ಹೈದರಾಬಾದ್ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ.‌ ಇತ್ತೀಚೆಗೆ ತಮಿಳುನಾಡು, ಮಹರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣದಲ್ಲಿ ಉಂಟಾಗಿದ್ದ ಭಾರಿ ಪ್ರವಾಹದ ಸಂದರ್ಭದಲ್ಲಿ ಎಲ್ಲಿಯೂ ಕಾಣದ, ಅವುಗಳ ಬಗ್ಗೆ ತುಟಿಪಿಟಿಕ್ ಎನ್ನದ ಬಿಜೆಪಿ ನೇತೃತ್ವದ ಕೇಂದ್ರದ ನಾಯಕರು ಇದೀಗ ಕೇವಲ ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಸಮಯ ಹೊಂದಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನವೆಂಬರ್ 28 ರಂದು ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದರ ಮರುದಿನವೇ ಗೃಹ ಸಚಿವ ಅಮಿತ್​ ಶಾ ಸಹ ರೋಡ್​ ಶೋ ನಡೆಸಲಿದ್ದಾರೆ ಎಂಬ ಮಾಹಿತಿಯಿದೆ. ನವೆಂಬರ್​ 28 ರಂದು ಪ್ರಧಾನಿ ಮೋದಿ ಸಹ ಭಾರತ್ ಬಯೋಟೆಕ್​ ಭೇಟಿಗಾಗಿ ಹೈದ್ರಾಬಾದ್​ಗೆ ಆಗಮಿಸಲಿದ್ದು, ಅವರೂ ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ! 

ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಿದ್ದಾರೆ. ಬಿಜೆಪಿಯ ಮಹಿಳಾ ವಿಭಾಗದ ಅಧ್ಯಕ್ಷ ವನತಿ ಶ್ರೀನಿವಾಸನ್ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಕಂದರಾಬಾದ್‌ನ ಲೋಕಸಭಾ ಸದಸ್ಯ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈಗಾಗಲೇ ಬಿಜೆಪಿಗೆ ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ನೆರೆ ಬಂದಾಗ ಕಾಣದಿದ್ದ ಇವರೆಲ್ಲರೂ ಈ ಮೂಲಕ ಅಧಿಕಾರ ಮಾತ್ರವೆ ತಮ್ಮ ಆದ್ಯತೆ, ಉತ್ತಮ ಆಡಳಿತವಲ್ಲ ಎಂದು ಪದೇ ಪದೇ ನಿರೂಪಿಸುತ್ತಿದ್ದಾರೆ. ನಿಜಕ್ಕೂ ಇದರ ಹಿಂದಿನ ಮರ್ಮವೇನು? ಒಂದು ಪಾಲಿಕೆಗೆ ಬಿಜೆಪಿ ಈ ರೀತಿಯ ಸಮಯ ಹೊಂದಿಸಿಕೊಳ್ಳುತ್ತಿರುವುದೇಕೆ?

ಜಿನ್ನಾ

ಈಗಾಗಲೆ ಚುನಾವಣೆಯ ಸುದ್ದಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಅದಲ್ಲದೆ ಹೈದರಾಬಾದ್‌ನಲ್ಲಿ ಹಿಡಿತವಿರುವ ಅಸಾದುದ್ದೀನ್ ಒವೈಸಿ ಅವರನ್ನು ಬಿಜೆಪಿ ಹಿಂದೂ ವಿರೋಧಿ ಎಂಬಂತೆ ಬಿಂಬಿಸುವಲ್ಲಿ ಯಶಸ್ವಿಯಾಗಿದೆ. ಹಾಗಾಗಿ ಈ ಚುನಾವಣೆಯ ನಂತರ ತಮಿಳುನಾಡು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದನ್ನು ಬಳಸಿಕೊಂಡು ಬಿಜೆಪಿ ತಮ್ಮ ಮತದಾರರನ್ನು ಸೆಳೆಯುತ್ತಿದೆ ಎಂಬ ಅನುಮಾನ ಕೂಡಾ ಕಾಡುತ್ತಿದೆ.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಈ ಅನುಮಾನವನ್ನು ಗಟ್ಟಿಗೊಳಿಸುವಂತೆ ಸಂಸದ ತೇಜಸ್ವಿ ಸೂರ್ಯ, ಒವೈಸಿಯನ್ನು ’ಜಿನ್ನಾ ಅವತಾರ’ ಎಂದಿದ್ದು, ರೋಹಿಂಗ್ಯ ವಿಚಾರವನ್ನು ಮುನ್ನಲೆಗೆ ತಂದಿರುವುದು, ಒವೈಸಿಗೆ ಮತ ಹಾಕಿ ಹೈದರಾಬಾದ್‌‌ನಲ್ಲಿ ಗೆದ್ದರೆ ಅವರು ಭಾರತದ ಇತರ ರಾಜ್ಯಗಳ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಗೆಲ್ಲುತ್ತಾರೆಂದು ಹೇಳುತ್ತಾ ಒಂದು ವರ್ಗದಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಇವುಗಳನ್ನು ರಾಷ್ಟ್ರೀಯ ಮಾಧ್ಯಮಗಳು ಕೂಡಾ ನಿಯ್ಯತ್ತಿನಿಂದ ವರದಿ ಮಾಡುತ್ತಿದೆ. ತೆಲಂಗಾಣದ ಪಾಲಿಕೆಯೊಂದರ ಚುನಾವಣೆಯನ್ನು ರಾಷ್ಟ್ರೀಯ ಸುದ್ದಿಯನ್ನಾಗಿ ಮಾಡಿ ಮತದಾರರನ್ನು ದ್ರುವಿಕರಣ ಮಾಡುತ್ತಿದ್ದಾರೆ. ಈ ಚುನಾವಣೆಯನ್ನು ಹಿಂದೂ-ಮುಸ್ಲಿಂ ಹೋರಾಟ ಎನ್ನುವ ಮಟ್ಟಿಗೆ ಬಿಜೆಪಿ ಪ್ರಚಾರ ಮಾಡುತ್ತಿದೆ. ಹಾಗಾಗಿಯೆ ತೇಜಸ್ವಿ ಬಿಜೆಪಿಗೆ ನೀಡುವ ಮತ ಹಿಂದುತ್ವಕ್ಕೆ ನೀಡುವ ಮತ ಎಂದು ಒತ್ತಿ ಹೇಳುತ್ತಿರುವುದು.

ಹಾಗೆ ನೋಡಿದರೆ ಬಿಜೆಪಿಯು 150 ಸದಸ್ಯ ಬಲವಿರುವ ಹೈದರಾಬಾದ್ ಪಾಲಿಕೆಯ 2016 ರ ಚುನಾವಣೆಯಲ್ಲಿ ಕೇವಲ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. 2018 ರಲ್ಲಿ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಪಡೆದಿತ್ತು. ಒಟ್ಟಿನಲ್ಲಿ ಬಿಜೆಪಿಯವರಿಂದ ಹಿಂದೂ ವಿರೋಧಿ ಎಂದು ಕರೆಯಲ್ಪಡುತ್ತಿರುವ ಒವೈಸಿಯನ್ನು ಜಾಸ್ತಿ ಮಾತಾಡಿಸಿ, ಹೈದರಾಬಾದ್ ಪಾಲಿಕೆಯ ನೆಪದಲ್ಲಿ ಹಿಂದೂ ಮತಗಳನ್ನು ದ್ರುವೀಕರಣ ಮಾಡುತ್ತಾ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಕಡೆ ಮುಖ ಮಾಡುತ್ತಿದೆ. ಅದಕ್ಕೆಂದೆ ತಿಂಗಳ ಹಿಂದೆಯಷ್ಟೇ ನೆರೆ ಬಂದು ಮುಳುಗಿದ್ದ ಹೈದರಾಬಾದ್‌ ಬಗ್ಗೆ ತಲೆಕೆಡಿಸಿ ಕೊಳ್ಳದ ಬಿಜೆಪಿಯ ನಾಯಕರು ಈಗ ಆದ್ಯತೆಯ ಮೇಲೆ ಭೇಟಿ ನೀಡುತ್ತಿದ್ದಾರೆ, ಅದೂ ಯಕಶ್ಚಿತ್‌ ಪಾಲಿಕೆಯೊಂದರ ಚುನಾವಣೆಗೆ!

ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...