Homeಮುಖಪುಟ370ನೇ ವಿದಿ ರದ್ದು "ಸರ್ದಾರ್ ಪಟೇಲ್ ಮತ್ತು ಅಂಬೇಡ್ಕರ್ ಅವರ ಕನಸಾಗಿತ್ತು":- ಪ್ರಧಾನಿ ನರೇಂದ್ರ ಮೋದಿ

370ನೇ ವಿದಿ ರದ್ದು “ಸರ್ದಾರ್ ಪಟೇಲ್ ಮತ್ತು ಅಂಬೇಡ್ಕರ್ ಅವರ ಕನಸಾಗಿತ್ತು”:- ಪ್ರಧಾನಿ ನರೇಂದ್ರ ಮೋದಿ

ಬಾಲಿವುಡ್ ಚಲನಚಿತ್ರ ತಯಾರಕರ ಕಾಶ್ಮೀರವು ನೆಚ್ಚಿನ ತಾಣವಾಗಿತ್ತು, ಭವಿಷ್ಯದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರಗಳನ್ನೂ ಸಹ ಅಲ್ಲಿ ಚಿತ್ರೀಕರಿಸಲಾಗುವುದು ಎಂದು ನನಗೆ ವಿಶ್ವಾಸವಿದೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವುದು “ಸರ್ದಾರ್ ವಲ್ಲಭಾಯಿ ಪಟೇಲ್ ಮತ್ತು ಬಿ ಆರ್ ಅಂಬೇಡ್ಕರ್ ಅವರ ಕನಸಾಗಿತ್ತು” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. ಇದರಿಂದ ಈ ರಾಜ್ಯದಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಲಿದೆ ಎಂದಿದ್ದಾರೆ.

“ಜಮ್ಮು ಕಾಶ್ಮೀರದಲ್ಲಿ ಹೊಸ ಯುಗ ಪ್ರಾರಂಭವಾಗಿದೆ. ಕೆಲವೊಮ್ಮೆ ಏನೂ ಆಗುವುದಿಲ್ಲ ಎಂದು ನಾವು ಭಾವಿಸುತ್ತೇವೆ, ಅದು 370 ನೇ ವಿಧಿಯೊಂದಿಗೆ ನಡೆಯುತ್ತಿದೆ. 370 ನೇ ವಿಧಿಯನ್ನು ರದ್ದುಪಡಿಸುವುದು ಹೊಸ ಯುಗದ ಪ್ರಾರಂಭವಾಗಿದೆ, ”ಎಂದು ಪ್ರಧಾನಿ ಮೋದಿ ಹೇಳಿದರು.

370 ನೇ ವಿಧಿಯಿಂದಾಗಿ ಹಲವು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದ ಜನರು ಬಹಳಷ್ಪು  ಪ್ರಯೋಜನಗಳನ್ನು ಕಳೆದುಕೊಂಡಿದ್ದಾರೆ ಎಂದ ಅವರು ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವೆಂದು ಹೆಸರಿಸಿರುವ ಯೋಜನೆ ತಾತ್ಕಾಲಿಕವಾಗಿದೆ ಎಂದು ಅವರು ಜನರಿಗೆ ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿಯನ್ನು ರದ್ದುಪಡಿಸುವ ನಿರ್ಣಯವನ್ನು ಸಂಸತ್ತು ಮಂಗಳವಾರ ಅಂಗೀಕರಿಸಿದೆ. ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮಸೂದೆಯನ್ನು ಅದು ಪಾಸು ಮಾಡಿದೆ.

ಇಂತಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಿದ ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ ಮೋದಿ “ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅನೇಕ ಪೊಲೀಸರು ಮತ್ತು ಅಮಾಯಕರು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ದಶಕಗಳಿಂದ, ಸಾವಿರಾರು, ಲಕ್ಷಾಂತರ ಜನರಿಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕಿದೆ. ಆದರೆ ಅವರಿಗೆ ಮತ ಚಲಾಯಿಸಲು ಅಥವಾ ವಿಧಾನಸಭೆ / ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. 1947 ರಲ್ಲಿ ವಿಭಜನೆಯ ನಂತರ ಭಾರತಕ್ಕೆ ಬಂದವರು ಇವರು. ಈ ಅನ್ಯಾಯ ಮುಂದುವರೆದಿರಬೇಕೇ? ’ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.

“ಇಲ್ಲಿನ ಪರಿಸ್ಥಿತಿಯು ಸಾಮಾನ್ಯ ಸ್ಥಿತಿಗೆ ಮರಳುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಅಲ್ಲಿನ ಜನರು ಈ ಕ್ರಮವನ್ನು ಒಪ್ಪದವರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ, ಈದ್ ಆಚರಣೆಗಳಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ, ”ಎಂದು ಪಿಎಂ ಹೇಳಿದರು.

“ಜಮ್ಮು ಕಾಶ್ಮೀರದಲ್ಲಿ ದಶಕಗಳ ರಾಜವಂಶದ ಆಡಳಿತದಿಂದ ಯುವಜನರನ್ನು ರಾಜಕೀಯ ನಾಯಕತ್ವದಿಂದ ದೂರವಿಡಲಾಗಿತ್ತು. ಈಗ ಜಮ್ಮು ಕಾಶ್ಮೀರದ ನನ್ನ ಯುವಜನರು ಅಭಿವೃದ್ಧಿ ಕಾರ್ಯಗಳನ್ನು ಮುನ್ನಡೆಸುತ್ತಾರೆ ಮತ್ತು ಈ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ”ಎಂದು ಪ್ರಧಾನಿ ಮೋದಿ ಹೇಳಿದರು.

“ಲಡಾಕ್ ನಲ್ಲಿ ಇನ್ನು ಮುಂದೆ ಯಾವುದೇ  ತಾರತಮ್ಯರಹಿತ ಅಭಿವೃದ್ಧಿ ಕೆಲಸಗಳು ನಡೆಯುತ್ತವೆ. ಲಡಾಖ್ ಸೌರಶಕ್ತಿ ಕೇಂದ್ರವಾಗಿದ್ದು, ಇದು ಬಹುದೊಡ್ಡ ಸೌರಶಕ್ತಿ ಸಾಮರ್ಥ್ಯವನ್ನು ಹೊಂದಿದೆ ”ಎಂದು ಪ್ರಧಾನಿ ಮೋದಿ ಹೇಳಿದರು.

“ಬಾಲಿವುಡ್ ಚಲನಚಿತ್ರ ತಯಾರಕರ ಕಾಶ್ಮೀರವು ನೆಚ್ಚಿನ ತಾಣವಾಗಿತ್ತು, ಭವಿಷ್ಯದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರಗಳನ್ನೂ ಸಹ ಅಲ್ಲಿ ಚಿತ್ರೀಕರಿಸಲಾಗುವುದು ಎಂದು ನನಗೆ ವಿಶ್ವಾಸವಿದೆ” ಎಂದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ತಂತ್ರಜ್ಞಾನವನ್ನು ವಿಸ್ತರಿಸಿ

ಜಮ್ಮು ಕಾಶ್ಮೀರದಲ್ಲಿ ತಂತ್ರಜ್ಞಾನವನ್ನು ಉತ್ತೇಜಿಸಲು ಮತ್ತು ವಿಸ್ತರಿಸಲು ಪಿಎಂ ಮೋದಿ ಖಾಸಗಿ ವಲಯವನ್ನು ಒತ್ತಾಯಿಸಿದರು. “ತಂತ್ರಜ್ಞಾನ ಹರಡಿದಂತೆ ಯುವಜನರು ಏಳಿಗೆ ಹೊಂದುತ್ತಾರೆ” ಎಂದು ಪ್ರಧಾನಿ ಮೋದಿ. ಜೊತೆಗೆ ಜಮ್ಮು ಕಾಶ್ಮೀರ ಮತ್ತು ಲಡಾಖ್ ವಿಶ್ವದ ಅತಿದೊಡ್ಡ ಪ್ರವಾಸಿ ಕೇಂದ್ರವಾಗಬಲ್ಲ ಸಾಮರ್ಥ್ಯವನ್ನು ಹೊಂದಿದೆ” ಎಂದಿದ್ದಾರೆ.

“ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ಸೋಲಿಸುತ್ತದೆ ಮತ್ತು ಅಭಿವೃದ್ಧಿಯನ್ನು ಸ್ವಾಗತಿಸುತ್ತದೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪಂಚಾಯತ್ ನಾಯಕರು ಈಗಾಗಲೇ ರಾಜ್ಯದಲ್ಲಿ ಅಭಿವೃದ್ಧಿಯನ್ನು ತಂದಿದ್ದಾರೆ “ಎಂದು ಪ್ರಧಾನಿ ಮೋದಿ ಹೇಳಿದರು.

ಈಗ ಜಮ್ಮು ಕಾಶ್ಮೀರದಲ್ಲಿ ಐಐಟಿಗಳು ಮತ್ತು ಐಐಎಂಗಳು ಇರಲಿವೆ. ರಾಜ್ಯದಲ್ಲಿ ಸಂಪರ್ಕವನ್ನು ಸುಧಾರಿಸುವ ಯೋಜನೆಗಳಿವೆ ”ಎಂದ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿನ ಹಣಕಾಸಿನ ಕೊರತೆಯನ್ನು ಕೇಂದ್ರವು ನಿಭಾಯಿಸಲಿದ್ದು, ಈಗ ರಾಜ್ಯದಲ್ಲಿ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಕೇವಲ ಕಾಗದದಲ್ಲಿದ್ದ ಯೋಜನೆಗಳನ್ನು ಈಗ ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.

370 ನೇ ವಿಧಿಯಿಂದಾಗಿ, ಜಮ್ಮು ಕಾಶ್ಮೀರದಲ್ಲಿ ಜಾರಿಗೆ ಬಂದ ಕಾನೂನುಗಳನ್ನು ಅನ್ವಯಿಸಲಾಗಿಲ್ಲ. ದೇಶದ ಇತರ ಮಹಿಳೆಯರಿಗೆ ರಾಜ್ಯದ ಮಹಿಳೆಯರಿಗೆ ಒಂದೇ ರೀತಿಯ ಹಕ್ಕು ಇರಲಿಲ್ಲ ”ಎಂದು ಪಿಎಂ ಹೇಳಿದರು. 370 ನೇ ವಿಧಿಯನ್ನು ರದ್ದುಗೊಳಿಸುವುದರೊಂದಿಗೆ, ಅವರ ಭವಿಷ್ಯವು ಈಗ ಸುರಕ್ಷಿತವಾಗಿದೆ ಎಂದು ಅವರು ಹೇಳಿದರು.

“ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಕೆಲವು ಜನರನ್ನು ಪ್ರಚೋದಿಸಿತು. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಕ್‌ನಲ್ಲಿ ಯಾವುದೇ ಅಭಿವೃದ್ಧಿ ಇರಲಿಲ್ಲ. 42,000 ಅಮಾಯಕ ಜನರು ಕೊಲ್ಲಲ್ಪಟ್ಟರು, ”ಎಂದು ಪಿಎಂ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...