Homeಮುಖಪುಟಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ.

- Advertisement -
- Advertisement -

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಆರನೇ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ ಕೇವಲ ಮೂರು-ನಾಲ್ಕು ಕಂತಿನ ಹಣ ಮಾತ್ರ ಕೆಲ ರೈತರ ಖಾತೆಗೆ ನೇರ ವರ್ಗಾವಣೆಯಾಗಿದೆ ಎಂದು ರೈತರು ದೂರುತ್ತಿದ್ದಾರೆ. ಈ ಕುರಿತು ಹಲವು ರೈತರನ್ನು ಮಾತನಾಡಿಸಿದಾಗ ಎಲ್ಲಾ ದಾಖಲೆ ಸಲ್ಲಿಸಿದ್ದರೂ ಕೇವಲ 2 ಬಾರಿ ಹಣ ಬಂದಿದ್ದು ನಂತರ ಬಂದಿಲ್ಲ ಎಂದು ಕೆಲವು ರೈತರು ಹೇಳಿದ್ದಾರೆ.

ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯ ಮಹಾತ್ವಾಕಾಂಕ್ಷೆಯ ಯೋಜನೆ ಎನ್ನಲಾಗಿದ್ದು, ಲೋಕಸಭಾ ಚುನಾವಣಾ ಪೂರ್ವದಲ್ಲಿ ಈ ಯೋಜನೆ ಘೋಷಣೆ ಮಾಡಲಾಗಿತ್ತು. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಜನವರಿ 2, 2019 ರಂದು ನಡೆದ ಬೃಹತ್ ರೈತರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರಿ ಮೋದಿ ಮೊದಲ ಕಂತು ಬಿಡುಗಡೆ ಮಾಡಿದ್ದರು. ಬಟನ್ ಒತ್ತುವ ಮೂಲಕ ಫಲನುಭವಿ ರೈತರ ಖಾತೆಗೆ ಹಣ ಜಮಾವಣೆ ಮಾಡಿದ್ದರು. ಆರಂಭದಲ್ಲಿ ಎಲ್ಲರಿಗೂ ಹಣ ಜಮೆಗೊಂಡಿತಾದರೂ ನಂತರ ಹಣ ಬರಲೇ ಇಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ವಾರ್ಷಿಕ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ರೈತರ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತ ಬಂದಿದೆ. ಅರ್ಹ ಫಲನುಭವಿ ರೈತರು ಆಧಾರ್, ಮೊಬೈಲ್ ನಂಬರ್, ಪಹಣಿ, ಬ್ಯಾಂಕ್ ಖಾತೆ ಲಿಂಕ್ ಮಾಡಿದರೆ ಹಣ ಬರುತ್ತದೆ ಎಂದು ಸರ್ಕಾರ ಹೇಳಿತ್ತು. ಅದರಂತೆ ಎಲ್ಲಾ ದಾಖಲೆ ಸಲ್ಲಿಸಿದರೂ ಕೆಲವರಿಗೆ ಬಂದಿಲ್ಲ. ಕೆಲವರಿಗೆ ಎರಡು, ಮತ್ತೆ ಹಲವರಿಗೆ ಮೂರು, ನಾಲ್ಕು ಕಂತಿನ ಹಣ ಮಾತ್ರ ಬಂದಿದೆ. ಉಳಿದ ಕಂತಿನ ಹಣ ಬಂದಿಲ್ಲ. ಇದೇಕೆ ಹೀಗೆ? ಎರಡು ಕಂತಿನ ಹಣಬರುವವರೆಗೆ ದಾಖಲೆಗಳು ಸರಿ ಇದ್ದವು. ನಂತರ ದಾಖಲೆಗಳು ಸರಿ ಇಲ್ಲವೇ ಎಂದು ಹಣ ಬಾರದ ರೈತರು ಪ್ರಶ್ನಿಸಿದ್ದಾರೆ.

ಕಳೆದ ಒಂದು ವರ್ಷ 8 ತಿಂಗಳಲ್ಲಿ 6 ಕಂತುಗಳಲ್ಲಿ ಹಣ ಬಿಡುಗಡೆಯಾಗಿದೆ. ಆಗಸ್ಟ್ 9, 2020ರಂದು ಪ್ರಧಾನಿ ಆರನೇ ಕಂತಿನ ಹಣ ರೈತರ ಖಾತೆಗಳಿಗೆ ವರ್ಗಾಯಿಸಿದರು. ಆ ದಿನದ 17 ಸಾವಿರ ಕೋಟಿ ಸೇರಿ ಒಟ್ಟು ಇದುವರೆಗೆ 75 ಸಾವಿರ ಕೋಟಿ ರೂಪಾಯಿಗಳನ್ನು 8.5 ಕೋಟಿ ಫಲನುಭವಿ ರೈತರಿಗೆ ನೀಡಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸುತ್ತವೆ. ವಾಸ್ತವವಾಗಿ ನೋಡಿದರೆ ಕಿಸಾನ್ ಸನ್ಮಾನ್ ನಿಧಿ ಯೋಜನೆ ಘೋಷಣೆಯಾಗಿ 20 ತಿಂಗಳು ಕಳೆದಿವೆ. ಅಂದರೆ ವಾರ್ಷಿಕ ಮೂರು ಕಂತುಗಳಾದರೆ ಒಂದು ವರ್ಷ ಎಂಟು ತಿಂಗಳಿಗೆ 5 ಕಂತುಗಳು ಮಾತ್ರ ಆಗುತ್ತವೆ. ಸರ್ಕಾರದ ಪ್ರಕಾರ ಒಂದು ಕಂತಿನ ಹಣ ಹೆಚ್ಚುವರಿಯಾಗಿ ಬಿಡುಗಡೆಯಾಗಿದೆ.

ಭಾರತ ಕೃಷಿ ಪ್ರಧಾನ ದೇಶ. ಶೇಕಡ 65 ರಷ್ಟು ಕುಟುಂಬಗಳು ಕೃಷಿಯನ್ನೇ ಅವಲಂಬಿಸಿವೆ. ಕೃಷಿಯ ಜೊತೆ ಇತರೆ ಉಪಕಸುಬುಗಳಲ್ಲೂ ತೊಡಗಿಸಿಕೊಂಡಿವೆ. ದೇಶಕ್ಕೆ ಅನ್ನ ನೀಡುವ ರೈತ ಕುಟುಂಬಗಳ ದಿಕ್ಕುಗಾಣದೆ ಜೀವನ ನಡೆಸುತ್ತಿವೆ. ಇಂತಹ ಹೊತ್ತಿನಲ್ಲಿ ಸರ್ಕಾರ ಪ್ರತಿಯೊಬ್ಬ ರೈತ ಈ ಯೋಜನೆ ವ್ಯಾಪ್ತಿಗೆ ಬರುವಂತೆ ನೋಡಿಕೊಳ್ಳಬೇಕಿತ್ತು. ಆದರೆ ಅಂತಹ ಕೆಲಸ ಅಗಿಲ್ಲ. ಪಹಣಿ ಇಲ್ಲದ, ಪಾಲುದಾರಿಕೆ ಸರಿಯಾಗಿ ಆಗದೇ ಇರುವಂಥ, ಬಗರ್ ಹುಕುಂ ಸಾಗುವಳಿಯಲ್ಲಿ ತೊಡಗಿರುವಂಥ ರೈತರೂ ಕೃಷಿ ಸಮ್ಮಾನ್ ಯೋಜನೆಯ ಫಲನುಭವಿಗಳು ಆಗಲು ಸಾಧ್ಯವಾಗಿಲ್ಲ. ಎಷ್ಟೋ ಜಮೀನುಗಳು ಇನ್ನೂ ತಾತ-ಮುತ್ತಾತನ ಹೆಸರಿನಲ್ಲೇ ಓಡುತ್ತಿವೆ. ಇಂತಹ ಸಂಕಷ್ಟಗಳು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿರುವವರಿಗೆ ಕಾಣುತ್ತಿಲ್ಲ.

ಇದನ್ನೂ ಓದಿ: ಹುಲಿಗಳಿಗೆ ಧಾಮ! ರೈತ, ಆದಿವಾಸಿಗಳಿಗೆ ಪಂಗನಾಮ!!

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಟ್ರಾಕ್ಟರ್ ನಲ್ಲಿ ಒಂದು ಗಂಟೆ ಉಳುಮೆ ಮಾಡಲು 1500 ರೂ ನೀಡಬೇಕು. ರಸಗೊಬ್ಬರ ಖರೀದಿಗೆ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ವರ್ಷಕ್ಕೆ 6 ಸಾವಿರ ರೂ ನೀಡಿದರೆ ಯಾವುದಕ್ಕು ಆಗುವುದಿಲ್ಲ. ನಮ್ಮೂರಿನಲ್ಲಿ 300 ರೈತ ಕುಟುಂಬಗಳಿವೆ. ಅವರಲ್ಲಿ ಕೇವಲ 60 ಮಂದಿಗೆ ಮಾತ್ರ ಬಂದಿದೆ. ಅಧಿಕಾರಿಗಳು ರೆಕಾರ್ಡ್ ಮಾತ್ರ ಕೇಳುತ್ತಾರೆ. ಭೂಮಿ ಉಳುವ ಗೇಣಿದಾರನಿಗೆ ಯಾವುದೇ ದಾಖಲೆ ಇಲ್ಲ. ಭೂಮಾಲಿಕರು ಮಾತ್ರ ಕಿಸಾನ್ ಸನ್ಮಾನ್ ಯೋಜನೆಯ ಲಾಭ ಪಡೆಯುತ್ತಾರೆ. ಗೇಣಿದಾರರಿಗೂ ಹಣ ನೀಡಬೇಕು ಎಂಬುದು ನಮ್ಮ ಒತ್ತಾಯ. ದೇಶದಲ್ಲಿ ಬಹುಸಂಖ್ಯಾತರು ರೈತರಾದರೂ ಸರ್ಕಾರದ ನೆರವು ದೊರೆಯುತ್ತಿಲ್ಲ. ಇದು ನೋವಿನ ಸಂಗತಿ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಡಾ. ಸ್ವಾಮಿನಾಥನ್ ವರದಿಯನ್ವಯ ರೈತರು ಮಾಡಿದ ವೆಚ್ಚದ ಒಂದೂವರೆ ಪಟ್ಟು ಹಣ ನೀಡಬೇಕೆಂದು ವ್ಯಾಪಕ ಆಗ್ರಹ ಕೇಳಿಬಂತು. ಇದರ ಒತ್ತಡವನ್ನು ಸಹಿಸದ ಕೇಂದ್ರ ಸರ್ಕಾರ ಅತುರವಾಗಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಜಾರಿಗೆ ತಂದಿತು. ಇದರಿಂದ ನಿಜವಾದ ರೈತರಿಗೆ ಪ್ರಯೋಜನವಿಲ್ಲ. ಇದೊಂದು ನಾಮಕಾವಸ್ತೆ ಮತ್ತು ತೋರಿಕೆಯ ಯೋಜನೆ ಎಂದು ಅವರು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಹೇಳುವಂತೆ, “ಕೇಂದ್ರ ಸರ್ಕಾರ ಕೇವಲ 8.5 ಕೋಟಿ ರೈತರನ್ನು ರೀಚ್ ಆಗಲು ಸಾಧ್ಯವಾಗಿದೆ. ಸರ್ಕಾರ ನೀಡುತ್ತಿರುವ ಹಣ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ. ರೈತರ ಮೂಗಿಗೆ ತುಪ್ಪ ಸವರುವಂತಹ ಕೆಲಸ ಮಾಡಿದೆ. ರೈತರ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ ಇತ್ಯರ್ಥ ಪಡಿಸಿದರೆ, ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ. ರೈತರ ನಿಜವಾದ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಶಿರಾ ತಾಲೂಕಿನ ಗೌಡಗೆರೆ ಗ್ರಾಮದ ಈರಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿದರು ‘’ನನಗೆ ಎರಡು ಕಂತು ಬಂತು ಸ್ವಾಮಿ, ಉಳಿದಿದ್ದು ಬಂದಿಲ್ಲ.. ನಮ್ಮ ಚಿಕ್ಕಪ್ಪನ ಮಕ್ಕಳಿಗೆ ಮೂರು ಕಂತು ಬಂತು. ನಾನು, ಅಧಿಕಾರಿಗಳನ್ನು ಕೇಳಿದೆ. ಬೇರೆಯವರಿಗೆ ಮೂರು ಕಂತು ಬಂದೈತೆ. ನನಗೆ ಎರಡೇ ಕಂತು ಬಂದಿರೋದು ಅಂದ್ರೆ ಬರುತ್ತೆ ಹೋಗಿ ಎಂದು ಹೇಳಿಕಳಿಸ್ತಾರೆ. ಇವಾಗ ನೋಡಿದ್ರೆ 6 ಕಂತು ಹಣ ಬಿಡುಗಡೆ ಆಗೈತೆ ಅಂತಾರೆ. ನನಗೇನು ಬಂದಿಲ್ಲ ಸ್ವಾಮಿ” ಎಂದು ಹೇಳಿದರು.

ಪಾವಗಡ ತಾಲೂಕು ರೈತ ಮುದ್ದಪ್ಪ ಅವರನ್ನು ಸಂಪರ್ಕಿಸಿದಾಗ “ನಮಗೆ ಎರಡು ಸಾರಿ ಬಂದೈತೆ. ಎರಡು ಸರಿನು ಬ್ಯಾಂಕ್‌ಗೆ ಹೋಗಿ ಎರಡೆರಡು ಸಾವಿರ ತಂದ್ವಿ. ಈ ತಿಂಗ್ಳಾಗೆ ಒಂದು ಮೆಸೇಜ್ ಬಂದೈತೆ. 2 ಸಾವಿರ ಹಾಕಿದ್ದೀವಿ ಅಂತ. ಇನ್ನೂ ಹೋಗಿಲ್ಲ. ಹೋಗಿ ತರಬೇಕು. ಇದು ಸೇರಿದ್ರೆ ಮೂರು ಸಾರಿ ಬಂದಂಗಾಗ್ತೈತೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರ 6 ಸಾವಿರ ಘೋಷಣೆ ಮಾಡುತ್ತಿದ್ದಂತೆಯೇ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ರಾಜ್ಯ ಸರ್ಕಾರವೂ 4 ಸಾವಿರ ಕೊಡುತ್ತದೆ ಎಂದು ಭರವಸೆ ನೀಡಿದರು. 2019 ರ ಸಾಲಿನಲ್ಲಿ ರೈತರಿಗೆ ನೀಡಿದ ಭರವಸೆಯಂತೆ ಕೆಲವರಿಗೆ 4 ಸಾವಿರ ರೂಪಾಯಿ ದೊರೆಯಿತು. ಮತ್ತೆ ಕೆಲವರಿಗೆ 2 ಸಾವಿರ ಮಾತ್ರ ಖಾತೆಗೆ ಬಂತು. 2020 ನೇ ಸಾಲಿನಲ್ಲಿ ಕೊರೊನಾ ಬಂದ ಮೇಲೆ ಹಣವೂ ಇಲ್ಲ. ಅದರ ಬಗ್ಗೆ ಸೊಲ್ಲೂ ಇಲ್ಲ ಅನ್ನುವಂತಾಗಿದೆ.

ಕೇಂದ್ರ ಸರ್ಕಾರದ ಕಿಸಾನ್ ಸನ್ಮಾನ್ ಯೋಜನೆ 8.5 ಕೋಟಿ ರೈತರ ಪೈಕಿ ಬಹುತೇಕರಿಗೆ ಎರಡು, ಮೂರು ಮತ್ತು ನಾಲ್ಕು ಬಾರಿ ಹಣ ಬಂದಿದ್ದರೆ, ಕೆಲವೇ ಮಂದಿ ರೈತರಿಗೆ ಆರು ಕಂತುಗಳು ಬಂದಿವೆ. ಆದರೆ ನಿಜ ರೈತ ಫಲನುಭವಿಗಳು ಈ ಯೋಜನೆಯಿಂದ ಹೊರಗಿದ್ದು ಸೌಲಭ್ಯದಿಂದ ವಂಚಿತರಾಗಿದ್ದಾರೆ.


ಓದಿ: ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...