Homeಅಂತರಾಷ್ಟ್ರೀಯಕೆನಡಾ ಫೆಡರಲ್‌ ಚುನಾವಣೆ: ಪ್ರಧಾನಿ ಮಾರ್ಕ್ ಕಾರ್ನಿಯ ಲಿಬರಲ್‌ ಪಕ್ಷಕ್ಕೆ ಮುನ್ನಡೆ

ಕೆನಡಾ ಫೆಡರಲ್‌ ಚುನಾವಣೆ: ಪ್ರಧಾನಿ ಮಾರ್ಕ್ ಕಾರ್ನಿಯ ಲಿಬರಲ್‌ ಪಕ್ಷಕ್ಕೆ ಮುನ್ನಡೆ

- Advertisement -
- Advertisement -

ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರ ಲಿಬರಲ್ ಪಕ್ಷವು ಸೋಮವಾರ (ಏಪ್ರಿಲ್ 28, 2025) ಕೆನಡಾ ಫೆಡರಲ್ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ವರದಿಯಾಗಿದೆ.

ಕೆನಡಾವನ್ನು ಅಮೆರಿಕದ ತೆಕ್ಕೆಗೆ ಪಡೆಯುತ್ತೇವೆ, 51ನೇ ರಾಜ್ಯವನ್ನಾಗಿ ಮಾಡುತ್ತೇವೆ ಎಂಬ ಡೊನಾಲ್ಟ್ ಟ್ರಂಪ್ ಬೆದರಿಕೆ ಮತ್ತು ಟ್ರಂಪ್ ಆಡಳಿತ ವ್ಯಾಪಾರ ಸಂಬಂಧವಾಗಿ ಕೆನಡಾ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ಚುನಾವಣೆಯ ಮೇಲೆ ಪರಿಣಾಮ ಬೀರಿದೆ ಎಂದು ವರದಿಗಳು ಹೇಳಿವೆ.

ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ ಬಳಿಕ ಒಟ್ಟಾವದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮಾರ್ಕ್ ಕಾರ್ನಿ, “ಅಮೆರಿಕದ ಬೆದರಿಕೆಗಳನ್ನು ಎದುರಿಸಲು ಕೆನಡಿಯನ್ನರು ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದ್ದಾರೆ. ಎರಡನೇ ಮಹಾಯುದ್ದದ ನಂತರ ಕೆನಡಾ ಮತ್ತು ಅಮೆರಿಕ ಹಂಚಿಕೊಂಡಿದ್ದ ಪರಸ್ಪರ ಪ್ರಯೋಜನಕಾರಿ ವ್ಯವಸ್ಥೆಯ ಕುರಿತು ಚುನಾವಣೆ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಅವರು ಪುನರುಚ್ಚರಿಸಿದ್ದಾರೆ. ನಾವು ಅಮೆರಿಕದ ದ್ರೋಹದ ಆಘಾತದಿಂದ ಹೊರಬಂದಿದ್ದೇವೆ, ಆದರೆ ನಾವು ಅವರಿಂದ ಅನುಭವಿಸಿದ್ದನ್ನು ಎಂದಿಗೂ ಮರೆಯಬಾರದು” ಎಂದು ಹೇಳಿದ್ದಾರೆ.

ಅಮೆರಿಕದ ಜೊತೆಗಿನ ಹಳೆಯ ಸಂಬಂಧ ಮುಗಿದೋಗಿದೆ. ನಮ್ಮ ಬಗ್ಗೆ ನಾವು ಎಚ್ಚರ, ಕಾಳಜಿ ವಹಿಸಬೇಕು. ಯುಎಸ್‌ ಜೊತೆಗಿನ ವ್ಯಾಪಾರ ಯುದ್ದದಲ್ಲಿ ನಾವು ಗೆಲ್ಲುತ್ತೇವೆ ಎಂದ ಮಾರ್ಕ್ ಕಾರ್ನಿ, ಯುಎಸ್‌ನ ಸುಂಕ ಹೇರಿಕೆ ಮತ್ತು ಸ್ವಾಧೀನ ಬೆದರಿಕೆಯಿಂದ ಮುಂದೆ ಉಂಟಾಗುವ ಅಪಾಯಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಮತ ಎಣಿಕೆ ಮುಗಿಯುವಾಗ ಲಿಬರಲ್‌ಗಳು ಸಂಸತ್ತಿನ 343 ಸ್ಥಾನಗಳಲ್ಲಿ ಕನ್ಸರ್ವೇಟಿವ್ ಪಕ್ಷಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೂ, ಅವರು ಸಂಪೂರ್ಣ ಬಹುಮತ ಗಳಿಸುತ್ತಾರಾ? ಅಥವಾ ಸರ್ಕಾರ ರಚಿಸಲು ಮತ್ತು ಶಾಸನ ಅಂಗೀಕರಿಸಲು ಒಂದು ಅಥವಾ ಅದಕ್ಕಿಂತ ಹೆಚ್ಚು ಸಣ್ಣ ಪಕ್ಷಗಳನ್ನು ಅವಲಂಬಿಸಬೇಕೇ ಎಂಬುದು ತಕ್ಷಣ ಸ್ಪಷ್ಟವಾಗಿಲ್ಲ ಎಂದು ವರದಿಯಾಗಿದೆ.

ಟ್ರಕ್ ಚಾಲಕರು ಇಂಗ್ಲಿಷ್‌ ತಿಳಿದಿರಬೇಕು ಎಂಬ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ; ಕಳವಳ ವ್ಯಕ್ತಪಡಿಸಿದ ಸಿಖ್ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...