Homeಮುಖಪುಟಭಾರತದ ಭೂಪ್ರದೇಶವನ್ನು ಚೀನಾಗೆ ಬಿಟ್ಟುಕೊಟ್ಟ ಪ್ರಧಾನಿ ಮೋದಿ ಒಬ್ಬ ಹೇಡಿ: ರಾಹುಲ್ ಗಾಂಧಿ

ಭಾರತದ ಭೂಪ್ರದೇಶವನ್ನು ಚೀನಾಗೆ ಬಿಟ್ಟುಕೊಟ್ಟ ಪ್ರಧಾನಿ ಮೋದಿ ಒಬ್ಬ ಹೇಡಿ: ರಾಹುಲ್ ಗಾಂಧಿ

ಈಗ ನಾವು ಫಿಂಗರ್ 4 ರಿಂದ ಫಿಂಗರ್ 3 ಗೆ ಸ್ಥಳಾಂತರಗೊಂಡಿದ್ದು ಏಕೆ? ಏಕೆ ನಮ್ಮ ಪ್ರದೇಶವನ್ನು ಬಿಟ್ಟುಕೊಡಲಾಯಿತು? ಇದರಿಂದ ಭಾರತವು ಏನು ಪಡೆಯುತ್ತದೆ?

- Advertisement -
- Advertisement -

ಭಾರತದ ಪವಿತ್ರ ಭೂಮಿಯನ್ನು ಚೀನಿಯರಿಗೆ ಬಿಟ್ಟುಕೊಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಚೀನಾದ ಎದುರು ನಿಲ್ಲಲಾಗದ ಹೇಡಿ. ಏಕೆ ಭಾರತದ ಭೂಪ್ರದೇಶವನ್ನ ಬಿಟ್ಟುಕೊಡಲಾಯಿತು ಎಂದು ಮೋದಿ ಮತ್ತು ರಕ್ಷಣಾ ಸಚಿವರು ಉತ್ತರಿಸಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಸೈನ್ಯವು ಈಗ ಫಿಂಗರ್ 3 ನಲ್ಲಿ ಬೀಡುಬಿಡಲಿದೆ ಎಂದು ನಾವು ಕಂಡುಕೊಂಡಿದ್ದೇವೆ. ಫಿಂಗರ್ 4 ನಮ್ಮ ಪ್ರದೇಶವಾಗಿದೆ. ನಾವು ಅಲ್ಲಿರಬೇಕಿತ್ತು. ಈಗ ನಾವು ಫಿಂಗರ್ 4 ರಿಂದ ಫಿಂಗರ್ 3 ಗೆ ಸ್ಥಳಾಂತರಗೊಂಡಿದ್ದು ಏಕೆ? ಏಕೆ ನಮ್ಮ ಪ್ರದೇಶವನ್ನು ಬಿಟ್ಟುಕೊಡಲಾಯಿತು? ಇದರಿಂದ ಭಾರತವು ಏನು ಪಡೆಯುತ್ತದೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತೀಯ ಸೈನ್ಯವು ತನ್ನ ಕಠಿಣ ಶ್ರಮದಿಂದ ಅದನ್ನು ಸಂಪಾದಿಸಿತ್ತು. ಆದರೆ ಇಂದು ಅದು ಹಿಂದಕ್ಕೆ ಸರಿಯಬೇಕಾಗಿದೆ. ಆದರೆ ಚೀನಿಯರು ಮಾತ್ರ ಒಂದಿಂಚೂ ಹಿಂದೆ ಸರಿಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ದೇಶದ ಭೂಪ್ರದೇಶವನ್ನು ರಕ್ಷಿಸುವುದು ಪ್ರಧಾನಮಂತ್ರಿಯ ಜವಾಬ್ದಾರಿಯಾಗಿದೆ. ಅದನ್ನು ಹೇಗೆ ಮಾಡುತ್ತಾರೆ ಎಂಬುದು ಅವರ ಸಮಸ್ಯೆಯಾಗಿದೆ. ಪ್ರಧಾನಿ ಚೀನಿಯರ ಎದುರು ನಿಲ್ಲಲು ಸಾಧ್ಯವಿಲ್ಲದ ಹೇಡಿ. ಅವರು ನಮ್ಮ ಸೈನ್ಯವನ್ನು ದೂಷಿಸುತ್ತಿದ್ದಾರೆ. ನಮ್ಮ ಸೈನ್ಯದ ತ್ಯಾಗಕ್ಕೆ ದ್ರೋಹ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ನಿನ್ನೆ ರಕ್ಷಣಾ ಸಚಿವರು ಪೂರ್ವ ಲಡಾಕ್ ಪರಿಸ್ಥಿತಿ ಕುರಿತು ಹೇಳಿಕೆ ನೀಡಿದ್ದಾರೆ. ಈಗ ಮೋದಿ ನಮ್ಮ ಪ್ರದೇಶವನ್ನು ಚೀನಿಯರಿಗೆ ಏಕೆ ಬಿಟ್ಟುಕೊಟ್ಟಿದ್ದಾರೆ ಎಂಬುದಕ್ಕೆ ಉತ್ತರ ಕೊಡುತ್ತಾರೆಯೇ? 2020ರ ಏಪ್ರಿಲ್‌ನಿಂದ ಯಥಾಸ್ಥಿತಿಯನ್ನು ಮುಂದುವರೆಸಬೇಕೆಂದು ಅಂದುಕೊಳ್ಳಲಾಗಿತ್ತು. ಆದರೆ ಚೀನಿಯರು ಪ್ಯಾಂಗಂಗ್ ಸರೋವರದ ಬಳಿ ಬಂದು ಕುಳಿತಿದ್ದಾರೆ. ಕೈಲಾಸ್ ರೇಂಜ್‌ ಅನ್ನು ವಾಪಸ್ ಏಕೆ ಕೊಡಲಾಗಿದೆ? ಇದು 100% ಹೇಡಿತನವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಇದರ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ಮಾಡಲು ನಮಗೆ ಅವಕಾಶ ನೀಡುವುದಿಲ್ಲ ಎಂಬುದು ನಮಗೆ ಖಾತ್ರಿ ಇದೆ. ಚೀನಾದ ಪಡೆಗಳು ನಮ್ಮ ದೇಶದೊಳಕ್ಕೆ ನುಸುಳಿವೆ ಎಂಬುದು ಇಡೀ ಪ್ರಪಂಚಕ್ಕೆ ಗೊತ್ತಿದೆ. ಆದರೂ ಮೋದಿ ಏನು ಮಾಡುತ್ತಿಲ್ಲ ಎಂದರೆ ಏನರ್ಥ? ಇದಕ್ಕಾಗಿಯೇ ಅವರು ಆಡಳಿತ ನಡೆಸುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ನನಗೆ ಭಾರತೀಯ ಸೈನ್ಯ, ವಾಯುಸೇನೆ, ನೌಕದಳ, ಭಾರತೀಯ ಜನರ ಮೇಲೆ ನಂಬಿಕೆ ಇದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ನಡವಳಿಕೆಯ ಮೇಲೆ ನಂಬಿಕೆ ಇಲ್ಲ ಎಂದು ರಾಹುಲ್ ತಿಳಿಸಿದ್ದಾರೆ.


ಇದನ್ನೂ ಓದಿ: ನಾವಿಬ್ಬರು, ನಮಗಿಬ್ಬರು ಎಂದು 4 ಜನರು ದೇಶ ಆಳುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...