Homeಮುಖಪುಟಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

ಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

- Advertisement -
- Advertisement -

“ಕಳೆದ ವರ್ಷವೇ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (ಸಿಎನ್‌ಸಿಐ) ಎರಡನೇ ಕ್ಯಾಂಪಸ್ ಉದ್ಘಾಟಿಸಿದ್ದೆ. ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ಮತ್ತೆ ಶುಕ್ರವಾರ ದೇಶಕ್ಕೆ ಸಮರ್ಪಿಸಿದ್ದಾರೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಪ್ರಧಾನಿಯವರು ಈ ಯೋಜನೆಯನ್ನು ವರ್ಚ್ಯೂವಲ್‌ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದ್ದಾರೆ. ಸಾಂಕ್ರಾಮಿಕದ ಸಮಯದಲ್ಲಿ ಕೋವಿಡ್ ಕೇಂದ್ರದ ಅಗತ್ಯವಿದ್ದಾಗ ನಾವು ಅದನ್ನು ಈಗಾಗಲೇ ಉದ್ಘಾಟಿಸಿದ್ದೇವೆ ಎಂದು ನಾನು ಪ್ರಧಾನಿಗೆ ತಿಳಿಸಲು ಬಯಸುತ್ತೇನೆ. ಇದು ನಮಗೆ ಸಾಕಷ್ಟು ಸಹಾಯ ಮಾಡಿದೆ. ಈ ಸಂಸ್ಥೆಯು ರಾಜ್ಯ ಸರ್ಕಾರದೊಂದಿಗೆ ಸಂಬಂಧ ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿಯವರ ವರ್ಚ್ಯೂಯಲ್‌‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ರಾಜ್ಯವು 71 ಕೋಟಿ ರೂಪಾಯಿಗಳ ವೆಚ್ಚವನ್ನು ಭರಿಸುತ್ತದೆ. ಯೋಜನೆಗೆ ರಾಜ್ಯವು ಶೇ 25 ರಷ್ಟು ಹಣವನ್ನು ನೀಡುತ್ತಿದೆ ಎಂದು ತಿಳಿದಾಗ ಪ್ರಧಾನಿಯವರು ಸಂತೋಷಪಡುತ್ತಾರೆ. ಎರಡನೇ ಕ್ಯಾಂಪಸ್‌ಗಾಗಿ ನಾವು 11 ಎಕರೆ ಭೂಮಿಯನ್ನು ಸಿಎನ್‌ಸಿಐಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಕ್ಯಾಂಪಸ್ ಅನ್ನು ಉದ್ಘಾಟಿಸಿ ಅದನ್ನು ದೇಶದ ಜನರಿಗೆ ಅರ್ಪಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಮಮತಾ ಬ್ಯಾನರ್ಜಿಯವರು ಧನ್ಯವಾದ ಸಮರ್ಪಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಎರಡು ಬಾರಿ ಆಹ್ವಾನಿಸಿದ ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಿ ಮಮತಾ ಬ್ಯಾನರ್ಜಿ ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ಹಿರಿಯ ಸಲಹೆಗಾರರನ್ನು ತೊಡಗಿಸಿಕೊಳ್ಳುವ ತನ್ನ ಸರ್ಕಾರದ ನಿರ್ಧಾರವನ್ನು ಉಲ್ಲೇಖಿಸಿದ ಬ್ಯಾನರ್ಜಿ, ಈ ಕ್ರಮದ ಹಿಂದಿನ ಕಾರಣವನ್ನು ರಾಜ್ಯಪಾಲ ಜಗದೀಪ್ ಧಂಖರ್ ಪ್ರಶ್ನಿಸುತ್ತಿದ್ದಾರೆ ಎಂದು ಪ್ರಧಾನಿಯವರಲ್ಲಿ ದೂರಿದರು.

“ನೀವು (ಮೋದಿ) ನಮಗೆ ಹೊರಗಿನಿಂದ ಜನರನ್ನು ನೇಮಿಸಲು ಸಲಹೆಗಳನ್ನು ನೀಡಿದ್ದೀರಿ. ನಾವು ಅದನ್ನು ಅನುಸರಿಸಿದ್ದೇವೆ. ಆದರೆ ಈ ನಿರ್ಧಾರ ಏಕೆ ತೆಗೆದುಕೊಂಡಿದ್ದೀರಿ ಎಂದು ರಾಜ್ಯಪಾಲರು ನನ್ನನ್ನು ಪ್ರಶ್ನಿಸಿದ್ದಾರೆ. ನಾವು ಪ್ರಧಾನಿಯವರ ಸಲಹೆಯನ್ನು ಅನುಸರಿಸಿದ್ದೇವೆ ಎಂಬ ಸುಳಿವು ಇಲ್ಲ. ರಾಜಕೀಯ ದೃಷ್ಟಿಕೋನ ಏನೇ ಇರಲಿ, ಆದರೆ ನಾವು ಕೇಂದ್ರದ ಮಾರ್ಗಸೂಚಿಗಳನ್ನು ಅನುಸರಿಸುತ್ತೇವೆ. ನಾವು ಅದನ್ನು 99ರಷ್ಟು ಪ್ರತಿಶತ ಅನುಸರಿಸಲು ಪ್ರಯತ್ನಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸುವಂತೆ ಬ್ಯಾನರ್ಜಿಯವರು ಪ್ರಧಾನಿಯವರಲ್ಲಿ ಮನವಿ ಮಾಡಿದರು. “ವೈದ್ಯರ ಕೊರತೆಯಿದೆ. ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸಬೇಕು. 75 ವೈದ್ಯರು ಕೋವಿಡ್‌ನಿಂದ ಬಳಲುತ್ತಿರುವ ಒಂದು ಆಸ್ಪತ್ರೆಯಿದೆ. ರೋಗಿಗಳ ಚಿಕಿತ್ಸೆಯನ್ನು ಹೇಗೆ ಕೈಗೊಳ್ಳಲಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಕೋವಿಡ್ ನಿಯಂತ್ರಣಾ ಲಸಿಕೆಯನ್ನು ನೀಡುವಲ್ಲಿ ಪಶ್ಚಿಮ ಬಂಗಾಳವು ದೇಶದಲ್ಲಿ ನಂ. 1 ಸ್ಥಾನದಲ್ಲಿದೆ. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಲಸಿಕೆ ವ್ಯರ್ಥವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾಗಿ ನ್ಯಾಷನಲ್‌ ಹೆರಾಲ್ಡ್‌ ವರದಿ ಮಾಡಿದೆ.

ನಮ್ಮ ದೇಶಕ್ಕೆ ಕೆಟ್ಟ ಹೆಸರು ಬರದಂತೆ ನಾವು (ರಾಜ್ಯ ಸರ್ಕಾರ) ನಮ್ಮ ಕೆಲಸಗಳ ಮೂಲಕ ಖಚಿತಪಡಿಸಿಕೊಂಡಿದ್ದೇವೆ. ಸ್ವಾಸ್ಥ್ಯ ಸತಿ (ಆರೋಗ್ಯ ವಿಮಾ ಯೋಜನೆ) ಥರದ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಡಯಾಲಿಸಿಸ್ ಕೇಂದ್ರಗಳನ್ನು ಪ್ರಾರಂಭಿಸಿದ್ದೇವೆ. ಜನರು ಔಷಧಿಗಳ ಮೇಲೆ ಶೇಕಡಾ 40ರಷ್ಟು ರಿಯಾಯಿತಿಗಳನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...