Homeಅಂತರಾಷ್ಟ್ರೀಯಕೆನಡಾ ಫೆಡರಲ್‌ ಚುನಾವಣೆ: ಪ್ರಧಾನಿ ಮಾರ್ಕ್ ಕಾರ್ನಿಯ ಲಿಬರಲ್‌ ಪಕ್ಷಕ್ಕೆ ಮುನ್ನಡೆ

ಕೆನಡಾ ಫೆಡರಲ್‌ ಚುನಾವಣೆ: ಪ್ರಧಾನಿ ಮಾರ್ಕ್ ಕಾರ್ನಿಯ ಲಿಬರಲ್‌ ಪಕ್ಷಕ್ಕೆ ಮುನ್ನಡೆ

- Advertisement -
- Advertisement -

ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರ ಲಿಬರಲ್ ಪಕ್ಷವು ಸೋಮವಾರ (ಏಪ್ರಿಲ್ 28, 2025) ಕೆನಡಾ ಫೆಡರಲ್ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ವರದಿಯಾಗಿದೆ.

ಕೆನಡಾವನ್ನು ಅಮೆರಿಕದ ತೆಕ್ಕೆಗೆ ಪಡೆಯುತ್ತೇವೆ, 51ನೇ ರಾಜ್ಯವನ್ನಾಗಿ ಮಾಡುತ್ತೇವೆ ಎಂಬ ಡೊನಾಲ್ಟ್ ಟ್ರಂಪ್ ಬೆದರಿಕೆ ಮತ್ತು ಟ್ರಂಪ್ ಆಡಳಿತ ವ್ಯಾಪಾರ ಸಂಬಂಧವಾಗಿ ಕೆನಡಾ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ಚುನಾವಣೆಯ ಮೇಲೆ ಪರಿಣಾಮ ಬೀರಿದೆ ಎಂದು ವರದಿಗಳು ಹೇಳಿವೆ.

ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ ಬಳಿಕ ಒಟ್ಟಾವದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮಾರ್ಕ್ ಕಾರ್ನಿ, “ಅಮೆರಿಕದ ಬೆದರಿಕೆಗಳನ್ನು ಎದುರಿಸಲು ಕೆನಡಿಯನ್ನರು ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದ್ದಾರೆ. ಎರಡನೇ ಮಹಾಯುದ್ದದ ನಂತರ ಕೆನಡಾ ಮತ್ತು ಅಮೆರಿಕ ಹಂಚಿಕೊಂಡಿದ್ದ ಪರಸ್ಪರ ಪ್ರಯೋಜನಕಾರಿ ವ್ಯವಸ್ಥೆಯ ಕುರಿತು ಚುನಾವಣೆ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಅವರು ಪುನರುಚ್ಚರಿಸಿದ್ದಾರೆ. ನಾವು ಅಮೆರಿಕದ ದ್ರೋಹದ ಆಘಾತದಿಂದ ಹೊರಬಂದಿದ್ದೇವೆ, ಆದರೆ ನಾವು ಅವರಿಂದ ಅನುಭವಿಸಿದ್ದನ್ನು ಎಂದಿಗೂ ಮರೆಯಬಾರದು” ಎಂದು ಹೇಳಿದ್ದಾರೆ.

ಅಮೆರಿಕದ ಜೊತೆಗಿನ ಹಳೆಯ ಸಂಬಂಧ ಮುಗಿದೋಗಿದೆ. ನಮ್ಮ ಬಗ್ಗೆ ನಾವು ಎಚ್ಚರ, ಕಾಳಜಿ ವಹಿಸಬೇಕು. ಯುಎಸ್‌ ಜೊತೆಗಿನ ವ್ಯಾಪಾರ ಯುದ್ದದಲ್ಲಿ ನಾವು ಗೆಲ್ಲುತ್ತೇವೆ ಎಂದ ಮಾರ್ಕ್ ಕಾರ್ನಿ, ಯುಎಸ್‌ನ ಸುಂಕ ಹೇರಿಕೆ ಮತ್ತು ಸ್ವಾಧೀನ ಬೆದರಿಕೆಯಿಂದ ಮುಂದೆ ಉಂಟಾಗುವ ಅಪಾಯಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಮತ ಎಣಿಕೆ ಮುಗಿಯುವಾಗ ಲಿಬರಲ್‌ಗಳು ಸಂಸತ್ತಿನ 343 ಸ್ಥಾನಗಳಲ್ಲಿ ಕನ್ಸರ್ವೇಟಿವ್ ಪಕ್ಷಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೂ, ಅವರು ಸಂಪೂರ್ಣ ಬಹುಮತ ಗಳಿಸುತ್ತಾರಾ? ಅಥವಾ ಸರ್ಕಾರ ರಚಿಸಲು ಮತ್ತು ಶಾಸನ ಅಂಗೀಕರಿಸಲು ಒಂದು ಅಥವಾ ಅದಕ್ಕಿಂತ ಹೆಚ್ಚು ಸಣ್ಣ ಪಕ್ಷಗಳನ್ನು ಅವಲಂಬಿಸಬೇಕೇ ಎಂಬುದು ತಕ್ಷಣ ಸ್ಪಷ್ಟವಾಗಿಲ್ಲ ಎಂದು ವರದಿಯಾಗಿದೆ.

ಟ್ರಕ್ ಚಾಲಕರು ಇಂಗ್ಲಿಷ್‌ ತಿಳಿದಿರಬೇಕು ಎಂಬ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ; ಕಳವಳ ವ್ಯಕ್ತಪಡಿಸಿದ ಸಿಖ್ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...