Homeಮುಖಪುಟಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

ಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

- Advertisement -
- Advertisement -

“ಕಳೆದ ವರ್ಷವೇ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (ಸಿಎನ್‌ಸಿಐ) ಎರಡನೇ ಕ್ಯಾಂಪಸ್ ಉದ್ಘಾಟಿಸಿದ್ದೆ. ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ಮತ್ತೆ ಶುಕ್ರವಾರ ದೇಶಕ್ಕೆ ಸಮರ್ಪಿಸಿದ್ದಾರೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಪ್ರಧಾನಿಯವರು ಈ ಯೋಜನೆಯನ್ನು ವರ್ಚ್ಯೂವಲ್‌ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದ್ದಾರೆ. ಸಾಂಕ್ರಾಮಿಕದ ಸಮಯದಲ್ಲಿ ಕೋವಿಡ್ ಕೇಂದ್ರದ ಅಗತ್ಯವಿದ್ದಾಗ ನಾವು ಅದನ್ನು ಈಗಾಗಲೇ ಉದ್ಘಾಟಿಸಿದ್ದೇವೆ ಎಂದು ನಾನು ಪ್ರಧಾನಿಗೆ ತಿಳಿಸಲು ಬಯಸುತ್ತೇನೆ. ಇದು ನಮಗೆ ಸಾಕಷ್ಟು ಸಹಾಯ ಮಾಡಿದೆ. ಈ ಸಂಸ್ಥೆಯು ರಾಜ್ಯ ಸರ್ಕಾರದೊಂದಿಗೆ ಸಂಬಂಧ ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿಯವರ ವರ್ಚ್ಯೂಯಲ್‌‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ರಾಜ್ಯವು 71 ಕೋಟಿ ರೂಪಾಯಿಗಳ ವೆಚ್ಚವನ್ನು ಭರಿಸುತ್ತದೆ. ಯೋಜನೆಗೆ ರಾಜ್ಯವು ಶೇ 25 ರಷ್ಟು ಹಣವನ್ನು ನೀಡುತ್ತಿದೆ ಎಂದು ತಿಳಿದಾಗ ಪ್ರಧಾನಿಯವರು ಸಂತೋಷಪಡುತ್ತಾರೆ. ಎರಡನೇ ಕ್ಯಾಂಪಸ್‌ಗಾಗಿ ನಾವು 11 ಎಕರೆ ಭೂಮಿಯನ್ನು ಸಿಎನ್‌ಸಿಐಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಕ್ಯಾಂಪಸ್ ಅನ್ನು ಉದ್ಘಾಟಿಸಿ ಅದನ್ನು ದೇಶದ ಜನರಿಗೆ ಅರ್ಪಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಮಮತಾ ಬ್ಯಾನರ್ಜಿಯವರು ಧನ್ಯವಾದ ಸಮರ್ಪಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಎರಡು ಬಾರಿ ಆಹ್ವಾನಿಸಿದ ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಿ ಮಮತಾ ಬ್ಯಾನರ್ಜಿ ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ಹಿರಿಯ ಸಲಹೆಗಾರರನ್ನು ತೊಡಗಿಸಿಕೊಳ್ಳುವ ತನ್ನ ಸರ್ಕಾರದ ನಿರ್ಧಾರವನ್ನು ಉಲ್ಲೇಖಿಸಿದ ಬ್ಯಾನರ್ಜಿ, ಈ ಕ್ರಮದ ಹಿಂದಿನ ಕಾರಣವನ್ನು ರಾಜ್ಯಪಾಲ ಜಗದೀಪ್ ಧಂಖರ್ ಪ್ರಶ್ನಿಸುತ್ತಿದ್ದಾರೆ ಎಂದು ಪ್ರಧಾನಿಯವರಲ್ಲಿ ದೂರಿದರು.

“ನೀವು (ಮೋದಿ) ನಮಗೆ ಹೊರಗಿನಿಂದ ಜನರನ್ನು ನೇಮಿಸಲು ಸಲಹೆಗಳನ್ನು ನೀಡಿದ್ದೀರಿ. ನಾವು ಅದನ್ನು ಅನುಸರಿಸಿದ್ದೇವೆ. ಆದರೆ ಈ ನಿರ್ಧಾರ ಏಕೆ ತೆಗೆದುಕೊಂಡಿದ್ದೀರಿ ಎಂದು ರಾಜ್ಯಪಾಲರು ನನ್ನನ್ನು ಪ್ರಶ್ನಿಸಿದ್ದಾರೆ. ನಾವು ಪ್ರಧಾನಿಯವರ ಸಲಹೆಯನ್ನು ಅನುಸರಿಸಿದ್ದೇವೆ ಎಂಬ ಸುಳಿವು ಇಲ್ಲ. ರಾಜಕೀಯ ದೃಷ್ಟಿಕೋನ ಏನೇ ಇರಲಿ, ಆದರೆ ನಾವು ಕೇಂದ್ರದ ಮಾರ್ಗಸೂಚಿಗಳನ್ನು ಅನುಸರಿಸುತ್ತೇವೆ. ನಾವು ಅದನ್ನು 99ರಷ್ಟು ಪ್ರತಿಶತ ಅನುಸರಿಸಲು ಪ್ರಯತ್ನಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸುವಂತೆ ಬ್ಯಾನರ್ಜಿಯವರು ಪ್ರಧಾನಿಯವರಲ್ಲಿ ಮನವಿ ಮಾಡಿದರು. “ವೈದ್ಯರ ಕೊರತೆಯಿದೆ. ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸಬೇಕು. 75 ವೈದ್ಯರು ಕೋವಿಡ್‌ನಿಂದ ಬಳಲುತ್ತಿರುವ ಒಂದು ಆಸ್ಪತ್ರೆಯಿದೆ. ರೋಗಿಗಳ ಚಿಕಿತ್ಸೆಯನ್ನು ಹೇಗೆ ಕೈಗೊಳ್ಳಲಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಕೋವಿಡ್ ನಿಯಂತ್ರಣಾ ಲಸಿಕೆಯನ್ನು ನೀಡುವಲ್ಲಿ ಪಶ್ಚಿಮ ಬಂಗಾಳವು ದೇಶದಲ್ಲಿ ನಂ. 1 ಸ್ಥಾನದಲ್ಲಿದೆ. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಲಸಿಕೆ ವ್ಯರ್ಥವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾಗಿ ನ್ಯಾಷನಲ್‌ ಹೆರಾಲ್ಡ್‌ ವರದಿ ಮಾಡಿದೆ.

ನಮ್ಮ ದೇಶಕ್ಕೆ ಕೆಟ್ಟ ಹೆಸರು ಬರದಂತೆ ನಾವು (ರಾಜ್ಯ ಸರ್ಕಾರ) ನಮ್ಮ ಕೆಲಸಗಳ ಮೂಲಕ ಖಚಿತಪಡಿಸಿಕೊಂಡಿದ್ದೇವೆ. ಸ್ವಾಸ್ಥ್ಯ ಸತಿ (ಆರೋಗ್ಯ ವಿಮಾ ಯೋಜನೆ) ಥರದ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಡಯಾಲಿಸಿಸ್ ಕೇಂದ್ರಗಳನ್ನು ಪ್ರಾರಂಭಿಸಿದ್ದೇವೆ. ಜನರು ಔಷಧಿಗಳ ಮೇಲೆ ಶೇಕಡಾ 40ರಷ್ಟು ರಿಯಾಯಿತಿಗಳನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...