Homeರಾಷ್ಟ್ರೀಯಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

ಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಾಲ್ಯದ ಸಮಯದಲ್ಲಿ ‘ಭಾರಿ ಧೈರ್ಯವಂತರಾಗಿದ್ದರು’ ಎಂದು ನಿರೂಪಿಸಲು ತಮಿಳುನಾಡಿನ ಖಾಸಗಿ ಶಾಲೆಯೊಂದು ಅವರ ‘ಮೊಸಳೆ ಕತೆ’ಯನ್ನು ತನ್ನ ಪಠ್ಯಪುಸ್ತಕದಲ್ಲಿ ಸೇರಿಸಿಕೊಂಡಿದೆ ಎಂದು ‘ಈಟಿವಿ ಭಾರತ್‌’ ವರದಿ ಮಾಡಿದೆ. ಪ್ರಧಾನಿಯ ‘ಮೊಸಳೆ ಕತೆ’ಯು 1ನೇ ತರಗತಿಯ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದ್ದು, ಅದರ ಚಿತ್ರವೂ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

2019 ರಲ್ಲಿ ಡಿಸ್ಕವರಿ ಚಾನೆಲ್‌ನ ಜನಪ್ರಿಯ ಕಾರ್ಯಕ್ರಮ ‘ಮ್ಯಾನ್ ವರ್ಸಸ್ ವೈಲ್ಡ್’ ನಲ್ಲಿ ಪ್ರಧಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಕಾರ್ಯಕ್ರಮ ನಡೆಸಿಕೊಡುವ ಬೇರ್‌ ಗ್ರಿಲ್ಸ್‌ ಜೊತೆಗೆ ಮಾತನಾಡುತ್ತಾ, ತಾನು ಚಿಕ್ಕ ಹುಡುಗನಾಗಿದ್ದಾಗ ಮೊಸಳೆ ಮರಿಯೊಂದನ್ನು ಮನೆಗೆ ತಂದಿದ್ದಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಮೊಸಳೆ ಮರಿಯೊಂದನ್ನು ನೋಡಿ ಅದನ್ನು ಮನೆಗೆ ತಂದಿದ್ದೆ. ಆದರೆ ತಾಯಿ, “ಪಾಪ, ಅದನ್ನು ಮತ್ತೆ ಕೆರೆಗೆ ಹಾಕಬೇಕು” ಎಂದು ತನಗೆ ಬೈದಿದ್ದರು ಎಂದು ಪ್ರಧಾನಿ ಮೋದಿ ಅವರು ಬೇರ್‌‌ ಗ್ರಿಲ್ಸ್‌ಗೆ ಹೇಳಿದ್ದರು.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪ್ರಧಾನಿ ಮೋದಿ ಅವರು ಹೇಳಿರುವ ಈ ಘಟನೆಯನ್ನು ತಮಿಳುನಾಡಿನ ಶಾಲೆಯು ಪಠ್ಯವನ್ನಾಗಿಸಿದೆ. ‘ಬಾರ್‍ರಿ ಓಬ್ರಿಯನ್’ ಮತ್ತು ‘ಫೈರ್‌ಫ್ಲೈ ಪ್ರಕಾಶನ’ಗಳ ‘ಮೌಲ್ಯ ಶಿಕ್ಷಣ’ದ 1 ನೇ ತರಗತಿಯ ಪುಸ್ತಕವು ಮೊಸಳೆಯ ಕತೆಯ ಭಾಗವನ್ನು ಅಳವಡಿಸಿ, ಪ್ರಧಾನಿ ಮೋದಿ ತನ್ನ ಬಾಲ್ಯದಲ್ಲಿ ಭಾರಿ ‘ಧೈರ್ಯ’ವಂತಾಗಿದ್ದರು ಎಂಬ ಬಗ್ಗೆ ಹೇಳಿದೆ.

ಶಾಲೆಯ ಪಠ್ಯಪುಸ್ತಕದಲ್ಲಿ,“ನರೇಂದ್ರ ದಾಮೋದರದಾಸ್ ಮೋದಿ ಅವರು ಭಾರತದ 14 ನೇ ಮತ್ತು ಈಗಿನ ಪ್ರಧಾನಿಯಾಗಿದ್ದಾರೆ. ಅವರು ತಮ್ಮ ಬಾಲ್ಯದಲ್ಲಿ ಎಷ್ಟು ಧೈರ್ಯಶಾಲಿಯಾಗಿದ್ದರು ಎಂದರೆ, ಒಮ್ಮೆ ಅವರು ಮೊಸಳೆಯನ್ನು ಹಿಡಿದು ಮನೆಗೆ ತಂದರು” ಎಂದು ಘಟನೆಯನ್ನು ಉಲ್ಲೇಖಿಸಿ ಬರೆಯಲಾಗಿದೆ. ಇಷ್ಟೆ ಅಲ್ಲದೆ, ಪುಸ್ತಕವು ‘ಮಾನಿಟರ್’ ಪದದ ಬಳಕೆಯನ್ನು ಕಲಿಸುತ್ತಾ, “ಪ್ರಧಾನಿ ಇಡೀ ದೇಶದ ‘ಮಾನಿಟರ್‌’ ಇದ್ದಂತೆ” ಎಂದು ಬರೆಯಲಾಗಿದೆ.

ಪ್ರಧಾನಿ ಮೋದಿಯ ಬಾಲ್ಯದ ಘಟನೆಗಳ ಕತೆಗಳನ್ನು ಹೇಳುವ ಹಲವು ಪುಸ್ತಕಗಳು ಈಗಾಗಲೇ ಪ್ರಕಟಗೊಂಡಿದೆ. ರಾನಡೆ ಪ್ರಕಾಶನ ಮತ್ತು ಬ್ಲೂ ಸ್ನೇಲ್ ಅನಿಮೇಷನ್‌ನ ‘ಬಾಲ್ ನರೇಂದ್ರ – ಚೈಲ್ಡ್‌ಹುಡ್ ಸ್ಟೋರೀಸ್ ಆಫ್ ನರೇಂದ್ರ ಮೋದಿ’ ಎಂಬ ಕಾಮಿಕ್ ಪುಸ್ತಕವು ಪ್ರಧಾನಿ ಮೋದಿ ಭಾರಿ ‘ಧೈರ್ಯವಂತ’ ಆಗಿದ್ದರು ಎಂಬುವುದನ್ನು ವಿವರಿಸುವ ಹಲವು ಕಥೆಗಳನ್ನು ಹೇಳುತ್ತದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

ಇದೇ ಸರಣಿಯ ಒಂದು ಕಥೆಯು, “ಗುಜರಾತ್‌ನ ಮೊಸಳೆಗಳಿಂದ ತುಂಬಿರುವ ಸರೋವರದಲ್ಲಿ ಈಜುತ್ತಿದ್ದಾಗ ಮೊಸಳೆಯೊಂದು ಮೋದಿಯ ಮೇಲೆ ದಾಳಿ ಮಾಡಿತು. ಆಗ ಅವರು 8 ನೇ ತರಗತಿಯಲ್ಲಿದ್ದರು. ಈ ದಾಳಿಯಿಂದಾಗಿ ಅವರ ಕಾಲಿಗೆ ಒಂಬತ್ತು ಹೊಲಿಗೆಗಳನ್ನು ಹಾಕಲಾಗಿತ್ತು” ಎಂದು ಉಲ್ಲೇಖಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 😂😂😂😂😂😂😂😂😂😂😂 ನನಗೆ ಯಾರಾದ್ರೂ ದಯವಿಟ್ಟು ಹೇಳುವಿರಾ ದೇಶದ ಯಾವ ಕೆರೆಯಲ್ಲಿ ಮೊಸಳೆಗಳು ಇರುತ್ತವೆ ಅಥವಾ ಇದ್ದವು ಅಂತ 🤦‍♂️🤦‍♂️🤦‍♂️ ಕರ್ಮ ಕರ್ಮ. ಇತ್ತೀಚಿನ ದಿನಗಳಲ್ಲಿ ಹಳ್ಳಿಯ ಕೆರೆಗಳಲ್ಲಿ ಮೀನು ಸಾಕಾಣಿಕೆ ನೋಡತಿದೀವಿ,ಇದೆ 20.,30 ವರ್ಷದ ಹಿಂದಿನ ದಿನಗಳಲ್ಲಿ ಕೆರೆಗಳಲ್ಲಿ ಬರಿ ದನಕರುಗಳಿಗೆ, ಮನುಷ್ಯನಿಗೆ ಸ್ನಾನ, ಬಟ್ಟೆ ತೊಳಿಯೋಕೆ ಅಷ್ಟೇ ಸೀಮಿತ ಕೆಲವು ಕಡೆ ಕುಡಿಯೋಕು ಉಪಯೋಗಿಸುತ್ತಿದ್ದು ಉದಾಹರಣೆ ಇದೆ… ಆದ್ರೆ ಇಲ್ಲಿ ಕೆರೆಯಲ್ಲಿ ಮೊಸಳೆ ಇತ್ತು ಅಂದ್ರೆ ಈ ಅಪ್ರತಿಮ ಎದೆಗಾರಿಕೆ ಮೆಚ್ಚುಲೇಬೇಕು ಅಲ್ವಾ ಸುಳ್ಳು (ಅ)ಸೂರರೇ 🤣🤣🤣🤣ದಯವಿಟ್ಟು ಕ್ಷಮಿಸಿ ನಂಗೆ ಬೇರೆ ಜಾಗದಿಂದ ನಗಬೇಕು ಅನಸ್ತಿದೆ 🙏🙏🙏

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...