Homeಮುಖಪುಟಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿರುವುದು ವಿಶೇಷವಾಗಿದೆ.

- Advertisement -
- Advertisement -

ಡಿಸೆಂಬರ್‌ 1 ರಂದು ನಡೆಯಲಿರುವ ಹೈದರಾಬಾದ್ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ.‌ ಇತ್ತೀಚೆಗೆ ತಮಿಳುನಾಡು, ಮಹರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣದಲ್ಲಿ ಉಂಟಾಗಿದ್ದ ಭಾರಿ ಪ್ರವಾಹದ ಸಂದರ್ಭದಲ್ಲಿ ಎಲ್ಲಿಯೂ ಕಾಣದ, ಅವುಗಳ ಬಗ್ಗೆ ತುಟಿಪಿಟಿಕ್ ಎನ್ನದ ಬಿಜೆಪಿ ನೇತೃತ್ವದ ಕೇಂದ್ರದ ನಾಯಕರು ಇದೀಗ ಕೇವಲ ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಸಮಯ ಹೊಂದಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನವೆಂಬರ್ 28 ರಂದು ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದರ ಮರುದಿನವೇ ಗೃಹ ಸಚಿವ ಅಮಿತ್​ ಶಾ ಸಹ ರೋಡ್​ ಶೋ ನಡೆಸಲಿದ್ದಾರೆ ಎಂಬ ಮಾಹಿತಿಯಿದೆ. ನವೆಂಬರ್​ 28 ರಂದು ಪ್ರಧಾನಿ ಮೋದಿ ಸಹ ಭಾರತ್ ಬಯೋಟೆಕ್​ ಭೇಟಿಗಾಗಿ ಹೈದ್ರಾಬಾದ್​ಗೆ ಆಗಮಿಸಲಿದ್ದು, ಅವರೂ ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ! 

ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಿದ್ದಾರೆ. ಬಿಜೆಪಿಯ ಮಹಿಳಾ ವಿಭಾಗದ ಅಧ್ಯಕ್ಷ ವನತಿ ಶ್ರೀನಿವಾಸನ್ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಕಂದರಾಬಾದ್‌ನ ಲೋಕಸಭಾ ಸದಸ್ಯ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈಗಾಗಲೇ ಬಿಜೆಪಿಗೆ ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ನೆರೆ ಬಂದಾಗ ಕಾಣದಿದ್ದ ಇವರೆಲ್ಲರೂ ಈ ಮೂಲಕ ಅಧಿಕಾರ ಮಾತ್ರವೆ ತಮ್ಮ ಆದ್ಯತೆ, ಉತ್ತಮ ಆಡಳಿತವಲ್ಲ ಎಂದು ಪದೇ ಪದೇ ನಿರೂಪಿಸುತ್ತಿದ್ದಾರೆ. ನಿಜಕ್ಕೂ ಇದರ ಹಿಂದಿನ ಮರ್ಮವೇನು? ಒಂದು ಪಾಲಿಕೆಗೆ ಬಿಜೆಪಿ ಈ ರೀತಿಯ ಸಮಯ ಹೊಂದಿಸಿಕೊಳ್ಳುತ್ತಿರುವುದೇಕೆ?

ಜಿನ್ನಾ

ಈಗಾಗಲೆ ಚುನಾವಣೆಯ ಸುದ್ದಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಅದಲ್ಲದೆ ಹೈದರಾಬಾದ್‌ನಲ್ಲಿ ಹಿಡಿತವಿರುವ ಅಸಾದುದ್ದೀನ್ ಒವೈಸಿ ಅವರನ್ನು ಬಿಜೆಪಿ ಹಿಂದೂ ವಿರೋಧಿ ಎಂಬಂತೆ ಬಿಂಬಿಸುವಲ್ಲಿ ಯಶಸ್ವಿಯಾಗಿದೆ. ಹಾಗಾಗಿ ಈ ಚುನಾವಣೆಯ ನಂತರ ತಮಿಳುನಾಡು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದನ್ನು ಬಳಸಿಕೊಂಡು ಬಿಜೆಪಿ ತಮ್ಮ ಮತದಾರರನ್ನು ಸೆಳೆಯುತ್ತಿದೆ ಎಂಬ ಅನುಮಾನ ಕೂಡಾ ಕಾಡುತ್ತಿದೆ.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಈ ಅನುಮಾನವನ್ನು ಗಟ್ಟಿಗೊಳಿಸುವಂತೆ ಸಂಸದ ತೇಜಸ್ವಿ ಸೂರ್ಯ, ಒವೈಸಿಯನ್ನು ’ಜಿನ್ನಾ ಅವತಾರ’ ಎಂದಿದ್ದು, ರೋಹಿಂಗ್ಯ ವಿಚಾರವನ್ನು ಮುನ್ನಲೆಗೆ ತಂದಿರುವುದು, ಒವೈಸಿಗೆ ಮತ ಹಾಕಿ ಹೈದರಾಬಾದ್‌‌ನಲ್ಲಿ ಗೆದ್ದರೆ ಅವರು ಭಾರತದ ಇತರ ರಾಜ್ಯಗಳ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಗೆಲ್ಲುತ್ತಾರೆಂದು ಹೇಳುತ್ತಾ ಒಂದು ವರ್ಗದಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಇವುಗಳನ್ನು ರಾಷ್ಟ್ರೀಯ ಮಾಧ್ಯಮಗಳು ಕೂಡಾ ನಿಯ್ಯತ್ತಿನಿಂದ ವರದಿ ಮಾಡುತ್ತಿದೆ. ತೆಲಂಗಾಣದ ಪಾಲಿಕೆಯೊಂದರ ಚುನಾವಣೆಯನ್ನು ರಾಷ್ಟ್ರೀಯ ಸುದ್ದಿಯನ್ನಾಗಿ ಮಾಡಿ ಮತದಾರರನ್ನು ದ್ರುವಿಕರಣ ಮಾಡುತ್ತಿದ್ದಾರೆ. ಈ ಚುನಾವಣೆಯನ್ನು ಹಿಂದೂ-ಮುಸ್ಲಿಂ ಹೋರಾಟ ಎನ್ನುವ ಮಟ್ಟಿಗೆ ಬಿಜೆಪಿ ಪ್ರಚಾರ ಮಾಡುತ್ತಿದೆ. ಹಾಗಾಗಿಯೆ ತೇಜಸ್ವಿ ಬಿಜೆಪಿಗೆ ನೀಡುವ ಮತ ಹಿಂದುತ್ವಕ್ಕೆ ನೀಡುವ ಮತ ಎಂದು ಒತ್ತಿ ಹೇಳುತ್ತಿರುವುದು.

ಹಾಗೆ ನೋಡಿದರೆ ಬಿಜೆಪಿಯು 150 ಸದಸ್ಯ ಬಲವಿರುವ ಹೈದರಾಬಾದ್ ಪಾಲಿಕೆಯ 2016 ರ ಚುನಾವಣೆಯಲ್ಲಿ ಕೇವಲ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. 2018 ರಲ್ಲಿ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಪಡೆದಿತ್ತು. ಒಟ್ಟಿನಲ್ಲಿ ಬಿಜೆಪಿಯವರಿಂದ ಹಿಂದೂ ವಿರೋಧಿ ಎಂದು ಕರೆಯಲ್ಪಡುತ್ತಿರುವ ಒವೈಸಿಯನ್ನು ಜಾಸ್ತಿ ಮಾತಾಡಿಸಿ, ಹೈದರಾಬಾದ್ ಪಾಲಿಕೆಯ ನೆಪದಲ್ಲಿ ಹಿಂದೂ ಮತಗಳನ್ನು ದ್ರುವೀಕರಣ ಮಾಡುತ್ತಾ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಕಡೆ ಮುಖ ಮಾಡುತ್ತಿದೆ. ಅದಕ್ಕೆಂದೆ ತಿಂಗಳ ಹಿಂದೆಯಷ್ಟೇ ನೆರೆ ಬಂದು ಮುಳುಗಿದ್ದ ಹೈದರಾಬಾದ್‌ ಬಗ್ಗೆ ತಲೆಕೆಡಿಸಿ ಕೊಳ್ಳದ ಬಿಜೆಪಿಯ ನಾಯಕರು ಈಗ ಆದ್ಯತೆಯ ಮೇಲೆ ಭೇಟಿ ನೀಡುತ್ತಿದ್ದಾರೆ, ಅದೂ ಯಕಶ್ಚಿತ್‌ ಪಾಲಿಕೆಯೊಂದರ ಚುನಾವಣೆಗೆ!

ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...