Homeಮುಖಪುಟಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ.

- Advertisement -
- Advertisement -

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಆರನೇ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ ಕೇವಲ ಮೂರು-ನಾಲ್ಕು ಕಂತಿನ ಹಣ ಮಾತ್ರ ಕೆಲ ರೈತರ ಖಾತೆಗೆ ನೇರ ವರ್ಗಾವಣೆಯಾಗಿದೆ ಎಂದು ರೈತರು ದೂರುತ್ತಿದ್ದಾರೆ. ಈ ಕುರಿತು ಹಲವು ರೈತರನ್ನು ಮಾತನಾಡಿಸಿದಾಗ ಎಲ್ಲಾ ದಾಖಲೆ ಸಲ್ಲಿಸಿದ್ದರೂ ಕೇವಲ 2 ಬಾರಿ ಹಣ ಬಂದಿದ್ದು ನಂತರ ಬಂದಿಲ್ಲ ಎಂದು ಕೆಲವು ರೈತರು ಹೇಳಿದ್ದಾರೆ.

ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯ ಮಹಾತ್ವಾಕಾಂಕ್ಷೆಯ ಯೋಜನೆ ಎನ್ನಲಾಗಿದ್ದು, ಲೋಕಸಭಾ ಚುನಾವಣಾ ಪೂರ್ವದಲ್ಲಿ ಈ ಯೋಜನೆ ಘೋಷಣೆ ಮಾಡಲಾಗಿತ್ತು. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಜನವರಿ 2, 2019 ರಂದು ನಡೆದ ಬೃಹತ್ ರೈತರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರಿ ಮೋದಿ ಮೊದಲ ಕಂತು ಬಿಡುಗಡೆ ಮಾಡಿದ್ದರು. ಬಟನ್ ಒತ್ತುವ ಮೂಲಕ ಫಲನುಭವಿ ರೈತರ ಖಾತೆಗೆ ಹಣ ಜಮಾವಣೆ ಮಾಡಿದ್ದರು. ಆರಂಭದಲ್ಲಿ ಎಲ್ಲರಿಗೂ ಹಣ ಜಮೆಗೊಂಡಿತಾದರೂ ನಂತರ ಹಣ ಬರಲೇ ಇಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ವಾರ್ಷಿಕ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ರೈತರ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತ ಬಂದಿದೆ. ಅರ್ಹ ಫಲನುಭವಿ ರೈತರು ಆಧಾರ್, ಮೊಬೈಲ್ ನಂಬರ್, ಪಹಣಿ, ಬ್ಯಾಂಕ್ ಖಾತೆ ಲಿಂಕ್ ಮಾಡಿದರೆ ಹಣ ಬರುತ್ತದೆ ಎಂದು ಸರ್ಕಾರ ಹೇಳಿತ್ತು. ಅದರಂತೆ ಎಲ್ಲಾ ದಾಖಲೆ ಸಲ್ಲಿಸಿದರೂ ಕೆಲವರಿಗೆ ಬಂದಿಲ್ಲ. ಕೆಲವರಿಗೆ ಎರಡು, ಮತ್ತೆ ಹಲವರಿಗೆ ಮೂರು, ನಾಲ್ಕು ಕಂತಿನ ಹಣ ಮಾತ್ರ ಬಂದಿದೆ. ಉಳಿದ ಕಂತಿನ ಹಣ ಬಂದಿಲ್ಲ. ಇದೇಕೆ ಹೀಗೆ? ಎರಡು ಕಂತಿನ ಹಣಬರುವವರೆಗೆ ದಾಖಲೆಗಳು ಸರಿ ಇದ್ದವು. ನಂತರ ದಾಖಲೆಗಳು ಸರಿ ಇಲ್ಲವೇ ಎಂದು ಹಣ ಬಾರದ ರೈತರು ಪ್ರಶ್ನಿಸಿದ್ದಾರೆ.

ಕಳೆದ ಒಂದು ವರ್ಷ 8 ತಿಂಗಳಲ್ಲಿ 6 ಕಂತುಗಳಲ್ಲಿ ಹಣ ಬಿಡುಗಡೆಯಾಗಿದೆ. ಆಗಸ್ಟ್ 9, 2020ರಂದು ಪ್ರಧಾನಿ ಆರನೇ ಕಂತಿನ ಹಣ ರೈತರ ಖಾತೆಗಳಿಗೆ ವರ್ಗಾಯಿಸಿದರು. ಆ ದಿನದ 17 ಸಾವಿರ ಕೋಟಿ ಸೇರಿ ಒಟ್ಟು ಇದುವರೆಗೆ 75 ಸಾವಿರ ಕೋಟಿ ರೂಪಾಯಿಗಳನ್ನು 8.5 ಕೋಟಿ ಫಲನುಭವಿ ರೈತರಿಗೆ ನೀಡಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸುತ್ತವೆ. ವಾಸ್ತವವಾಗಿ ನೋಡಿದರೆ ಕಿಸಾನ್ ಸನ್ಮಾನ್ ನಿಧಿ ಯೋಜನೆ ಘೋಷಣೆಯಾಗಿ 20 ತಿಂಗಳು ಕಳೆದಿವೆ. ಅಂದರೆ ವಾರ್ಷಿಕ ಮೂರು ಕಂತುಗಳಾದರೆ ಒಂದು ವರ್ಷ ಎಂಟು ತಿಂಗಳಿಗೆ 5 ಕಂತುಗಳು ಮಾತ್ರ ಆಗುತ್ತವೆ. ಸರ್ಕಾರದ ಪ್ರಕಾರ ಒಂದು ಕಂತಿನ ಹಣ ಹೆಚ್ಚುವರಿಯಾಗಿ ಬಿಡುಗಡೆಯಾಗಿದೆ.

ಭಾರತ ಕೃಷಿ ಪ್ರಧಾನ ದೇಶ. ಶೇಕಡ 65 ರಷ್ಟು ಕುಟುಂಬಗಳು ಕೃಷಿಯನ್ನೇ ಅವಲಂಬಿಸಿವೆ. ಕೃಷಿಯ ಜೊತೆ ಇತರೆ ಉಪಕಸುಬುಗಳಲ್ಲೂ ತೊಡಗಿಸಿಕೊಂಡಿವೆ. ದೇಶಕ್ಕೆ ಅನ್ನ ನೀಡುವ ರೈತ ಕುಟುಂಬಗಳ ದಿಕ್ಕುಗಾಣದೆ ಜೀವನ ನಡೆಸುತ್ತಿವೆ. ಇಂತಹ ಹೊತ್ತಿನಲ್ಲಿ ಸರ್ಕಾರ ಪ್ರತಿಯೊಬ್ಬ ರೈತ ಈ ಯೋಜನೆ ವ್ಯಾಪ್ತಿಗೆ ಬರುವಂತೆ ನೋಡಿಕೊಳ್ಳಬೇಕಿತ್ತು. ಆದರೆ ಅಂತಹ ಕೆಲಸ ಅಗಿಲ್ಲ. ಪಹಣಿ ಇಲ್ಲದ, ಪಾಲುದಾರಿಕೆ ಸರಿಯಾಗಿ ಆಗದೇ ಇರುವಂಥ, ಬಗರ್ ಹುಕುಂ ಸಾಗುವಳಿಯಲ್ಲಿ ತೊಡಗಿರುವಂಥ ರೈತರೂ ಕೃಷಿ ಸಮ್ಮಾನ್ ಯೋಜನೆಯ ಫಲನುಭವಿಗಳು ಆಗಲು ಸಾಧ್ಯವಾಗಿಲ್ಲ. ಎಷ್ಟೋ ಜಮೀನುಗಳು ಇನ್ನೂ ತಾತ-ಮುತ್ತಾತನ ಹೆಸರಿನಲ್ಲೇ ಓಡುತ್ತಿವೆ. ಇಂತಹ ಸಂಕಷ್ಟಗಳು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿರುವವರಿಗೆ ಕಾಣುತ್ತಿಲ್ಲ.

ಇದನ್ನೂ ಓದಿ: ಹುಲಿಗಳಿಗೆ ಧಾಮ! ರೈತ, ಆದಿವಾಸಿಗಳಿಗೆ ಪಂಗನಾಮ!!

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಟ್ರಾಕ್ಟರ್ ನಲ್ಲಿ ಒಂದು ಗಂಟೆ ಉಳುಮೆ ಮಾಡಲು 1500 ರೂ ನೀಡಬೇಕು. ರಸಗೊಬ್ಬರ ಖರೀದಿಗೆ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ವರ್ಷಕ್ಕೆ 6 ಸಾವಿರ ರೂ ನೀಡಿದರೆ ಯಾವುದಕ್ಕು ಆಗುವುದಿಲ್ಲ. ನಮ್ಮೂರಿನಲ್ಲಿ 300 ರೈತ ಕುಟುಂಬಗಳಿವೆ. ಅವರಲ್ಲಿ ಕೇವಲ 60 ಮಂದಿಗೆ ಮಾತ್ರ ಬಂದಿದೆ. ಅಧಿಕಾರಿಗಳು ರೆಕಾರ್ಡ್ ಮಾತ್ರ ಕೇಳುತ್ತಾರೆ. ಭೂಮಿ ಉಳುವ ಗೇಣಿದಾರನಿಗೆ ಯಾವುದೇ ದಾಖಲೆ ಇಲ್ಲ. ಭೂಮಾಲಿಕರು ಮಾತ್ರ ಕಿಸಾನ್ ಸನ್ಮಾನ್ ಯೋಜನೆಯ ಲಾಭ ಪಡೆಯುತ್ತಾರೆ. ಗೇಣಿದಾರರಿಗೂ ಹಣ ನೀಡಬೇಕು ಎಂಬುದು ನಮ್ಮ ಒತ್ತಾಯ. ದೇಶದಲ್ಲಿ ಬಹುಸಂಖ್ಯಾತರು ರೈತರಾದರೂ ಸರ್ಕಾರದ ನೆರವು ದೊರೆಯುತ್ತಿಲ್ಲ. ಇದು ನೋವಿನ ಸಂಗತಿ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಡಾ. ಸ್ವಾಮಿನಾಥನ್ ವರದಿಯನ್ವಯ ರೈತರು ಮಾಡಿದ ವೆಚ್ಚದ ಒಂದೂವರೆ ಪಟ್ಟು ಹಣ ನೀಡಬೇಕೆಂದು ವ್ಯಾಪಕ ಆಗ್ರಹ ಕೇಳಿಬಂತು. ಇದರ ಒತ್ತಡವನ್ನು ಸಹಿಸದ ಕೇಂದ್ರ ಸರ್ಕಾರ ಅತುರವಾಗಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಜಾರಿಗೆ ತಂದಿತು. ಇದರಿಂದ ನಿಜವಾದ ರೈತರಿಗೆ ಪ್ರಯೋಜನವಿಲ್ಲ. ಇದೊಂದು ನಾಮಕಾವಸ್ತೆ ಮತ್ತು ತೋರಿಕೆಯ ಯೋಜನೆ ಎಂದು ಅವರು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಹೇಳುವಂತೆ, “ಕೇಂದ್ರ ಸರ್ಕಾರ ಕೇವಲ 8.5 ಕೋಟಿ ರೈತರನ್ನು ರೀಚ್ ಆಗಲು ಸಾಧ್ಯವಾಗಿದೆ. ಸರ್ಕಾರ ನೀಡುತ್ತಿರುವ ಹಣ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ. ರೈತರ ಮೂಗಿಗೆ ತುಪ್ಪ ಸವರುವಂತಹ ಕೆಲಸ ಮಾಡಿದೆ. ರೈತರ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ ಇತ್ಯರ್ಥ ಪಡಿಸಿದರೆ, ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ. ರೈತರ ನಿಜವಾದ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಶಿರಾ ತಾಲೂಕಿನ ಗೌಡಗೆರೆ ಗ್ರಾಮದ ಈರಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿದರು ‘’ನನಗೆ ಎರಡು ಕಂತು ಬಂತು ಸ್ವಾಮಿ, ಉಳಿದಿದ್ದು ಬಂದಿಲ್ಲ.. ನಮ್ಮ ಚಿಕ್ಕಪ್ಪನ ಮಕ್ಕಳಿಗೆ ಮೂರು ಕಂತು ಬಂತು. ನಾನು, ಅಧಿಕಾರಿಗಳನ್ನು ಕೇಳಿದೆ. ಬೇರೆಯವರಿಗೆ ಮೂರು ಕಂತು ಬಂದೈತೆ. ನನಗೆ ಎರಡೇ ಕಂತು ಬಂದಿರೋದು ಅಂದ್ರೆ ಬರುತ್ತೆ ಹೋಗಿ ಎಂದು ಹೇಳಿಕಳಿಸ್ತಾರೆ. ಇವಾಗ ನೋಡಿದ್ರೆ 6 ಕಂತು ಹಣ ಬಿಡುಗಡೆ ಆಗೈತೆ ಅಂತಾರೆ. ನನಗೇನು ಬಂದಿಲ್ಲ ಸ್ವಾಮಿ” ಎಂದು ಹೇಳಿದರು.

ಪಾವಗಡ ತಾಲೂಕು ರೈತ ಮುದ್ದಪ್ಪ ಅವರನ್ನು ಸಂಪರ್ಕಿಸಿದಾಗ “ನಮಗೆ ಎರಡು ಸಾರಿ ಬಂದೈತೆ. ಎರಡು ಸರಿನು ಬ್ಯಾಂಕ್‌ಗೆ ಹೋಗಿ ಎರಡೆರಡು ಸಾವಿರ ತಂದ್ವಿ. ಈ ತಿಂಗ್ಳಾಗೆ ಒಂದು ಮೆಸೇಜ್ ಬಂದೈತೆ. 2 ಸಾವಿರ ಹಾಕಿದ್ದೀವಿ ಅಂತ. ಇನ್ನೂ ಹೋಗಿಲ್ಲ. ಹೋಗಿ ತರಬೇಕು. ಇದು ಸೇರಿದ್ರೆ ಮೂರು ಸಾರಿ ಬಂದಂಗಾಗ್ತೈತೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರ 6 ಸಾವಿರ ಘೋಷಣೆ ಮಾಡುತ್ತಿದ್ದಂತೆಯೇ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ರಾಜ್ಯ ಸರ್ಕಾರವೂ 4 ಸಾವಿರ ಕೊಡುತ್ತದೆ ಎಂದು ಭರವಸೆ ನೀಡಿದರು. 2019 ರ ಸಾಲಿನಲ್ಲಿ ರೈತರಿಗೆ ನೀಡಿದ ಭರವಸೆಯಂತೆ ಕೆಲವರಿಗೆ 4 ಸಾವಿರ ರೂಪಾಯಿ ದೊರೆಯಿತು. ಮತ್ತೆ ಕೆಲವರಿಗೆ 2 ಸಾವಿರ ಮಾತ್ರ ಖಾತೆಗೆ ಬಂತು. 2020 ನೇ ಸಾಲಿನಲ್ಲಿ ಕೊರೊನಾ ಬಂದ ಮೇಲೆ ಹಣವೂ ಇಲ್ಲ. ಅದರ ಬಗ್ಗೆ ಸೊಲ್ಲೂ ಇಲ್ಲ ಅನ್ನುವಂತಾಗಿದೆ.

ಕೇಂದ್ರ ಸರ್ಕಾರದ ಕಿಸಾನ್ ಸನ್ಮಾನ್ ಯೋಜನೆ 8.5 ಕೋಟಿ ರೈತರ ಪೈಕಿ ಬಹುತೇಕರಿಗೆ ಎರಡು, ಮೂರು ಮತ್ತು ನಾಲ್ಕು ಬಾರಿ ಹಣ ಬಂದಿದ್ದರೆ, ಕೆಲವೇ ಮಂದಿ ರೈತರಿಗೆ ಆರು ಕಂತುಗಳು ಬಂದಿವೆ. ಆದರೆ ನಿಜ ರೈತ ಫಲನುಭವಿಗಳು ಈ ಯೋಜನೆಯಿಂದ ಹೊರಗಿದ್ದು ಸೌಲಭ್ಯದಿಂದ ವಂಚಿತರಾಗಿದ್ದಾರೆ.


ಓದಿ: ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...