Homeಫ್ಯಾಕ್ಟ್‌ಚೆಕ್ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಸಂಶಯಗಳನ್ನು ನಿವಾರಿಸಿದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಮಧ್ಯೆ, ಪ್ರಧಾನಿ ಮೋದಿ ಗುಜರಾತ್‌ನ ಕಚ್‌ನಲ್ಲಿನ ರೈತರ ನಿಯೋಗದೊಂದಿಗೆ ಭೇಟಿಯಾಗಿದ್ದಾರೆ ಎಂದು ಮಾಧ್ಯಮದಲ್ಲಿ ಸುದ್ದಿಯಾಗಿದ್ದ ವರದಿಯ ಸತ್ಯಾಸತ್ಯತೆ ಹೊರಬಿದ್ದಿದೆ. ವಾಸ್ತವದಲ್ಲಿ ಪ್ರಧಾನಿಯು ಬಿಜೆಪಿ ಕಾರ್ಯಕರ್ತರ ನಿಯೋಗವನ್ನು ಭೇಟಿ ಮಾಡಿದ್ದು ಅದನ್ನು ಮಾಧ್ಯಮಗಳು ರೈತರೊಂದಿಗಿನ ಭೇಟಿಯೆಂದು ಬಿಂಬಿಸಿದ್ದಾರೆ ಎನ್ನಲಾಗಿದೆ.

“ಪ್ರಧಾನಿ ನರೇಂದ್ರ ಮೋದಿ ಗುಜರಾತ್‍ನ ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಅವರ ಸಂಶಯಗಳನ್ನು ನಿವಾರಿಸಿದರು” ಎಂದು ಮಾಧ್ಯಮಗಲ್ಲಿ ವರದಿಯಾಗಿದ್ದವು.

ಆದರೆ ಈ ವರದಿಗಳು ಸುಳ್ಳಾಗಿದ್ದು, ಇದು ಕೇವಲ ರೈತ ಪ್ರತಿಭಟನೆಯಿಂದ ಜನರ ಗಮನ ಬೇರೆಡೆ ಸೆಳೆಯುವ ತಂತ್ರಗಾರಿಕೆಯಾಗಿತ್ತು ಹಾಗೂ ಪ್ರಧಾನಿಗೆ ರೈತರ ಪ್ರತಿಭಟನೆ ಕುರಿತು ಕಳವಳವಿದೆ ಎಂದು ತೋರಿಸುವ ಯತ್ನವಾಗಿತ್ತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ. ಈ ಬಗ್ಗೆ ತನಿಖಾ ಲೇಖನ ಪ್ರಕಟಸಿರುವ ಪತ್ರಿಕೆಯು ಪ್ರಧಾನಿ ಕಚ್ಛ್ ಗೆ ಭೇಟಿ ನೀಡಿದಾಗ ಅವರು ಮಾತುಕತೆ ನಡೆಸಿದ ರೈತರು ವಾಸ್ತವವಾಗಿ ರೈತರಲ್ಲ ಬದಲು ಸಿಖ್ ಸಮುದಾಯಕ್ಕೆ ಸೇರಿದ ಬಿಜೆಪಿ ಕಾರ್ಯಕರ್ತರು ಎಂದು ತಿಳಿದು ಬಂದಿದೆ ಎಂದಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಪ್ ಮುಖಂಡರು

ರೈತರೆಂದು ಕರೆಯಲ್ಪಡುವ ನಿಯೋಗವನ್ನು ಮುನ್ನಡೆಸಿದ ವ್ಯಕ್ತಿ ರಾಜು ಭಾಯಿ ಸರ್ದಾರ್ ಕಚ್ ವಲಯದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದು, ಅವರು ಡಿಸೆಂಬರ್ 15 ರಂದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದ ಚಿತ್ರದಲ್ಲಿ ಪ್ರಧಾನಿ ಎದುರು ಕೇಸರಿ ರುಮಾಲು ಧರಿಸಿ ಕುಳಿತಿರುವುದನ್ನು ಕಾಣಬಹುದು.

ಗುಜರಾತ್ ಮುಖ್ಯಮಂತ್ರಿಯ ಟ್ವಿಟ್ಟರ್ ಹ್ಯಾಂಡಲ್ ಚಿತ್ರವನ್ನು ಟ್ವೀಟ್ ಮಾಡುವಾಗ, “ಕರಕುಶಲ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಸ್ಥಳೀಯ ಕಚ್ಚಿ ಮಹಿಳೆಯರ ಗುಂಪುಗಳನ್ನು ಮತ್ತು ಕಚ್‌‌ನಲ್ಲಿ ನೆಲೆ ನಿಂತಿರುವ ’ಸಿಖ್ ರೈತ’ರನ್ನು ಭೇಟಿಯಾದರು” ಎಂದು ಹೇಳಿದೆ. ಅಲ್ಲದೆ ಸ್ವತಃ ರಾಜು ಭಾಯಿ ಕೂಡಾ ತಾನು ರೈತರ ನಿಯೋಗವನ್ನು ಮುನ್ನಡೆಸಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

 

ಆದರೆ ಆಜ್‌ತಕ್ ಟಿವಿ ನ್ಯೂಸ್ ಚಾನೆಲ್‌ನ ವರದಿಗಾರ್ತಿ, ಸಭೆಯಲ್ಲಿ ಚರ್ಚಿಸಲಾದ ವಿಷಯದ ಬಗ್ಗೆ ವ್ಯಕ್ತಿಯೊಬ್ಬರೊಂದಿಗೆ ಪ್ರಶ್ನಿಸಿದಾಗ, ಗುರುದ್ವಾರದ ಬಗ್ಗೆ ಚರ್ಚೆಯನ್ನು ಕೇಂದ್ರೀಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಈ ನಡುವೆ, ಪ್ರಧಾನಿ ಮೋದಿ ರೈತರು ಎಂದು ಕರೆಯಲ್ಪಡುವವರೊಂದಿಗೆ ಸಭೆ ನಡೆಸುತ್ತಿದ್ದ ಅದೇ ಸಮಯದಲ್ಲಿ, ನಿಜವಾದ ರೈತರ ಗುಂಪು ಕೃಷಿ ಕಾನೂನುಗಳ ವಿರುದ್ಧ ಕಚ್‌ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಪ್ರತಿಭಟನಾ ನಿರತ ರೈತರ ಸುದ್ದಿಯನ್ನು ಗುಜರಾತಿ ಮತ್ತು ರಾಷ್ಟ್ರೀಯ ಮಾಧ್ಯಮಗಳು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದವು ಎನ್ನಲಾಗಿದೆ.

ಇದನ್ನೂ ಓದಿ: ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ಕಚ್ ರಾಜಕೀಯವನ್ನು ತಿಳಿದಿರುವವರು ಹೇಳುವಂತೆ, ರಾಜು ಭಾಯ್ ಸರ್ದಾರ್ ಅವರ ನಿಜವಾದ ಹೆಸರು ಜುಗರಾಜ್ ಸಿಂಗ್. ಅವರು ನಾರಾ ಗ್ರಾಮಕ್ಕೆ ಸೇರಿದವರಾಗಿದ್ದು, ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಬಿಜೆಪಿಯ ವಲಯ ಕಾರ್ಯದರ್ಶಿಯಾಗುವ ಮೊದಲು ಅವರು ಬಿಜೆಪಿ ಬೆಂಬಲದೊಂದಿಗೆ ನಾರಾದ ಸರ್ಪಂಚ್ ಆಗಿ ಆಯ್ಕೆಯಾಗಿದ್ದರು.

ಸಿಖ್ ಸಮುದಾಯದ ಹೆಚ್ಚಿನ ಜನಸಂಖ್ಯೆಯಿಂದಾಗಿ ನಾರಾವನ್ನು ಕಚ್ ಪ್ರದೇಶದ ಮಿನಿ-ಪಂಜಾಬ್ ಎಂದು ಕರೆಯಲಾಗುತ್ತದೆ. ಈ ಪ್ರದೇಶದ ನಾರಾ ಮತ್ತು ಕೊಠಾರಾ ಗ್ರಾಮಗಳಲ್ಲಿ ಸಿಖ್ ಸಮುದಾಯವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ.

ಅಲ್ಲದೆ ರಾಜು ಭಾಯ್ ”ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 15 ಅಂಶಗಳ ಕಾರ್ಯಕ್ರಮ ಸಮಿತಿ”ಯ ಸದಸ್ಯರಾಗಿದ್ದಾರೆ ಎಂದು ಅವರ ವೆಬ್‌ಸೈಟ್ ಹೇಳಿಕೊಂಡಿದೆ. ಪ್ರಸ್ತುತ ಲಖಪತ್ ಸರೈನಲ್ಲಿ 18 ಕೊಠಡಿಗಳ ರೆಸಾರ್ಟ್ ನಿರ್ಮಾಣ ಕಾರ್ಯದಲ್ಲಿ ನಿರತರಾಗಿರುವ ರಾಜು ಭಾಯ್ ಸರ್ದಾರ್ ಲಖಪತ್ ತಾಲ್ಲೂಕು ಗುರುದ್ವಾರದ ಮುಖ್ಯಸ್ಥರಾಗಿದ್ದಾರೆ.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...