Homeಮುಖಪುಟಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿರುವುದು ವಿಶೇಷವಾಗಿದೆ.

- Advertisement -
- Advertisement -

ಡಿಸೆಂಬರ್‌ 1 ರಂದು ನಡೆಯಲಿರುವ ಹೈದರಾಬಾದ್ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ.‌ ಇತ್ತೀಚೆಗೆ ತಮಿಳುನಾಡು, ಮಹರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣದಲ್ಲಿ ಉಂಟಾಗಿದ್ದ ಭಾರಿ ಪ್ರವಾಹದ ಸಂದರ್ಭದಲ್ಲಿ ಎಲ್ಲಿಯೂ ಕಾಣದ, ಅವುಗಳ ಬಗ್ಗೆ ತುಟಿಪಿಟಿಕ್ ಎನ್ನದ ಬಿಜೆಪಿ ನೇತೃತ್ವದ ಕೇಂದ್ರದ ನಾಯಕರು ಇದೀಗ ಕೇವಲ ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಸಮಯ ಹೊಂದಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನವೆಂಬರ್ 28 ರಂದು ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದರ ಮರುದಿನವೇ ಗೃಹ ಸಚಿವ ಅಮಿತ್​ ಶಾ ಸಹ ರೋಡ್​ ಶೋ ನಡೆಸಲಿದ್ದಾರೆ ಎಂಬ ಮಾಹಿತಿಯಿದೆ. ನವೆಂಬರ್​ 28 ರಂದು ಪ್ರಧಾನಿ ಮೋದಿ ಸಹ ಭಾರತ್ ಬಯೋಟೆಕ್​ ಭೇಟಿಗಾಗಿ ಹೈದ್ರಾಬಾದ್​ಗೆ ಆಗಮಿಸಲಿದ್ದು, ಅವರೂ ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ! 

ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಿದ್ದಾರೆ. ಬಿಜೆಪಿಯ ಮಹಿಳಾ ವಿಭಾಗದ ಅಧ್ಯಕ್ಷ ವನತಿ ಶ್ರೀನಿವಾಸನ್ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಕಂದರಾಬಾದ್‌ನ ಲೋಕಸಭಾ ಸದಸ್ಯ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈಗಾಗಲೇ ಬಿಜೆಪಿಗೆ ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ನೆರೆ ಬಂದಾಗ ಕಾಣದಿದ್ದ ಇವರೆಲ್ಲರೂ ಈ ಮೂಲಕ ಅಧಿಕಾರ ಮಾತ್ರವೆ ತಮ್ಮ ಆದ್ಯತೆ, ಉತ್ತಮ ಆಡಳಿತವಲ್ಲ ಎಂದು ಪದೇ ಪದೇ ನಿರೂಪಿಸುತ್ತಿದ್ದಾರೆ. ನಿಜಕ್ಕೂ ಇದರ ಹಿಂದಿನ ಮರ್ಮವೇನು? ಒಂದು ಪಾಲಿಕೆಗೆ ಬಿಜೆಪಿ ಈ ರೀತಿಯ ಸಮಯ ಹೊಂದಿಸಿಕೊಳ್ಳುತ್ತಿರುವುದೇಕೆ?

ಜಿನ್ನಾ

ಈಗಾಗಲೆ ಚುನಾವಣೆಯ ಸುದ್ದಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಅದಲ್ಲದೆ ಹೈದರಾಬಾದ್‌ನಲ್ಲಿ ಹಿಡಿತವಿರುವ ಅಸಾದುದ್ದೀನ್ ಒವೈಸಿ ಅವರನ್ನು ಬಿಜೆಪಿ ಹಿಂದೂ ವಿರೋಧಿ ಎಂಬಂತೆ ಬಿಂಬಿಸುವಲ್ಲಿ ಯಶಸ್ವಿಯಾಗಿದೆ. ಹಾಗಾಗಿ ಈ ಚುನಾವಣೆಯ ನಂತರ ತಮಿಳುನಾಡು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದನ್ನು ಬಳಸಿಕೊಂಡು ಬಿಜೆಪಿ ತಮ್ಮ ಮತದಾರರನ್ನು ಸೆಳೆಯುತ್ತಿದೆ ಎಂಬ ಅನುಮಾನ ಕೂಡಾ ಕಾಡುತ್ತಿದೆ.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಈ ಅನುಮಾನವನ್ನು ಗಟ್ಟಿಗೊಳಿಸುವಂತೆ ಸಂಸದ ತೇಜಸ್ವಿ ಸೂರ್ಯ, ಒವೈಸಿಯನ್ನು ’ಜಿನ್ನಾ ಅವತಾರ’ ಎಂದಿದ್ದು, ರೋಹಿಂಗ್ಯ ವಿಚಾರವನ್ನು ಮುನ್ನಲೆಗೆ ತಂದಿರುವುದು, ಒವೈಸಿಗೆ ಮತ ಹಾಕಿ ಹೈದರಾಬಾದ್‌‌ನಲ್ಲಿ ಗೆದ್ದರೆ ಅವರು ಭಾರತದ ಇತರ ರಾಜ್ಯಗಳ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಗೆಲ್ಲುತ್ತಾರೆಂದು ಹೇಳುತ್ತಾ ಒಂದು ವರ್ಗದಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಇವುಗಳನ್ನು ರಾಷ್ಟ್ರೀಯ ಮಾಧ್ಯಮಗಳು ಕೂಡಾ ನಿಯ್ಯತ್ತಿನಿಂದ ವರದಿ ಮಾಡುತ್ತಿದೆ. ತೆಲಂಗಾಣದ ಪಾಲಿಕೆಯೊಂದರ ಚುನಾವಣೆಯನ್ನು ರಾಷ್ಟ್ರೀಯ ಸುದ್ದಿಯನ್ನಾಗಿ ಮಾಡಿ ಮತದಾರರನ್ನು ದ್ರುವಿಕರಣ ಮಾಡುತ್ತಿದ್ದಾರೆ. ಈ ಚುನಾವಣೆಯನ್ನು ಹಿಂದೂ-ಮುಸ್ಲಿಂ ಹೋರಾಟ ಎನ್ನುವ ಮಟ್ಟಿಗೆ ಬಿಜೆಪಿ ಪ್ರಚಾರ ಮಾಡುತ್ತಿದೆ. ಹಾಗಾಗಿಯೆ ತೇಜಸ್ವಿ ಬಿಜೆಪಿಗೆ ನೀಡುವ ಮತ ಹಿಂದುತ್ವಕ್ಕೆ ನೀಡುವ ಮತ ಎಂದು ಒತ್ತಿ ಹೇಳುತ್ತಿರುವುದು.

ಹಾಗೆ ನೋಡಿದರೆ ಬಿಜೆಪಿಯು 150 ಸದಸ್ಯ ಬಲವಿರುವ ಹೈದರಾಬಾದ್ ಪಾಲಿಕೆಯ 2016 ರ ಚುನಾವಣೆಯಲ್ಲಿ ಕೇವಲ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. 2018 ರಲ್ಲಿ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಪಡೆದಿತ್ತು. ಒಟ್ಟಿನಲ್ಲಿ ಬಿಜೆಪಿಯವರಿಂದ ಹಿಂದೂ ವಿರೋಧಿ ಎಂದು ಕರೆಯಲ್ಪಡುತ್ತಿರುವ ಒವೈಸಿಯನ್ನು ಜಾಸ್ತಿ ಮಾತಾಡಿಸಿ, ಹೈದರಾಬಾದ್ ಪಾಲಿಕೆಯ ನೆಪದಲ್ಲಿ ಹಿಂದೂ ಮತಗಳನ್ನು ದ್ರುವೀಕರಣ ಮಾಡುತ್ತಾ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಕಡೆ ಮುಖ ಮಾಡುತ್ತಿದೆ. ಅದಕ್ಕೆಂದೆ ತಿಂಗಳ ಹಿಂದೆಯಷ್ಟೇ ನೆರೆ ಬಂದು ಮುಳುಗಿದ್ದ ಹೈದರಾಬಾದ್‌ ಬಗ್ಗೆ ತಲೆಕೆಡಿಸಿ ಕೊಳ್ಳದ ಬಿಜೆಪಿಯ ನಾಯಕರು ಈಗ ಆದ್ಯತೆಯ ಮೇಲೆ ಭೇಟಿ ನೀಡುತ್ತಿದ್ದಾರೆ, ಅದೂ ಯಕಶ್ಚಿತ್‌ ಪಾಲಿಕೆಯೊಂದರ ಚುನಾವಣೆಗೆ!

ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...