Homeಅಂಕಣಗಳುಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?

ಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?

- Advertisement -
- Advertisement -

ಸಂಘರ್ಷಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ, ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಭೇಟಿಯನ್ನು ಕೇವಲ ಒಂದು ತೋರಿಕೆಯ ಕಸರತ್ತು ಎಂದು ಟೀಕಿಸಿದರೆ, ಸರ್ಕಾರ ಇದನ್ನು ಅಭಿವೃದ್ಧಿಯ ಮೂಲಕ ಜನರ ನೋವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೈಗೊಂಡ ಕ್ರಮ ಎಂದು ಹೇಳಿಕೊಂಡಿದೆ.

ರಾಜ್ಯದ ಕುಕಿ ಪ್ರಾಬಲ್ಯವಿರುವ ಚುರಾಚಂದ್ಪುರ ಜಿಲ್ಲೆಯಲ್ಲಿ ತಮ್ಮ ಭಾಷಣದ ವೇಳೆ, ಮೋದಿ ಅವರು ಕೇಂದ್ರವು ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಬಲಪಡಿಸಲು ಶ್ರಮಿಸುತ್ತಿದೆ ಮತ್ತು ಅವುಗಳ ಅಭಿವೃದ್ಧಿಗಾಗಿ ಸೂಕ್ತ ನಿಧಿಗಳನ್ನು ಒದಗಿಸಲಾಗುವುದು ಎಂದು ಮಣಿಪುರ ಜನತೆಗೆ ಒತ್ತಿ ಹೇಳಿದ್ದರು. ಇದನ್ನು ಅಲ್ಲಿನ ಜನತೆ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಇನ್ನಷ್ಟೇ ಕಾದು ನೋಡಬೇಕಿದೆ.

ರಾಜ್ಯವನ್ನುಶಾಂತಿ ಮತ್ತು ಸಮೃದ್ಧಿಯ ಸಂಕೇತವಾಗಿ ಪರಿವರ್ತಿಸುವ ಭರವಸೆ ನೀಡಿದ ಮೋದಿ, ಎಲ್ಲಾ ಗುಂಪುಗಳು ಹಿಂಸೆಯನ್ನು ತ್ಯಜಿಸಬೇಕೆಂದು ಕರೆ ನೀಡಿದರು ಮತ್ತು ಸಂಘರ್ಷದಿಂದ ನಲುಗಿರುವ ಜನರ ಜೀವನವನ್ನು ಪುನರ್ನಿರ್ಮಿಸಲು ಕೇಂದ್ರವು ಅವರೊಂದಿಗೆ ದೃಢವಾಗಿ ನಿಂತಿದೆ ಎಂದು ಭರವಸೆ ನೀಡಿದರು. ಪ್ರಧಾನಿಯ ಈ ಭರವಸೆಯನ್ನು ಅಲ್ಲಿನ ಬಂಡುಕೋರ ಗುಂಪುಗಳು ಸಕಾರಾತ್ಮಕವಾಗಿ ಸ್ವೀಕರಿಸಿಲ್ಲ ಎಂಬುದು ತಿಳಿಯುತ್ತದೆ. ಹೇಗೆಂದರೆ ಮೋದಿ ಭೇಟಿಯ ಎರಡು ದಿನದ ನಂತರ ಕುಕಿ ಬಂಡುಕೋರ ಗುಂಪುಗಳು ರಾಷ್ಟ್ರೀಯ ಹೆದ್ದಾರಿ ಮುಕ್ತ ಸಂಚಾರಕ್ಕೆ ಮುಕ್ತವಾಗಿಲ್ಲ ಎಂದು ಹೇಳಿಕೆ ನೀಡಿದವು.

ಇಂದು, ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ, ಕೇಂದ್ರವು ನಿಮ್ಮೊಂದಿಗಿದೆ. ಎಲ್ಲಾ ಗುಂಪುಗಳು ಮತ್ತು ಸಂಘಟನೆಗಳು ಶಾಂತಿಯ ಹಾದಿಯನ್ನು ಅನುಸರಿಸಬೇಕೆಂದು ನಾನು ಕರೆ ನೀಡುತ್ತೇನೆ,” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ವಿವಿಧ ಗುಂಪುಗಳು ಸಂವಾದಕ್ಕೆ ಮುಂದಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, “ಸಂವಾದ, ಗೌರವ ಮತ್ತು ಪರಸ್ಪರ ತಿಳುವಳಿಕೆ ಮೇಲೆ ಕೇಂದ್ರವು ಯಾವಾಗಲೂ ಒತ್ತು ನೀಡುತ್ತದೆ ಎಂದು ತಿಳಿಸಿದರು. ಆದರೆ, ಅವರು ನಿರ್ಗಮಿಸಿದ 24 ಗಂಟೆಗಳ ಒಳಗೆ, ರಾಜ್ಯದಲ್ಲಿ ಹಿಂಸಾತ್ಮಕ ಘರ್ಷಣೆಗಳು ಮತ್ತೆ ಭುಗಿಲೆದ್ದವು ಮತ್ತು ಚುರಾಚಂದ್ಪುರದಲ್ಲಿ ಕುಕಿ ನಾಯಕರ ಮನೆಗಳನ್ನು ಧ್ವಂಸಗೊಳಿಸಲಾಯಿತು.

ಮೋದಿ ಅವರ ಭೇಟಿಗೆ ಮುನ್ನ, ಸೆಪ್ಟೆಂಬರ್ 4ರಂದು ಕೇಂದ್ರ, ಮಣಿಪುರ ಸರ್ಕಾರ ಮತ್ತು ಕುಕಿ ಗುಂಪುಗಳ ನಡುವೆ ಮಾತುಕತೆ ನಡೆದಿತ್ತು, ಅಲ್ಲಿ ಶಾಂತಿ ಒಪ್ಪಂದವನ್ನು ಒಂದು ವರ್ಷದವರೆಗೆ ವಿಸ್ತರಿಸಲು ನಿರ್ಧರಿಸಲಾಯಿತು. ಮಾತುಕತೆಗಳ ನಂತರ ಬಿಡುಗಡೆಯಾದ ಅಧಿಕೃತ ಹೇಳಿಕೆಯು, ಕುಕಿಜೋ ಕೌನ್ಸಿಲ್ (KZC) ಪ್ರಮುಖ ಹೆದ್ದಾರಿ NH-2 ಅನ್ನು ಪ್ರಯಾಣಿಕರು ಮತ್ತು ಅಗತ್ಯ ವಸ್ತುಗಳ ಮುಕ್ತ ಸಂಚಾರಕ್ಕಾಗಿ ಪುನಃ ತೆರೆಯಲು ನಿರ್ಧರಿಸಿದೆ ಎಂದು ತಿಳಿಸಿತು. ಆದರೆ ಇತರೆ 6 ಕುಕಿ ಬಂಡುಕೋರ ಗುಂಪುಗಳು ಇದಕ್ಕೆ ತದ್ವಿರುದ್ದ ಹೇಳಿಕೆ ನೀಡಿದವು. ರಾಷ್ಟ್ರೀಯ ಹೆದ್ದಾರಿಯು ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವುದಿಲ್ಲವೆಂದು ಹೇಳಿದವು.

ಆದರೆ, ಶಾಂತಿ ಒಪ್ಪಂದ ವಿಸ್ತರಣೆಗೆ ಸಹಿ ಹಾಕಿದ್ದ ಕುಕಿ ಗುಂಪುಗಳು, ಅಧಿಕೃತ ಹೇಳಿಕೆಯನ್ನು ತಪ್ಪಾಗಿ ರೂಪಿಸಲಾಗಿದೆ ಮತ್ತು ಹೆದ್ದಾರಿಯ ಉದ್ದಕ್ಕೂ ಶಾಂತಿಯನ್ನು ಕಾಪಾಡಲು ಭದ್ರತಾ ಪಡೆಗಳಿಂದ ಕೇವಲ ಸಹಕಾರ ಕೋರಲಾಗಿದೆ ಎಂದು ಹೇಳಿದವು. ಹೆದ್ದಾರಿ ಮಣಿಪುರ ಮತ್ತು ನೆರೆಯ ನಾಗಾಲ್ಯಾಂಡ್ ಎರಡಕ್ಕೂ ಜೀವನಾಡಿಯಾಗಿದೆ.

ಹೆದ್ದಾರಿಗಳನ್ನು ತೆರೆಯುವುದು ಕೇಂದ್ರದ ಅಧಿಕಾರವಾಗಿದೆ ಮತ್ತು ಮೊದಲನೆಯದಾಗಿ, ಇದು ಎಂದಿಗೂ ಸಂಚಾರಕ್ಕೆ ಮುಚ್ಚಿರಲಿಲ್ಲ ಮತ್ತು ಪ್ರಯಾಣಿಕರು ಪ್ರತಿದಿನ ಅದನ್ನು ಬಳಸುತ್ತಿದ್ದಾರೆ ಎಂದು ಕುಕಿ ಗುಂಪುಗಳು ಹೇಳಿದವು.

ಮತ್ತೊಂದೆಡೆ, ಮೈತೇಯಿಗಳು ಕುಕಿಗಳ ಹಕ್ಕನ್ನು ವಿರೋಧಿಸಿ, ಮಣಿಪುರದಲ್ಲಿ ಮೇ 2023ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಪ್ರಶ್ನಾರ್ಹ NH ಅನ್ನು ಬಳಸಲು ತಮ್ಮ ಸಮುದಾಯಕ್ಕೆ ಕುಕಿ ಗುಂಪುಗಳು ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ಆದರೆ, ಪ್ರಮುಖ ಪ್ರಶ್ನೆ ಏನೆಂದರೆ, ಎರಡೂ ಸಂಘರ್ಷನಿರತ ಸಮುದಾಯಗಳ ನಡುವಿನ ಆಳವಾದ ಅಪನಂಬಿಕೆ ಹಾಗೆಯೇ ಉಳಿದಿದೆ ಮತ್ತು ರಾಜ್ಯಕ್ಕೆ ಮೋದಿ ಅವರ ಭೇಟಿ ಜನರ ನಡುವೆ ಪರಸ್ಪರ ಸಮನ್ವಯದ ಯಾವುದೇ ಸಣ್ಣ ಹೆಜ್ಜೆಗಳಿಗೂ ಕಾರಣವಾಗಿಲ್ಲ.

ಸಾಮಾಜಿಕ ವಿಭಜನೆಯು ಎಷ್ಟೊಂದು ಆಳವಾಗಿದೆ ಎಂದರೆ, ಹಲವಾರು ಬಿಜೆಪಿ ಶಾಸಕರು, ಮುಖ್ಯವಾಗಿ ಕುಕಿಗಳು ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಶಾಂತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ವಿನಂತಿಸಿದರು. ಮಣಿಪುರದ ಕುಕಿಪ್ರಾಬಲ್ಯವಿರುವ ಪ್ರದೇಶಗಳಿಗೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನು ಸಹ ಅವರು ಒತ್ತಾಯಿಸಿದರು.

ಬಿಜೆಪಿ ಮತ್ತು ಇತರ ರಾಜಕೀಯ ಘಟಕಗಳ ಶಾಸಕರು ಸಹಿ ಮಾಡಿದ ಮನವಿ ಪತ್ರವು, ಅದರ ಉದ್ದೇಶವನ್ನು ಹೆಚ್ಚು ಸ್ಪಷ್ಟವಾಗಿ ಹೇಳಿದೆ: “ನಾವು ಈಗ ಕೇವಲ ಒಳ್ಳೆಯ ನೆರೆಹೊರೆಯವರಾಗಿ ಶಾಂತಿಯಿಂದ ಬದುಕಬಹುದು, ಎಂದಿಗೂ ಒಂದೇ ಸೂರಿನಡಿ ಇರಲು ಸಾಧ್ಯವಿಲ್ಲ.”

ಮತ್ತೊಂದೆಡೆ, ಕುಕಿ ಬಂಡುಕೋರರ ಗುಂಪುಗಳೊಂದಿಗೆ ಶಾಂತಿ ಒಪ್ಪಂದವನ್ನು ಒಂದು ವರ್ಷದವರೆಗೆ ವಿಸ್ತರಿಸಲು ಕೇಂದ್ರವು ನಿರ್ಧರಿಸಿರುವುದರಿಂದ ಬಹುಸಂಖ್ಯಾತ ಮೈತೇಯಿಗಳು ಅಸಮಾಧಾನಗೊಂಡಿದ್ದಾರೆ. ಇದರರ್ಥ, ಬಂಡುಕೋರರು ತಮ್ಮ ನಿರ್ದಿಷ್ಟ ಶಿಬಿರಗಳಿಗೆ ಹಿಂತಿರುಗುತ್ತಾರೆ, ಮತ್ತು ಶಿಬಿರಗಳನ್ನು ಮೈತೇಯಿ ಪ್ರಾಬಲ್ಯವಿರುವ ಪ್ರದೇಶಗಳಿಂದ ದೂರಕ್ಕೆ ಸ್ಥಳಾಂತರಿಸಲಾಗುವುದು.

ಇದು ಕುಕಿ ಬಂಡುಕೋರ ಗುಂಪುಗಳಿಗೆ ಅಕ್ರಮ ಗಸಗಸೆ ತೋಟಗಳನ್ನು ಬೆಳೆಸಲು ಮತ್ತುತಮ್ಮ ಶಿಬಿರಗಳಲ್ಲಿ ಇದ್ದುಕೊಂಡೇಹಿಂಸಾಚಾರದಲ್ಲಿ ತೊಡಗಲು ಹೆಚ್ಚಿನ ಸ್ವಾತಂತ್ರ್ಯ ನೀಡುತ್ತದೆ ಎಂದು ಬಹುಸಂಖ್ಯಾತ ಮೈತೇಯಿ ಹೇಳಿಕೊಂಡಿದ್ದಾರೆ.

ಒಂದೇ ರಾಜ್ಯದಲ್ಲಿ ವಾಸಿಸುತ್ತಿರುವ ಜನರ ನಡುವೆ ಇನ್ನೂ ಅಪನಂಬಿಕೆ ಮತ್ತು ವಿಶ್ವಾಸದ ಕೊರತೆ ಇರುವ ಕಾರಣ, ಪ್ರಧಾನಮಂತ್ರಿಯು ಜನರ ನಡುವೆ ವಿಶ್ವಾಸ ಮೂಡಿಸಲು ಹೆಚ್ಚು ಸಕ್ರಿಯವಾದ ವಿಧಾನವನ್ನು ಅಳವಡಿಸಿಕೊಳ್ಳಬೇಕಾಗಿದೆ. ಜನರು ಇನ್ನೂ ಎರಡು ವರ್ಷಗಳ ಕಾಲ ನಡೆದ ಜನಾಂಗೀಯ ಸಂಘರ್ಷದಿಂದಾಗಿ ಉಂಟಾದ ನೋವಿನಿಂದ ಹೊರಬಂದಿಲ್ಲ.

ಮೂಲ: ಅನಿಮೇಶ್ ಸಿಂಗ್, ದಿ ಟ್ರಿಬ್ಯೂನ್

ನೇಪಾಳದ ದಂಗೆ ಮತ್ತು ಪಾಕಿಸ್ತಾನದ ಪಾಠಗಳು: ದಕ್ಷಿಣ ಏಷ್ಯಾದಲ್ಲಿ ಯುವ ಶಕ್ತಿಯನ್ನು ಹೇಗೆ ಸಮರ್ಥವಾಗಿ ನಿರ್ವಹಿಸುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...