Homeಅಂಕಣಗಳುಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?

ಮಣಿಪುರದಲ್ಲಿ ಪ್ರಧಾನಮಂತ್ರಿ: ರಾಜಕೀಯವೋ ಅಥವಾ ಶಾಂತಿಯೋ?

- Advertisement -
- Advertisement -

ಸಂಘರ್ಷಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ, ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಭೇಟಿಯನ್ನು ಕೇವಲ ಒಂದು ತೋರಿಕೆಯ ಕಸರತ್ತು ಎಂದು ಟೀಕಿಸಿದರೆ, ಸರ್ಕಾರ ಇದನ್ನು ಅಭಿವೃದ್ಧಿಯ ಮೂಲಕ ಜನರ ನೋವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೈಗೊಂಡ ಕ್ರಮ ಎಂದು ಹೇಳಿಕೊಂಡಿದೆ.

ರಾಜ್ಯದ ಕುಕಿ ಪ್ರಾಬಲ್ಯವಿರುವ ಚುರಾಚಂದ್ಪುರ ಜಿಲ್ಲೆಯಲ್ಲಿ ತಮ್ಮ ಭಾಷಣದ ವೇಳೆ, ಮೋದಿ ಅವರು ಕೇಂದ್ರವು ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಬಲಪಡಿಸಲು ಶ್ರಮಿಸುತ್ತಿದೆ ಮತ್ತು ಅವುಗಳ ಅಭಿವೃದ್ಧಿಗಾಗಿ ಸೂಕ್ತ ನಿಧಿಗಳನ್ನು ಒದಗಿಸಲಾಗುವುದು ಎಂದು ಮಣಿಪುರ ಜನತೆಗೆ ಒತ್ತಿ ಹೇಳಿದ್ದರು. ಇದನ್ನು ಅಲ್ಲಿನ ಜನತೆ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಇನ್ನಷ್ಟೇ ಕಾದು ನೋಡಬೇಕಿದೆ.

ರಾಜ್ಯವನ್ನುಶಾಂತಿ ಮತ್ತು ಸಮೃದ್ಧಿಯ ಸಂಕೇತವಾಗಿ ಪರಿವರ್ತಿಸುವ ಭರವಸೆ ನೀಡಿದ ಮೋದಿ, ಎಲ್ಲಾ ಗುಂಪುಗಳು ಹಿಂಸೆಯನ್ನು ತ್ಯಜಿಸಬೇಕೆಂದು ಕರೆ ನೀಡಿದರು ಮತ್ತು ಸಂಘರ್ಷದಿಂದ ನಲುಗಿರುವ ಜನರ ಜೀವನವನ್ನು ಪುನರ್ನಿರ್ಮಿಸಲು ಕೇಂದ್ರವು ಅವರೊಂದಿಗೆ ದೃಢವಾಗಿ ನಿಂತಿದೆ ಎಂದು ಭರವಸೆ ನೀಡಿದರು. ಪ್ರಧಾನಿಯ ಈ ಭರವಸೆಯನ್ನು ಅಲ್ಲಿನ ಬಂಡುಕೋರ ಗುಂಪುಗಳು ಸಕಾರಾತ್ಮಕವಾಗಿ ಸ್ವೀಕರಿಸಿಲ್ಲ ಎಂಬುದು ತಿಳಿಯುತ್ತದೆ. ಹೇಗೆಂದರೆ ಮೋದಿ ಭೇಟಿಯ ಎರಡು ದಿನದ ನಂತರ ಕುಕಿ ಬಂಡುಕೋರ ಗುಂಪುಗಳು ರಾಷ್ಟ್ರೀಯ ಹೆದ್ದಾರಿ ಮುಕ್ತ ಸಂಚಾರಕ್ಕೆ ಮುಕ್ತವಾಗಿಲ್ಲ ಎಂದು ಹೇಳಿಕೆ ನೀಡಿದವು.

ಇಂದು, ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ, ಕೇಂದ್ರವು ನಿಮ್ಮೊಂದಿಗಿದೆ. ಎಲ್ಲಾ ಗುಂಪುಗಳು ಮತ್ತು ಸಂಘಟನೆಗಳು ಶಾಂತಿಯ ಹಾದಿಯನ್ನು ಅನುಸರಿಸಬೇಕೆಂದು ನಾನು ಕರೆ ನೀಡುತ್ತೇನೆ,” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ವಿವಿಧ ಗುಂಪುಗಳು ಸಂವಾದಕ್ಕೆ ಮುಂದಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, “ಸಂವಾದ, ಗೌರವ ಮತ್ತು ಪರಸ್ಪರ ತಿಳುವಳಿಕೆ ಮೇಲೆ ಕೇಂದ್ರವು ಯಾವಾಗಲೂ ಒತ್ತು ನೀಡುತ್ತದೆ ಎಂದು ತಿಳಿಸಿದರು. ಆದರೆ, ಅವರು ನಿರ್ಗಮಿಸಿದ 24 ಗಂಟೆಗಳ ಒಳಗೆ, ರಾಜ್ಯದಲ್ಲಿ ಹಿಂಸಾತ್ಮಕ ಘರ್ಷಣೆಗಳು ಮತ್ತೆ ಭುಗಿಲೆದ್ದವು ಮತ್ತು ಚುರಾಚಂದ್ಪುರದಲ್ಲಿ ಕುಕಿ ನಾಯಕರ ಮನೆಗಳನ್ನು ಧ್ವಂಸಗೊಳಿಸಲಾಯಿತು.

ಮೋದಿ ಅವರ ಭೇಟಿಗೆ ಮುನ್ನ, ಸೆಪ್ಟೆಂಬರ್ 4ರಂದು ಕೇಂದ್ರ, ಮಣಿಪುರ ಸರ್ಕಾರ ಮತ್ತು ಕುಕಿ ಗುಂಪುಗಳ ನಡುವೆ ಮಾತುಕತೆ ನಡೆದಿತ್ತು, ಅಲ್ಲಿ ಶಾಂತಿ ಒಪ್ಪಂದವನ್ನು ಒಂದು ವರ್ಷದವರೆಗೆ ವಿಸ್ತರಿಸಲು ನಿರ್ಧರಿಸಲಾಯಿತು. ಮಾತುಕತೆಗಳ ನಂತರ ಬಿಡುಗಡೆಯಾದ ಅಧಿಕೃತ ಹೇಳಿಕೆಯು, ಕುಕಿಜೋ ಕೌನ್ಸಿಲ್ (KZC) ಪ್ರಮುಖ ಹೆದ್ದಾರಿ NH-2 ಅನ್ನು ಪ್ರಯಾಣಿಕರು ಮತ್ತು ಅಗತ್ಯ ವಸ್ತುಗಳ ಮುಕ್ತ ಸಂಚಾರಕ್ಕಾಗಿ ಪುನಃ ತೆರೆಯಲು ನಿರ್ಧರಿಸಿದೆ ಎಂದು ತಿಳಿಸಿತು. ಆದರೆ ಇತರೆ 6 ಕುಕಿ ಬಂಡುಕೋರ ಗುಂಪುಗಳು ಇದಕ್ಕೆ ತದ್ವಿರುದ್ದ ಹೇಳಿಕೆ ನೀಡಿದವು. ರಾಷ್ಟ್ರೀಯ ಹೆದ್ದಾರಿಯು ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವುದಿಲ್ಲವೆಂದು ಹೇಳಿದವು.

ಆದರೆ, ಶಾಂತಿ ಒಪ್ಪಂದ ವಿಸ್ತರಣೆಗೆ ಸಹಿ ಹಾಕಿದ್ದ ಕುಕಿ ಗುಂಪುಗಳು, ಅಧಿಕೃತ ಹೇಳಿಕೆಯನ್ನು ತಪ್ಪಾಗಿ ರೂಪಿಸಲಾಗಿದೆ ಮತ್ತು ಹೆದ್ದಾರಿಯ ಉದ್ದಕ್ಕೂ ಶಾಂತಿಯನ್ನು ಕಾಪಾಡಲು ಭದ್ರತಾ ಪಡೆಗಳಿಂದ ಕೇವಲ ಸಹಕಾರ ಕೋರಲಾಗಿದೆ ಎಂದು ಹೇಳಿದವು. ಹೆದ್ದಾರಿ ಮಣಿಪುರ ಮತ್ತು ನೆರೆಯ ನಾಗಾಲ್ಯಾಂಡ್ ಎರಡಕ್ಕೂ ಜೀವನಾಡಿಯಾಗಿದೆ.

ಹೆದ್ದಾರಿಗಳನ್ನು ತೆರೆಯುವುದು ಕೇಂದ್ರದ ಅಧಿಕಾರವಾಗಿದೆ ಮತ್ತು ಮೊದಲನೆಯದಾಗಿ, ಇದು ಎಂದಿಗೂ ಸಂಚಾರಕ್ಕೆ ಮುಚ್ಚಿರಲಿಲ್ಲ ಮತ್ತು ಪ್ರಯಾಣಿಕರು ಪ್ರತಿದಿನ ಅದನ್ನು ಬಳಸುತ್ತಿದ್ದಾರೆ ಎಂದು ಕುಕಿ ಗುಂಪುಗಳು ಹೇಳಿದವು.

ಮತ್ತೊಂದೆಡೆ, ಮೈತೇಯಿಗಳು ಕುಕಿಗಳ ಹಕ್ಕನ್ನು ವಿರೋಧಿಸಿ, ಮಣಿಪುರದಲ್ಲಿ ಮೇ 2023ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಪ್ರಶ್ನಾರ್ಹ NH ಅನ್ನು ಬಳಸಲು ತಮ್ಮ ಸಮುದಾಯಕ್ಕೆ ಕುಕಿ ಗುಂಪುಗಳು ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ಆದರೆ, ಪ್ರಮುಖ ಪ್ರಶ್ನೆ ಏನೆಂದರೆ, ಎರಡೂ ಸಂಘರ್ಷನಿರತ ಸಮುದಾಯಗಳ ನಡುವಿನ ಆಳವಾದ ಅಪನಂಬಿಕೆ ಹಾಗೆಯೇ ಉಳಿದಿದೆ ಮತ್ತು ರಾಜ್ಯಕ್ಕೆ ಮೋದಿ ಅವರ ಭೇಟಿ ಜನರ ನಡುವೆ ಪರಸ್ಪರ ಸಮನ್ವಯದ ಯಾವುದೇ ಸಣ್ಣ ಹೆಜ್ಜೆಗಳಿಗೂ ಕಾರಣವಾಗಿಲ್ಲ.

ಸಾಮಾಜಿಕ ವಿಭಜನೆಯು ಎಷ್ಟೊಂದು ಆಳವಾಗಿದೆ ಎಂದರೆ, ಹಲವಾರು ಬಿಜೆಪಿ ಶಾಸಕರು, ಮುಖ್ಯವಾಗಿ ಕುಕಿಗಳು ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಶಾಂತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ವಿನಂತಿಸಿದರು. ಮಣಿಪುರದ ಕುಕಿಪ್ರಾಬಲ್ಯವಿರುವ ಪ್ರದೇಶಗಳಿಗೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನು ಸಹ ಅವರು ಒತ್ತಾಯಿಸಿದರು.

ಬಿಜೆಪಿ ಮತ್ತು ಇತರ ರಾಜಕೀಯ ಘಟಕಗಳ ಶಾಸಕರು ಸಹಿ ಮಾಡಿದ ಮನವಿ ಪತ್ರವು, ಅದರ ಉದ್ದೇಶವನ್ನು ಹೆಚ್ಚು ಸ್ಪಷ್ಟವಾಗಿ ಹೇಳಿದೆ: “ನಾವು ಈಗ ಕೇವಲ ಒಳ್ಳೆಯ ನೆರೆಹೊರೆಯವರಾಗಿ ಶಾಂತಿಯಿಂದ ಬದುಕಬಹುದು, ಎಂದಿಗೂ ಒಂದೇ ಸೂರಿನಡಿ ಇರಲು ಸಾಧ್ಯವಿಲ್ಲ.”

ಮತ್ತೊಂದೆಡೆ, ಕುಕಿ ಬಂಡುಕೋರರ ಗುಂಪುಗಳೊಂದಿಗೆ ಶಾಂತಿ ಒಪ್ಪಂದವನ್ನು ಒಂದು ವರ್ಷದವರೆಗೆ ವಿಸ್ತರಿಸಲು ಕೇಂದ್ರವು ನಿರ್ಧರಿಸಿರುವುದರಿಂದ ಬಹುಸಂಖ್ಯಾತ ಮೈತೇಯಿಗಳು ಅಸಮಾಧಾನಗೊಂಡಿದ್ದಾರೆ. ಇದರರ್ಥ, ಬಂಡುಕೋರರು ತಮ್ಮ ನಿರ್ದಿಷ್ಟ ಶಿಬಿರಗಳಿಗೆ ಹಿಂತಿರುಗುತ್ತಾರೆ, ಮತ್ತು ಶಿಬಿರಗಳನ್ನು ಮೈತೇಯಿ ಪ್ರಾಬಲ್ಯವಿರುವ ಪ್ರದೇಶಗಳಿಂದ ದೂರಕ್ಕೆ ಸ್ಥಳಾಂತರಿಸಲಾಗುವುದು.

ಇದು ಕುಕಿ ಬಂಡುಕೋರ ಗುಂಪುಗಳಿಗೆ ಅಕ್ರಮ ಗಸಗಸೆ ತೋಟಗಳನ್ನು ಬೆಳೆಸಲು ಮತ್ತುತಮ್ಮ ಶಿಬಿರಗಳಲ್ಲಿ ಇದ್ದುಕೊಂಡೇಹಿಂಸಾಚಾರದಲ್ಲಿ ತೊಡಗಲು ಹೆಚ್ಚಿನ ಸ್ವಾತಂತ್ರ್ಯ ನೀಡುತ್ತದೆ ಎಂದು ಬಹುಸಂಖ್ಯಾತ ಮೈತೇಯಿ ಹೇಳಿಕೊಂಡಿದ್ದಾರೆ.

ಒಂದೇ ರಾಜ್ಯದಲ್ಲಿ ವಾಸಿಸುತ್ತಿರುವ ಜನರ ನಡುವೆ ಇನ್ನೂ ಅಪನಂಬಿಕೆ ಮತ್ತು ವಿಶ್ವಾಸದ ಕೊರತೆ ಇರುವ ಕಾರಣ, ಪ್ರಧಾನಮಂತ್ರಿಯು ಜನರ ನಡುವೆ ವಿಶ್ವಾಸ ಮೂಡಿಸಲು ಹೆಚ್ಚು ಸಕ್ರಿಯವಾದ ವಿಧಾನವನ್ನು ಅಳವಡಿಸಿಕೊಳ್ಳಬೇಕಾಗಿದೆ. ಜನರು ಇನ್ನೂ ಎರಡು ವರ್ಷಗಳ ಕಾಲ ನಡೆದ ಜನಾಂಗೀಯ ಸಂಘರ್ಷದಿಂದಾಗಿ ಉಂಟಾದ ನೋವಿನಿಂದ ಹೊರಬಂದಿಲ್ಲ.

ಮೂಲ: ಅನಿಮೇಶ್ ಸಿಂಗ್, ದಿ ಟ್ರಿಬ್ಯೂನ್

ನೇಪಾಳದ ದಂಗೆ ಮತ್ತು ಪಾಕಿಸ್ತಾನದ ಪಾಠಗಳು: ದಕ್ಷಿಣ ಏಷ್ಯಾದಲ್ಲಿ ಯುವ ಶಕ್ತಿಯನ್ನು ಹೇಗೆ ಸಮರ್ಥವಾಗಿ ನಿರ್ವಹಿಸುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...