Homeಫ್ಯಾಕ್ಟ್‌ಚೆಕ್ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಸಂಶಯಗಳನ್ನು ನಿವಾರಿಸಿದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಮಧ್ಯೆ, ಪ್ರಧಾನಿ ಮೋದಿ ಗುಜರಾತ್‌ನ ಕಚ್‌ನಲ್ಲಿನ ರೈತರ ನಿಯೋಗದೊಂದಿಗೆ ಭೇಟಿಯಾಗಿದ್ದಾರೆ ಎಂದು ಮಾಧ್ಯಮದಲ್ಲಿ ಸುದ್ದಿಯಾಗಿದ್ದ ವರದಿಯ ಸತ್ಯಾಸತ್ಯತೆ ಹೊರಬಿದ್ದಿದೆ. ವಾಸ್ತವದಲ್ಲಿ ಪ್ರಧಾನಿಯು ಬಿಜೆಪಿ ಕಾರ್ಯಕರ್ತರ ನಿಯೋಗವನ್ನು ಭೇಟಿ ಮಾಡಿದ್ದು ಅದನ್ನು ಮಾಧ್ಯಮಗಳು ರೈತರೊಂದಿಗಿನ ಭೇಟಿಯೆಂದು ಬಿಂಬಿಸಿದ್ದಾರೆ ಎನ್ನಲಾಗಿದೆ.

“ಪ್ರಧಾನಿ ನರೇಂದ್ರ ಮೋದಿ ಗುಜರಾತ್‍ನ ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಅವರ ಸಂಶಯಗಳನ್ನು ನಿವಾರಿಸಿದರು” ಎಂದು ಮಾಧ್ಯಮಗಲ್ಲಿ ವರದಿಯಾಗಿದ್ದವು.

ಆದರೆ ಈ ವರದಿಗಳು ಸುಳ್ಳಾಗಿದ್ದು, ಇದು ಕೇವಲ ರೈತ ಪ್ರತಿಭಟನೆಯಿಂದ ಜನರ ಗಮನ ಬೇರೆಡೆ ಸೆಳೆಯುವ ತಂತ್ರಗಾರಿಕೆಯಾಗಿತ್ತು ಹಾಗೂ ಪ್ರಧಾನಿಗೆ ರೈತರ ಪ್ರತಿಭಟನೆ ಕುರಿತು ಕಳವಳವಿದೆ ಎಂದು ತೋರಿಸುವ ಯತ್ನವಾಗಿತ್ತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ. ಈ ಬಗ್ಗೆ ತನಿಖಾ ಲೇಖನ ಪ್ರಕಟಸಿರುವ ಪತ್ರಿಕೆಯು ಪ್ರಧಾನಿ ಕಚ್ಛ್ ಗೆ ಭೇಟಿ ನೀಡಿದಾಗ ಅವರು ಮಾತುಕತೆ ನಡೆಸಿದ ರೈತರು ವಾಸ್ತವವಾಗಿ ರೈತರಲ್ಲ ಬದಲು ಸಿಖ್ ಸಮುದಾಯಕ್ಕೆ ಸೇರಿದ ಬಿಜೆಪಿ ಕಾರ್ಯಕರ್ತರು ಎಂದು ತಿಳಿದು ಬಂದಿದೆ ಎಂದಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಪ್ ಮುಖಂಡರು

ರೈತರೆಂದು ಕರೆಯಲ್ಪಡುವ ನಿಯೋಗವನ್ನು ಮುನ್ನಡೆಸಿದ ವ್ಯಕ್ತಿ ರಾಜು ಭಾಯಿ ಸರ್ದಾರ್ ಕಚ್ ವಲಯದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದು, ಅವರು ಡಿಸೆಂಬರ್ 15 ರಂದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದ ಚಿತ್ರದಲ್ಲಿ ಪ್ರಧಾನಿ ಎದುರು ಕೇಸರಿ ರುಮಾಲು ಧರಿಸಿ ಕುಳಿತಿರುವುದನ್ನು ಕಾಣಬಹುದು.

ಗುಜರಾತ್ ಮುಖ್ಯಮಂತ್ರಿಯ ಟ್ವಿಟ್ಟರ್ ಹ್ಯಾಂಡಲ್ ಚಿತ್ರವನ್ನು ಟ್ವೀಟ್ ಮಾಡುವಾಗ, “ಕರಕುಶಲ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಸ್ಥಳೀಯ ಕಚ್ಚಿ ಮಹಿಳೆಯರ ಗುಂಪುಗಳನ್ನು ಮತ್ತು ಕಚ್‌‌ನಲ್ಲಿ ನೆಲೆ ನಿಂತಿರುವ ’ಸಿಖ್ ರೈತ’ರನ್ನು ಭೇಟಿಯಾದರು” ಎಂದು ಹೇಳಿದೆ. ಅಲ್ಲದೆ ಸ್ವತಃ ರಾಜು ಭಾಯಿ ಕೂಡಾ ತಾನು ರೈತರ ನಿಯೋಗವನ್ನು ಮುನ್ನಡೆಸಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

 

ಆದರೆ ಆಜ್‌ತಕ್ ಟಿವಿ ನ್ಯೂಸ್ ಚಾನೆಲ್‌ನ ವರದಿಗಾರ್ತಿ, ಸಭೆಯಲ್ಲಿ ಚರ್ಚಿಸಲಾದ ವಿಷಯದ ಬಗ್ಗೆ ವ್ಯಕ್ತಿಯೊಬ್ಬರೊಂದಿಗೆ ಪ್ರಶ್ನಿಸಿದಾಗ, ಗುರುದ್ವಾರದ ಬಗ್ಗೆ ಚರ್ಚೆಯನ್ನು ಕೇಂದ್ರೀಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಈ ನಡುವೆ, ಪ್ರಧಾನಿ ಮೋದಿ ರೈತರು ಎಂದು ಕರೆಯಲ್ಪಡುವವರೊಂದಿಗೆ ಸಭೆ ನಡೆಸುತ್ತಿದ್ದ ಅದೇ ಸಮಯದಲ್ಲಿ, ನಿಜವಾದ ರೈತರ ಗುಂಪು ಕೃಷಿ ಕಾನೂನುಗಳ ವಿರುದ್ಧ ಕಚ್‌ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಪ್ರತಿಭಟನಾ ನಿರತ ರೈತರ ಸುದ್ದಿಯನ್ನು ಗುಜರಾತಿ ಮತ್ತು ರಾಷ್ಟ್ರೀಯ ಮಾಧ್ಯಮಗಳು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದವು ಎನ್ನಲಾಗಿದೆ.

ಇದನ್ನೂ ಓದಿ: ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ಕಚ್ ರಾಜಕೀಯವನ್ನು ತಿಳಿದಿರುವವರು ಹೇಳುವಂತೆ, ರಾಜು ಭಾಯ್ ಸರ್ದಾರ್ ಅವರ ನಿಜವಾದ ಹೆಸರು ಜುಗರಾಜ್ ಸಿಂಗ್. ಅವರು ನಾರಾ ಗ್ರಾಮಕ್ಕೆ ಸೇರಿದವರಾಗಿದ್ದು, ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಬಿಜೆಪಿಯ ವಲಯ ಕಾರ್ಯದರ್ಶಿಯಾಗುವ ಮೊದಲು ಅವರು ಬಿಜೆಪಿ ಬೆಂಬಲದೊಂದಿಗೆ ನಾರಾದ ಸರ್ಪಂಚ್ ಆಗಿ ಆಯ್ಕೆಯಾಗಿದ್ದರು.

ಸಿಖ್ ಸಮುದಾಯದ ಹೆಚ್ಚಿನ ಜನಸಂಖ್ಯೆಯಿಂದಾಗಿ ನಾರಾವನ್ನು ಕಚ್ ಪ್ರದೇಶದ ಮಿನಿ-ಪಂಜಾಬ್ ಎಂದು ಕರೆಯಲಾಗುತ್ತದೆ. ಈ ಪ್ರದೇಶದ ನಾರಾ ಮತ್ತು ಕೊಠಾರಾ ಗ್ರಾಮಗಳಲ್ಲಿ ಸಿಖ್ ಸಮುದಾಯವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ.

ಅಲ್ಲದೆ ರಾಜು ಭಾಯ್ ”ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 15 ಅಂಶಗಳ ಕಾರ್ಯಕ್ರಮ ಸಮಿತಿ”ಯ ಸದಸ್ಯರಾಗಿದ್ದಾರೆ ಎಂದು ಅವರ ವೆಬ್‌ಸೈಟ್ ಹೇಳಿಕೊಂಡಿದೆ. ಪ್ರಸ್ತುತ ಲಖಪತ್ ಸರೈನಲ್ಲಿ 18 ಕೊಠಡಿಗಳ ರೆಸಾರ್ಟ್ ನಿರ್ಮಾಣ ಕಾರ್ಯದಲ್ಲಿ ನಿರತರಾಗಿರುವ ರಾಜು ಭಾಯ್ ಸರ್ದಾರ್ ಲಖಪತ್ ತಾಲ್ಲೂಕು ಗುರುದ್ವಾರದ ಮುಖ್ಯಸ್ಥರಾಗಿದ್ದಾರೆ.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...