Homeಮುಖಪುಟಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿರುವುದು ವಿಶೇಷವಾಗಿದೆ.

- Advertisement -
- Advertisement -

ಡಿಸೆಂಬರ್‌ 1 ರಂದು ನಡೆಯಲಿರುವ ಹೈದರಾಬಾದ್ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಾದಿಯಾಗಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಆಗಮಿಸುತ್ತಿದ್ದಾರೆ.‌ ಇತ್ತೀಚೆಗೆ ತಮಿಳುನಾಡು, ಮಹರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣದಲ್ಲಿ ಉಂಟಾಗಿದ್ದ ಭಾರಿ ಪ್ರವಾಹದ ಸಂದರ್ಭದಲ್ಲಿ ಎಲ್ಲಿಯೂ ಕಾಣದ, ಅವುಗಳ ಬಗ್ಗೆ ತುಟಿಪಿಟಿಕ್ ಎನ್ನದ ಬಿಜೆಪಿ ನೇತೃತ್ವದ ಕೇಂದ್ರದ ನಾಯಕರು ಇದೀಗ ಕೇವಲ ಪಾಲಿಕೆಯೊಂದರ ಚುನಾವಣಾ ಪ್ರಚಾರಕ್ಕೆ ಸಮಯ ಹೊಂದಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನವೆಂಬರ್ 28 ರಂದು ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದರ ಮರುದಿನವೇ ಗೃಹ ಸಚಿವ ಅಮಿತ್​ ಶಾ ಸಹ ರೋಡ್​ ಶೋ ನಡೆಸಲಿದ್ದಾರೆ ಎಂಬ ಮಾಹಿತಿಯಿದೆ. ನವೆಂಬರ್​ 28 ರಂದು ಪ್ರಧಾನಿ ಮೋದಿ ಸಹ ಭಾರತ್ ಬಯೋಟೆಕ್​ ಭೇಟಿಗಾಗಿ ಹೈದ್ರಾಬಾದ್​ಗೆ ಆಗಮಿಸಲಿದ್ದು, ಅವರೂ ಸಹ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ! 

ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಿದ್ದಾರೆ. ಬಿಜೆಪಿಯ ಮಹಿಳಾ ವಿಭಾಗದ ಅಧ್ಯಕ್ಷ ವನತಿ ಶ್ರೀನಿವಾಸನ್ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಕಂದರಾಬಾದ್‌ನ ಲೋಕಸಭಾ ಸದಸ್ಯ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಈಗಾಗಲೇ ಬಿಜೆಪಿಗೆ ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ನೆರೆ ಬಂದಾಗ ಕಾಣದಿದ್ದ ಇವರೆಲ್ಲರೂ ಈ ಮೂಲಕ ಅಧಿಕಾರ ಮಾತ್ರವೆ ತಮ್ಮ ಆದ್ಯತೆ, ಉತ್ತಮ ಆಡಳಿತವಲ್ಲ ಎಂದು ಪದೇ ಪದೇ ನಿರೂಪಿಸುತ್ತಿದ್ದಾರೆ. ನಿಜಕ್ಕೂ ಇದರ ಹಿಂದಿನ ಮರ್ಮವೇನು? ಒಂದು ಪಾಲಿಕೆಗೆ ಬಿಜೆಪಿ ಈ ರೀತಿಯ ಸಮಯ ಹೊಂದಿಸಿಕೊಳ್ಳುತ್ತಿರುವುದೇಕೆ?

ಜಿನ್ನಾ

ಈಗಾಗಲೆ ಚುನಾವಣೆಯ ಸುದ್ದಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಅದಲ್ಲದೆ ಹೈದರಾಬಾದ್‌ನಲ್ಲಿ ಹಿಡಿತವಿರುವ ಅಸಾದುದ್ದೀನ್ ಒವೈಸಿ ಅವರನ್ನು ಬಿಜೆಪಿ ಹಿಂದೂ ವಿರೋಧಿ ಎಂಬಂತೆ ಬಿಂಬಿಸುವಲ್ಲಿ ಯಶಸ್ವಿಯಾಗಿದೆ. ಹಾಗಾಗಿ ಈ ಚುನಾವಣೆಯ ನಂತರ ತಮಿಳುನಾಡು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದನ್ನು ಬಳಸಿಕೊಂಡು ಬಿಜೆಪಿ ತಮ್ಮ ಮತದಾರರನ್ನು ಸೆಳೆಯುತ್ತಿದೆ ಎಂಬ ಅನುಮಾನ ಕೂಡಾ ಕಾಡುತ್ತಿದೆ.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಈ ಅನುಮಾನವನ್ನು ಗಟ್ಟಿಗೊಳಿಸುವಂತೆ ಸಂಸದ ತೇಜಸ್ವಿ ಸೂರ್ಯ, ಒವೈಸಿಯನ್ನು ’ಜಿನ್ನಾ ಅವತಾರ’ ಎಂದಿದ್ದು, ರೋಹಿಂಗ್ಯ ವಿಚಾರವನ್ನು ಮುನ್ನಲೆಗೆ ತಂದಿರುವುದು, ಒವೈಸಿಗೆ ಮತ ಹಾಕಿ ಹೈದರಾಬಾದ್‌‌ನಲ್ಲಿ ಗೆದ್ದರೆ ಅವರು ಭಾರತದ ಇತರ ರಾಜ್ಯಗಳ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಗೆಲ್ಲುತ್ತಾರೆಂದು ಹೇಳುತ್ತಾ ಒಂದು ವರ್ಗದಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಇವುಗಳನ್ನು ರಾಷ್ಟ್ರೀಯ ಮಾಧ್ಯಮಗಳು ಕೂಡಾ ನಿಯ್ಯತ್ತಿನಿಂದ ವರದಿ ಮಾಡುತ್ತಿದೆ. ತೆಲಂಗಾಣದ ಪಾಲಿಕೆಯೊಂದರ ಚುನಾವಣೆಯನ್ನು ರಾಷ್ಟ್ರೀಯ ಸುದ್ದಿಯನ್ನಾಗಿ ಮಾಡಿ ಮತದಾರರನ್ನು ದ್ರುವಿಕರಣ ಮಾಡುತ್ತಿದ್ದಾರೆ. ಈ ಚುನಾವಣೆಯನ್ನು ಹಿಂದೂ-ಮುಸ್ಲಿಂ ಹೋರಾಟ ಎನ್ನುವ ಮಟ್ಟಿಗೆ ಬಿಜೆಪಿ ಪ್ರಚಾರ ಮಾಡುತ್ತಿದೆ. ಹಾಗಾಗಿಯೆ ತೇಜಸ್ವಿ ಬಿಜೆಪಿಗೆ ನೀಡುವ ಮತ ಹಿಂದುತ್ವಕ್ಕೆ ನೀಡುವ ಮತ ಎಂದು ಒತ್ತಿ ಹೇಳುತ್ತಿರುವುದು.

ಹಾಗೆ ನೋಡಿದರೆ ಬಿಜೆಪಿಯು 150 ಸದಸ್ಯ ಬಲವಿರುವ ಹೈದರಾಬಾದ್ ಪಾಲಿಕೆಯ 2016 ರ ಚುನಾವಣೆಯಲ್ಲಿ ಕೇವಲ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. 2018 ರಲ್ಲಿ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಪಡೆದಿತ್ತು. ಒಟ್ಟಿನಲ್ಲಿ ಬಿಜೆಪಿಯವರಿಂದ ಹಿಂದೂ ವಿರೋಧಿ ಎಂದು ಕರೆಯಲ್ಪಡುತ್ತಿರುವ ಒವೈಸಿಯನ್ನು ಜಾಸ್ತಿ ಮಾತಾಡಿಸಿ, ಹೈದರಾಬಾದ್ ಪಾಲಿಕೆಯ ನೆಪದಲ್ಲಿ ಹಿಂದೂ ಮತಗಳನ್ನು ದ್ರುವೀಕರಣ ಮಾಡುತ್ತಾ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಕಡೆ ಮುಖ ಮಾಡುತ್ತಿದೆ. ಅದಕ್ಕೆಂದೆ ತಿಂಗಳ ಹಿಂದೆಯಷ್ಟೇ ನೆರೆ ಬಂದು ಮುಳುಗಿದ್ದ ಹೈದರಾಬಾದ್‌ ಬಗ್ಗೆ ತಲೆಕೆಡಿಸಿ ಕೊಳ್ಳದ ಬಿಜೆಪಿಯ ನಾಯಕರು ಈಗ ಆದ್ಯತೆಯ ಮೇಲೆ ಭೇಟಿ ನೀಡುತ್ತಿದ್ದಾರೆ, ಅದೂ ಯಕಶ್ಚಿತ್‌ ಪಾಲಿಕೆಯೊಂದರ ಚುನಾವಣೆಗೆ!

ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....