Homeಮುಖಪುಟಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ.

- Advertisement -
- Advertisement -

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಆರನೇ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ ಕೇವಲ ಮೂರು-ನಾಲ್ಕು ಕಂತಿನ ಹಣ ಮಾತ್ರ ಕೆಲ ರೈತರ ಖಾತೆಗೆ ನೇರ ವರ್ಗಾವಣೆಯಾಗಿದೆ ಎಂದು ರೈತರು ದೂರುತ್ತಿದ್ದಾರೆ. ಈ ಕುರಿತು ಹಲವು ರೈತರನ್ನು ಮಾತನಾಡಿಸಿದಾಗ ಎಲ್ಲಾ ದಾಖಲೆ ಸಲ್ಲಿಸಿದ್ದರೂ ಕೇವಲ 2 ಬಾರಿ ಹಣ ಬಂದಿದ್ದು ನಂತರ ಬಂದಿಲ್ಲ ಎಂದು ಕೆಲವು ರೈತರು ಹೇಳಿದ್ದಾರೆ.

ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯ ಮಹಾತ್ವಾಕಾಂಕ್ಷೆಯ ಯೋಜನೆ ಎನ್ನಲಾಗಿದ್ದು, ಲೋಕಸಭಾ ಚುನಾವಣಾ ಪೂರ್ವದಲ್ಲಿ ಈ ಯೋಜನೆ ಘೋಷಣೆ ಮಾಡಲಾಗಿತ್ತು. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಜನವರಿ 2, 2019 ರಂದು ನಡೆದ ಬೃಹತ್ ರೈತರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರಿ ಮೋದಿ ಮೊದಲ ಕಂತು ಬಿಡುಗಡೆ ಮಾಡಿದ್ದರು. ಬಟನ್ ಒತ್ತುವ ಮೂಲಕ ಫಲನುಭವಿ ರೈತರ ಖಾತೆಗೆ ಹಣ ಜಮಾವಣೆ ಮಾಡಿದ್ದರು. ಆರಂಭದಲ್ಲಿ ಎಲ್ಲರಿಗೂ ಹಣ ಜಮೆಗೊಂಡಿತಾದರೂ ನಂತರ ಹಣ ಬರಲೇ ಇಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ವಾರ್ಷಿಕ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ರೈತರ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತ ಬಂದಿದೆ. ಅರ್ಹ ಫಲನುಭವಿ ರೈತರು ಆಧಾರ್, ಮೊಬೈಲ್ ನಂಬರ್, ಪಹಣಿ, ಬ್ಯಾಂಕ್ ಖಾತೆ ಲಿಂಕ್ ಮಾಡಿದರೆ ಹಣ ಬರುತ್ತದೆ ಎಂದು ಸರ್ಕಾರ ಹೇಳಿತ್ತು. ಅದರಂತೆ ಎಲ್ಲಾ ದಾಖಲೆ ಸಲ್ಲಿಸಿದರೂ ಕೆಲವರಿಗೆ ಬಂದಿಲ್ಲ. ಕೆಲವರಿಗೆ ಎರಡು, ಮತ್ತೆ ಹಲವರಿಗೆ ಮೂರು, ನಾಲ್ಕು ಕಂತಿನ ಹಣ ಮಾತ್ರ ಬಂದಿದೆ. ಉಳಿದ ಕಂತಿನ ಹಣ ಬಂದಿಲ್ಲ. ಇದೇಕೆ ಹೀಗೆ? ಎರಡು ಕಂತಿನ ಹಣಬರುವವರೆಗೆ ದಾಖಲೆಗಳು ಸರಿ ಇದ್ದವು. ನಂತರ ದಾಖಲೆಗಳು ಸರಿ ಇಲ್ಲವೇ ಎಂದು ಹಣ ಬಾರದ ರೈತರು ಪ್ರಶ್ನಿಸಿದ್ದಾರೆ.

ಕಳೆದ ಒಂದು ವರ್ಷ 8 ತಿಂಗಳಲ್ಲಿ 6 ಕಂತುಗಳಲ್ಲಿ ಹಣ ಬಿಡುಗಡೆಯಾಗಿದೆ. ಆಗಸ್ಟ್ 9, 2020ರಂದು ಪ್ರಧಾನಿ ಆರನೇ ಕಂತಿನ ಹಣ ರೈತರ ಖಾತೆಗಳಿಗೆ ವರ್ಗಾಯಿಸಿದರು. ಆ ದಿನದ 17 ಸಾವಿರ ಕೋಟಿ ಸೇರಿ ಒಟ್ಟು ಇದುವರೆಗೆ 75 ಸಾವಿರ ಕೋಟಿ ರೂಪಾಯಿಗಳನ್ನು 8.5 ಕೋಟಿ ಫಲನುಭವಿ ರೈತರಿಗೆ ನೀಡಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸುತ್ತವೆ. ವಾಸ್ತವವಾಗಿ ನೋಡಿದರೆ ಕಿಸಾನ್ ಸನ್ಮಾನ್ ನಿಧಿ ಯೋಜನೆ ಘೋಷಣೆಯಾಗಿ 20 ತಿಂಗಳು ಕಳೆದಿವೆ. ಅಂದರೆ ವಾರ್ಷಿಕ ಮೂರು ಕಂತುಗಳಾದರೆ ಒಂದು ವರ್ಷ ಎಂಟು ತಿಂಗಳಿಗೆ 5 ಕಂತುಗಳು ಮಾತ್ರ ಆಗುತ್ತವೆ. ಸರ್ಕಾರದ ಪ್ರಕಾರ ಒಂದು ಕಂತಿನ ಹಣ ಹೆಚ್ಚುವರಿಯಾಗಿ ಬಿಡುಗಡೆಯಾಗಿದೆ.

ಭಾರತ ಕೃಷಿ ಪ್ರಧಾನ ದೇಶ. ಶೇಕಡ 65 ರಷ್ಟು ಕುಟುಂಬಗಳು ಕೃಷಿಯನ್ನೇ ಅವಲಂಬಿಸಿವೆ. ಕೃಷಿಯ ಜೊತೆ ಇತರೆ ಉಪಕಸುಬುಗಳಲ್ಲೂ ತೊಡಗಿಸಿಕೊಂಡಿವೆ. ದೇಶಕ್ಕೆ ಅನ್ನ ನೀಡುವ ರೈತ ಕುಟುಂಬಗಳ ದಿಕ್ಕುಗಾಣದೆ ಜೀವನ ನಡೆಸುತ್ತಿವೆ. ಇಂತಹ ಹೊತ್ತಿನಲ್ಲಿ ಸರ್ಕಾರ ಪ್ರತಿಯೊಬ್ಬ ರೈತ ಈ ಯೋಜನೆ ವ್ಯಾಪ್ತಿಗೆ ಬರುವಂತೆ ನೋಡಿಕೊಳ್ಳಬೇಕಿತ್ತು. ಆದರೆ ಅಂತಹ ಕೆಲಸ ಅಗಿಲ್ಲ. ಪಹಣಿ ಇಲ್ಲದ, ಪಾಲುದಾರಿಕೆ ಸರಿಯಾಗಿ ಆಗದೇ ಇರುವಂಥ, ಬಗರ್ ಹುಕುಂ ಸಾಗುವಳಿಯಲ್ಲಿ ತೊಡಗಿರುವಂಥ ರೈತರೂ ಕೃಷಿ ಸಮ್ಮಾನ್ ಯೋಜನೆಯ ಫಲನುಭವಿಗಳು ಆಗಲು ಸಾಧ್ಯವಾಗಿಲ್ಲ. ಎಷ್ಟೋ ಜಮೀನುಗಳು ಇನ್ನೂ ತಾತ-ಮುತ್ತಾತನ ಹೆಸರಿನಲ್ಲೇ ಓಡುತ್ತಿವೆ. ಇಂತಹ ಸಂಕಷ್ಟಗಳು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿರುವವರಿಗೆ ಕಾಣುತ್ತಿಲ್ಲ.

ಇದನ್ನೂ ಓದಿ: ಹುಲಿಗಳಿಗೆ ಧಾಮ! ರೈತ, ಆದಿವಾಸಿಗಳಿಗೆ ಪಂಗನಾಮ!!

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಟ್ರಾಕ್ಟರ್ ನಲ್ಲಿ ಒಂದು ಗಂಟೆ ಉಳುಮೆ ಮಾಡಲು 1500 ರೂ ನೀಡಬೇಕು. ರಸಗೊಬ್ಬರ ಖರೀದಿಗೆ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ವರ್ಷಕ್ಕೆ 6 ಸಾವಿರ ರೂ ನೀಡಿದರೆ ಯಾವುದಕ್ಕು ಆಗುವುದಿಲ್ಲ. ನಮ್ಮೂರಿನಲ್ಲಿ 300 ರೈತ ಕುಟುಂಬಗಳಿವೆ. ಅವರಲ್ಲಿ ಕೇವಲ 60 ಮಂದಿಗೆ ಮಾತ್ರ ಬಂದಿದೆ. ಅಧಿಕಾರಿಗಳು ರೆಕಾರ್ಡ್ ಮಾತ್ರ ಕೇಳುತ್ತಾರೆ. ಭೂಮಿ ಉಳುವ ಗೇಣಿದಾರನಿಗೆ ಯಾವುದೇ ದಾಖಲೆ ಇಲ್ಲ. ಭೂಮಾಲಿಕರು ಮಾತ್ರ ಕಿಸಾನ್ ಸನ್ಮಾನ್ ಯೋಜನೆಯ ಲಾಭ ಪಡೆಯುತ್ತಾರೆ. ಗೇಣಿದಾರರಿಗೂ ಹಣ ನೀಡಬೇಕು ಎಂಬುದು ನಮ್ಮ ಒತ್ತಾಯ. ದೇಶದಲ್ಲಿ ಬಹುಸಂಖ್ಯಾತರು ರೈತರಾದರೂ ಸರ್ಕಾರದ ನೆರವು ದೊರೆಯುತ್ತಿಲ್ಲ. ಇದು ನೋವಿನ ಸಂಗತಿ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಡಾ. ಸ್ವಾಮಿನಾಥನ್ ವರದಿಯನ್ವಯ ರೈತರು ಮಾಡಿದ ವೆಚ್ಚದ ಒಂದೂವರೆ ಪಟ್ಟು ಹಣ ನೀಡಬೇಕೆಂದು ವ್ಯಾಪಕ ಆಗ್ರಹ ಕೇಳಿಬಂತು. ಇದರ ಒತ್ತಡವನ್ನು ಸಹಿಸದ ಕೇಂದ್ರ ಸರ್ಕಾರ ಅತುರವಾಗಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಜಾರಿಗೆ ತಂದಿತು. ಇದರಿಂದ ನಿಜವಾದ ರೈತರಿಗೆ ಪ್ರಯೋಜನವಿಲ್ಲ. ಇದೊಂದು ನಾಮಕಾವಸ್ತೆ ಮತ್ತು ತೋರಿಕೆಯ ಯೋಜನೆ ಎಂದು ಅವರು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಹೇಳುವಂತೆ, “ಕೇಂದ್ರ ಸರ್ಕಾರ ಕೇವಲ 8.5 ಕೋಟಿ ರೈತರನ್ನು ರೀಚ್ ಆಗಲು ಸಾಧ್ಯವಾಗಿದೆ. ಸರ್ಕಾರ ನೀಡುತ್ತಿರುವ ಹಣ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ. ರೈತರ ಮೂಗಿಗೆ ತುಪ್ಪ ಸವರುವಂತಹ ಕೆಲಸ ಮಾಡಿದೆ. ರೈತರ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ ಇತ್ಯರ್ಥ ಪಡಿಸಿದರೆ, ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ. ರೈತರ ನಿಜವಾದ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಶಿರಾ ತಾಲೂಕಿನ ಗೌಡಗೆರೆ ಗ್ರಾಮದ ಈರಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿದರು ‘’ನನಗೆ ಎರಡು ಕಂತು ಬಂತು ಸ್ವಾಮಿ, ಉಳಿದಿದ್ದು ಬಂದಿಲ್ಲ.. ನಮ್ಮ ಚಿಕ್ಕಪ್ಪನ ಮಕ್ಕಳಿಗೆ ಮೂರು ಕಂತು ಬಂತು. ನಾನು, ಅಧಿಕಾರಿಗಳನ್ನು ಕೇಳಿದೆ. ಬೇರೆಯವರಿಗೆ ಮೂರು ಕಂತು ಬಂದೈತೆ. ನನಗೆ ಎರಡೇ ಕಂತು ಬಂದಿರೋದು ಅಂದ್ರೆ ಬರುತ್ತೆ ಹೋಗಿ ಎಂದು ಹೇಳಿಕಳಿಸ್ತಾರೆ. ಇವಾಗ ನೋಡಿದ್ರೆ 6 ಕಂತು ಹಣ ಬಿಡುಗಡೆ ಆಗೈತೆ ಅಂತಾರೆ. ನನಗೇನು ಬಂದಿಲ್ಲ ಸ್ವಾಮಿ” ಎಂದು ಹೇಳಿದರು.

ಪಾವಗಡ ತಾಲೂಕು ರೈತ ಮುದ್ದಪ್ಪ ಅವರನ್ನು ಸಂಪರ್ಕಿಸಿದಾಗ “ನಮಗೆ ಎರಡು ಸಾರಿ ಬಂದೈತೆ. ಎರಡು ಸರಿನು ಬ್ಯಾಂಕ್‌ಗೆ ಹೋಗಿ ಎರಡೆರಡು ಸಾವಿರ ತಂದ್ವಿ. ಈ ತಿಂಗ್ಳಾಗೆ ಒಂದು ಮೆಸೇಜ್ ಬಂದೈತೆ. 2 ಸಾವಿರ ಹಾಕಿದ್ದೀವಿ ಅಂತ. ಇನ್ನೂ ಹೋಗಿಲ್ಲ. ಹೋಗಿ ತರಬೇಕು. ಇದು ಸೇರಿದ್ರೆ ಮೂರು ಸಾರಿ ಬಂದಂಗಾಗ್ತೈತೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರ 6 ಸಾವಿರ ಘೋಷಣೆ ಮಾಡುತ್ತಿದ್ದಂತೆಯೇ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ರಾಜ್ಯ ಸರ್ಕಾರವೂ 4 ಸಾವಿರ ಕೊಡುತ್ತದೆ ಎಂದು ಭರವಸೆ ನೀಡಿದರು. 2019 ರ ಸಾಲಿನಲ್ಲಿ ರೈತರಿಗೆ ನೀಡಿದ ಭರವಸೆಯಂತೆ ಕೆಲವರಿಗೆ 4 ಸಾವಿರ ರೂಪಾಯಿ ದೊರೆಯಿತು. ಮತ್ತೆ ಕೆಲವರಿಗೆ 2 ಸಾವಿರ ಮಾತ್ರ ಖಾತೆಗೆ ಬಂತು. 2020 ನೇ ಸಾಲಿನಲ್ಲಿ ಕೊರೊನಾ ಬಂದ ಮೇಲೆ ಹಣವೂ ಇಲ್ಲ. ಅದರ ಬಗ್ಗೆ ಸೊಲ್ಲೂ ಇಲ್ಲ ಅನ್ನುವಂತಾಗಿದೆ.

ಕೇಂದ್ರ ಸರ್ಕಾರದ ಕಿಸಾನ್ ಸನ್ಮಾನ್ ಯೋಜನೆ 8.5 ಕೋಟಿ ರೈತರ ಪೈಕಿ ಬಹುತೇಕರಿಗೆ ಎರಡು, ಮೂರು ಮತ್ತು ನಾಲ್ಕು ಬಾರಿ ಹಣ ಬಂದಿದ್ದರೆ, ಕೆಲವೇ ಮಂದಿ ರೈತರಿಗೆ ಆರು ಕಂತುಗಳು ಬಂದಿವೆ. ಆದರೆ ನಿಜ ರೈತ ಫಲನುಭವಿಗಳು ಈ ಯೋಜನೆಯಿಂದ ಹೊರಗಿದ್ದು ಸೌಲಭ್ಯದಿಂದ ವಂಚಿತರಾಗಿದ್ದಾರೆ.


ಓದಿ: ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...