Homeಮುಖಪುಟಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

ಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

- Advertisement -
- Advertisement -

“ಕಳೆದ ವರ್ಷವೇ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (ಸಿಎನ್‌ಸಿಐ) ಎರಡನೇ ಕ್ಯಾಂಪಸ್ ಉದ್ಘಾಟಿಸಿದ್ದೆ. ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ಮತ್ತೆ ಶುಕ್ರವಾರ ದೇಶಕ್ಕೆ ಸಮರ್ಪಿಸಿದ್ದಾರೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಪ್ರಧಾನಿಯವರು ಈ ಯೋಜನೆಯನ್ನು ವರ್ಚ್ಯೂವಲ್‌ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದ್ದಾರೆ. ಸಾಂಕ್ರಾಮಿಕದ ಸಮಯದಲ್ಲಿ ಕೋವಿಡ್ ಕೇಂದ್ರದ ಅಗತ್ಯವಿದ್ದಾಗ ನಾವು ಅದನ್ನು ಈಗಾಗಲೇ ಉದ್ಘಾಟಿಸಿದ್ದೇವೆ ಎಂದು ನಾನು ಪ್ರಧಾನಿಗೆ ತಿಳಿಸಲು ಬಯಸುತ್ತೇನೆ. ಇದು ನಮಗೆ ಸಾಕಷ್ಟು ಸಹಾಯ ಮಾಡಿದೆ. ಈ ಸಂಸ್ಥೆಯು ರಾಜ್ಯ ಸರ್ಕಾರದೊಂದಿಗೆ ಸಂಬಂಧ ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿಯವರ ವರ್ಚ್ಯೂಯಲ್‌‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ರಾಜ್ಯವು 71 ಕೋಟಿ ರೂಪಾಯಿಗಳ ವೆಚ್ಚವನ್ನು ಭರಿಸುತ್ತದೆ. ಯೋಜನೆಗೆ ರಾಜ್ಯವು ಶೇ 25 ರಷ್ಟು ಹಣವನ್ನು ನೀಡುತ್ತಿದೆ ಎಂದು ತಿಳಿದಾಗ ಪ್ರಧಾನಿಯವರು ಸಂತೋಷಪಡುತ್ತಾರೆ. ಎರಡನೇ ಕ್ಯಾಂಪಸ್‌ಗಾಗಿ ನಾವು 11 ಎಕರೆ ಭೂಮಿಯನ್ನು ಸಿಎನ್‌ಸಿಐಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಕ್ಯಾಂಪಸ್ ಅನ್ನು ಉದ್ಘಾಟಿಸಿ ಅದನ್ನು ದೇಶದ ಜನರಿಗೆ ಅರ್ಪಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಮಮತಾ ಬ್ಯಾನರ್ಜಿಯವರು ಧನ್ಯವಾದ ಸಮರ್ಪಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಎರಡು ಬಾರಿ ಆಹ್ವಾನಿಸಿದ ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಿ ಮಮತಾ ಬ್ಯಾನರ್ಜಿ ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ಹಿರಿಯ ಸಲಹೆಗಾರರನ್ನು ತೊಡಗಿಸಿಕೊಳ್ಳುವ ತನ್ನ ಸರ್ಕಾರದ ನಿರ್ಧಾರವನ್ನು ಉಲ್ಲೇಖಿಸಿದ ಬ್ಯಾನರ್ಜಿ, ಈ ಕ್ರಮದ ಹಿಂದಿನ ಕಾರಣವನ್ನು ರಾಜ್ಯಪಾಲ ಜಗದೀಪ್ ಧಂಖರ್ ಪ್ರಶ್ನಿಸುತ್ತಿದ್ದಾರೆ ಎಂದು ಪ್ರಧಾನಿಯವರಲ್ಲಿ ದೂರಿದರು.

“ನೀವು (ಮೋದಿ) ನಮಗೆ ಹೊರಗಿನಿಂದ ಜನರನ್ನು ನೇಮಿಸಲು ಸಲಹೆಗಳನ್ನು ನೀಡಿದ್ದೀರಿ. ನಾವು ಅದನ್ನು ಅನುಸರಿಸಿದ್ದೇವೆ. ಆದರೆ ಈ ನಿರ್ಧಾರ ಏಕೆ ತೆಗೆದುಕೊಂಡಿದ್ದೀರಿ ಎಂದು ರಾಜ್ಯಪಾಲರು ನನ್ನನ್ನು ಪ್ರಶ್ನಿಸಿದ್ದಾರೆ. ನಾವು ಪ್ರಧಾನಿಯವರ ಸಲಹೆಯನ್ನು ಅನುಸರಿಸಿದ್ದೇವೆ ಎಂಬ ಸುಳಿವು ಇಲ್ಲ. ರಾಜಕೀಯ ದೃಷ್ಟಿಕೋನ ಏನೇ ಇರಲಿ, ಆದರೆ ನಾವು ಕೇಂದ್ರದ ಮಾರ್ಗಸೂಚಿಗಳನ್ನು ಅನುಸರಿಸುತ್ತೇವೆ. ನಾವು ಅದನ್ನು 99ರಷ್ಟು ಪ್ರತಿಶತ ಅನುಸರಿಸಲು ಪ್ರಯತ್ನಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸುವಂತೆ ಬ್ಯಾನರ್ಜಿಯವರು ಪ್ರಧಾನಿಯವರಲ್ಲಿ ಮನವಿ ಮಾಡಿದರು. “ವೈದ್ಯರ ಕೊರತೆಯಿದೆ. ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸಬೇಕು. 75 ವೈದ್ಯರು ಕೋವಿಡ್‌ನಿಂದ ಬಳಲುತ್ತಿರುವ ಒಂದು ಆಸ್ಪತ್ರೆಯಿದೆ. ರೋಗಿಗಳ ಚಿಕಿತ್ಸೆಯನ್ನು ಹೇಗೆ ಕೈಗೊಳ್ಳಲಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಕೋವಿಡ್ ನಿಯಂತ್ರಣಾ ಲಸಿಕೆಯನ್ನು ನೀಡುವಲ್ಲಿ ಪಶ್ಚಿಮ ಬಂಗಾಳವು ದೇಶದಲ್ಲಿ ನಂ. 1 ಸ್ಥಾನದಲ್ಲಿದೆ. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಲಸಿಕೆ ವ್ಯರ್ಥವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾಗಿ ನ್ಯಾಷನಲ್‌ ಹೆರಾಲ್ಡ್‌ ವರದಿ ಮಾಡಿದೆ.

ನಮ್ಮ ದೇಶಕ್ಕೆ ಕೆಟ್ಟ ಹೆಸರು ಬರದಂತೆ ನಾವು (ರಾಜ್ಯ ಸರ್ಕಾರ) ನಮ್ಮ ಕೆಲಸಗಳ ಮೂಲಕ ಖಚಿತಪಡಿಸಿಕೊಂಡಿದ್ದೇವೆ. ಸ್ವಾಸ್ಥ್ಯ ಸತಿ (ಆರೋಗ್ಯ ವಿಮಾ ಯೋಜನೆ) ಥರದ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಡಯಾಲಿಸಿಸ್ ಕೇಂದ್ರಗಳನ್ನು ಪ್ರಾರಂಭಿಸಿದ್ದೇವೆ. ಜನರು ಔಷಧಿಗಳ ಮೇಲೆ ಶೇಕಡಾ 40ರಷ್ಟು ರಿಯಾಯಿತಿಗಳನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...