Homeಅಂತರಾಷ್ಟ್ರೀಯಕೆನಡಾ ಫೆಡರಲ್‌ ಚುನಾವಣೆ: ಪ್ರಧಾನಿ ಮಾರ್ಕ್ ಕಾರ್ನಿಯ ಲಿಬರಲ್‌ ಪಕ್ಷಕ್ಕೆ ಮುನ್ನಡೆ

ಕೆನಡಾ ಫೆಡರಲ್‌ ಚುನಾವಣೆ: ಪ್ರಧಾನಿ ಮಾರ್ಕ್ ಕಾರ್ನಿಯ ಲಿಬರಲ್‌ ಪಕ್ಷಕ್ಕೆ ಮುನ್ನಡೆ

- Advertisement -
- Advertisement -

ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರ ಲಿಬರಲ್ ಪಕ್ಷವು ಸೋಮವಾರ (ಏಪ್ರಿಲ್ 28, 2025) ಕೆನಡಾ ಫೆಡರಲ್ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ವರದಿಯಾಗಿದೆ.

ಕೆನಡಾವನ್ನು ಅಮೆರಿಕದ ತೆಕ್ಕೆಗೆ ಪಡೆಯುತ್ತೇವೆ, 51ನೇ ರಾಜ್ಯವನ್ನಾಗಿ ಮಾಡುತ್ತೇವೆ ಎಂಬ ಡೊನಾಲ್ಟ್ ಟ್ರಂಪ್ ಬೆದರಿಕೆ ಮತ್ತು ಟ್ರಂಪ್ ಆಡಳಿತ ವ್ಯಾಪಾರ ಸಂಬಂಧವಾಗಿ ಕೆನಡಾ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ಚುನಾವಣೆಯ ಮೇಲೆ ಪರಿಣಾಮ ಬೀರಿದೆ ಎಂದು ವರದಿಗಳು ಹೇಳಿವೆ.

ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ ಬಳಿಕ ಒಟ್ಟಾವದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮಾರ್ಕ್ ಕಾರ್ನಿ, “ಅಮೆರಿಕದ ಬೆದರಿಕೆಗಳನ್ನು ಎದುರಿಸಲು ಕೆನಡಿಯನ್ನರು ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದ್ದಾರೆ. ಎರಡನೇ ಮಹಾಯುದ್ದದ ನಂತರ ಕೆನಡಾ ಮತ್ತು ಅಮೆರಿಕ ಹಂಚಿಕೊಂಡಿದ್ದ ಪರಸ್ಪರ ಪ್ರಯೋಜನಕಾರಿ ವ್ಯವಸ್ಥೆಯ ಕುರಿತು ಚುನಾವಣೆ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಅವರು ಪುನರುಚ್ಚರಿಸಿದ್ದಾರೆ. ನಾವು ಅಮೆರಿಕದ ದ್ರೋಹದ ಆಘಾತದಿಂದ ಹೊರಬಂದಿದ್ದೇವೆ, ಆದರೆ ನಾವು ಅವರಿಂದ ಅನುಭವಿಸಿದ್ದನ್ನು ಎಂದಿಗೂ ಮರೆಯಬಾರದು” ಎಂದು ಹೇಳಿದ್ದಾರೆ.

ಅಮೆರಿಕದ ಜೊತೆಗಿನ ಹಳೆಯ ಸಂಬಂಧ ಮುಗಿದೋಗಿದೆ. ನಮ್ಮ ಬಗ್ಗೆ ನಾವು ಎಚ್ಚರ, ಕಾಳಜಿ ವಹಿಸಬೇಕು. ಯುಎಸ್‌ ಜೊತೆಗಿನ ವ್ಯಾಪಾರ ಯುದ್ದದಲ್ಲಿ ನಾವು ಗೆಲ್ಲುತ್ತೇವೆ ಎಂದ ಮಾರ್ಕ್ ಕಾರ್ನಿ, ಯುಎಸ್‌ನ ಸುಂಕ ಹೇರಿಕೆ ಮತ್ತು ಸ್ವಾಧೀನ ಬೆದರಿಕೆಯಿಂದ ಮುಂದೆ ಉಂಟಾಗುವ ಅಪಾಯಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಮತ ಎಣಿಕೆ ಮುಗಿಯುವಾಗ ಲಿಬರಲ್‌ಗಳು ಸಂಸತ್ತಿನ 343 ಸ್ಥಾನಗಳಲ್ಲಿ ಕನ್ಸರ್ವೇಟಿವ್ ಪಕ್ಷಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೂ, ಅವರು ಸಂಪೂರ್ಣ ಬಹುಮತ ಗಳಿಸುತ್ತಾರಾ? ಅಥವಾ ಸರ್ಕಾರ ರಚಿಸಲು ಮತ್ತು ಶಾಸನ ಅಂಗೀಕರಿಸಲು ಒಂದು ಅಥವಾ ಅದಕ್ಕಿಂತ ಹೆಚ್ಚು ಸಣ್ಣ ಪಕ್ಷಗಳನ್ನು ಅವಲಂಬಿಸಬೇಕೇ ಎಂಬುದು ತಕ್ಷಣ ಸ್ಪಷ್ಟವಾಗಿಲ್ಲ ಎಂದು ವರದಿಯಾಗಿದೆ.

ಟ್ರಕ್ ಚಾಲಕರು ಇಂಗ್ಲಿಷ್‌ ತಿಳಿದಿರಬೇಕು ಎಂಬ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ; ಕಳವಳ ವ್ಯಕ್ತಪಡಿಸಿದ ಸಿಖ್ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...