Homeಫ್ಯಾಕ್ಟ್‌ಚೆಕ್ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಸಂಶಯಗಳನ್ನು ನಿವಾರಿಸಿದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಮಧ್ಯೆ, ಪ್ರಧಾನಿ ಮೋದಿ ಗುಜರಾತ್‌ನ ಕಚ್‌ನಲ್ಲಿನ ರೈತರ ನಿಯೋಗದೊಂದಿಗೆ ಭೇಟಿಯಾಗಿದ್ದಾರೆ ಎಂದು ಮಾಧ್ಯಮದಲ್ಲಿ ಸುದ್ದಿಯಾಗಿದ್ದ ವರದಿಯ ಸತ್ಯಾಸತ್ಯತೆ ಹೊರಬಿದ್ದಿದೆ. ವಾಸ್ತವದಲ್ಲಿ ಪ್ರಧಾನಿಯು ಬಿಜೆಪಿ ಕಾರ್ಯಕರ್ತರ ನಿಯೋಗವನ್ನು ಭೇಟಿ ಮಾಡಿದ್ದು ಅದನ್ನು ಮಾಧ್ಯಮಗಳು ರೈತರೊಂದಿಗಿನ ಭೇಟಿಯೆಂದು ಬಿಂಬಿಸಿದ್ದಾರೆ ಎನ್ನಲಾಗಿದೆ.

“ಪ್ರಧಾನಿ ನರೇಂದ್ರ ಮೋದಿ ಗುಜರಾತ್‍ನ ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಅವರ ಸಂಶಯಗಳನ್ನು ನಿವಾರಿಸಿದರು” ಎಂದು ಮಾಧ್ಯಮಗಲ್ಲಿ ವರದಿಯಾಗಿದ್ದವು.

ಆದರೆ ಈ ವರದಿಗಳು ಸುಳ್ಳಾಗಿದ್ದು, ಇದು ಕೇವಲ ರೈತ ಪ್ರತಿಭಟನೆಯಿಂದ ಜನರ ಗಮನ ಬೇರೆಡೆ ಸೆಳೆಯುವ ತಂತ್ರಗಾರಿಕೆಯಾಗಿತ್ತು ಹಾಗೂ ಪ್ರಧಾನಿಗೆ ರೈತರ ಪ್ರತಿಭಟನೆ ಕುರಿತು ಕಳವಳವಿದೆ ಎಂದು ತೋರಿಸುವ ಯತ್ನವಾಗಿತ್ತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ. ಈ ಬಗ್ಗೆ ತನಿಖಾ ಲೇಖನ ಪ್ರಕಟಸಿರುವ ಪತ್ರಿಕೆಯು ಪ್ರಧಾನಿ ಕಚ್ಛ್ ಗೆ ಭೇಟಿ ನೀಡಿದಾಗ ಅವರು ಮಾತುಕತೆ ನಡೆಸಿದ ರೈತರು ವಾಸ್ತವವಾಗಿ ರೈತರಲ್ಲ ಬದಲು ಸಿಖ್ ಸಮುದಾಯಕ್ಕೆ ಸೇರಿದ ಬಿಜೆಪಿ ಕಾರ್ಯಕರ್ತರು ಎಂದು ತಿಳಿದು ಬಂದಿದೆ ಎಂದಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಪ್ ಮುಖಂಡರು

ರೈತರೆಂದು ಕರೆಯಲ್ಪಡುವ ನಿಯೋಗವನ್ನು ಮುನ್ನಡೆಸಿದ ವ್ಯಕ್ತಿ ರಾಜು ಭಾಯಿ ಸರ್ದಾರ್ ಕಚ್ ವಲಯದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದು, ಅವರು ಡಿಸೆಂಬರ್ 15 ರಂದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದ ಚಿತ್ರದಲ್ಲಿ ಪ್ರಧಾನಿ ಎದುರು ಕೇಸರಿ ರುಮಾಲು ಧರಿಸಿ ಕುಳಿತಿರುವುದನ್ನು ಕಾಣಬಹುದು.

ಗುಜರಾತ್ ಮುಖ್ಯಮಂತ್ರಿಯ ಟ್ವಿಟ್ಟರ್ ಹ್ಯಾಂಡಲ್ ಚಿತ್ರವನ್ನು ಟ್ವೀಟ್ ಮಾಡುವಾಗ, “ಕರಕುಶಲ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಸ್ಥಳೀಯ ಕಚ್ಚಿ ಮಹಿಳೆಯರ ಗುಂಪುಗಳನ್ನು ಮತ್ತು ಕಚ್‌‌ನಲ್ಲಿ ನೆಲೆ ನಿಂತಿರುವ ’ಸಿಖ್ ರೈತ’ರನ್ನು ಭೇಟಿಯಾದರು” ಎಂದು ಹೇಳಿದೆ. ಅಲ್ಲದೆ ಸ್ವತಃ ರಾಜು ಭಾಯಿ ಕೂಡಾ ತಾನು ರೈತರ ನಿಯೋಗವನ್ನು ಮುನ್ನಡೆಸಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

 

ಆದರೆ ಆಜ್‌ತಕ್ ಟಿವಿ ನ್ಯೂಸ್ ಚಾನೆಲ್‌ನ ವರದಿಗಾರ್ತಿ, ಸಭೆಯಲ್ಲಿ ಚರ್ಚಿಸಲಾದ ವಿಷಯದ ಬಗ್ಗೆ ವ್ಯಕ್ತಿಯೊಬ್ಬರೊಂದಿಗೆ ಪ್ರಶ್ನಿಸಿದಾಗ, ಗುರುದ್ವಾರದ ಬಗ್ಗೆ ಚರ್ಚೆಯನ್ನು ಕೇಂದ್ರೀಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಈ ನಡುವೆ, ಪ್ರಧಾನಿ ಮೋದಿ ರೈತರು ಎಂದು ಕರೆಯಲ್ಪಡುವವರೊಂದಿಗೆ ಸಭೆ ನಡೆಸುತ್ತಿದ್ದ ಅದೇ ಸಮಯದಲ್ಲಿ, ನಿಜವಾದ ರೈತರ ಗುಂಪು ಕೃಷಿ ಕಾನೂನುಗಳ ವಿರುದ್ಧ ಕಚ್‌ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಪ್ರತಿಭಟನಾ ನಿರತ ರೈತರ ಸುದ್ದಿಯನ್ನು ಗುಜರಾತಿ ಮತ್ತು ರಾಷ್ಟ್ರೀಯ ಮಾಧ್ಯಮಗಳು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದವು ಎನ್ನಲಾಗಿದೆ.

ಇದನ್ನೂ ಓದಿ: ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ಕಚ್ ರಾಜಕೀಯವನ್ನು ತಿಳಿದಿರುವವರು ಹೇಳುವಂತೆ, ರಾಜು ಭಾಯ್ ಸರ್ದಾರ್ ಅವರ ನಿಜವಾದ ಹೆಸರು ಜುಗರಾಜ್ ಸಿಂಗ್. ಅವರು ನಾರಾ ಗ್ರಾಮಕ್ಕೆ ಸೇರಿದವರಾಗಿದ್ದು, ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಬಿಜೆಪಿಯ ವಲಯ ಕಾರ್ಯದರ್ಶಿಯಾಗುವ ಮೊದಲು ಅವರು ಬಿಜೆಪಿ ಬೆಂಬಲದೊಂದಿಗೆ ನಾರಾದ ಸರ್ಪಂಚ್ ಆಗಿ ಆಯ್ಕೆಯಾಗಿದ್ದರು.

ಸಿಖ್ ಸಮುದಾಯದ ಹೆಚ್ಚಿನ ಜನಸಂಖ್ಯೆಯಿಂದಾಗಿ ನಾರಾವನ್ನು ಕಚ್ ಪ್ರದೇಶದ ಮಿನಿ-ಪಂಜಾಬ್ ಎಂದು ಕರೆಯಲಾಗುತ್ತದೆ. ಈ ಪ್ರದೇಶದ ನಾರಾ ಮತ್ತು ಕೊಠಾರಾ ಗ್ರಾಮಗಳಲ್ಲಿ ಸಿಖ್ ಸಮುದಾಯವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ.

ಅಲ್ಲದೆ ರಾಜು ಭಾಯ್ ”ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 15 ಅಂಶಗಳ ಕಾರ್ಯಕ್ರಮ ಸಮಿತಿ”ಯ ಸದಸ್ಯರಾಗಿದ್ದಾರೆ ಎಂದು ಅವರ ವೆಬ್‌ಸೈಟ್ ಹೇಳಿಕೊಂಡಿದೆ. ಪ್ರಸ್ತುತ ಲಖಪತ್ ಸರೈನಲ್ಲಿ 18 ಕೊಠಡಿಗಳ ರೆಸಾರ್ಟ್ ನಿರ್ಮಾಣ ಕಾರ್ಯದಲ್ಲಿ ನಿರತರಾಗಿರುವ ರಾಜು ಭಾಯ್ ಸರ್ದಾರ್ ಲಖಪತ್ ತಾಲ್ಲೂಕು ಗುರುದ್ವಾರದ ಮುಖ್ಯಸ್ಥರಾಗಿದ್ದಾರೆ.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...