Homeರಾಷ್ಟ್ರೀಯಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

ಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಾಲ್ಯದ ಸಮಯದಲ್ಲಿ ‘ಭಾರಿ ಧೈರ್ಯವಂತರಾಗಿದ್ದರು’ ಎಂದು ನಿರೂಪಿಸಲು ತಮಿಳುನಾಡಿನ ಖಾಸಗಿ ಶಾಲೆಯೊಂದು ಅವರ ‘ಮೊಸಳೆ ಕತೆ’ಯನ್ನು ತನ್ನ ಪಠ್ಯಪುಸ್ತಕದಲ್ಲಿ ಸೇರಿಸಿಕೊಂಡಿದೆ ಎಂದು ‘ಈಟಿವಿ ಭಾರತ್‌’ ವರದಿ ಮಾಡಿದೆ. ಪ್ರಧಾನಿಯ ‘ಮೊಸಳೆ ಕತೆ’ಯು 1ನೇ ತರಗತಿಯ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದ್ದು, ಅದರ ಚಿತ್ರವೂ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

2019 ರಲ್ಲಿ ಡಿಸ್ಕವರಿ ಚಾನೆಲ್‌ನ ಜನಪ್ರಿಯ ಕಾರ್ಯಕ್ರಮ ‘ಮ್ಯಾನ್ ವರ್ಸಸ್ ವೈಲ್ಡ್’ ನಲ್ಲಿ ಪ್ರಧಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಕಾರ್ಯಕ್ರಮ ನಡೆಸಿಕೊಡುವ ಬೇರ್‌ ಗ್ರಿಲ್ಸ್‌ ಜೊತೆಗೆ ಮಾತನಾಡುತ್ತಾ, ತಾನು ಚಿಕ್ಕ ಹುಡುಗನಾಗಿದ್ದಾಗ ಮೊಸಳೆ ಮರಿಯೊಂದನ್ನು ಮನೆಗೆ ತಂದಿದ್ದಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಮೊಸಳೆ ಮರಿಯೊಂದನ್ನು ನೋಡಿ ಅದನ್ನು ಮನೆಗೆ ತಂದಿದ್ದೆ. ಆದರೆ ತಾಯಿ, “ಪಾಪ, ಅದನ್ನು ಮತ್ತೆ ಕೆರೆಗೆ ಹಾಕಬೇಕು” ಎಂದು ತನಗೆ ಬೈದಿದ್ದರು ಎಂದು ಪ್ರಧಾನಿ ಮೋದಿ ಅವರು ಬೇರ್‌‌ ಗ್ರಿಲ್ಸ್‌ಗೆ ಹೇಳಿದ್ದರು.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪ್ರಧಾನಿ ಮೋದಿ ಅವರು ಹೇಳಿರುವ ಈ ಘಟನೆಯನ್ನು ತಮಿಳುನಾಡಿನ ಶಾಲೆಯು ಪಠ್ಯವನ್ನಾಗಿಸಿದೆ. ‘ಬಾರ್‍ರಿ ಓಬ್ರಿಯನ್’ ಮತ್ತು ‘ಫೈರ್‌ಫ್ಲೈ ಪ್ರಕಾಶನ’ಗಳ ‘ಮೌಲ್ಯ ಶಿಕ್ಷಣ’ದ 1 ನೇ ತರಗತಿಯ ಪುಸ್ತಕವು ಮೊಸಳೆಯ ಕತೆಯ ಭಾಗವನ್ನು ಅಳವಡಿಸಿ, ಪ್ರಧಾನಿ ಮೋದಿ ತನ್ನ ಬಾಲ್ಯದಲ್ಲಿ ಭಾರಿ ‘ಧೈರ್ಯ’ವಂತಾಗಿದ್ದರು ಎಂಬ ಬಗ್ಗೆ ಹೇಳಿದೆ.

ಶಾಲೆಯ ಪಠ್ಯಪುಸ್ತಕದಲ್ಲಿ,“ನರೇಂದ್ರ ದಾಮೋದರದಾಸ್ ಮೋದಿ ಅವರು ಭಾರತದ 14 ನೇ ಮತ್ತು ಈಗಿನ ಪ್ರಧಾನಿಯಾಗಿದ್ದಾರೆ. ಅವರು ತಮ್ಮ ಬಾಲ್ಯದಲ್ಲಿ ಎಷ್ಟು ಧೈರ್ಯಶಾಲಿಯಾಗಿದ್ದರು ಎಂದರೆ, ಒಮ್ಮೆ ಅವರು ಮೊಸಳೆಯನ್ನು ಹಿಡಿದು ಮನೆಗೆ ತಂದರು” ಎಂದು ಘಟನೆಯನ್ನು ಉಲ್ಲೇಖಿಸಿ ಬರೆಯಲಾಗಿದೆ. ಇಷ್ಟೆ ಅಲ್ಲದೆ, ಪುಸ್ತಕವು ‘ಮಾನಿಟರ್’ ಪದದ ಬಳಕೆಯನ್ನು ಕಲಿಸುತ್ತಾ, “ಪ್ರಧಾನಿ ಇಡೀ ದೇಶದ ‘ಮಾನಿಟರ್‌’ ಇದ್ದಂತೆ” ಎಂದು ಬರೆಯಲಾಗಿದೆ.

ಪ್ರಧಾನಿ ಮೋದಿಯ ಬಾಲ್ಯದ ಘಟನೆಗಳ ಕತೆಗಳನ್ನು ಹೇಳುವ ಹಲವು ಪುಸ್ತಕಗಳು ಈಗಾಗಲೇ ಪ್ರಕಟಗೊಂಡಿದೆ. ರಾನಡೆ ಪ್ರಕಾಶನ ಮತ್ತು ಬ್ಲೂ ಸ್ನೇಲ್ ಅನಿಮೇಷನ್‌ನ ‘ಬಾಲ್ ನರೇಂದ್ರ – ಚೈಲ್ಡ್‌ಹುಡ್ ಸ್ಟೋರೀಸ್ ಆಫ್ ನರೇಂದ್ರ ಮೋದಿ’ ಎಂಬ ಕಾಮಿಕ್ ಪುಸ್ತಕವು ಪ್ರಧಾನಿ ಮೋದಿ ಭಾರಿ ‘ಧೈರ್ಯವಂತ’ ಆಗಿದ್ದರು ಎಂಬುವುದನ್ನು ವಿವರಿಸುವ ಹಲವು ಕಥೆಗಳನ್ನು ಹೇಳುತ್ತದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

ಇದೇ ಸರಣಿಯ ಒಂದು ಕಥೆಯು, “ಗುಜರಾತ್‌ನ ಮೊಸಳೆಗಳಿಂದ ತುಂಬಿರುವ ಸರೋವರದಲ್ಲಿ ಈಜುತ್ತಿದ್ದಾಗ ಮೊಸಳೆಯೊಂದು ಮೋದಿಯ ಮೇಲೆ ದಾಳಿ ಮಾಡಿತು. ಆಗ ಅವರು 8 ನೇ ತರಗತಿಯಲ್ಲಿದ್ದರು. ಈ ದಾಳಿಯಿಂದಾಗಿ ಅವರ ಕಾಲಿಗೆ ಒಂಬತ್ತು ಹೊಲಿಗೆಗಳನ್ನು ಹಾಕಲಾಗಿತ್ತು” ಎಂದು ಉಲ್ಲೇಖಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 😂😂😂😂😂😂😂😂😂😂😂 ನನಗೆ ಯಾರಾದ್ರೂ ದಯವಿಟ್ಟು ಹೇಳುವಿರಾ ದೇಶದ ಯಾವ ಕೆರೆಯಲ್ಲಿ ಮೊಸಳೆಗಳು ಇರುತ್ತವೆ ಅಥವಾ ಇದ್ದವು ಅಂತ 🤦‍♂️🤦‍♂️🤦‍♂️ ಕರ್ಮ ಕರ್ಮ. ಇತ್ತೀಚಿನ ದಿನಗಳಲ್ಲಿ ಹಳ್ಳಿಯ ಕೆರೆಗಳಲ್ಲಿ ಮೀನು ಸಾಕಾಣಿಕೆ ನೋಡತಿದೀವಿ,ಇದೆ 20.,30 ವರ್ಷದ ಹಿಂದಿನ ದಿನಗಳಲ್ಲಿ ಕೆರೆಗಳಲ್ಲಿ ಬರಿ ದನಕರುಗಳಿಗೆ, ಮನುಷ್ಯನಿಗೆ ಸ್ನಾನ, ಬಟ್ಟೆ ತೊಳಿಯೋಕೆ ಅಷ್ಟೇ ಸೀಮಿತ ಕೆಲವು ಕಡೆ ಕುಡಿಯೋಕು ಉಪಯೋಗಿಸುತ್ತಿದ್ದು ಉದಾಹರಣೆ ಇದೆ… ಆದ್ರೆ ಇಲ್ಲಿ ಕೆರೆಯಲ್ಲಿ ಮೊಸಳೆ ಇತ್ತು ಅಂದ್ರೆ ಈ ಅಪ್ರತಿಮ ಎದೆಗಾರಿಕೆ ಮೆಚ್ಚುಲೇಬೇಕು ಅಲ್ವಾ ಸುಳ್ಳು (ಅ)ಸೂರರೇ 🤣🤣🤣🤣ದಯವಿಟ್ಟು ಕ್ಷಮಿಸಿ ನಂಗೆ ಬೇರೆ ಜಾಗದಿಂದ ನಗಬೇಕು ಅನಸ್ತಿದೆ 🙏🙏🙏

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...