Homeರಾಷ್ಟ್ರೀಯಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

ಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಾಲ್ಯದ ಸಮಯದಲ್ಲಿ ‘ಭಾರಿ ಧೈರ್ಯವಂತರಾಗಿದ್ದರು’ ಎಂದು ನಿರೂಪಿಸಲು ತಮಿಳುನಾಡಿನ ಖಾಸಗಿ ಶಾಲೆಯೊಂದು ಅವರ ‘ಮೊಸಳೆ ಕತೆ’ಯನ್ನು ತನ್ನ ಪಠ್ಯಪುಸ್ತಕದಲ್ಲಿ ಸೇರಿಸಿಕೊಂಡಿದೆ ಎಂದು ‘ಈಟಿವಿ ಭಾರತ್‌’ ವರದಿ ಮಾಡಿದೆ. ಪ್ರಧಾನಿಯ ‘ಮೊಸಳೆ ಕತೆ’ಯು 1ನೇ ತರಗತಿಯ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದ್ದು, ಅದರ ಚಿತ್ರವೂ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

2019 ರಲ್ಲಿ ಡಿಸ್ಕವರಿ ಚಾನೆಲ್‌ನ ಜನಪ್ರಿಯ ಕಾರ್ಯಕ್ರಮ ‘ಮ್ಯಾನ್ ವರ್ಸಸ್ ವೈಲ್ಡ್’ ನಲ್ಲಿ ಪ್ರಧಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಕಾರ್ಯಕ್ರಮ ನಡೆಸಿಕೊಡುವ ಬೇರ್‌ ಗ್ರಿಲ್ಸ್‌ ಜೊತೆಗೆ ಮಾತನಾಡುತ್ತಾ, ತಾನು ಚಿಕ್ಕ ಹುಡುಗನಾಗಿದ್ದಾಗ ಮೊಸಳೆ ಮರಿಯೊಂದನ್ನು ಮನೆಗೆ ತಂದಿದ್ದಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಮೊಸಳೆ ಮರಿಯೊಂದನ್ನು ನೋಡಿ ಅದನ್ನು ಮನೆಗೆ ತಂದಿದ್ದೆ. ಆದರೆ ತಾಯಿ, “ಪಾಪ, ಅದನ್ನು ಮತ್ತೆ ಕೆರೆಗೆ ಹಾಕಬೇಕು” ಎಂದು ತನಗೆ ಬೈದಿದ್ದರು ಎಂದು ಪ್ರಧಾನಿ ಮೋದಿ ಅವರು ಬೇರ್‌‌ ಗ್ರಿಲ್ಸ್‌ಗೆ ಹೇಳಿದ್ದರು.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪ್ರಧಾನಿ ಮೋದಿ ಅವರು ಹೇಳಿರುವ ಈ ಘಟನೆಯನ್ನು ತಮಿಳುನಾಡಿನ ಶಾಲೆಯು ಪಠ್ಯವನ್ನಾಗಿಸಿದೆ. ‘ಬಾರ್‍ರಿ ಓಬ್ರಿಯನ್’ ಮತ್ತು ‘ಫೈರ್‌ಫ್ಲೈ ಪ್ರಕಾಶನ’ಗಳ ‘ಮೌಲ್ಯ ಶಿಕ್ಷಣ’ದ 1 ನೇ ತರಗತಿಯ ಪುಸ್ತಕವು ಮೊಸಳೆಯ ಕತೆಯ ಭಾಗವನ್ನು ಅಳವಡಿಸಿ, ಪ್ರಧಾನಿ ಮೋದಿ ತನ್ನ ಬಾಲ್ಯದಲ್ಲಿ ಭಾರಿ ‘ಧೈರ್ಯ’ವಂತಾಗಿದ್ದರು ಎಂಬ ಬಗ್ಗೆ ಹೇಳಿದೆ.

ಶಾಲೆಯ ಪಠ್ಯಪುಸ್ತಕದಲ್ಲಿ,“ನರೇಂದ್ರ ದಾಮೋದರದಾಸ್ ಮೋದಿ ಅವರು ಭಾರತದ 14 ನೇ ಮತ್ತು ಈಗಿನ ಪ್ರಧಾನಿಯಾಗಿದ್ದಾರೆ. ಅವರು ತಮ್ಮ ಬಾಲ್ಯದಲ್ಲಿ ಎಷ್ಟು ಧೈರ್ಯಶಾಲಿಯಾಗಿದ್ದರು ಎಂದರೆ, ಒಮ್ಮೆ ಅವರು ಮೊಸಳೆಯನ್ನು ಹಿಡಿದು ಮನೆಗೆ ತಂದರು” ಎಂದು ಘಟನೆಯನ್ನು ಉಲ್ಲೇಖಿಸಿ ಬರೆಯಲಾಗಿದೆ. ಇಷ್ಟೆ ಅಲ್ಲದೆ, ಪುಸ್ತಕವು ‘ಮಾನಿಟರ್’ ಪದದ ಬಳಕೆಯನ್ನು ಕಲಿಸುತ್ತಾ, “ಪ್ರಧಾನಿ ಇಡೀ ದೇಶದ ‘ಮಾನಿಟರ್‌’ ಇದ್ದಂತೆ” ಎಂದು ಬರೆಯಲಾಗಿದೆ.

ಪ್ರಧಾನಿ ಮೋದಿಯ ಬಾಲ್ಯದ ಘಟನೆಗಳ ಕತೆಗಳನ್ನು ಹೇಳುವ ಹಲವು ಪುಸ್ತಕಗಳು ಈಗಾಗಲೇ ಪ್ರಕಟಗೊಂಡಿದೆ. ರಾನಡೆ ಪ್ರಕಾಶನ ಮತ್ತು ಬ್ಲೂ ಸ್ನೇಲ್ ಅನಿಮೇಷನ್‌ನ ‘ಬಾಲ್ ನರೇಂದ್ರ – ಚೈಲ್ಡ್‌ಹುಡ್ ಸ್ಟೋರೀಸ್ ಆಫ್ ನರೇಂದ್ರ ಮೋದಿ’ ಎಂಬ ಕಾಮಿಕ್ ಪುಸ್ತಕವು ಪ್ರಧಾನಿ ಮೋದಿ ಭಾರಿ ‘ಧೈರ್ಯವಂತ’ ಆಗಿದ್ದರು ಎಂಬುವುದನ್ನು ವಿವರಿಸುವ ಹಲವು ಕಥೆಗಳನ್ನು ಹೇಳುತ್ತದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

ಇದೇ ಸರಣಿಯ ಒಂದು ಕಥೆಯು, “ಗುಜರಾತ್‌ನ ಮೊಸಳೆಗಳಿಂದ ತುಂಬಿರುವ ಸರೋವರದಲ್ಲಿ ಈಜುತ್ತಿದ್ದಾಗ ಮೊಸಳೆಯೊಂದು ಮೋದಿಯ ಮೇಲೆ ದಾಳಿ ಮಾಡಿತು. ಆಗ ಅವರು 8 ನೇ ತರಗತಿಯಲ್ಲಿದ್ದರು. ಈ ದಾಳಿಯಿಂದಾಗಿ ಅವರ ಕಾಲಿಗೆ ಒಂಬತ್ತು ಹೊಲಿಗೆಗಳನ್ನು ಹಾಕಲಾಗಿತ್ತು” ಎಂದು ಉಲ್ಲೇಖಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 😂😂😂😂😂😂😂😂😂😂😂 ನನಗೆ ಯಾರಾದ್ರೂ ದಯವಿಟ್ಟು ಹೇಳುವಿರಾ ದೇಶದ ಯಾವ ಕೆರೆಯಲ್ಲಿ ಮೊಸಳೆಗಳು ಇರುತ್ತವೆ ಅಥವಾ ಇದ್ದವು ಅಂತ 🤦‍♂️🤦‍♂️🤦‍♂️ ಕರ್ಮ ಕರ್ಮ. ಇತ್ತೀಚಿನ ದಿನಗಳಲ್ಲಿ ಹಳ್ಳಿಯ ಕೆರೆಗಳಲ್ಲಿ ಮೀನು ಸಾಕಾಣಿಕೆ ನೋಡತಿದೀವಿ,ಇದೆ 20.,30 ವರ್ಷದ ಹಿಂದಿನ ದಿನಗಳಲ್ಲಿ ಕೆರೆಗಳಲ್ಲಿ ಬರಿ ದನಕರುಗಳಿಗೆ, ಮನುಷ್ಯನಿಗೆ ಸ್ನಾನ, ಬಟ್ಟೆ ತೊಳಿಯೋಕೆ ಅಷ್ಟೇ ಸೀಮಿತ ಕೆಲವು ಕಡೆ ಕುಡಿಯೋಕು ಉಪಯೋಗಿಸುತ್ತಿದ್ದು ಉದಾಹರಣೆ ಇದೆ… ಆದ್ರೆ ಇಲ್ಲಿ ಕೆರೆಯಲ್ಲಿ ಮೊಸಳೆ ಇತ್ತು ಅಂದ್ರೆ ಈ ಅಪ್ರತಿಮ ಎದೆಗಾರಿಕೆ ಮೆಚ್ಚುಲೇಬೇಕು ಅಲ್ವಾ ಸುಳ್ಳು (ಅ)ಸೂರರೇ 🤣🤣🤣🤣ದಯವಿಟ್ಟು ಕ್ಷಮಿಸಿ ನಂಗೆ ಬೇರೆ ಜಾಗದಿಂದ ನಗಬೇಕು ಅನಸ್ತಿದೆ 🙏🙏🙏

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...