Homeಮುಖಪುಟಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ.

- Advertisement -
- Advertisement -

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಆರನೇ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ ಕೇವಲ ಮೂರು-ನಾಲ್ಕು ಕಂತಿನ ಹಣ ಮಾತ್ರ ಕೆಲ ರೈತರ ಖಾತೆಗೆ ನೇರ ವರ್ಗಾವಣೆಯಾಗಿದೆ ಎಂದು ರೈತರು ದೂರುತ್ತಿದ್ದಾರೆ. ಈ ಕುರಿತು ಹಲವು ರೈತರನ್ನು ಮಾತನಾಡಿಸಿದಾಗ ಎಲ್ಲಾ ದಾಖಲೆ ಸಲ್ಲಿಸಿದ್ದರೂ ಕೇವಲ 2 ಬಾರಿ ಹಣ ಬಂದಿದ್ದು ನಂತರ ಬಂದಿಲ್ಲ ಎಂದು ಕೆಲವು ರೈತರು ಹೇಳಿದ್ದಾರೆ.

ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯ ಮಹಾತ್ವಾಕಾಂಕ್ಷೆಯ ಯೋಜನೆ ಎನ್ನಲಾಗಿದ್ದು, ಲೋಕಸಭಾ ಚುನಾವಣಾ ಪೂರ್ವದಲ್ಲಿ ಈ ಯೋಜನೆ ಘೋಷಣೆ ಮಾಡಲಾಗಿತ್ತು. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಜನವರಿ 2, 2019 ರಂದು ನಡೆದ ಬೃಹತ್ ರೈತರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರಿ ಮೋದಿ ಮೊದಲ ಕಂತು ಬಿಡುಗಡೆ ಮಾಡಿದ್ದರು. ಬಟನ್ ಒತ್ತುವ ಮೂಲಕ ಫಲನುಭವಿ ರೈತರ ಖಾತೆಗೆ ಹಣ ಜಮಾವಣೆ ಮಾಡಿದ್ದರು. ಆರಂಭದಲ್ಲಿ ಎಲ್ಲರಿಗೂ ಹಣ ಜಮೆಗೊಂಡಿತಾದರೂ ನಂತರ ಹಣ ಬರಲೇ ಇಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ವಾರ್ಷಿಕ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ರೈತರ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತ ಬಂದಿದೆ. ಅರ್ಹ ಫಲನುಭವಿ ರೈತರು ಆಧಾರ್, ಮೊಬೈಲ್ ನಂಬರ್, ಪಹಣಿ, ಬ್ಯಾಂಕ್ ಖಾತೆ ಲಿಂಕ್ ಮಾಡಿದರೆ ಹಣ ಬರುತ್ತದೆ ಎಂದು ಸರ್ಕಾರ ಹೇಳಿತ್ತು. ಅದರಂತೆ ಎಲ್ಲಾ ದಾಖಲೆ ಸಲ್ಲಿಸಿದರೂ ಕೆಲವರಿಗೆ ಬಂದಿಲ್ಲ. ಕೆಲವರಿಗೆ ಎರಡು, ಮತ್ತೆ ಹಲವರಿಗೆ ಮೂರು, ನಾಲ್ಕು ಕಂತಿನ ಹಣ ಮಾತ್ರ ಬಂದಿದೆ. ಉಳಿದ ಕಂತಿನ ಹಣ ಬಂದಿಲ್ಲ. ಇದೇಕೆ ಹೀಗೆ? ಎರಡು ಕಂತಿನ ಹಣಬರುವವರೆಗೆ ದಾಖಲೆಗಳು ಸರಿ ಇದ್ದವು. ನಂತರ ದಾಖಲೆಗಳು ಸರಿ ಇಲ್ಲವೇ ಎಂದು ಹಣ ಬಾರದ ರೈತರು ಪ್ರಶ್ನಿಸಿದ್ದಾರೆ.

ಕಳೆದ ಒಂದು ವರ್ಷ 8 ತಿಂಗಳಲ್ಲಿ 6 ಕಂತುಗಳಲ್ಲಿ ಹಣ ಬಿಡುಗಡೆಯಾಗಿದೆ. ಆಗಸ್ಟ್ 9, 2020ರಂದು ಪ್ರಧಾನಿ ಆರನೇ ಕಂತಿನ ಹಣ ರೈತರ ಖಾತೆಗಳಿಗೆ ವರ್ಗಾಯಿಸಿದರು. ಆ ದಿನದ 17 ಸಾವಿರ ಕೋಟಿ ಸೇರಿ ಒಟ್ಟು ಇದುವರೆಗೆ 75 ಸಾವಿರ ಕೋಟಿ ರೂಪಾಯಿಗಳನ್ನು 8.5 ಕೋಟಿ ಫಲನುಭವಿ ರೈತರಿಗೆ ನೀಡಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸುತ್ತವೆ. ವಾಸ್ತವವಾಗಿ ನೋಡಿದರೆ ಕಿಸಾನ್ ಸನ್ಮಾನ್ ನಿಧಿ ಯೋಜನೆ ಘೋಷಣೆಯಾಗಿ 20 ತಿಂಗಳು ಕಳೆದಿವೆ. ಅಂದರೆ ವಾರ್ಷಿಕ ಮೂರು ಕಂತುಗಳಾದರೆ ಒಂದು ವರ್ಷ ಎಂಟು ತಿಂಗಳಿಗೆ 5 ಕಂತುಗಳು ಮಾತ್ರ ಆಗುತ್ತವೆ. ಸರ್ಕಾರದ ಪ್ರಕಾರ ಒಂದು ಕಂತಿನ ಹಣ ಹೆಚ್ಚುವರಿಯಾಗಿ ಬಿಡುಗಡೆಯಾಗಿದೆ.

ಭಾರತ ಕೃಷಿ ಪ್ರಧಾನ ದೇಶ. ಶೇಕಡ 65 ರಷ್ಟು ಕುಟುಂಬಗಳು ಕೃಷಿಯನ್ನೇ ಅವಲಂಬಿಸಿವೆ. ಕೃಷಿಯ ಜೊತೆ ಇತರೆ ಉಪಕಸುಬುಗಳಲ್ಲೂ ತೊಡಗಿಸಿಕೊಂಡಿವೆ. ದೇಶಕ್ಕೆ ಅನ್ನ ನೀಡುವ ರೈತ ಕುಟುಂಬಗಳ ದಿಕ್ಕುಗಾಣದೆ ಜೀವನ ನಡೆಸುತ್ತಿವೆ. ಇಂತಹ ಹೊತ್ತಿನಲ್ಲಿ ಸರ್ಕಾರ ಪ್ರತಿಯೊಬ್ಬ ರೈತ ಈ ಯೋಜನೆ ವ್ಯಾಪ್ತಿಗೆ ಬರುವಂತೆ ನೋಡಿಕೊಳ್ಳಬೇಕಿತ್ತು. ಆದರೆ ಅಂತಹ ಕೆಲಸ ಅಗಿಲ್ಲ. ಪಹಣಿ ಇಲ್ಲದ, ಪಾಲುದಾರಿಕೆ ಸರಿಯಾಗಿ ಆಗದೇ ಇರುವಂಥ, ಬಗರ್ ಹುಕುಂ ಸಾಗುವಳಿಯಲ್ಲಿ ತೊಡಗಿರುವಂಥ ರೈತರೂ ಕೃಷಿ ಸಮ್ಮಾನ್ ಯೋಜನೆಯ ಫಲನುಭವಿಗಳು ಆಗಲು ಸಾಧ್ಯವಾಗಿಲ್ಲ. ಎಷ್ಟೋ ಜಮೀನುಗಳು ಇನ್ನೂ ತಾತ-ಮುತ್ತಾತನ ಹೆಸರಿನಲ್ಲೇ ಓಡುತ್ತಿವೆ. ಇಂತಹ ಸಂಕಷ್ಟಗಳು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿರುವವರಿಗೆ ಕಾಣುತ್ತಿಲ್ಲ.

ಇದನ್ನೂ ಓದಿ: ಹುಲಿಗಳಿಗೆ ಧಾಮ! ರೈತ, ಆದಿವಾಸಿಗಳಿಗೆ ಪಂಗನಾಮ!!

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಟ್ರಾಕ್ಟರ್ ನಲ್ಲಿ ಒಂದು ಗಂಟೆ ಉಳುಮೆ ಮಾಡಲು 1500 ರೂ ನೀಡಬೇಕು. ರಸಗೊಬ್ಬರ ಖರೀದಿಗೆ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ವರ್ಷಕ್ಕೆ 6 ಸಾವಿರ ರೂ ನೀಡಿದರೆ ಯಾವುದಕ್ಕು ಆಗುವುದಿಲ್ಲ. ನಮ್ಮೂರಿನಲ್ಲಿ 300 ರೈತ ಕುಟುಂಬಗಳಿವೆ. ಅವರಲ್ಲಿ ಕೇವಲ 60 ಮಂದಿಗೆ ಮಾತ್ರ ಬಂದಿದೆ. ಅಧಿಕಾರಿಗಳು ರೆಕಾರ್ಡ್ ಮಾತ್ರ ಕೇಳುತ್ತಾರೆ. ಭೂಮಿ ಉಳುವ ಗೇಣಿದಾರನಿಗೆ ಯಾವುದೇ ದಾಖಲೆ ಇಲ್ಲ. ಭೂಮಾಲಿಕರು ಮಾತ್ರ ಕಿಸಾನ್ ಸನ್ಮಾನ್ ಯೋಜನೆಯ ಲಾಭ ಪಡೆಯುತ್ತಾರೆ. ಗೇಣಿದಾರರಿಗೂ ಹಣ ನೀಡಬೇಕು ಎಂಬುದು ನಮ್ಮ ಒತ್ತಾಯ. ದೇಶದಲ್ಲಿ ಬಹುಸಂಖ್ಯಾತರು ರೈತರಾದರೂ ಸರ್ಕಾರದ ನೆರವು ದೊರೆಯುತ್ತಿಲ್ಲ. ಇದು ನೋವಿನ ಸಂಗತಿ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಡಾ. ಸ್ವಾಮಿನಾಥನ್ ವರದಿಯನ್ವಯ ರೈತರು ಮಾಡಿದ ವೆಚ್ಚದ ಒಂದೂವರೆ ಪಟ್ಟು ಹಣ ನೀಡಬೇಕೆಂದು ವ್ಯಾಪಕ ಆಗ್ರಹ ಕೇಳಿಬಂತು. ಇದರ ಒತ್ತಡವನ್ನು ಸಹಿಸದ ಕೇಂದ್ರ ಸರ್ಕಾರ ಅತುರವಾಗಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಜಾರಿಗೆ ತಂದಿತು. ಇದರಿಂದ ನಿಜವಾದ ರೈತರಿಗೆ ಪ್ರಯೋಜನವಿಲ್ಲ. ಇದೊಂದು ನಾಮಕಾವಸ್ತೆ ಮತ್ತು ತೋರಿಕೆಯ ಯೋಜನೆ ಎಂದು ಅವರು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಹೇಳುವಂತೆ, “ಕೇಂದ್ರ ಸರ್ಕಾರ ಕೇವಲ 8.5 ಕೋಟಿ ರೈತರನ್ನು ರೀಚ್ ಆಗಲು ಸಾಧ್ಯವಾಗಿದೆ. ಸರ್ಕಾರ ನೀಡುತ್ತಿರುವ ಹಣ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ. ರೈತರ ಮೂಗಿಗೆ ತುಪ್ಪ ಸವರುವಂತಹ ಕೆಲಸ ಮಾಡಿದೆ. ರೈತರ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ ಇತ್ಯರ್ಥ ಪಡಿಸಿದರೆ, ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ. ರೈತರ ನಿಜವಾದ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಶಿರಾ ತಾಲೂಕಿನ ಗೌಡಗೆರೆ ಗ್ರಾಮದ ಈರಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿದರು ‘’ನನಗೆ ಎರಡು ಕಂತು ಬಂತು ಸ್ವಾಮಿ, ಉಳಿದಿದ್ದು ಬಂದಿಲ್ಲ.. ನಮ್ಮ ಚಿಕ್ಕಪ್ಪನ ಮಕ್ಕಳಿಗೆ ಮೂರು ಕಂತು ಬಂತು. ನಾನು, ಅಧಿಕಾರಿಗಳನ್ನು ಕೇಳಿದೆ. ಬೇರೆಯವರಿಗೆ ಮೂರು ಕಂತು ಬಂದೈತೆ. ನನಗೆ ಎರಡೇ ಕಂತು ಬಂದಿರೋದು ಅಂದ್ರೆ ಬರುತ್ತೆ ಹೋಗಿ ಎಂದು ಹೇಳಿಕಳಿಸ್ತಾರೆ. ಇವಾಗ ನೋಡಿದ್ರೆ 6 ಕಂತು ಹಣ ಬಿಡುಗಡೆ ಆಗೈತೆ ಅಂತಾರೆ. ನನಗೇನು ಬಂದಿಲ್ಲ ಸ್ವಾಮಿ” ಎಂದು ಹೇಳಿದರು.

ಪಾವಗಡ ತಾಲೂಕು ರೈತ ಮುದ್ದಪ್ಪ ಅವರನ್ನು ಸಂಪರ್ಕಿಸಿದಾಗ “ನಮಗೆ ಎರಡು ಸಾರಿ ಬಂದೈತೆ. ಎರಡು ಸರಿನು ಬ್ಯಾಂಕ್‌ಗೆ ಹೋಗಿ ಎರಡೆರಡು ಸಾವಿರ ತಂದ್ವಿ. ಈ ತಿಂಗ್ಳಾಗೆ ಒಂದು ಮೆಸೇಜ್ ಬಂದೈತೆ. 2 ಸಾವಿರ ಹಾಕಿದ್ದೀವಿ ಅಂತ. ಇನ್ನೂ ಹೋಗಿಲ್ಲ. ಹೋಗಿ ತರಬೇಕು. ಇದು ಸೇರಿದ್ರೆ ಮೂರು ಸಾರಿ ಬಂದಂಗಾಗ್ತೈತೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರ 6 ಸಾವಿರ ಘೋಷಣೆ ಮಾಡುತ್ತಿದ್ದಂತೆಯೇ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ರಾಜ್ಯ ಸರ್ಕಾರವೂ 4 ಸಾವಿರ ಕೊಡುತ್ತದೆ ಎಂದು ಭರವಸೆ ನೀಡಿದರು. 2019 ರ ಸಾಲಿನಲ್ಲಿ ರೈತರಿಗೆ ನೀಡಿದ ಭರವಸೆಯಂತೆ ಕೆಲವರಿಗೆ 4 ಸಾವಿರ ರೂಪಾಯಿ ದೊರೆಯಿತು. ಮತ್ತೆ ಕೆಲವರಿಗೆ 2 ಸಾವಿರ ಮಾತ್ರ ಖಾತೆಗೆ ಬಂತು. 2020 ನೇ ಸಾಲಿನಲ್ಲಿ ಕೊರೊನಾ ಬಂದ ಮೇಲೆ ಹಣವೂ ಇಲ್ಲ. ಅದರ ಬಗ್ಗೆ ಸೊಲ್ಲೂ ಇಲ್ಲ ಅನ್ನುವಂತಾಗಿದೆ.

ಕೇಂದ್ರ ಸರ್ಕಾರದ ಕಿಸಾನ್ ಸನ್ಮಾನ್ ಯೋಜನೆ 8.5 ಕೋಟಿ ರೈತರ ಪೈಕಿ ಬಹುತೇಕರಿಗೆ ಎರಡು, ಮೂರು ಮತ್ತು ನಾಲ್ಕು ಬಾರಿ ಹಣ ಬಂದಿದ್ದರೆ, ಕೆಲವೇ ಮಂದಿ ರೈತರಿಗೆ ಆರು ಕಂತುಗಳು ಬಂದಿವೆ. ಆದರೆ ನಿಜ ರೈತ ಫಲನುಭವಿಗಳು ಈ ಯೋಜನೆಯಿಂದ ಹೊರಗಿದ್ದು ಸೌಲಭ್ಯದಿಂದ ವಂಚಿತರಾಗಿದ್ದಾರೆ.


ಓದಿ: ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...